Subscribe to Updates
Get the latest creative news from FooBar about art, design and business.
Author: admin
ಉರ್ವ, ಅ.15 : ಲಯನ್ಸ್ ಡಿಸ್ಟಿಕ್ಸ್ 317ಡಿಯ ಯೋಜನೆಯಾದ ಲಯನ್ಸ್ ಪ್ರಕೋಷ್ಠದಿಂದ ದೇಶಭಕ್ತಿ ಮತ್ತು ಸಂಗೀತ ಆಚರಣೆಯಾದ ಆಜಾದಿ ಕಾ ಮಹೋತ್ಸವ ಮತ್ತು ‘ಸುಹಾನಾ ಸಫರ್’ ಕಾರ್ಯಕ್ರಮ ಆ.16ರಂದು ಸಂಜೆ 5.30ರಿಂದ ನಗರದ ಡೊಂಗರಕೇರಿಯಲ್ಲಿರುವ ಕೆನರಾ ಶ್ರೀ ಸುಧೀಂದ್ರ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಠದ ಜಿಲ್ಲಾ ಸಂಯೋಜಕ ಕುಂಬ್ಳೆ ನರಸಿಂಹ ಪ್ರಭು ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಕಾರ್ಯಕ್ರಮವನ್ನು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಮತ್ತು ಲಯನ್ಸ್ ಕ್ಲಬ್ ಮಂಗಳೂರಿನ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ವಾಸುದೇವ ಕಾಮತ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಹಳೆಯ ಸಿನಿಮಾ ಹಾಡುಗಳ ಸಂಗೀತ ಕಾರ್ಯಕ್ರಮ ಸಾಗಲಿದೆ. ಎಲ್ಲರಿಗೂ ಉಚಿತ ಪ್ರವೇಶವಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ 317ಡಿಯ ಕುಡಿ ಅರವಿಂದ್ ಶೆಣೈ, ಜಿಲ್ಲಾ ನಿರ್ದೇಶನಾಲಯದ ಎಸೋಸಿಯೇಟ್…
ಮಂಗಳೂರು, ಆ.14 : ಕೊಡಿಯಾಲ್ ಬೈಲ್ ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್ ನಲ್ಲಿ ಆ.15 ಮತ್ತು 16ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮದಾಸ ಅವರು ಬುಧವಾರ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, 15ರಂದು ಬೆಳಿಗ್ಗೆ 9ರಿಂದ ರಾತ್ರಿ 9 ಗಂಟೆಯವರೆಗೆ ಕಲಾಕುಂಜದಲ್ಲಿ ಶ್ರೀಕೃಷ್ಣನಿಗೆ ಮಹಾಭಿಷೇಕ, ಭಜನೆ, ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ.16ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಡಿಯಾಲ್ಬೈಲ್ ಶಾರದಾ ವಿದ್ಯಾಲಯದ ಮೈದಾನದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ‘ಶ್ರೀಕೃಷ್ಣ ವೈಭವಂ’ ರೂಪಕ, ಬ್ಲಾಗರ್ಗಳು, ರೀಲ್ಸ್ ಮಾಡುವವರಿಗಾಗಿ ‘ಬ್ಲಾಗ್ ಫಾರ್ ಕೃಷ್ಣ’ ಕಾರ್ಯಕ್ರಮ, ಛದ್ಮವೇಷ ಸ್ಪರ್ಧೆ, ಕೃಷ್ಣನ ಕುರಿತ ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಮಧ್ಯರಾತ್ರಿ ಕೃಷ್ಣನಿಗೆ ಜನ್ಮ ಆರತಿ, ಮಹಾಭಿಷೇಕದೊಂದಿಗೆ ಆಚರಣೆ ಸಂಪನ್ನಗೊಳ್ಳಲಿದೆ ಎಂದು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ…
ಮಂಗಳೂರು,ಆ. 13 : ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಮಂಗಳೂರು, ಇದರ ವತಿಯಿಂದ ಕದ್ರಿ ಹಿಲ್ಸ್ ನ ಶ್ರೀ ಗೋರಕ್ಷನಾಥ, ಜ್ಞಾನ ಮಂದಿರದಲ್ಲಿ ಆಟಿಡೊಂಜಿ ದಿನ ಹಾಗೂ ಸಂಘದ 2025ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಜರಗಿತು. ಪ್ರೊ| ಸಂಜೀವ ಕುತ್ತಾಜೆ ಸುಳ್ಯ ಅವರು ಆಟ ಕೂಟದ ಸಂದೇಶ ನೀಡುತ್ತಾ, ಹಿಂದಿನ ಕಾಲದಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ನಮ್ಮ ಪೂರ್ವಿಕರು ಅನುಸರಿಸುತ್ತಿದ್ದ ಆಚಾರ ವಿಚಾರಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಆಟಿಡೊಂಜಿ ದಿನ ಆಚರಣೆ ಕಾರ್ಯಕ್ರಮವನ್ನು ಪ್ರತೀ ವರ್ಷ ಆಚರಿಸಿಕೊಂಡು ಬಂದಿದೆ ಎಂದು ಹೇಳಿದರು. ಮಂಗಳೂರು ಜೋಗಿ ಸಮಾಜ ಸುಧಾರಕ ಸಂಘ ಇದರ 2025ನೇ ಸಾಲಿನ ವಾರ್ಷಿಕೋತ್ಸವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘವು ಪ್ರತೀವರ್ಷ ಆಟಿಡೊಂಜಿ ದಿನ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿರುವುದು ಪ್ರಶಂಸನೀಯ ಎಂದರು. ಈ ಸಂದರ್ಭದಲ್ಲಿ ಸಮಾಜ ಸೇವೆಗೈದ ಹಿರಿಯರಾದ…
ವಿಟ್ಲ, ಆ. 12 : ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಅವರ ಜನ್ಮದಿನೋತ್ಸವ, ಗ್ರಾಮೋತ್ಸವ 2025ರ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡುತ್ತಾ,, ಸಂಸ್ಕಾರದಿಂದ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಸಂಸ್ಕಾರದಿಂದ ಸಂಸ್ಕೃತಿ ಉಳಿಯಲು ಸಾಧ್ಯ ಆಗುತ್ತದೆ. ನಿರೀಕ್ಷೆಯ ಬದಲು ಪರಿಶ್ರಮದಿಂದ ಪರಿವರ್ತನೆ ಮಾಡಿ ಯಶಸ್ಸನ್ನು ಗಳಿಸಬಹುದು ಎಂದು ಸ್ವಾಮೀಜಿ ಹೇಳಿದರು. ಸಾಧ್ವಿ ಶ್ರೀ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ವಿವಿಧ ಕ್ಷೇತ್ರಗಳ ಗಣ್ಯರಾದ ಪ್ರೊ. ನರೇಂದ್ರ ಎಲ್. ನಾಯಕ್, ಡಾ. ಡಿ. ಸುರೇಶ ರಾವ್, ಕಿಶೋರ್ ಆಳ್ವ, ಶಂಕರ ಕೆ. ಶೆಟ್ಟಿ ಅಂಕ್ಲೇಶ್ವರ, ರವೀಂದ್ರನಾಥ ಭಂಡಾರಿ , ದಿವಾಕರ ದಾಸ ನೇರ್ಲಾಜೆ ,ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ , ಮಹಾರಾಷ್ಟ್ರ ಘಟಕದ ಅಧ್ಯಕ್ಷ ವಾಮಯ್ಯ ಬಿ ಶೆಟ್ಟಿ, ಮುಂಬೈ ಸೇವಾ ಬಳಗದ ಪ್ರಭಾಕರ ಶೆಟ್ಟಿ, ಸ್ವಾಗತ ಸಮಿತಿ ಅಧ್ಯಕ್ಷ…
ಮಂಗಳೂರು, ಆ.11 : ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು ಸೋಮರ್ ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮಂಗಳೂರಿನ ಲೇಡಿಹಿಲ್ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಉಡುಪಿಯ ಈಜುಕೊಳದಲ್ಲಿ ಗುತ್ತಿಗೆ ಆಧಾರದಲ್ಲಿ ಲೈಫ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಮೂರು ವರ್ಷದ ಹಿಂದೆ ನಗರದ ಮಂಗಳೂರು ಮಹಾನಗರಪಾಲಿಕೆ ಈಜುಕೊಳದ ನಿರ್ವಹಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮಂಗಳೂರು, ಆ.10 : ಮಂಗಳೂರು ಕರ್ನಾಟಕ ರಾಜ್ಯ ದೇವಾಡಿಗರ ಸಂಘದಿಂದ ದೇವಾಡಿಗ ಸಮಾಜ ಭವನದಲ್ಲಿ ಆಟಿಡೊಂಜಿ ದಿನ ಇತ್ತೀಚೆಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಂಕನಾಡಿ ಪಡೀಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಲತೀಶ್ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಷ್ಟಕರವಾಗಿದ್ದ ಹಿಂದಿನ ಕಾಲದ ಆಟಿ ದಿನಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸುತ್ತಾರೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಾಂಸ್ಕೃತಿಕ ಚಿಂತಕಿ ಮಂಜುಳಾ ಪ್ರವೀಣ್ ಶೆಟ್ಟಿ ಅವರು, ಆಟ ತಿಂಗಳಿನ ಪ್ರತಿ ಆಚರಣೆಯೂ ಕರಾವಳಿಯ ಹವಾಗುಣ ಹಾಗೂ ಸಸ್ಯ ಸಂಪತ್ತಿನ ಬಳಕೆಗೆ ಪೂರಕವಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಅಧ್ಯಕ್ಷ ಅಶೋಕ್ ಮೈಲಿ, ಪಾವಂಜೆ ದೇವಾಡಿಗ ಸಮಾಜ ಸಂಘದ ಅಧ್ಯಕ್ಷ ಅಣ್ಣಪ್ಪ ದೇವಾಡಿಗ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ.ರಾ.ದೇ. ಸಂ.ಹಿರಿಯಡ್ಕ ಉಪಸಂಘದ ಅಧ್ಯಕ್ಷ ಎಚ್. ರಾಜೇಂದ್ರ ಕುಮಾರ್, ಷಷ್ಠಿ ರಥ ಸಮರ್ಪಣ ಸಮಿತಿ ಪೊಳಲಿಯ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ, ಶ್ರೇಷ್ಠ ವಾದ್ಯ ವಾದಕ, ತಯಾರಕ…
ಬೆಳ್ಮಣ್, ಆ.09 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಬ್ಯಾಂಕಿಂಗ್ ಸೇವೆಯ ಪ್ರಯಾಣದಲ್ಲಿ ಬ್ಯಾಂಕಿನ 9 ನೇ ಎಟಿಎಂ ಅನ್ನು ಆಗಸ್ಟ್ 9, ಶನಿವಾರ ಬೆಳ್ಮಣ್ ಶಾಖೆಯಲ್ಲಿ ಉದ್ಘಾಟಿಸಲಾಯಿತು. ಎಟಿಎಂ ಅನ್ನು ಬೆಳ್ಮನ್ ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್ ನಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ನನ ಧರ್ಮಗುರುಗಳಾದ ರೆವೆರೆಂಡ್ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಅವರು ಎಟಿಎಂ ಅನ್ನು ಆಶಿರ್ವಚಿಸಿ ಶಾಖೆ ಮತ್ತು ಅದರ ಗ್ರಾಹಕರಿಗೆ ಅನುಗ್ರಹ ಮತ್ತು ಸಮೃದ್ಧಿಯನ್ನು ಕೋರಿದರು. ಎಟಿಎಂನಿoದ ಮೊದಲ ನಗದು ಹಿಂಪಡೆಯುವಿಕೆಯನ್ನು ಫ್ರೆಡ್ರಿಕ್ ವಿನ್ಸೆಂಟ್ ಅಂದ್ರಾದೆ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು, ಬೆಳ್ಮನ್ ಶಾಖೆಯಲ್ಲಿ ವಹಿವಾಟು ₹5 ಕೋಟಿ ದಾಟಿದೆ. ಬ್ರಹ್ಮಾವರ ಶಾಖೆ ಒಂದು ವರ್ಷದೊಳಗೆ ₹10 ಕೋಟಿ ವಹಿವಾಟು…
ಮಂಗಳೂರು, ಆ.09 : ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಆ.10ರಂದು ಬೆಳಿಗ್ಗೆ 11ಗಂಟೆಗೆ ನಗರದ ಜೆಪ್ಪಿನಮೊಗರಿನಲ್ಲಿರುವ ಪ್ರೆಸ್ಟಿಜ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಸ್ಕಾಲರ್ಶಿಪ್ ಕಮಿಟಿಯ ಚೇರ್ಮ್ಯಾನ್ ಎಂ.ಇ. ಮೂಳೂರು ಅವರು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ಕಲ್ಚರಲ್ ಫೋರಂ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು. ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ. ಯೂಸುಫ್ ಮಾತನಾಡಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ದುಆಗೈಯಲಿದ್ದಾರೆ.;ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ನಸೀರ್…
ಮಂಗಳೂರು, ಆ. 08 : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಬುಧವಾರ ನಡೆಯಿತು. ಸುವರ್ಣ ಸಂಭ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಉದ್ಘಾಟಿಸಿದರು. ಸಂಭ್ರಮದಲ್ಲಿ ಮಾತನಾಡಿದ ಡಿ.ವಿ. ಸದಾನಂದ ಗೌಡ ಅವರು, ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆಯಾಗಬೇಕು ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸುವರ್ಣ ಸಂಭ್ರಮ ಸಾಕ್ಷೃಚಿತ್ರ ಬಿಡುಗಡೆಗೊಳಿಸಿದರು. ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಹಿರಿಯ ಪತ್ರಕರ್ತ ರವಿ ಹೆಗಡೆ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಕಾರ್ಡೋಲೈಟ್ ಸ್ಪೆಷಾಲಿಟಿ…
ಮಂಗಳೂರು, ಆ. 08 : ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿರುವ ಕೆನರಾ ಎಂಜಿನಿಯರಿಂಗ್ ಕಾಲೇಜಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಸ್ವಾಯತ್ತ ಸಂಸ್ಥೆಯ ಮಾನ್ಯತೆ ನೀಡಿದೆ. ಈ ಮೂಲಕ ಕಾಲೇಜು ತನ್ನದೇ ತಾಂತ್ರಿಕ ಪಠ್ಯ ವಸ್ತು, ಪರೀಕ್ಷೆ, ಫಲಿತಾಂಶ ನೀಡಲು ಸಾಧ್ಯವಾಗಲಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆನರಾ ಎಂಜಿನಿಯರಿಂಗ್ ಕಾಲೇಜು ರಜತ ಮಹೋತ್ಸವ ಸಂಭ್ರಮದ ಸಿದ್ಧತೆಯಲ್ಲಿರುವಾಗ ಈ ಸ್ಥಾನಮಾನ ಲಭಿಸಿರುವುದು ಹರ್ಷ ತಂದಿದೆ. ಶೈಕ್ಷಣಿಕ ಅನ್ವೇಷಣೆ, ಸರಳೀಕೃತ ದಕ್ಷತೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಶೈಕ್ಷಣಿಕ ಅನ್ವೇಷಣೆ, ಸರಳೀಕೃತ ದಕ್ಷತೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಕಾಲೇಜಿನ ಸ್ವಾಯತ್ತ ಸ್ಥಾನಮಾನದಿಂದಾಗಿ ಇದೀಗ ವಿದ್ಯಾರ್ಥಿಗಳ ಪಠ್ಯದಲ್ಲಿ ಅನ್ವೇಷಣಾ ವಿಷಯಗಳು, ಕೈಗಾರಿಕಾ ಸ್ನೇಹಿ ಕೌಶಲಗಳು, ಉನ್ನತ ಶೈಕ್ಷಣಿಕ ಆಡಳಿತ ಸಾಧ್ಯವಾಗಲಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯ ಪರಂಪರೆ ಮತ್ತು ಮೂಲ ಆಶಯವನ್ನು ಇನ್ನಷ್ಟು ಬಲಗೊಳಿಸಿದಂತಾಗಿದೆ ಎಂದರು. ಪ್ರಸ್ತುತ ಕೆನರಾ…












