Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜೂ. 10 : ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹೈ 503 ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಡಗು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಡಗಿನಲ್ಲಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಗಾಯಗೊಂಡ 6 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 12 ಮಂದಿಗೆ ನಗರದ ಹೋಟೆಲ್ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಕಾಣೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನವದೆಹಲಿ, ಜೂ. 10 : ಇಲ್ಲಿನ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ.10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತಪಟ್ಟವರು. ಅಪಾರ್ಟ್ಮೆಂಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗಲು ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್ಮೆಂಟ್ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಇಬ್ಬರು ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದರು. ಯಾದವ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಯಾದವ್ ಅವರ ಪತ್ನಿ ಹಾಗೂ ಹಿರಿಯ ಮಗನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾರ್ಟ್ಮೆಂಟ್ನಲ್ಲಿದ್ದ ಎಲ್ಲಾ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಂದಾಪುರ, ಜೂ. 09 : ತ್ರಾಸಿ-ಮರವಂತೆ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ರಭಸಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐದು ಮಂದಿಯನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಜೂನ್ 7ರ ಸಂಜೆ ಸಂಭವಿಸಿದೆ.ಬೆಂಗಳೂರಿನ ನಾಲ್ಕು ಮಂದಿ ಮತ್ತು ಗೋವಾದ ಓರ್ವ ಮಹಿಳೆ ರಕ್ಷಿಸಲ್ಪಟ್ಟವರು. ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ, ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24×7 ಆಂಬ್ಯುಲೆನ್ಸ್ ಸಿಬ್ಬಂದಿ ಇಬ್ರಾಹಿಂ ಗಂಗೊಳ್ಳಿ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಘಟನೆಯ ಬಳಿಕ ಗಂಗೊಳ್ಳಿ ಪೊಲೀಸ್ ನಿರೀಕ್ಷಕ ಮತ್ತು ಸಿಬ್ಬಂದಿ, ಒನ್-ಟು ಸಿಬ್ಬಂದಿ ಮತ್ತು ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಪ್ರವಾಸಿಗರ ಸುರಕ್ಷತೆಗಾಗಿ ಮತ್ತು ಮುನ್ನೆಚ್ಚರಿಕೆ ವಹಿಸಲು ಸೈರನ್ ಮೊಳಗಿಸಿ ಎಚ್ಚರಿಸಲಾಯಿತು.
ಬೆಳ್ತಂಗಡಿ, ಜೂ. 08 : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮುಂಡಾಜೆ ಸದಾಶಿವ ಶೆಟ್ಟಿ ಅವರು ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು.
ಮಂಗಳೂರು, ಜೂ. 07 : ದ.ಕ.ಜಿಲ್ಲೆಯಲ್ಲಿ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಇಂದು ಶನಿವಾರ ಆಚರಿಸಿದರು. ನಗರದ ಲೈಟ್ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಗಳಲ್ಲಿ ಭಾಗಿಯಾಗಿ ನಮಾಜ್ ಮಾಡಿದರು. ಮಸೀದಿಯಲ್ಲಿ ಪ್ರಾರ್ಥನೆಗಳು ಮುಗಿಯುತ್ತಿದ್ದಂತೆ, ಜನರು ಪರಸ್ಪರ ಅಪ್ಪಿಕೊಂಡು, ‘ಈದ್ ಮುಬಾರಕ್’ ನ ಆತ್ಮೀಯ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಶಾಸಕ ಜೆ.ಆರ್. ಲೋಬೊ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು. ಟಿ. ಖಾದರ್, ಝೀನತ್ ಭಕ್ ಮಸೀದಿ ಖತೀಬ್ ಸ್ವದಖತುಲ್ಲಾಹ್ ಫೈಝಿ, ಶಾಹ ಅಮೀರ್ ಮಸ್ಟಿದ ಇಮಾಮ್ ರಿಯಾಝುಲ್ ಹಖ್, ಕೇಂದ್ರ ಜುಮ್ಮಾ ಮಸೀದಿಯ ಆಡಳಿತ ಸಮಿತಿ ಉಪಾಧ್ಯಕ್ಷ ಕೆ. ಅಶ್ರಫ್, ಸದಸ್ಯರಾದ ಎಸ್. ಎಂ. ರಶೀದ್, ಖಜಾಂಚಿ ಸೈಯದ್ ಭಾಷಾ ತಂಗಳ್, ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು ನಗರದ ಸೇರಿದಂತೆ ಕರಾ ವಳಿಯ ಬಹುತೇಕ ಎಲ್ಲ ಮಸೀದಿಗಳಲ್ಲೂ ಪ್ರಾರ್ಥನೆ, ಪ್ರವಚನ ನಡೆಯಿತು. ಈದ್ ಸಂದೇಶ ನೀಡಲಾಯಿತು. ನಮಾಝಿನ ಬಳಿಕ ಎಲ್ಲರೂ ಹಸ್ತಲಾಘವ, ಆಲಿಂಗನದ ಮೂಲಕ ಹಬ್ಬದ…
ಬೆಂಗಳೂರು ಜೂ,7 : ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ ಅವರ ಮುಂದಿನ ಚಿತ್ರ ‘ಕಟ್ಟಾಳನ್’ ತೆರೆಗೆ ಬರಲು ಸಜ್ಜಾಗಿದೆ. ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮತ್ತು ಷರೀಫ್ ಮುಹಮ್ಮದ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರದಲ್ಲಿ ನಾಯಕ ನಟನಾಗಿ ಆಂಟನಿ ವರ್ಗೀಸ್ ನಟಿಸಿದ್ದಾರೆ, ಅರಣ್ಯದ ಆಳದಲ್ಲಿ ವಿಧಿಯ ಹೋರಾಟದಲ್ಲಿ ಸಿಲುಕಿರುವ ಒಬ್ಬ ಅಪ್ಪಟ ಮಾನವನ ಪಾತ್ರದಲ್ಲಿ ನಟಿಸಿದ್ದಾರೆ, ಪುಷ್ಪಾ’ ಮತ್ತು ‘ಜೈಲರ್’ ಚಿತ್ರದ ನಂತರ ಸುನೀಲ್ ಚಿತ್ರತಂಡಕ್ಕೆ ಸೇರಿಕೊಂಡಿದ್ದಾರೆ. ಇಲ್ಲಿ ಅವರು ಶಕ್ತಿಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಅವರ ಹಿಂದಿನ ಪಾತ್ರಗಳಿಗಿಂತ ಭಿನ್ನವಾಗಿದೆ. ಕಬೀರ್ ದುಹಾನ್ ಸಿಂಗ್, ‘ಕಟ್ಟಾಳನ್’ ಚಿತ್ರಕ್ಕಾಗಿ ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ ಜೊತೆ ಮತ್ತೆ ಕೈಜೋಡಿಸಿದ್ದಾರೆ. ‘ಕಾಂತಾರ’ ಚಿತ್ರದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಅವರ ಧ್ವನಿ, ಷಮೀರ್ ಮುಹಮ್ಮದ್ ಅವರ ಛಾಯಾಗ್ರಹಣ ಮತ್ತು ಕೆಚಾ ಖಾಂಫಕ್ಡೀ ಹಾಗೂ ಕಲೈ ಕಿಂಗ್ಸನ್ ಅವರ ಸಾಹಸ ಸಂಯೋಜನೆಯೊಂದಿಗೆ ‘ಕಟ್ಟಾಳನ್’ ಚಿತ್ರ ಮೂಡಿಬರಲಿದೆ. ಕ್ಯೂಬ್ಸ್ ಇಂಟರ್ನ್ಯಾಷನಲ್ನ ‘ಕಟ್ಟಾಳನ್’ ಚಿತ್ರ ಮಲಯಾಳಂ, ಹಿಂದಿ, ತಮಿಳು,…
ಮಂಗಳೂರು, ,ಜೂ. 07 : ಸ್ನೇಹಾಲಯ ಸಂಸ್ಥೆಯು ಜೂ5 ರಂದು ತನ್ನ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ ಎಂ ಆರ್ ಪಿ ಎಲ್ ಸಂಸ್ಥೆಯ ಸಾಂಸ್ಥಿಕ ಸಾಮಾಜಿಕ ಯೋಜನೆಯಡಿ(ಸಿ ಎಸ್ ಆರ್ ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಾಮಾಜಕ್ಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರೀರಿಕ ಹಾಗು ಮಾನಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. ಎಂ ಆರ್ ಪಿ ಎಲ್ನ ಸಿ ಎಸ್ ಆರ್ ವಿಭಾಗದ ಹಿರಿಯ ವ್ಯವಸ್ಥಾಪಕ ಶ್ರೀ ಕೆ. ನಾಗರಾಜ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಜರಿದ್ದು, ಎಂ ಆರ್ ಪಿ ಎಲ್ – ಒಎನ್ ಜಿಸಿ ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಅವರ ಉಪಸ್ಥಿತಿಯಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ಸೌಲಭ್ಯವನ್ನು ಉದ್ಘಾಟಿಸಲಾಯಿತು. ವನಮಹೋತ್ಸವ ಸಾಂಕೇತಿಸಲು ಗಿಡನೆಟ್ಟು…
ಉಡುಪಿ, ಜೂ. 06 : ಉಡುಪಿ ಜೂನ್ 05: ಮಗುವನ್ನು ಮಲಗಿಸಲು ಹಾಕಿದ್ದ ಜೋಳಿಗೆ ಮಗುವಿನ ಕುತ್ತಿಗೆಗೆ ಸಿಲುಕಿದ ಪರಿಣಾಮ 1 ವರ್ಷದ ಮಗು ಮೃತಪಟ್ಟಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಮೃತಪಟ್ಟ ಮಗುವನ್ನು ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ ಹೆಣ್ಣು ಮಗು ಕಾಳಮ್ಮ(1) ಎಂದು ಗುರುತಿಸಲಾಗಿದೆ. ಉಡುಪಿಯಲ್ಲಿ ನಿಟ್ಟೂರಿನಲ್ಲಿ 3 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅಯ್ಯಪ್ಪ ಅವರು ಗಂಗಾಧರ ಎಂಬವರ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಅವರ ಪತ್ನಿ ಮಗುವನ್ನು ಜೋಳಿಗೆಯಲ್ಲಿ ಹಾಕಿ ಬೆಳಗ್ಗೆ ಕೆಲಸಕ್ಕೆ ಹೋದವರು 11.30ಕ್ಕೆ ಬಂದು ನೋಡಿದಾಗ ಮಗುವಿನ ಕುತ್ತಿಗೆಗೆ ಜೋಳಿಗೆ ಕಟ್ಟಿದ ಸೀರೆಯು ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ತಕ್ಷಣ.ಮಗುವನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂ. 0 5: 2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ ಎಐಎಮ್ ಐಟಿ ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, ಐ ಬಿ ಎಮ್ ನ ಸಾಫ್ಟ್ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, ಐ ಬಿ ಎಮ್ ನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್ಪಾಥ್ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ ಎಐಎಮ್ ಐಟಿ ನ ಡೀನ್ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಭಾಗವಹಿಸಿದ್ದರು. ಈ ಒಡಂಬಡಿಕೆಯು ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ನ ಶ್ರೇಷ್ಠ ಸಾಫ್ಟ್ವೇರ್ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. ಐ ಬಿ ಎಮ್ ಸಾಫ್ಟ್ವೇರ್ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ…
ಬೆಂಗಳೂರು, ಜೂ. 04 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತದ ಕುರಿತು ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತಾಡಿ, ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು .ಸರ್ಕಾರ ಇದಕ್ಕೆ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು. ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಇದನ್ನು ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3…












