Author: admin

ಬೆಂಗಳೂರು, ಆ. 01 : ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2 ರ ಶನಿವಾರ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಘೋಷಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಈಗಾಗಲೇ 14 ತಿಂಗಳುಗಳನ್ನು ನ್ಯಾಯಾಂಗ ಬಂಧನದಲ್ಲಿ ಕಳೆದಿರುವ ರೇವಣ್ಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶನಿವಾರ ನಾಳೆ ಪ್ರಕಟಿಸಲಿದೆ. ಜಡ್ಜ್ ಸಂತೋಷ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ. ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ ಡಿ  ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಕರಣ…

Read More

ಮಂಗಳೂರು, ಜು.31: ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪೂರ್ವಭಾವಿಯಾಗಿ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯ ಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಆ.3ರಂದು ‘ಬೃಹತ್ ಸ್ವಚ್ಚತಾ ಅಭಿಯಾನ’ ವನ್ನು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ 365 ಸ್ಥಳಗಳಲ್ಲಿ ಏಕಕಾಲದಲ್ಲಿ ವಿವಿಧ ಸಂಘಟನೆಗಳ ಸಹಕಾರ ದೊಂದಿಗೆ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸಹಕಾರಿರತ್ನ ಎ.ಸುರೇಶ್ ರೈ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಈ ಬಾರಿಯ ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಬಾರಿ ಗ್ರಾಮೋತ್ಸವದ ಕಾರ್ಯ ಕ್ರಮಗಳು ಆ.8 ರಂದು ಶ್ರೀ ಸಂಸ್ಥಾನಮ್ನಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ.ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನಮ್ ನ  ಪರಮ ಪೂಜ್ಯ ಶ್ರೀ ಗುರು ದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವವನ್ನು ಗ್ರಾಮೋತ್ಸವವಾಗಿ ಗುರುವಂದನೆ-ಸೇವಾ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಸುರೇಶ್ ರೈ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪನೆಯಡ್ಕ…

Read More

ಮಂಗಳೂರು,ಜು. 30 : ಎಮ್.ಸಿ.ಸಿ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ 03.08.2025ರಂದು ತೆರೆಯಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಎಮ್.ಸಿ.ಸಿ. ಬ್ಯಾಂಕ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು…

Read More

ಪುತ್ತೂರು,ಜು. 29 : ವಿವಾಹಿತ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಗಣೇಶ್ ಬಾಗ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ದಿ.ವಸಂತ ಎಂಬವರ ಪುತ್ರ ವಿಶ್ವಾಸ್(38) ಎಂದು ಗುರುತಿಸಲಾಗಿದೆ. ವಿಶ್ವಾಸ್ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ತನ್ನ ಕೆಲಸ ಮುಗಿಸಿ ಅಂಗನವಾಡಿಯಿಂದ ಸಂಜೆ ಮನೆಗೆ ಬಂದಾಗ ವಿಶ್ವಾಸ್ ಅವರು ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಪತ್ನಿ ದಿವ್ಯಾ ಅವರು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು,ಜು. 28 : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶ್ರೀ ಪ್ರಮೋದ್ ಮಧ್ವರಾಜ್ ಭಾಗವಹಿಸಿ ಮಠದ ಆವರಣದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿದರು. ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ದಿವ್ಯ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು ಅಮ್ಮ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರಿಂದ ಪ್ರತಿಷ್ಠಿತ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರವು ವಿಶೇಷ ಸ್ಥಾನವನ್ನು ಪಡೆದಿದೆ. ನಾಲ್ಕು ದಿಕ್ಕುಗಳಿಗೆ ಅಭಿಮುಖವಾಗಿ ಒಂದೇ ಕಲ್ಲಿನಿಂದ ಕೆತ್ತಲ್ಪಟ್ಟ ವಿಗ್ರಹ ಅಮ್ಮನವರ ಸಂಕಲ್ಪದಿಂದ ಬಹಳ ಸುಂದರವಾಗಿ ಮೂಡಿಬಂದಿದೆ. ಇದು ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ.ಅಮ್ಮನ ಅನುಗ್ರಹದಿಂದ ಇಲ್ಲಿ ನಡೆಯುತ್ತಿರುವ ಮಾನವೀಯ ಸೇವಾ ಉಪಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯರವರು ಅತಿಥಿಯಾಗಿ ಭಾಗವಹಿಸಿ ಆಶ್ರಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೇವಾಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಗೌರವಾರಪಣೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.ಡಾ.ದೇವದಾಸ್…

Read More

ಮಂಗಳೂರು,ಜು. 27 : ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧಗೊಂಡ, ಸತ್ಯ ಎಸ್ ಶ್ರೀನಿವಾಸನ್ ನಿರ್ಮಿಸಿರುವ ‘ಎಲ್ಟು ಮುತ್ತಾ’ಎಂಬ ಕನ್ನಡ ಚಲನಚಿತ್ರ ಆ.1ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಟ ನವೀನ್ ಡಿ.ಪಡೀಲ್  ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಟ ಶೌರ್ಯ ಪ್ರತಾಪ್ ಅವರು ಮಾತನಾಡಿ, ನಾನು ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುವ ಜೊತೆಗೆ ಸಹ ಬರವಣಿಗೆ ಮತ್ತು ಸಹ ನಿರ್ದೇಶನದಲ್ಲಿ ಕೂಡ ಸಾಥ್ ಕೊಟ್ಟಿದ್ದೇನೆ. ಇತರೆ ಭಾಷೆಗಳಿಂದ ಡಬ್ಬಿಂಗ್ ಗಾಗಿ ಬೇಡಿಕೆಯ ಕರೆ ಬಂದಿದೆ ಎಂದರು. ಸತ್ಯ ಶ್ರೀನಿವಾಸನ್ ಮತ್ತು ಪವೀಂದ್ರ ಮುತ್ತಪ್ಪ ನಿರ್ಮಾಣದ ಜೊತೆಗೆ ಇಡೀ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಪ್ರಸನ್ನ ಕೇಶವ ಅವರು ಈ ಚಿತ್ರಕ್ಕೆ ಸಂಗೀತವನ್ನು ನೀಡಿದ್ದಾರೆ ಎಂದವರು ಹೇಳಿದರು. ನಿರ್ಮಾಪಕ ಸತ್ಯ ಶ್ರೀನಿವಾಸನ್ ಅವರು ಮಾತನಾಡಿ, ಈ ಚಿತ್ರದಲ್ಲಿ ರುಹಾನ್ ಆರ್ಯ, ಕಾಕ್ರೋಚ್ ಸುಧಿ, ನವೀನ್ ಪಡೀಲ್, ರಾಮ್,ಧನುದೇವಯ್ಯ, ಪ್ರಿಯಾಂಕಾ ಮಳಲಿ, ಸಮ್ರಾಟ್, ಅವಿರೇಶ್, ಪ್ರಶಾಂತ್, ತಾರಕ್, ಜೋಗಿ ರವಿ,…

Read More

ಮಂಗಳೂರು,ಜುಲೈ, 26 : ಮೂಡುಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ಬೃಹತ್ ಉದ್ಯೋಗ ಮೇಳ  ಆಳ್ವಾಸ್ ಪ್ರಗತಿ 2025’ರ ಉದ್ಘಾಟನೆಯು ಆಗಸ್ಟ್ 1 ಮತ್ತು 2ರಂದು ವಿದ್ಯಾಗಿರಿಯಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿದ್ದು, ಸಚಿವ ದಿನೇಶ್ ಗುಂಡುರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಯಾಗಿ ಮಂಗಳೂರು ವಿವಿಯ ಕುಲಪತಿ ಡಾ ಪಿಎಲ್ ಧರ್ಮ ಪಾಲ್ಗೊಳ್ಳಲಿದ್ದು, ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಜನಪ್ರತಿನಿಧಿಗಳ ಉಪಸ್ಥಿತಿ ಇರಲಿದೆ ಎಂದರು. ಈ ಸಂದರ್ಭದಲ್ಲಿ ಅಲ್‌ಕಾರ್ಗೋ ಲಾಜಿಸ್ಟಿಕ್ಸ್ನ ಅಧ್ಯಕ್ಷರಾದ ಶಶಿಕಿರಣ್ ಶೆಟ್ಟಿ, ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ…

Read More

ಬೆಂಗಳೂರು , ಜುಲೈ, 26 :: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಸದ್ಗುರು ಶ್ರೀ ಮಧುಸೂಧನ್ ಸಾಯಿ ರವರ ಒನ್ ವರ್ಡ್ ಒನ್ ಫ್ಯಾಮಿಲಿ ವಿಷನ್ ಮೂಲಕ ಸಾಯಿ ಸಿಂಪನಿ ಆರ್ಕೆಸ್ಟ್ರಾ ತಂಡದಿಂದ ಯುವ ಪ್ರತಿಭೆಗಳ ಸಂಗೀತ ಮ್ಯೂಸಿಕಲ್ ಕಾನ್ಸರ್ಟ್ ಕಾರ್ಯಕ್ರಮ ಬೃಹತ್ ಸಭಾಂಗಣದಲ್ಲಿ ಸುಂದರ ಪರಿಸರದ ನಡುವೆ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ವ್ಯವಸ್ಥಾಪಕ, ಸಾಯಿ ಗ್ಲೋಬಲ್ ರುವಾರಿ ಒನ್ ವರ್ಡ್ ಒನ್ ಫ್ಯಾಮಿಲಿ ವಿಷನ್ ಮುಖ್ಯಸ್ಥ ಸದ್ಗುರು ಶ್ರೀ ಮಧುಸೂಧನ್ ಸಾಯಿ ಅವರು ಮಾತನಾಡುತ್ತಾ ,ಈ ಸಂಗೀತ ಪ್ರತಿಭೆಗಳ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ ನಿರ್ದೇಶಕ    ಎ.ಆರ್. ರೆಹಮಾನ್ ಅವರು ಬಂದಿದ್ದು ಬಹಳ ಸಂತೋಷದ ವಿಚಾರ. ನಾನು ಅವರನ್ನ ಜೂಮ್ ಆಪ್ ಗೆ ಬನ್ನಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಎಂದಿದ್ದೆ , ಆದಕ್ಕೆ ಅವರು ಯುವ ಪ್ರತಿಭೆಗಳನ್ನ ಪ್ರೋತ್ಸಾಹಿಸಲು ನಾನು ನೇರವಾಗಿ ಬರುತ್ತೇನೆ ಎಂದು ಹೇಳಿದ್ದರು.  ಅವರು ಈ ಒಂದು ಕಾರ್ಯಕ್ರಮಕ್ಕೆ ಬಂದಿರುವುದು  ಅವರಿಗೆ ಸಂಗೀತ ಮೇಲೆ   ಪ್ರೀತಿ ಎಷ್ಟಿದೆ ಎಂದು ತಿಳಿಯುತ್ತೆ…

Read More

ಜೈಪುರ, ಜು. 25 : ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ 60ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.

Read More

ಮಂಗಳೂರು ,ಜುಲೈ, 24 :: ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಗುರುಪೂರ್ಣಿಮಾ ಆಚರಣೆ ಜು. 27ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಬೆಳಗ್ಗೆ 7ರಿಂದ ನಡೆಯಲಿದೆ ಎಂದು ಅಮೃತಾನಂದಮಯಿ ಮಠದ ಅಧ್ಯಕ್ಷ ಸುರೇಶ್ ಅಮೀನ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ಬೋಳೂರಿನಲ್ಲಿರುವ ಶ್ರೀ ಬ್ರಹ್ಮ ಸ್ಥಾನಂ ಕ್ಷೇತ್ರದ ಪ್ರಧಾನ ಅರ್ಚಕರಾದ ಬ್ರಹ್ಮಚಾರಿ ರತೀಶ್, ಅರ್ಚಕ ವೃಂದದವರಿಂದ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದೆ. ಗುರುಹೋಮ, ಮೃತ್ಯುಂಜಯ ಹೋಮ, ಸರ್ವೈಶ್ವರ್ಯ ಸೌಭಾಗ್ಯ ಪೂಜೆಗಳು ಜರಗಲಿದೆ ಎಂದು ಹೇಳಿದರು. ಮಂಗಳೂರಿನಲ್ಲಿ ಆಶ್ರಮ ಹಾಗೂ ಅಮೃತ ವಿದ್ಯಾಲಯಂ ಶಿಕ್ಷಣಸಂಸ್ಥೆ ಪ್ರಾರಂಭಗೊಂಡು 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ  ಬೆಳಗ್ಗೆ 9 ಕ್ಕೆ ನಡೆಯಲಿದೆ. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ನೇತೃತ್ವದಲ್ಲಿ ಬೆಳಗ್ಗೆ 10ರಿಂದ  ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ಭಕ್ತರಿಂದ ಅಮ್ಮನ ಪಾದುಕೆಗೆ ಕ್ಷೀರಾಭಿಷೇಕ, ಗುರುಪೂರ್ಣಿಮಾ…

Read More