Author: admin

ಉಡುಪಿ, ಜು.4 : ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಆರೋಪಿ ಶರಣ್ ಪಂಪ್ ವೆಲ್ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದಾಗಿ ದೂರಲಾಗಿದೆ. ಅದರಂತೆ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎಲ್ ಸಿಆರ್ ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವಿಶ್ವಸ್ಥ ಮಂಡಳಿ ಸದಸ್ಯ ಮೈಮ್ ರಾಮ್‌ದಾಸ್ ಅವರು ಗುರುವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಅವರಿಗೆ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯಲಿದೆ.2008ರಲ್ಲಿ ಪ್ರಾರಂಭವಾದ ರಂಗ ಸಂಗಾತಿ ಸಂಸ್ಥೆಯು ಬಹುಮುಖ ಪ್ರತಿಭೆ, ರಂಗಸಂಗಾತಿಯ ಸ್ಥಾಪಕ ಸದಸ್ಯ ದಿ. ಭಾಸ್ಕರ ನೆಲ್ಲಿತೀರ್ಥ ಅವರ ನೆನಪಿನಲ್ಲಿ ರಂಗ ಭಾಸ್ಕರ ಪ್ರಶಸ್ತಿಯನ್ನುನೀಡುತ್ತಿದೆ. ಈಗಾಗಲೇ 10 ಮಂದಿ ಸಾಧಕರಿಗೆ ರಂಗ ಭಾಸ್ಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಲಕ್ಷ್ಮಣ ಕುಮಾರ್ ಮಲ್ಲೂರು, ಬಾಲ ನಟನಾಗಿ ರಂಗ ಪ್ರವೇಶ ಮಾಡಿ 65 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 30ಕ್ಕೂ ಹೆಚ್ಚು ಕನ್ನಡ, ತುಳು ಸಿನೆಮಾಗಳಲ್ಲಿ…

Read More

ಮಂಗಳೂರು ,ಜು. 02: ಸುನಿ ಸಿನಿಮಾಸ್ ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಇದೇ ಜುಲೈ 4ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ರಕ್ಷಿತ್ ಕುಮಾರ್ ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಣ್ಣ ಹಳ್ಳಿ ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಕಾಡಿನಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆದಿದೆ. ಹೆಚ್ಚಾಗಿ ಕರಾವಳಿಯ ಕಲಾವಿದರನ್ನು ಸೇರಿಸಿ ನಿರ್ಮಿಸಲಾಗಿದೆ ಎಂದರು. ಹಾಸ್ಯ ನಟ ಪುಷ್ಪರಾಜ್ ಬೊಳ್ಳಾರ್ ಮಾತನಾಡಿ, ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರದಲ್ಲಿ ನಾಯಕ ನಟನಾಗಿ ಯಶ್ ಶೆಟ್ಟಿ , ನಾಯಕಿಯಾಗಿ ಹರ್ಷಿತಾ, ಚಂದ್ರಹಾಸ್ ಉಳ್ಳಾಲ್, ಉಗ್ರಂ ಮಂಜು, ಹರ್ಷಿತಾ ರಾಮಚಂದ್ರ ಬಲ ರಾಜವಾಡಿ, ದೀಪಕ್ ರೈ ಪಾಣಾಜೆ, ಚಂದ್ರಹಾಸ್ ಉಳ್ಳಾಲ್ ಅಭಿನಯಿಸಿದ್ದಾರೆ. ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಗೀತ ಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ತೇಜಸ್ವಿ, ಸಂಕಲನ ಮನು ಶೇಡ್‌ಗರ್ ,ಕಲಾ ನಿರ್ದೇಶನ ವರದರಾಜ್…

Read More

ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಚಿನ್ನಕ್ಕಂಪಟ್ಟಿಯಲ್ಲಿ ಇಂದು ಮಂಗಳವಾರ ನಡೆದಿದೆ. ಕಾರ್ಖಾನೆಯಲ್ಲಿ ಕಾರ್ಮಿಕರು ದಿನನಿತ್ಯದ ಕೆಲಸದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಪರಿಣಾಮ ಅನೇಕರು ಗಾಯಗೊಂಡಿದ್ದಾರೆ. ಈ ಸ್ಥಳಕ್ಕೆ ತಲುಪಿದ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪಟಾಕಿ ಉತ್ಪಾದನಾ ಘಟಕಕ್ಕೆ ಆಗಮಿಸಿದ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read More

ಹೈದರಾಬಾದ್, ಜೂ. 30 : ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಿಸಿದ್ದಾರೆ. ಘಟನಾ ಸ್ಥಳದಿಂದ ಆರು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ಇನ್ನು ಕೆಲ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು, ಜೂ. 29: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ ಆ.1-2ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ|ಎಂ. ಮೋಹನ್ ಆಳ್ವ ಅವರು ಜೂ. 23, ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಆಳ್ವಾಸ್ ವಿದ್ಯಾಸಂಸ್ಥೆಯು ಇಲ್ಲಿಯವರೆಗೆ ವಿವಿಧ ಭಾಗಗಳಲ್ಲಿ 21 ಬೃಹತ್ ಉದ್ಯೋಗ ಮೇಳವನ್ನು ನಡೆಸಿದೆ. ಪ್ರತೀ ಮೇಳದಲ್ಲಿ ಸರಾಸರಿ 200 ರಷ್ಟು ಪ್ರತಿಷ್ಠಿತ ಕಂಪೆನಿಗಳು ಪಾಲ್ಗೊಂಡಿವೆ. ಈ ಬಾರಿಯೂ ಬ್ಯಾಂಕಿಂಗ್ ಮತ್ತು ಹಣಕಾಸು,ಮ್ಯಾನುಫ್ಯಾಕ್ಚರಿಂಗ್, ಐಟಿ, ಐಟಿಎಸ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟಾಲಿಟಿ, ಆಟೋ ಮೊಬೈಲ್, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ ಜಿ ಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ .ಈ ಬಾರಿ ಈವರೆಗೆ 80 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 130 ಕಂಪೆನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ.…

Read More

ಬೆಳ್ತಂಗಡಿ, ಜೂ. 28 : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್ ತಗುಲಿದ ಪರಿಣಾಮ ಮದ್ದು ಸಿಂಪಡನೆ ಮಾಡುತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಅರಸಿನಮಕ್ಕಿ ಎಂಜಿರ ಎಂಬಲ್ಲಿ ನಡೆದಿದೆ. ಮೃತರನ್ನು ಉಡೈರೆ ಕೃಷ್ಣಪ್ಪ ಕುಲಾಲ್ (49) ಎಂದು ಗುರುತಿಸಲಾಗಿದೆ. ವಿದ್ಯುತ್ ಆಘಾತಕ್ಕೆ ಈಡಾದ ಕೃಷ್ಣಪ್ಪ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎನ್ನಲಾಗಿದೆ .

Read More

ಮೆಕ್ಸಿಕೋ, ಜೂ. 27 : 3,000 ಕಾರುಗಳನ್ನು ಮೆಕ್ಸಿಕೋಗೆ ಸಾಗಿಸುತ್ತಿದ್ದ ಕಾರ್ಗೋ ಶಿಪ್ (ಸರಕು ಸಾಗಣೆ ಹಡಗು) ಉತ್ತರ ಪೆಸಿಫಿಕ್ ಸಾಗರದಲ್ಲಿ ಮುಳುಗಡೆಯಾಗಿದೆ. ಮಾರ್ನಿಂಗ್ ಮಿಡಾಸ್ ಹೆಸರಿನ ಕಾರ್ಗೋ ಶಿಪ್ ನ್ನು ಹಡಗು ನಿರ್ವಹಣಾ ಕಂಪನಿ ಲಂಡನ್ನ ಜೋಡಿಯಾಕ್ ಮ್ಯಾರಿಟೈಮ್ ನಿರ್ವಹಣೆ ಮಾಡುತ್ತಿತ್ತು. ಸರಕು ಸಾಗಣೆ ಹಡಗು ಹೊಸ ಕಾರುಗಳನ್ನು ಅಲಾಸ್ಕಾದ ಅಡಕ್ ದ್ವೀಪದಿಂದ ಹೊತ್ತು ಮೆಕ್ಸಿಕೋದ ಬಂದರಿಗೆ ಭೂಪ್ರದೇಶದಿಂದ 300 ಮೈಲುಗಳು ದೂರದಲ್ಲಿ ಸಾಗುತ್ತಿತ್ತು. ಜೂನ್ 3 ರಂದು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಈ ಬಗ್ಗೆ ಹಡಗಿನಲ್ಲಿದ್ದ ಸಿಬ್ಬಂದಿ ಕೋಸ್ಟ್ ಗಾರ್ಡ್ಗೆ ಮಾಹಿತಿ ರವಾನಿಸಿದ್ದರು. ಪ್ರತಿಕೂಲ ಹವಾಮಾನ ಮತ್ತು ನೀರು ಸೋರಿಕೆಯಾದ ಕಾರಣ ಸಿಬ್ಬಂದಿಗೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಕಳೆದೊಂದು ವಾರದಿಂದ ಬೆಂಕಿಯಲ್ಲಿ ಉರಿಯುತ್ತಲೇ ಹಡಗು ದಡದತ್ತ ಸಾಗಿ ಬಂದಿದೆ. ಹೀಗಾಗಿ ಸರಕು ಸಾಗಣೆ ಹಡಗು ಸಮೇತ 800 ಎಲೆಕ್ಟ್ರಿಕ್ ವಾಹನಗಳೊಂದಿಗೆ ತುಂಬಿದ್ದ 3,000 ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ ಎಂದು ವರದಿಯಾಗಿದೆ.

Read More

ಮಂಗಳೂರು, ಜೂ. 27 : ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ಈ ಚಟುವಟಿಕೆಗಳು  ನಡೆಯುತ್ತವೆ. ಕಾರ್ಯಕ್ರಮದ ಕುರಿತು ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ  ಅವರು, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು. ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ…

Read More

ಮಂಗಳೂರು, ಜೂ.25: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮಂಗಳೂರು ಶಾಖೆಯ ವತಿಯಿಂದ ಅಂತಾರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ ಪ್ರಯುಕ್ತ ಜೂ.27ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಗಳೂರಿನ ಕರಂಗಲ್ಪಾಡಿಯ ಮಹೇಂದ್ರ ಆರ್ಕೆಡ್‌ನಲ್ಲಿರುವ ಐಸಿಎಐ ಭವನದಲ್ಲಿ ‘ಐಸಿಎಐ ಎಂಎಸ್ ಎಂಇ ಮಹೋತ್ಸವ’ ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಐಸಿಎಐ ಎಸ್‌ ಐಆರ್‌ಸಿಯ ಮಂಗಳೂರು ಶಾಖೆಯ ಅಧ್ಯಕ್ಷ ಸಿಎ ಪ್ರಶಾಂತ್‌ ಪೈ ಕೆ. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಭಾರತೀಯ ಕೈಗಾರಿಕಾ ಒಕ್ಕಟದ ಅಧ್ಯಕ್ಷ ನಟರಾಜ್ ಹೆಗ್ಡೆ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿ.ನ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಎಂ.ಎಸ್‌.ಎಂ ಸಚಿವಾಲಯದ ಎಂಎಸ್ ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ನಿವೃತ್ತ ಜಂಟಿ ನಿರ್ದೇಶಕ ಡಾ| ಕೆ.ಸಾಕ್ರೆಟಿಸ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ. ತಜ್ಞರ ಅಧಿವೇಶನದಲ್ಲಿ ಎ ಸಂಕೇತ್ ನಾಯಕ್‌ ಬೆಂಗಳೂರು ಅವರು ಎಂಎಸ್ ಎರರಗಳು ಮತ್ತು ಸ್ಟಾರ್ಟ್‌ಪ್‌ಗಳ ಪ್ರಯೋಜನಗಳು, ಹಣಕಾಸು ಮತ್ತು ತೆರಿಗೆಯನ್ನು ಅರ್ಥಮಾಡಿಕೊಳ್ಳುವುದರ…

Read More