Author: admin

ಮಂಗಳೂರು,ಸೆ. 05 : ರೆಸ್ಟೊಲೆಕ್ಸ್ ಕಾಯಿರ್ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾದ ಡೇವಿಡ್ ಕುರುವಿಲ್ಲಾ  ಅವರು  ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ರೆಸ್ಟೊಲೆಕ್ಸ್ ನಾಲ್ಕು ದಶಕಗಳಿಂದ ಗ್ರಾಹಕರ ಅನುಭವಗಳನ್ನು ಹೆಚ್ಚಿಸುತ್ತ ಮತ್ತು ಸೂಕ್ತ ಆಯ್ಕೆಗಳನ್ನು ಬೆಂಬಲಿಸುವತ್ತ ಗಮನಹರಿಸಿದೆ. ಮಂಗಳೂರಿನಲ್ಲಿರುವ ಈ ಹೊಸ ಫ್ರಾಂಚೈಸಿ ಮಳಿಗೆಯು ನಮ್ಮ ಗ್ರಾಹಕರ ಅಗತ್ಯಗಳನ್ನು ಪೂರೈಸಲಿದೆ’ ಎಂದರು. ಸಂಸ್ಥೆಯ ಪಾಲುದಾರರಾದ ವಿಜಯ ಕಾಮತ್ ಮಾತಾಡಿ, ಸ್ಪ್ರಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸ್ಟೊಲೆಕ್ಸ್, ಮಂಗಳೂರಿನ ಬಲ್ಲಾಳ್ ಬಾಗ್ ನಲ್ಲಿ ತನ್ನ ಹೊಸ ವಿಶೇಷ ಫ್ರಾಂಚೈಸಿ ಮಳಿಗೆಗೆ ಶುಕ್ರವಾರ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ ಎಂದು ಹೇಳಿದರು. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ…

Read More

ಬೈಂದೂರು,ಸೆ. 05 : ಎಂಸಿಸಿ ಬ್ಯಾಂಕ್, ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಆಶಾ ವೀಣಾ ಡಯಾಸ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ಅಧ್ಯಕ್ಷೀಯ ಭಾಷಣದಲ್ಲಿ, ಮಾತನಾಡಿ, ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲು ಸಂತೋಷ ವಾಗುತ್ತಿದೆ. ಯುವ ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು. ಹೊಸಾಡು ರಾಮ ಶೇರಿಗಾರ್ ಅವರು ತಮ್ಮ ಭಾಷಣದಲ್ಲಿ, ಮಾತನಾಡಿ, ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿದ ಎಂಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ಶ್ಲಾಘಿಸಿದರು. ಎಂಸಿಸಿ ಬ್ಯಾಂಕ್ ನೀಡುವ ಸೇವೆಗಳನ್ನು ಬಳಸಿಕೊಳ್ಳುವಂತೆ…

Read More

ಬೆಳ್ತಂಗಡಿ, ಸೆ. 04  : ಬೆಳ್ತಂಗಡಿ,  ಸುಳ್ಯ, ಪುತ್ತೂರು, ಕಡಬ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ನೂತನ ಅಧ್ಯಕ್ಷರಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಅವಿರೋಧ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆಯಾದರು. ಸೆ.2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ನಡೆಯಿತು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದರು. ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ  ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ, ಜಿಲ್ಲೆಯ ವಿವಿಧ ತಾಲೂಕಿನಿಂದ ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

Read More

ಕೈರೋ, ಸೆ. 03 : ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ ಇಡೀ ಗ್ರಾಮವೇ ನೆಲಸಮಗೊಂಡಿದೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್ಮೆಂಟ್/ಆರ್ಮಿ  ಮಾಹಿತಿ ನೀಡಿದೆ. ಸುಡಾನ್ ಸೈನ್ಯ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವಿನ ರಕ್ತಸಿಕ್ತ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ ಎಂದು ವರದಿಯಾಗಿದೆ.

Read More

ಮಂಗಳೂರು, ಸೆ. 02: ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಯಾದ ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅವರು ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ ಎಸ್ ಎಮ್ ಶಿವಪ್ರಕಾಶ್, ಡಾ ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಘು ಇಡ್ಕಿದು ಅಭಿನಂದನ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು.ಸಮಾರಂಭದಲ್ಲಿ ಡಾ…

Read More

ಮಂಗಳೂರು, ಸೆ. 01 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್…

Read More

ಬೆಂಗಳೂರು, ಆ. 31 : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ದೃಢಪಡಿಸಲಾಗಿದೆ.

Read More

ಉಡುಪಿ, ಆ. 30 : ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆ.13ರ ಬೆಳಗ್ಗೆ 8:30ರಿಂದ ಸಂಜೆ 5:00ರವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಎಂದು ಶಾಸಕ ಯಶ್ಪಾಲ್ ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಸುಮಾರು 4.000ಕ್ಕೂ ಅಧಿಕ ಮಂದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. ಉದ್ಯೋಗ ಮೇಳದಲ್ಲಿ ಒಟ್ಟು 1500ಕ್ಕೂ ಅಧಿಕ ವಿವಿಧ ದರ್ಜೆಯ ಉದ್ಯೋಗಗಳು ಲಭ್ಯವಿರಲಿದೆ ಎಂದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅವರು ಮಾತಾನಾಡಿ, ಈ ಬಾರಿ ಅಜ್ಜರಕಾಡು ಮೈದಾನದಲ್ಲಿ 75 ಕೌಂಟರ್ಗಳನ್ನು ಹಾಕಲಾಗುವುದು. ಆಸಕ್ತರು ಆನ್ಲೈನ್ ಮೂಲಕವೂ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ…

Read More

ಮಂಗಳೂರು, ಸೆ. 29 :  ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಲಂಚುಲಾಲ್ ಕೆ.ಎಸ್. ನಿರ್ಮಾಣದ ‘ನೆತ್ತರಕೆರೆ’ ತುಳು ಚಿತ್ರವನ್ನು ಹಿರಿಯ ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್  ಅವರು  ಶುಕ್ರವಾರ ನಗರದ ಬಿಗ್ ಸಿನಿಮಾಸ್‌ನಲ್ಲಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ವಿಭಿನ್ನ ಪರಿಕಲ್ಪನೆಯ ಚಿತ್ರಗಳು ಈಗ ತುಳು ಭಾಷೆಯಲ್ಲಿ ಬರುತ್ತಿದೆ. ತುಳುವಿನ 150ನೇ ಚಿತ್ರವಾದ ನಿರ್ದೇಶಕ ಸ್ವರಾಜ್ ಶೆಟ್ಟಿ ಅವರ  ‘ನೆತ್ತರೆಕೆರೆ’ ತುಳು ಸಿನಿಮಾ  ಯಶಸ್ವಿ ಪ್ರದರ್ಶನ ಕಾಣಲಿ ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಮಾತನಾಡಿ, ಇದುವರೆಗೆ ತುಳುವಲ್ಲಿ ಕಾಮಿಡಿ ಚಿತ್ರಗಳು ಬರುತ್ತಿದ್ದವು. ಇದೀಗ ವಿಭಿನ್ನ ಚಿತ್ರಗಳು ಬರಲಾರಂಭಿಸಿದೆ. ‘ನೆತ್ತರಕೆರೆ’ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ನಿರ್ದೇಶಕ ಸ್ವರಾಜ್ ಶೆಟ್ಟಿ ಮಾತಾಡಿ, ತುಳುವಲ್ಲಿ ಬದಲಾವಣೆ ಇರಬೇಕು ಎಂದು ನೆತ್ತೆರೆಕೆರೆ ಸಿನಿಮಾ ಮಾಡಲಾಗಿದೆ. ಚಿತ್ರ ವನ್ನು  ತುಳುನಾಡಿನ ಸಮಸ್ತ ಜನರು  ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು. ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ನಟ ಪೃಥ್ವಿ ಅಂಬಾರ್,…

Read More

ಮಂಗಳೂರು, ಆ. 28 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಆ. 27, ಬುಧವಾರ ತೆನೆ ಹಬ್ಬ. ಧಾರ್ಮಿಕ ಕಾರ್ಯಕ್ರಮ  ನಡೆಯಿತು. ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದರು. ಲೆ.ಕ. ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೋಡಿಯಾಲ್ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟ್ವಾಳ…

Read More