Author: admin

ಮಂಗಳೂರು, ಆ. 28 : ಕೃತರ್ಥ ಪ್ರೊಡಕ್ಷನ್ ನಿರ್ಮಾಣದ ಕನ್ನಡ ಚಲನಚಿತ್ರ, ‘ಕುಡ್ಲ ನಮ್ದು ಊರುʼ ಆಗಸ್ಟ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ ರಾಜ್ಯದ 70 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಚಿತ್ರದ ಪ್ರೇಮಿಯರ್ ಶೋ ಈಗಾಗಲೇ ಎರಡು ಕಡೆ ನಡೆದಿದ್ದು ಜನರ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಚಿತ್ರದ ನಿರ್ದೇಶಕರು ಹಾಗೂ ನಾಯಕ ನಟರಾದ ದುರ್ಗಾ ಪ್ರಸಾದ್ ಆರ್ ಕೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ‘ಕುಡ್ಲ ನಮ್ದು ಊರುʼ ಚಿತ್ರವನ್ನು ವಿಭಿನ್ನ ರೀತಿಯಲ್ಲಿ ತೋರಿಸುವ ಪ್ರಯತ್ನವನ್ನು ಮಾಡಿ ದ್ದೇನೆ. ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದ್ದು, ಚಿತ್ರವು ಉತ್ತಮವಾಗಿ ಮೂಡಿಬಂದಿದೆ ಎಂದರು. ಅಂಕಿತ ಪದ್ಮ, ಚಿತ್ರ ಗೌಡ,ನರೇಂದ್ರ ಜೈನ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ನಿರ್ದೇಶನ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್), ನಿರ್ವಹಿಸಿದ್ದಾರೆ. ನಾಯಕ ನಟರುಗಳಾಗಿ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್ ಏಕೆ), ಸ್ವರಾಜ್ ಶೆಟ್ಟಿ, ಲಂಚು ಲಾಲ್ ಕೆ ಎಸ್…

Read More

ಮಂಗಳೂರು, ಆ. 27 : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆ.29, ಶುಕ್ರವಾರ ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಾಯಕ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆತ್ತರಕೆರೆ ಸಿನಿಮಾ ತುಳು ಭಾಷೆಯಲ್ಲಿ ಮಾತ್ರವಲ್ಲದೆ ಇತರ ಭಾಷೆಯಲ್ಲೂ ಸಂಚಲನ ಮೂಡಿಸುವ ನಿರೀಕ್ಷೆ ಇದೆ, ಈ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ ಎಂದರು. ಚಿತ್ರವು  ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಎಂದು ತಿಳಿಸಿದರು. ಚಿತ್ರದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು,…

Read More

ಮಂಗಳೂರು, ಆ. 27 : ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮಥ್ರ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನ ಬಜ್ಪೆಯಲ್ಲಿ ಆರಂಭಿಸಿದೆ. ಈ ಕೇಂದ್ರವನ್ನು ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಆ.25, ಸೋಮವಾರ ಉದ್ಘಾಟಿಸಿದರು. ಕಂಪನಿಯ ಸ್ಥಾಪಕ ಮತ್ತು ಸಿಇಒ ಶ್ರೀ ಬಿಪಿನ್ ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಈ ಸೌಲಭ್ಯವು ಎಐ, ಐಒಟಿ, ಸ್ಮಾರ್ಟ್ ಗ್ರಿಡ್ಗಳು, ಇವಿ, ಹವಾಮಾನ ಮೂಲಸೌಕರ್ಯ ಮತ್ತು ಇಂಧನ ನಿರ್ವಹಣಾ ವ್ಯವಸ್ಥೆಗಳನ್ನು ಸಂಯೋಜಿಸುವುದರೊಂದಿಗೆ ನವೀಕರಿಸಬಹುದಾದ, ಉಪಯುಕ್ತ ಡಿಜಿಟಲೀಕರಣ ಮತ್ತು ಇಂಧನ ಮೂಲಸೌಕರ್ಯದಲ್ಲಿ ಅಸ್ತಿತ್ವದಲ್ಲಿರುವ ಜಾಗತಿಕ ಯೋಜನೆಗಳಿಗೆ ಪ್ರಾಯೋಗಿಕವಾಗಿ ಆರಂಭಕ್ಕೆ ಒತ್ತು ನೀಡಿದೆ ಎಂದು ಬಿಪಿನ್ ಚಂದ್ರ  ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 50 ಸಾವಿರ ಚದರ ಅಡಿ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಈ ಕೇಂದ್ರವು ಪ್ರಾಯೋಗಿಕ ಕಲಿಕೆ, ಉದ್ಯಮ ಸಹಯೋಗ ಮತ್ತು ವೃತ್ತಿಪರ ಬೆಳವಣಿಗೆಗಾಗಿ ಉತ್ತಮ ಪರಿಸರ ಹೊಂದಿದೆ.ಈ ಅತ್ಯಾಧುನಿಕ ತಂತ್ರಜ್ಞಾನಗಳು ಯುವ ವೃತ್ತಿಪರರಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲಿಸಲಿದ್ದು, ಈ ವಿಶ್ವ ದರ್ಜೆಯ ಕೇಂದ್ರವು ಭಾರತದ…

Read More

ಮಂಗಳೂರು, ಆ. 26: ಜಪ್ಪಿನಮೊಗರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಗಸ್ಟ್ 26ರಿಂದ 28ರ ವರೆಗೆ ಜಪ್ಪಿನಮೊಗರು ಗಣೇಶ ಮಂಟಪದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್ ಶನಿವಾರ ನಗರದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಆಗಸ್ಟ್26ರಂದು ಸಂಜೆ ಗಂಟೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಜಪ್ಪಿನಮೊಗರು ಶ್ರೀ ವೈದ್ಯನಾಥ ಮಹಾದ್ವಾರದಿಂದ ಶ್ರೀ ವಿಶ್ವೇಶ್ವರನ ವಿಗ್ರಹವನ್ನು ಶ್ರೀ ಗಣೇಶ ಮಂಟಪಕ್ಕೆ ತರಲಾಗುತ್ತದೆ. 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು, ಆಗಸ್ಟ್ 27ರಂದು ಬೆಳಗ್ಗೆ 7ಗಂಟೆಗೆ ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಅವರ ಪೌರೋಹಿತ್ಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾಪನೆ ನಡೆಯಲಿದೆ. 9ಗಂಟೆಗೆ ಪ್ರತಿಷ್ಠಾಪನ ಸಭಾ ಕಾರ್ಯಕ್ರಮ ನಡೆಯಲಿದೆ. 10ಗಂಟೆಗೆ ಹಸಿರು ತೆನೆ ವಿತರಣೆ, ಅನಂತರ ಭಜನಾ ಕಾರ್ಯಕ್ರಮ, ಮಧ್ಯಾಹ್ನದ ಮಹಾಪೂಜೆ ನಡೆಯಲಿದೆ. ಸಂಜೆ 5.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ಸಾರ್ವಜನಿಕ ರಂಗಪೂಜೆ ಹಾಗೂ ಮಹಾಪೂಜೆ, ಅನಂತರ ಅನ್ನಸಂತರ್ಪಣೆ…

Read More

ಮಂಗಳೂರು, ಆ. 26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ  ನಡೆದ  ಪ್ರತಿಭಾ ಪುರಸ್ಕಾರ ಜತೆ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನೆರವೇರಿಸಿದರು ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ,ಸರಕಾರಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಸರಕಾರಿ ನೌಕರರು ನಿರ್ವಹಿಸುತ್ತಿದ್ದಾರೆ.ಭವಿಷ್ಯವನ್ನು ನಿರ್ಮಾಣ ಮಾಡುವ…

Read More

ಉಡುಪಿ, ಆ.25 : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತಿಮರೋಡಿ ಅವರನ್ನು ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಹಿರಿಯ ಬಿಜೆಪಿ ನಾಯಕರ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Read More

ಮಂಗಳೂರು, ಆ. 24 : ನವಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಸುವರ್ಣ ಸಂಭ್ರಮದ ಪ್ರಯುಕ್ತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ‘ಆರೋಗ್ಯ, ಕ್ರಿಯಾಶೀಲ ಜೀವನಶೈಲಿ, ದೈಹಿಕ ಕ್ಷಮತೆ’ ಧೈಯದೊಂದಿಗೆ ಆಗಸ್ಟ್31ರಂದು ಬೆಳಗ್ಗೆ 6 ರಿಂದ 9ಗಂಟೆಯವರೆಗೆ 10 ಕಿ.ಮೀ., 5 ಕಿ.ಮೀ. ಮತ್ತು 3 ಕಿ.ಮೀ. ಓಟ ಆಯೋಜಿಸಲಾಗಿದೆ ಎಂದು ಎನ್ಎಂಪಿಎಯ ಹಿರಿಯ ಉಪ ಕಾರ್ಯದರ್ಶಿ ಕೃಷ್ಣ ಬಾಪಿ ರಾಜು ಅವರು ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಈ ಓಟ ಮಂಗಳೂರು ಪಣಂಬೂರು ಬೀಚ್ ನಿಂದ ತಣ್ಣೀರುಬಾವಿ ಬೀಚ್ವರೆಗೆ ನಡೆಯಲಿದ್ದು ಈಗಾಗಲೇ ಕರ್ನಾಟಕ ಹಾಗೂ ನೆರೆ ರಾಜ್ಯಗಳಿಂದ 3,000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.ವಿವಿಧ ವಯೋಮಿತಿ ವಿಭಾಗದಲ್ಲಿ ಓಟ ನಡೆಯಲಿದೆ. 10 ಕಿ.ಮೀ. ಮತ್ತು 5 ಕಿ.ಮೀ ಓಟಕ್ಕೆ ನಿಗದಿತ ಸಮಯವಿರುತ್ತದೆ. 3 ಕಿ.ಮೀ. ಓಟ ‘ಫನ್ ರನ್ ಆಗಿರುತ್ತದೆ. 10 ಕಿ.ಮೀ. ಓಟವು ಮುಂದೆ ದೇಶದಲ್ಲಿ ನಡೆಯುವ ಮ್ಯಾರಥಾನ್ಗೆ ಅರ್ಹತ ಓಟವೂ ಆಗಲಿದೆ ಎಂದು ಅವರು…

Read More

ಮಂಗಳೂರು,ಆ.23 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರಿಕೇಳ ಮಹಾಗಣಯಾಗವು ಆಗಸ್ಟ್ ತಿಂಗಳ ತಾರೀಕು 27ರಿಂದ 29ರವರೆಗೆ ಮಂಗಳೂರಿನ ‘ಓಂಕಾರ ನಗರ’, ಬಂಟ್ಸ್ ಹಾಸ್ಟೆಲ್ನಲ್ಲಿ ಜರಗಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಇದರ ಟ್ರಸ್ಟಿ ಆಶಾ ಜ್ಯೋತಿ ರೈ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಆಗಸ್ಟ್ 26 ಮಂಗಳವಾರ ಸಂಜೆ 4.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರೈರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್ನ ‘ಓಂಕಾರ ನಗರ’ಕ್ಕೆ ಬರಮಾಡಿಕೊಳ್ಳುವುದು ಎಂದು ಹೇಳಿದರು. ಆಗಸ್ಟ್ 27 ಬುಧವಾರ ಬೆಳಿಗ್ಗೆ 9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ…

Read More

ಬೆಳ್ತಂಗಡಿ,ಆ.23 : ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿದ್ದೇನೆ ಎನ್ನಲಾದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದು ಆತನನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅನಾಮಿಕ ತೋರಿಸಿದ 17 ಪಾಯಿಂಟ್ಗಳಲ್ಲಿ ಎಸ್ಐಟಿ ತಂಡ ಸಮಾಧಿ ಶೋಧವನ್ನು ಶುರು ಮಾಡಿತ್ತು. ಆದರೆ ಏನೂ ಸಿಗದಿದ್ದ ಹಿನ್ನೆಲೆ ಎಸ್ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು. ತನಿಖೆ ಬಳಿಕ ಅನಾಮಿಕನನ್ನು ಬಂಧಿಸಿದ್ದಾರೆ. ಪೊಲೀಸರ ಮುಂದೆ ಸಾಕ್ಷಿ…

Read More

ಉಡುಪಿ, ಆ. 22 : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಮಗುಚಿ ಬಿದ್ದು, ಮೀನುಗಾರನೊರ್ವ ಮೃತಪಟ್ಟ, ಘಟನೆ ಸಾಸ್ತಾನದ ಕೋಡಿತಲೆ ಬಳಿ ಆಗಸ್ಟ್ 22 ,ಶುಕ್ರವಾರ ಸಂಭವಿಸಿದೆ. ಮೃತರನ್ನು ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಮೂವರು ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಬಲವಾದ ಅಲೆಗಳಿಂದಾಗಿ ಅವರ ದೋಣಿ ಮಗುಚಿ ಬಿದ್ದಿದ್ದು, ಶರತ್ ಖಾರ್ವಿ ಮೀನುಗಾರ ಮೃತಪಟ್ಟಿದ್ದಾರೆ.ಇಬ್ಬರು ಮೀನುಗಾರರಾದ ಅಕ್ಷಯ್ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಸುರಕ್ಷಿತವಾಗಿ ಈಜಿ ದಡ ಸೇರಿ,ದ್ದಾರೆ. ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More