Author: admin

ಮಂಗಳೂರು ,ಸೆ. 26 : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ವತಿಯಿಂದ ಸೆ. 28 ಆದಿತ್ಯವಾರ ಬೆಳಿಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ಗೇಟ್ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ‘ಅಭಿನಂದನಾ ಸಮಾರಂಭ’ ಕಾರ್ಯಕ್ರಮ ನಡೆಯಲಿದೆ ಎಂದು  ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷರಾದ ಮುರಳಿ ಅವರು  ಶುಕ್ರವಾರ  ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ  ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ  ಮಾತನಾಡಿದ  ಅವರು, ರಾಮಕ್ಷತ್ರಿಯ ಸೇವಾ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾದಾನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಬಾರಿ ನಮ್ಮ ಸಮುದಾಯ ಮತ್ತು ಇತರ ಸಮುದಾಯದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸುವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ  ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರವಿಭಾಗ ಮುಖ್ಯಸ್ಥ ರಾಮಕ್ಷತ್ರಿಯ ಸಮಾಜದ ಡಾ. ಎಚ್. ಪ್ರಭಾಕರ, ಜಿಲ್ಲಾ ವೆನ್ಹಾಲ್ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಭಾರತೀಯ ವೈದ್ಯಕೀಯ ಸಂಘದ ಡಾ.ಬಿ.ಸಿ.…

Read More

ಮಂಗಳೂರು, ಸೆ. 25:: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿ ಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ…

Read More

ಉರ್ವ, ಸೆ. 25: ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಸದಸ್ಯರು ಮತ್ತು ಆಯ್ದ ಹುಲಿ ವೇಷ ತಂಡಗಳಿಂದ ಸಿಂಹದ ಕಲೊಟು ಪಿಲಿ ಗೊಬ್ಬು 3ನೇ ಆವೃತ್ತಿ ಸೆ. 27, ಶನಿವಾರ ಸಂಜೆ 5 ಗಂಟೆಯಿಂದ ಕದ್ರಿ ಮೈದಾನದಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಸುದರ್ಶನ್ ಪಡಿಯಾರ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಸಂಜೆ 4 ಗಂಟೆಗೆ ನಗರದ ಮಲ್ಲಿಕಟ್ಟೆಯ ಲಯನ್ಸ್  ಸೇವಾ ಮಂದಿರದಿಂದ ಕದ್ರಿ ಬಯಲು ರಂಗಮಂಟಪಕ್ಕೆ ಹುಲಿ ವೇಷ ಕುಣಿತಗಳ ಭವ್ಯ ಮೆರವಣಿಗೆ ಬರಲಿದೆ. ಸಂಜೆ 5 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದೆ.ನವರಾತ್ರಿಯ ಸಮಯ ಆಗಿರುವುದರಿಂದ ಹುಲಿವೇಷಕ್ಕೆ ಸಂಬಂಧಪಟ್ಟ ಒಂಭತ್ತು ಮಂದಿ ಆಯ್ದ ದಿಗ್ಗಜರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಗುವುದು ಎಂದರು. ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಅರವಿಂದ ಶೆಣೈ ಮತ್ತು ಮಮತಾ ಶೆಣೈ ದಂಪತಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದ ಮುಖ್ಯಸ್ಥ…

Read More

ಮಂಗಳೂರು, ಸೆ. 25 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜಿಎಸ್‌ಟಿ ದರ ಇಳಿಕೆ ಮಾಡಿರುವುದ ರಿಂದ ದೇಶದ ಆರ್ಥಿಕ ಶಕ್ತಿ ವೃದ್ಧಿಸಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವರಾತ್ರಿ ಸಂಭ್ರಮದ ವೇಳೆ ಜಿಎಸ್‌ಟಿ ಇಳಿಕೆಯ ಮೂಲಕ ಉಳಿತಾಯದ ಉತ್ಸವ ಸಾಕಾರವಾಗುತ್ತಿದೆ. ಜಿಎಸ್‌ಟಿ ಇಳಿಕೆಯ ಹಿನ್ನೆಲೆಯಲ್ಲಿ ಅ.20ರವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ಅಭಿಯಾನ ಹಾಗೂ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದರು. ಜಿಎಸ್‌ಟಿ ದರ ಇಳಿಕೆಯಿಂದ ವ್ಯಾಪಾರಿಗಳು, ಉದ್ದಿಮೆದಾರರು, ಗ್ರಾಹಕರಿಗೆ ಅನುಕೂಲವಾಗಲಿದೆ. ಬಿಜೆಪಿ ಆರ್ಥಿಕ ಪ್ರಕೋಷ್ಠದ ಜತೆಗೂಡಿ ಅಂಗಡಿ, ಮಾರುಕಟ್ಟೆಗಳಿಗೆ ತೆರಳಿ ಜನರ ಜತೆ ಸಂವಾದ, ಜಾಗೃತಿ ನಡೆಸಲಾಗುವುದು. ಜಿಎಸ್‌ಟಿ ಇಳಿಕೆಯ ಪರಿಣಾಮ ಆಹಾರ, ಬಟ್ಟೆ, ವಸತಿ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ವಾಹನಗಳ ಬೆಲೆ ಈಗಾಗಲೇ ಇಳಿಕೆಯಾಗಿದೆ. ಹನಿ ನೀರಾವರಿ, ಕೃಷಿ ಯಂತ್ರೋಪಕರಣಗಳ ಬೆಲೆ ಇಳಿಕೆಯಿಂದ ರೈತರಿಗೆ ಅನುಕೂಲವಾಗಲಿದೆ…

Read More

ಬೆಂಗಳೂರು, ಸೆ. 24 : ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ಹೃದಯಾಘಾತದಿಂದ ಸೆ. 24, ಬುಧವಾರ ರಾಗಿದ್ದಾರೆ. ಸಾಹಿತಿ ಎಸ್‌ಎಲ್ ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್. ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಸಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ರಾಷ್ಟೋತ್ಯಾನ ಆಸ್ಪತ್ರೆ ಕೂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಹಲವಾರು ಕಾದಂಬರಿಗಳು ಮರುಮುದ್ರಣಗಳನ್ನು ಕಂಡಿವೆ. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Read More

ಮಂಗಳೂರು ,ಸೆ. 23 : ಅಸ್ತ್ರ ಬ್ಯಾನರ್ ಅಡಿಯಲ್ಲಿ ಲಾಂಚುಲಾಲ್ ಕೆ.ಎಸ್ ನಿರ್ಮಾಣದಲ್ಲಿ ಮೂಡಿಬಂದ ಮೀರಾ ತುಳು ಸಿನಿಮಾ ಇದೀಗ ಟಾಕೀಸ್ OTT ಆಪ್ ನಲ್ಲಿ ಇದೇ ತಾರೀಖು 26 ನೇ, ಶುಕ್ರವಾರ ಬಿಡುಗಡೆಯಾಗುತ್ತಿದೆ ಎಂದು ಯತೀಶ್ ಪೂಜಾರಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀರಾ ಸ್ತಿ ಪ್ರಧಾನವಾದ ತುಳುವಿನ ಸಿನಿಮಾವಾಗಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ಮೀರಾ ಸಿನಿಮಾ ಇದೀಗ ಟಾಕೀಸ್ OTT ಆಪ್ ನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ನಾಯಕಿಯಾಗಿ ಇಶಿತಾ ಶೆಟ್ಟಿ,ಅರವಿಂದ್ ಬೋಳಾರ್, ಜೆ.ಪಿ ತೂಮಿನಾಡು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ಮಂಜು ರೈ ಮುಲೂರು, ರೂಪಾಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಬೇಬಿ ಲಕ್ಷ್ಯ ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಅಶ್ವಥ್, ಛಾಯಾಗ್ರಹಣ ಅಜಯ್ ಕೆ.ಎಸ್, ಸಂಗೀತ ರಾಜು ಜಯಪುಕಾಶ್ , ಸಂಕಲನ ಜಾಬಿನ್ಸ್ ಸೆಬಾಸ್ನಿಯನ್ ಮಾಡಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಲಾಂಚುಲಾಲ್ ಕೆ.ಎಸ್, ನಿರ್ದೇಶಕ ಅಶ್ವಥ್, ಕಲಾವಿದ ಮಂಜು ರೈ ಮುಲೂರು,…

Read More

ಮಂಗಳೂರು, ಸೆ. 23 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಅಂಗವಾಗಿ ನವರಾತ್ರಿ ಮಹೋತ್ಸವಕ್ಕೆ ರಾಮಕೃಷ್ಣ ಮಿಷನ್, ಮಂಗಳೂರು ಇದರ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್ ಮತ್ತು ಬ್ರಹ್ಮಕುಮಾರಿ, ಮಂಗಳೂರು ಇದರ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರಿ ಜಿ ಅವರು ಮಾಜಿ ಕೇಂದ್ರ ಸಚಿವ ಮತ್ತು ದೇವಸ್ಥಾನದ ಅಭಿವೃದ್ಧಿ ಪೋಷಕ ಬಿ. ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಮಂಗಳೂರು ದಸರಾದ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬೆಳಗ್ಗೆ ಗುರು ಪ್ರಾರ್ಥನೆಯೊಂದಿಗೆ ಒಂಬತ್ತು ದಿನಗಳ ಕಾಲ ಆರಾಧನೆಗೊಳ್ಳ ಲಿರುವ ನವದುರ್ಗೆಯರು, ಮಹಾಗಣಪತಿ, ಆದಿಶಕ್ತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡುತ್ತಾ ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಗೊಂಡ ಗಣಪತಿ, ಶಾರದಾ ಮಾತೆ, ಆದಿಶಕ್ತಿ ಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿ ದೇವಿಯರನ್ನು ದರ್ಶನಕ್ಕಾಗಿ ದೇಶ ವಿದೇಶದ ಭಕ್ತರು ಮಂಗಳೂರಿಗೆ ಆಗಮಿಸುತ್ತಿದ್ದಾರೆ.…

Read More

ಮಂಗಳೂರು, ಸೆ. 23 : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ವಿವಿಧ ಪ್ರಕರಣದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ ಎಸಿ ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ, ಸೆ. 23 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ ಸೆ. 14ರಿಂದ ಮೊದಲ್ಗೊಂಡು ಸೆ 21ರಂದು ಸಮಾಪನಗೊಂಡ 27ನೇ ವರ್ಷದ ಭಜನ ಕಮಟದ ಪ್ರಯುಕ್ತ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರೋಪ ಸಮಾರಂಭ ನಡೆಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ, ಓಂಕಾರದಿಂದ ಸೃಷ್ಟಿತ ಭಜನೆಯು ಬದುಕಿನ ಸಾಮರಸ್ಯಕ್ಕೆ ಪ್ರೇರಣೆಯಾಗಿದೆ.ಭಗವಂತನ ಅನುಸಂಧಾನಕ್ಕೆ ಭಜನೆ ಪ್ರೇರಣೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ವೀರೇಂದ್ರ ಹೆಗ್ಗಡೆ ಮಾತನಾಡಿ, ಕಳೆದ 85 ವರ್ಷದಿಂದ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯುತ್ತಿದೆ. ಕ್ಷೇತ್ರದಲ್ಲಿ ಯಾವ ಜಾತಿ, ಮತ ಕಟ್ಟುಪಾಡಿನ ನಿರ್ಬಂಧವಿಲ್ಲ ಭಜನೆಯೆಂಬ ಭಕ್ತಿಯ ಶಕ್ತಿಯಲ್ಲಿ ಸಾಮರಸ್ಯ ಅಡಗಿದೆ ಎಂದರು. ಸಮಾರೋಪ ಸಮಾರಂಭದಲ್ಲಿ ಮಾಣಿಲ – ಮೋಹನದಾಸ ಶ್ರೀಧಾಮದ ಶ್ರೀ ಪರಮಹಂಸ ಸ್ವಾಮೀಜಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ಉಪಾಧ್ಯಕ್ಷೆ ಡಾ| ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ|…

Read More

ಮಂಗಳೂರು, ಸೆ.22 : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಸೆ.22, ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ  ಶಾಸಕ ವೇದವ್ಯಾಸ ಕಾಮತ್ ರವರು ಮಾತನಾಡಿ, ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30 ರ ಮಂಗಳವಾರದಂದು ನಾಲ್ಕನೇ ವರ್ಷದ ಪಿಲಿಪರ್ಬವು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಸುತ್ತಾ, ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದರು. ಕಾರ್ಯಕ್ರಮದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ,…

Read More