Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು,ಸೆ.19 : ಎ ಆರ್ ಎಂ 3D ಸಿನಿಮಾವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ಎ ಆರ್ ಎಂ ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ. ಎ ಆರ್ ಎಂ ಸಿನಿಮಾ ಪ್ರಪಂಚದಾದ್ಯಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಆಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ. ಸೆಪ್ಟೆಂಬರ್ 20 ರಂದು ಟಿಕೆಟ್ ದರ ಕೇವಲ ರೂ. 99 ಮಾತ್ರ ಇರುತ್ತದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಆಫರ್ ದೇಶಾದ್ಯಂತ 4,000ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಅನ್ವಯಿಸುತ್ತದೆ. IMAX,…
ಸುರತ್ಕಲ್, ಸೆ. 18 : ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನೆಯು ಸುರತ್ಕಲ್ ನಲ್ಲಿರುವ ಅಂಚೆ ಕಚೇರಿ ಮುಂಭಾಗದ ಶಂಕರ ಸದನ ಕಟ್ಟಡದಲ್ಲಿ ಮಂಗಳವಾರ ಜರಗಿತು. ಶಾಸಕರಾದ ಡಾ| ಭರತ್ ಶೆಟ್ಟಿ ವೈ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ರಂಗದಿಂದ ಸ್ಥಳೀಯ ಕಿರು ಉದ್ಯಮಿಗಳು ಹಾಗೂ ಜನತೆಗೆ ಉತ್ತಮ ಸೇವೆ ದೊರಕುತ್ತಿದೆ. ರಾಷ್ಟೀಕೃತ ಬ್ಯಾಂಕ್ ಗಳಿಗಿಂತ ಸಹಕಾರ ಸಂಘಗಳಲ್ಲಿ ಸುಲಭ ಮತ್ತು ವ್ಯಕ್ತಿ ಆಧಾರಿತ ಬ್ಯಾಂಕಿಂಗ್ ಸೇವೆಗೆ ಸೂಕ್ತ ಅವಕಶವಿದ್ದು,ಸಹಕಾರಿಗಳು ಈ ನಿಟ್ಟಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆನ್ನು ನೀಡಲು ಸಾದ್ಯವಿದೆ. ಗ್ರಾಹಕರು ಇದರ ಉಪಯೋಗವನ್ನು ಪಡೆಯಬೇಕು. ಸವಿತಾ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, 12 ವರ್ಷಗಳ ಅತ್ಯಲ್ಪ ಅವಧಿ ಯಲ್ಲಿಯೇ 4ನೇ ಶಾಖೆ ತೆರೆದಿರುವುದು ಸವಿತಾ ಸೌಹಾರ್ದ ಸಹಕಾರಿಯ ಉತ್ತಮ ಬೆಳವಣಿಗೆ. ಈ …
ಬೆಂಗಳೂರು,ಸೆ.18.ಎ ಆರ್ ಎಂ 3D ಸಿನಿಮಾ ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ ಎ ಆರ್ ಎಂ ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಮಲಯಾಳಿ ಪ್ರೇಕ್ಷಕರು ಬಹುದಿನಗಳಿಂದ ಕಾಯುತ್ತಿದ್ದ ಎ ಆರ್ ಎಂ 3D ಚಿತ್ರವನ್ನು ಈ ಓಣಂ ಸೀಸನ್ನಲ್ಲಿ ಪ್ರೇಕ್ಷಕರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ ಎಂದು ಚಿತ್ರತಂಡ ಹೇಳಿದೆ ಟೋವಿನ್ ಥಾಮಸ್ ನಟನೆಯ ಎಆರ್ಎಂ ಸಿನಿಮಾ ಮಲಯಾಳಂ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗಿದೆ.ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ. ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಬಾಸಿಲ್…
ಬೆಂಗಳೂರು, ಸೆ.17 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೊಲೆ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಟೆಕ್ನಿಕಲ್ ಸಾಕ್ಷ್ಯಗಳನ್ನು ಹಾರ್ಡ್ ಡಿಸ್ಕ್ನಲ್ಲಿ ಸಲ್ಲಿಸಿದರು. ಅಂತಾ ದರ್ಶನ್ ಪರ ವಕೀಲರು, ದರ್ಶನ್ಗೆ ಬ್ಯಾಕ್ಪೇನ್ ಇದೆ. ಚೇರ್ ಕೊಡುವಂತೆ ಕೇಳಿದ್ದು, ಚೇರ್ ಕೊಟ್ಟಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೇ ಅವರ ಕುಟುಂಬ, ಸ್ನೇಹಿತರ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ನ್ಯಾಯಾಧೀಶರು ದೂರಿದರು.
ಬೆಂಗಳೂರು, ಸೆ.16: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್ನಲ್ಲಿ ಡಾ. ಜಕರಿಯಾ ಥಾಮಸ್ ನಿರ್ಮಿಸಿದ ಎ ಆರ್ ಎಂ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಎಂದು ಚಿತ್ರತಂಡ ಹೇಳಿದೆ. ಎ ಆರ್ ಎಂ ಸಿನಿಮಾ ಬುಕ್ ಮೈ ಶೋನಲ್ಲಿ 24 ಗಂಟೆಗಳಲ್ಲಿ 1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು ಸ್ತ್ರೀ ಚಿತ್ರಗಳಿ ಗಿಂತಲೂ ಹೆಚ್ಚು ಬುಕ್ಕಾದ ಭಾರತದ ಮೊದಲ ಸಿನಿಮಾ. ಇದೇ ಆಗಿದೆ. ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲು ಹೌಸ್ ಪುಲ್ ಕಲೆಕ್ಷನ್ ಕಾಣುತ್ತಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಎ ಆರ್ ಎಂ ಚಿತ್ರದಲ್ಲಿ ನಟ ಟೊವಿನೋ ಥಾಮಸ್ ಮೂರು ಶೇಡ್ಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ…
ಉಳ್ಳಾಲ,ಸೆ.16 : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಕೋಟೆಕಾರು ಗ್ರಾಮದ ಬೀರಿ ಜಂಕ್ಷನ್ ನಲ್ಲಿ ನಿರ್ಮಾಣಗೋಂಡ ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಮಾಜಮುಖಿ ಕೆಲಸತ್ತಿದೆ. ಸಂಘವು ಪ್ರಸಕ್ತ ಏಳು ಶಾಖೆಗಳನ್ನು ಹೊಂದಿದ್ದು 173 ಕೋಟಿ ರೂ. ಸಾಲ ನೀಡಿ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿ ಷೇರುದಾರರಿಗೆ 25ಶೇ. ಡಿವಿಡೆಂಟ್ ನೀಡುವ ಮೂಲಕ ಸಹಕಾರ ಸಂಘ ಯಶಸ್ಸುಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರು ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸದ ಬೃಜೇಶ್ ಚೌಟ ಅವರು ಮಾತನಾಡಿ, ಉತ್ತಮ ಕೆಲಸ ಮಾಡುವ ಮೂಲಕ ದೇಶಕ್ಕೆ ಮಾದರಿ ಎಂದು ತೋರಿಸಿ ಕೊಟ್ಟಂತಹ ಸಂಘಗಳಲ್ಲಿ ಕೋಟೆಕಾರು ವ್ಯವಸಾಯ ಸೇವಾ…
ಕದ್ರಿ, ಸೆ. 15: ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 86ನೇ ಸಂಸ್ಥಾಪನ ದಿನ ,ಹಾಲ್ನಲ್ಲಿ ಹೊಸದಾಗಿ ಅಳವಾಡಿಸಲಾಗಿ ಹವಾನಿಯಂತ್ರಣ ಸೌಲಭ್ಯದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕದ್ರಿ ರಸ್ತೆಯ ಸುಜೀರ್ ಸಿ.ವಿ. ನಾಯಕ್ ಕನ್ವೆನ್ಶ ನ್ ಹಾಲ್ನಲ್ಲಿ ಶನಿವಾರ ನಡೆಯಿತು. ಮಾತೃ ಭಾಷೆಯಾದ ಕೊಂಕಣಿ ಭಾಷೆಯನ್ನು ಉಳಿಸುವ ಕೆಲಸ ಪ್ರತಿ ಕೊಂಕಣಿಗರೂ ಮಾಡಬೇಕು. ಭಾಷೆ ಉಳಿದರೆ ಮಾತ್ರ ನಮ್ಮ ಆಹಾರ ಪದ್ಧತಿ, ಆಚಾರ, ವಿಚಾರ, ಸಂಸ್ಕೃತಿ ಉಳಿಯಲು ಸಾಧ್ಯ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ್ ಶೆಣೈ ಹೇಳಿದರು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಮಹಾಪ್ರಬಂಧಕ ಬಿ. ಸುಧಾಕರ್ ಕೊಟ್ಟಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಇದೇ ವೇಳೆ ಸಭಾಂಗಣದಲ್ಲಿ ಹೊಸದಾಗಿ ಅಳವಡಿಸಲಾಗಿರುವ ಹವಾನಿಯಂತ್ರಣ ಸೌಲಭ್ಯದ ಉದ್ಘಾಟನೆಯನ್ನು ಅತಿಥಿಗಳು ನೆರವೇರಿಸಿದರು. ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಡಾ| ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಸೆಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ…
ಬೆಂಗಳೂರು,ಸೆ.15 :ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ಎ ಆರ್ ಎಂ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಎಂದು ಎ ಆರ್ ಎಂ ಚಿತ್ರತಂಡ ಹೇಳಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ . ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ನಟ ಟೊವಿನೋ ಥಾಮಸ್ ಮೂರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್ಎಂ ಸಿನಿಮಾದಲ್ಲಿದ್ದಾರೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ.ಎ ಆರ್ ಎಂ ಆ್ಯಕ್ಷನ್ ಸಿನಿಮಾವಾಗಿದೆ. ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ…
ಮಂಗಳೂರು, ಸೆ.14 : ಫೀನಿಕ್ಸ್ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ ದಿ ಜರ್ನಿ ಆಫ್ ಬೆಳ್ಳಿ ಚಲನಚಿತ್ರ ಶುಕ್ರವಾರ ಭಾರತ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಅವರು, ಕಳೆದ ಹಲವಾರು ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಅಭಿರುಚಿಯ ಸಿನಿಮಾಗಳು ಬರುತ್ತಿವೆ. ಅವುಗಳ ಮೂಲ ನಮ್ಮ ಕರಾವಳಿ ಆಗಿರುವುದು ಖುಷಿಯ ವಿಚಾರ. ಸೈನಿಕ ಮತ್ತು ಮಗಳ ಭಾಂದವ್ಯದ ಮೇಲಿನ ಕಥೆ ಈ ಚಿತ್ರದಲ್ಲಿದೆ ಎಂದರು. ಕಾರ್ಯಕ್ರಮದಲ್ಲಿವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತಾಡಿದ ಅವರು, ಇಡೀ ಚಿತ್ರತಂಡಕ್ಕೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಕುಟುಂಬ ಸಮೇತರಾಗಿ ಕೂತು ನೋಡುವಂತಹ ಸಿನಿಮಾ ಇದಾಗಿದೆ ಎಂದರು. ಬಳಿಕ ಮಾತಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾನು ಕಾರ್ಯಕ್ರಮಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಸರಕಾರಗಳು ಎಲ್ಲಾ ಸಿನಿಮಾಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ…
ಮಂಗಳೂರು,ಸೆ.13: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತಾಡಿ, ಕಲ್ಜಿಗ ಸಿನಿಮಾ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವಾಗಿದೆ. ಇಂತಹ ಇನ್ನೂ ಚಿತ್ರಗಳು ನಿರ್ಮಾಣವಾಗಲಿ ಎಂದರು. ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮದಲ್ಲಿ ಕಲ್ಜಿಗ ಸಿನಿಮಾಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ಶರತ್ ಕುಮಾರ್ ಎ.ಕೆ.,ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ತಮ್ಮ ಲಕ್ಷ್ಮಣ, ಪ್ರಕಾಶ್ ಧರ್ಮನಗರ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ದೇಶಕ ಸುಮನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಶರತ್ ಕುಮಾರ್ ಎ.ಕೆ. ಕಲ್ಜಿಗ ಚಿತ್ರದ ನಿರ್ಮಾಪಕರಾಗಿದ್ದಾರೆ. ಸುಮನ್ ಸುವರ್ಣ ಅವರು ಕಲ್ಜಿಗದ ಸಿನಿಮಾದ ನಿರ್ದೇಶಕರು, ಕಥೆ ,ಚಿತ್ರಕಥೆ, ಸಂಭಾಷಣೆಯನ್ನು…