Subscribe to Updates
Get the latest creative news from FooBar about art, design and business.
Author: admin
ಕಾಸರಗೋಡು, ಏ.05 : ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ಕಾಸರಗೋಡಿನ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ. ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್ ಮೇಲೆ ಹಿಂದಿನಿಂದ ಬಂದ ಲಾರಿ ಹಾದು ಹೋಗಿದ್ದು, ಗಂಭೀರ ಗಾಯಗೊಂಡ ಹನೀಫ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ವರದಿಯಾಗಿದೆ.
ಮಂಗಳೂರು, ಏ.4 : ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ಈ ಸಾಲಿನ ನಡಾವಳಿ ಉತ್ಸವವು ದಿನಾಂಕ ಎಪ್ರಿಲ್ 9ರಿಂದ 11ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಉತ್ಸವದ ಸಂದರ್ಭದಲ್ಲಿ ಶ್ರೀ ಮಾತೆಯರ ಭವ್ಯ ಶೋಭಾಯಾತ್ರೆ ಹಾಗೂ ಪಾರಂಪರಿಕ ಪವಿತ್ರ ಕೆಂಡ ಸೇವೆ ನಡೆಯಲಿದೆ. ಪ್ರತೀ ದಿನ ಮಧ್ಯಾಹ್ನ ಹಾಗೂ ರಾತ್ರಿ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣಾ ಸೇವೆ ಜರಗಲಿದೆ ಎಂದರು. ವೇದಿಕೆಯಲ್ಲಿ ವಿಶ್ವನಾಥ್ ಕುಡುಪು, ಸುಧೀರ್ ಬಿ.ಜೆಪ್ಪು, ಲೋಕೇಶ್ ಬೋಳಾರ್,ಸ್ರಜನ್ ದಾಸ್, ಮೋಹನ್, ಪುರುಷ ಸಾಲಿಯಾನ್, ರವೀಂದ್ರ ಕೊಡಿಯಾಲ್ ಬೈಲ್, ಉಷಾ ಪ್ರಭಾಕರ್, ಆಶಾ ಚಂದ್ರಮೋಹನ್, ಪುರುಷ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ, ಏ.4 : ಸಜೀಪ ಮಾಗಣೆಯ ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾದಿ ಕಾರ್ಯಕ್ರಮಳು ಏ.2 ರಿಂದ ಏ.3ರ ತನಕ ನಡೆಯಿತು. ಏ.2, ಬುಧವಾರ ಸಂಜೆ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಹಸಿರುವಾಣಿ ಹೊರಕಾಣಿಕೆ ಶೋಭಾಯಾತ್ರೆಯು ನಡೆಯಿತು.ನಗ್ರಿ, ಪಣೋಲಿಬೈಲು, ಕಾರಾಜೆ, ನಾಗನವಳಚ್ಚಿಲು, ನಂದಾವರ, ಮುಗುಳಿಯ, ಮಿತ್ತಮಜಲು ದ್ವಾರ, ಕೋಟೆಕಣಿ, ಸಜೀಪನಡು, ಈಶ್ವರಮಂಗಲ, ಅನ್ನಪ್ಪಾಡಿ, ಮಂಜಲ್ಪಾದೆ, ಶಾರದಾನಗರ, ವಿದ್ಯಾನಗರ, ಸುಭಾಷ್ನಗರ ಮೊದಲಾದ ವಲಯಗಳ ಕೇಂದ್ರಗಳಲ್ಲಿ ಸಂಗ್ರಹಿಸಿದ ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ ಸಾಗಿಸಲಾಯಿತು. ಸಜೀಪ ಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ – ಪ್ರಾರ್ಥನೆ ನೆರವೇರಿಸಿದ ಬಳಿಕ ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಮೆರವಣಿಗೆಗೆ ಚಾಲನೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವಿವೇಕ್ ಶೆಟ್ಟಿ, ನಗ್ರಿಗುತ್ತು, ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಗಡಿಪ್ರಧಾನರಾದ ಕಾಂತಾಡಿಗುತ್ತು ಬರಂಗರೆ ಉಗ್ಗ ಶೆಟ್ಟಿ ಯಾನೆ ಗಣೇಶ್ ನ್ಯಾಕ್, ಪಾಲಮಂಟಮೆ…
ಬಂಟ್ವಾಳ, ಏ.03: ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಿಸಿರೋಡು ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮ ಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಏ.4 ರಿಂದ ಏ.9ರ ವರೆಗೆ ವೈಭವಯುತವಾಗಿ ನಡೆಯಲಿದೆ ಎಂದು ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಪೂರಕವಾಗಿ ಏ.3 ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಬಿಸಿರೋಡಿನ ಕೈಕಂಬ ದ್ವಾರದಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಏ. 4 ರಿಂದ ಏ.9 ರವರೆಗೆ ವಿವಿಧ ವೈದಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ದೇವಸ್ಥಾನದ ಬಲಭಾಗದ ವೇದಿಕೆಯಲ್ಲಿ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ, ಎಡಭಾಗದಲ್ಲಿರುವ ವಿಶಾಲ ಸ್ಥಳದಲ್ಲಿ ಪ್ರತಿ ನಿತ್ಯ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಪ್ರತಿನಿತ್ಯ ಎಂಟರಿಂದ ಹತ್ತು ಸಾವಿರ ಮಂದಿ ಭಾಗವಹಿಸುವ…
ಮಂಗಳೂರು, ಏ.02 : ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಎ. 3 ರಿಂದ 5 ರವರೆಗೆ ನಗರದ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಲಿದೆ.ಏ.3ರಂದು ಬೆಳಗ್ಗೆ 10ಕ್ಕೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಸಂತ ಅಲೋಶಿಯಸ್ ವಿವಿ ಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಮತ್ತು ಕೋಲ್ಕತದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೋಮಿಯೋಪಥಿ ಮಾಜಿ ನಿರ್ದೇಶಕ ಡಾ.ಸುಭಾಷ್ ಸಿಂಗ್ ಭಾಗವಹಿಸಲಿದ್ದಾರೆ. ಮಂಗಳೂರು ಬಿಷಪ್, ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಅಧ್ಯಕ್ಷ ಡಾ.ಪೀಟರ್ ಪಾವ್ ಸಲ್ದಾನಾ ಅಧ್ಯಕ್ಷತೆ ವಹಿಸುವರು ಎಂದು ಸಂಸ್ಥೆ ನಿರ್ದೇಶಕ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಫಾದರ್ ಮುಲ್ಲರ್ ಫಿಸಿಯೋಥೆರಪಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ಏ.4ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಭಗವಾನ್…
ನವದೆಹಲಿ, ಏ. 01 : ಇಲ್ಲಿನ ಝಂಡೇವಾಲನ್ ಪ್ರದೇಶದ ಅನಾರ್ಕಲಿ ಕಟ್ಟಡ ಹಾಗೂ ಡಿಡಿಎ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಮಂಗಳವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬೆಂಕಿ ಅವಘಡದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಮಂಗಳೂರು/ಉಡುಪಿ, ಮಾ.31: ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಈದ್-ಉಲ್-ಫಿತರ್ ಅನ್ನು ಸಡಗರದಿಂದ ಆಚರಿಸಿದರು. ರಂಜಾನ್ ಹಬ್ಬ ಆಚರಣೆ ಮಾಡುವ ಮೂಲಕ 30 ದಿನಗಳ ಉಪವಾಸ ಅಂತ್ಯವಾಗಿದೆ. ಈ ಸಂದರ್ಭದಲ್ಲಿ ನಮಾಜ್ ಸಲ್ಲಿಸಲು ಮಸೀದಿಗಳು ಮತ್ತು ತೆರೆದ ಪ್ರಾರ್ಥನಾ ಮೈದಾನಗಳಲ್ಲಿ ಭಕ್ತರು ಜಮಾಯಿಸಿದರು. ಮಂಗಳೂರು ಲೈಟ್ ಹೌಸ್ ಹಿಲ್ ರಸ್ತೆಯಲ್ಲಿರುವ ಈದ್ಗಾ ಮಸೀದಿ ಮತ್ತು ಕುದ್ರೋಳಿಯ ಜಾಮಿಯಾ ಮಸೀದಿ ಸೇರಿದಂತೆ ಮಂಗಳೂರಿನ ಪ್ರಮುಖ ಮಸೀದಿಗಳಲ್ಲಿ ಈದ್ ಪ್ರಾರ್ಥನೆಗಳು ಪ್ರತಿಧ್ವನಿಸಿದವು. ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮಸೀದಿಗಳಿಗೆ ಆಗಮಿಸಿ ನಮಾಜ್ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ಕುಟುಂಬಗಳು ಮತ್ತು ಸ್ನೇಹಿತರು ಈದ್ನ ಸಾರವನ್ನು ಹಂಚಿಕೊಳ್ಳಲು ಒಟ್ಟಾಗಿ ಸೇರಿದರು. ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಮಂಗಳೂರು,ಮಾ.31 : ನಾಡಿನಾದ್ಯಂತ ಮಾ.30ರಂದು ಯುಗಾದಿ ಹಬ್ಬವನ್ನು ಆಚರಿಸಲಾಯಿತು, ಮಕ್ಕಳು, ತಾಯಂದಿರು ಮನೆಯಲ್ಲಿ ರಂಗೋಲಿ ಬಳಿದು ಸ್ನಾನ ಮಾಡಿ ಯುಗಾದಿ ಹಬ್ಬವನ್ನು ಆಚರಿಸಿದರು. ದೇವಸ್ಥಾನಗಳಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ನಡೆದವು.. ದಕ್ಷಿಣ ಭಾರತೀಯರಲ್ಲಿ ಇದರ ಆಚರಣೆ ಹೆಚ್ಚು. ಉತ್ತರ ಭಾರತೀಯರು ಈ ದಿನವನ್ನು ಚೈತ್ರ ನವರಾತ್ರಿಯ ಮೊದಲ ದಿನವೆಂದು ಆಚರಿಸುತ್ತಾರೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಮಹಾರಾಷ್ಟ್ರ ಕಡೆ ಗುಡಿ ಪಾಡ್ವ ಎಂದು ಕರೆಯುತ್ತಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭವನ್ನು ಹಾರೈಸಿದ್ದಾರೆ. ಯುಗಾದಿ ಹಬ್ಬದ ಅಡುಗೆ ದಿನ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ.
ಮಂಗಳೂರ, ಮಾ.,31 : ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು. ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎಬಿ ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್…
ಮಂಗಳೂರು, ಮಾ. 30 : ರೋಟರಿ ಕ್ಲಬ್, ಮಂಗಳೂರು ಸೆಂಟ್ರಲ್ ಮತ್ತು ರೋಟಾಪಕ್ಸ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಯನ್ನು ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸೇವೆ ಪರಿಗಣಿಸಿ ಪ್ರದಾನಿಸಲಾಯಿತು. ಬಳಿಕ ಡಾ| ಪ್ರಕಾಶ್ ಶೆಟ್ಟಿ ಮಾತನಾಡಿ, ನನಗೆ ಪ್ರಶಸ್ತಿಗಳು ದೊರೆಯಲು ಕಾರಣ ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ, ಗ್ರಾಹಕರ ವಿಶ್ವಾಸ, ಮಿತ್ರರ ಸಹಕಾರ, ಪ್ರೋತ್ಸಾಹ ಕಾರಣ ಎಂದರು. ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ| ದೇವದಾಸ್ ರೈ ಮಾತನಾಡಿ, ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿದ್ದು, ಈ ವಾರ್ಷಿಕ ಪ್ರಶಸ್ತಿಯನ್ನು ಸಾಧಕರನ್ನು ಗುರುತಿಸಿ ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದರು. ರೋಟಲ್ಯಾಕ್ಸ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಅವರು ಪ್ರಶಸ್ತಿ ವಿಜೇತರ ಪರಿಚಯಿಸಿದರು. ರೋಟರಾಕ್ಟ್ ಸಂಸ್ಥೆಯ ಜಿಲ್ಲಾ…