Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು, ಮೇ. 19 : ನಗರದಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯು ನಗರದ ವೈಟ್ ಫೀಲ್ಡ್ ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಮೃತ ಮಹಿಳೆ ಯನ್ನು ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಎಂದು ಗುರುತಿಸಲಾಗಿದೆ. ವೈಟ್ ಫೀಲ್ಡ್ ಇಂಡರ್ಷಿಯಲ್ ಏರಿಯಾದ ಇಸ್ಮೋ ಮೈಕ್ರೋ ಸಿಸ್ಟ್ ಕಂಪನಿಯಲ್ಲಿ ಮೃತ ಶಶಿಕಲಾ ಫಸ್ಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿ ಕೆಲವೇ ಹೊತ್ತಿನಲ್ಲೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಶಶಿಕಲಾ ಕೆಲಸ ಮಾಡಿಕೊಂಡಿದ್ದ ಕಂಪನಿಯಿಂದಲೇ ಪರಿಹಾರಕ್ಕೆ ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಿಂದ ಸೂಚನೆ ಹಿನ್ನೆಲೆ ಮೃತ ಮಹಿಳೆಯ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಧನ ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್ ಅವರು ಶನಿವಾರ ಉದ್ಘಾಟಿಸಿದರು. ಬೆಳಗ್ಗೆ ಮೂರು ಮಾರ್ಗದಿಂದ ನಟ ರಮೇಶ್ ಅರವಿಂದ್ ಅವರನ್ನು ತೆರೆದ ಕಾರಿನ ಮೂಲಕ ಮೆರವಣಿಗೆಯಲ್ಲಿ ಚೆಂಡೆ, ಹುಲಿವೇಷದೊಂದಿಗೆ ಶೋ ರೂಂವರೆಗೆ ಕರೆತರಲಾಯಿತು. ಮುಳಿಯ ಸಂಸ್ಥೆಯ ಚೇರ್ಮನ್ ಆಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ,ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹಾಗೂ 7 ಕುಟುಂಬಸ್ಥರು ನಟ ರಮೇಶ್ ಅರವಿಂದ ಅವರನ್ನು ಬರಮಾಡಿಕೊಂಡರು. ಸಭಾ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ರಾಯಭಾರಿ ಹಾಗೂ ನಟ ರಮೇಶ್ ಅರವಿಂದ್ ಅವರು ಮಾತಾಡಿ, ಮುಳಿಯ ಗೋಲ್ಡ್ ಆಂಡ್ ಡೈಮಂಡ್ ಆಭರಣಗಳ ಮಳಿಗೆ ಗ್ರಾಹಕರ ಗಮನ ಸೆಳೆಯಲು ಕಾರಣ ಇಲ್ಲಿ ದೊರೆಯುವ ಉತ್ತಮ ಗುಣಮಟ್ಟದ ಚಿನ್ನಾಭರಣಗಳು. ಇವತ್ತು ಊರಿನ 81 ದೇವಸ್ಥಾನಗಳಿಂದ ದೀಪಗಳನ್ನು ಇಲ್ಲಿ ತಂದು ಬೆಳಗಿಸಿದ್ದಾರೆ. ದೇವಸ್ಥಾನಗಳಿಂದ ದೀಪಗಳನ್ನು…
ಹೈದರಾಬಾದ್, ಮೇ. 18 : ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ರವಿವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡ ಘಟನೆಯ ಬಗ್ಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಲವಾರು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ, ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದ ಕಾರಣ ಅವರ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿಲ್ಲ. ಇದು ಅವರು ಕಾಣೆಯಾದ ಮೊದಲ ಘಟನೆಯಲ್ಲ; ಈ ಹಿಂದೆಯೂ ಒಮ್ಮೆ ಕಾಣೆಯಾಗಿದ್ದರು. ಮಾರ್ಚ್ 22, 2025 ರಂದು ಗಿರಿ ಅವರನ್ನು ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ಗೆ ದಾಖಲಿಸಲಾಯಿತು. ಈಶ್ವರ್ ಮಲ್ಪೆ ಅವರು ಗಿರಿ ಅವರನ್ನು ಸ್ನೇಹಾಲಯಕ್ಕೆ ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮಗ್ರ ಚಿಕಿತ್ಸೆಯ ನಂತರ, ಏಪ್ರಿಲ್ 11,…
ಉಳ್ಳಾಲ, ಮೇ 18: ಉಳ್ಳಾಲ ದರ್ಗಾ ಉರೂಸ್ ಪ್ರಯುಕ್ತ ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ ದರ್ಗಾ ವಠಾರದಲ್ಲಿ ನಡೆಯಿತು.ಉಳ್ಳಾಲ ಖಾಝಿ ಇಂಡಿಯನ್ ಉಳ್ಳಾಲ ಗ್ಯಾಂಡ್ ಮುಷ್ಟಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಅರೆಬಿಕ್ ಕಾಲೇಜು ಶಿಕ್ಷಣ ಪಡೆದು ತೇರ್ಗಡೆ ಹೊಂದಿದ 33 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಸಯ್ಯದ್ ಹಾಮಿದ್ ಇಂಬಿಚ್ಚಿ ತಂಙಳ್ ದುಆ ನೆರವೇರಿಸಿದರು. ಸಮಸ್ತ ಕೇರಳ ಸುನ್ನಿ ಜಂಇಯ್ಯತುಲ್ ಉಲಮಾ ಅಧ್ಯಕ್ಷ ರಈಸುಲ್ ಉಲಮಾ ಇ. ಸುಲೈಮಾನ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪೊನ್ಮಲ ಅಬ್ದುಲ್ ಖಾದಿರ್ ಮುಸ್ಲಿಯಾರ್ ಸನದುದಾನ ಭಾಷಣ ಮಾಡಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಯ್ಯಿದ್ ಅತ್ತಾವುಲ್ಲ ತಂಙಳ್ ಆಶೀರ್ವಚನ ನೀಡಿದರು.ಯು.ಟಿ. ಖಾದರ್ ಮಾತನಾಡಿ, ಉಳ್ಳಾಲ ಶೈಕ್ಷಣಿಕ ಕೇಂದ್ರವಾಗಿ ಬೆಳೆಯಬೇಕು. ಇದಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ. ದರ್ಗಾ ಸೌಹಾರ್ದದ ಕೇಂದ್ರ ಆಗಬೇಕು ಎಂದರು. ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿ ಆದರೆ ಎಷ್ಟು ಸಂತೋಷ ಆಗುತ್ತದೆಯೋ…
ಕಾರ್ಕಳ, ಮೇ.17 : ಬೃಹತ್ ಗಾತ್ರದ ಬಾವಿಯನ್ನು ಸ್ವಚ್ಛಗೊಳಿಸಲು ಇಳಿದು ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ಅಗ್ನಿ ಶಾಮಕ ದಳದವರು ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಸಾಣೂರು ಕ್ಯಾಶ್ಯೂ ಬಳಿಯ ಹಿತ್ತಲಿನ 35 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸಲು ಹರೀಶ್ ಆಚಾರ್ಯ (55) ಎಂಬವರು ಶುಕ್ರವಾರ ಬೆಳಿಗ್ಗೆ 11.55 ವೇಳೆಗೆ ಇಳಿದಿದ್ದರು. ಬಳಿಕ ಮೇಲಕ್ಕೆ ಬರಲು ಸಾಧ್ಯವಾಗದೆ ಸಿಲುಕಿದ್ದು , ಅಪಾಯದಲ್ಲಿದ್ದ ಅವರನ್ನು ಕಾರ್ಕಳ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ.
ಮಂಗಳೂರು, ಮೇ 16 : ಫಳ್ನೀರ್ ನ ಲುಲು ಸೆಂಟರ್ನಲ್ಲಿರುವ ದಾರುಲ್ ಇಲ್ಮ್ ಮದ್ರಸ ತನ್ನ 20ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಅದರ ಹಳೆಯ ಕಟ್ಟಡವನ್ನು ನವೀಕರಿಸಿ, ಮೇ 17 ರಂದು ಸಂಜೆ 4.30ಕ್ಕೆ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ದಾರುಲ್ ಇಲ್ಡ್ ಸ್ಥಾಪಕ ರಫೀಉದ್ದೀನ್ ಕುದ್ರೋಳಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುದ್ರೋಳಿ ಜಾಮಿಯ ಮಸೀದಿ ಖಾಝಿ ಮುಷ್ಠಿ ಮುತಾಹ ಹುಸೈನ್ ಕಾಸಿಮಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಸಿ.ಪಿ. ಹಬೀಬ್ ರಹ್ಮಾನ್, ಎಸ್.ಎಂ. ರಶೀದ್, ಅಬ್ದುಸ್ಸಲಾಮ್ ಪುತ್ತಿಗೆ, ಅಬ್ದುಲ್ ಖಾದರ್ ಬಾವ, ಹೈದರ್ ಪರ್ತಿಪ್ಪಾಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಧ್ಯಾಪಕ ಮುಹಮ್ಮದ್ ಸೈಫುದ್ದೀನ್, ಶೇಖ್ ಅಹ್ಮದ್, ಮುಹಮ್ಮದ್ ಆಸಿಫ್, ಅಬೂಬಕರ್, ಆರ್ಶ್ಲಾನ್ ಉಪಸ್ಥಿತರಿದ್ದರು.
ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿ ಹಡಗು ಮುಳುಗಿದೆ. ಆರು ಮಂದಿ ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿದ ವೇಳೆ ಎಲ್ಲಾಸಿಬ್ಬಂದಿ ಹಡಗಿನಿಂದ ಸಣ್ಣ ಡಿಂಗಿ ಬೋಟಿನ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ.ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಉಡುಪಿ, ಮೇ. 16 : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ,…
ಉಡುಪಿ, ಮೇ. 15 : ನೂತನವಾಗಿ ನಿರ್ಮಿಸಲಾದ ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಶಿರಿಬೀಡುವಿನ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಗುರವಾರ ಉದ್ಘಾಟನೆಗೊಂಡಿತು. ಬಾರ್ಕೂರು ಮಹಾ ಸಂಸ್ಥಾನದ ಪೀಠಾಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವಸಂತೋಷ ಭಾರತೀ ಗುರೂಜಿ ಅವರು ರಿಬ್ಬನ್ ತುಂಡರಿಸುವ ಮೂಲಕ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಮನೋಹರ್ ಎಸ್. ಶೆಟ್ಟಿ ನೇತೃತ್ವದ ಸಾಯಿರಾಧಾ ಗ್ರೂಪ್ ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಉತ್ತಮ ಸಂಸ್ಥೆಯಾಗಿ ಬೆಳೆದಿದೆ. ಸಾಯಿರಾಧಾ ಗ್ರೂಪ್ನ ಕಾರ್ಪೊರೇಟ್ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಲಿ ಎಂದು ಶುಭಹಾರೈಸಿದರು. ಬಳಿಕ ಟಿ ಎಂ ಎ ಪೈ ಫೌಂಡೆಶನ್ ನ ಅಧ್ಯಕ್ಷರಾದ ಟಿ ಅಶೋಕ್ ಪೈ ಮಾತನಾಡಿ, ಮನೋಹರ ಶೆಟ್ಟಿಯವರು ಸಮಾಜದಲ್ಲಿ ಸಾಯಿರಾಧ ಎನ್ನುವ ಸಂಸ್ಥೆಯನ್ನು ನಿರ್ಮಿಸಿ ಹಲವಾರು ಜನರಿಗೆ ಉದ್ಯೋಗವನ್ನು ನೀಡಿದವರಾಗಿದ್ದಾರೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ…