Author: admin

ಮಂಗಳೂರು, ಸೆ.22 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಿಂದ ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ನವರಾಯತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ ಪದ್ಮರಾಜ್ ಆರ್ ಅವರು ಶನಿವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸೆ.22ರಂದು ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 3ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ದಸರಾ (ನವರಾತ್ರಿ ಮಹೋತ್ಸವ) ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಬಣೆಯಿಂದ ಜರುಗಲಿದೆ ಎಂದು ಹೇಳಿದರು. ಸೆ.22ರಂದು ಬೆಳಗ್ಗೆ 11.30ಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮಂಗಳೂರು ರಾಮಕೃಷ್ಣ ಮಿಶನ್ ನ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಅವರ ಹಸ್ತದಿಂದ ಬಿ.ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆಗೊಳ್ಳಲಿದೆ., ಸೆ.21ರಂದು ಸಂಜೆ…

Read More

ಉಜಿರೆ, ಸೆ. 21 :: ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ. ಯಿಂದ ಪಿ.ಜಿ ವರೆಗಿನ ೫೬ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ಎಂ. ಮೋಹನ ಆಳ್ವ ಮಾತನಾಡಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತನ್ನ ಬದುಕಿನ ಮಾರ್ಗದರ್ಶಕರು ಹಾಗೂ ಗುರುಗಳಾಗಿದ್ದು ತಾನು ಅವರ ಅಭಿಮಾನಿ, ಶಿಷ್ಯನಾಗಿರುತ್ತೇನೆ..ಪಾರಂಪರಿಕ ಚಿಕಿತ್ಸಾ ಪದ್ಧತಿಗಳಾದ ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗಾಭ್ಯಾಸಗಳಿಗೆ ಹೆಗ್ಗಡೆಯವರ ಸೇವೆ ಮತ್ತು ಕೊಡುಗೆಯನ್ನು ಧನ್ಯತೆಯಿಂದ ಸ್ಮರಿಸಿದರು. ಹಾಸನ ಮತ್ತು ಬೆಂಗಳೂರಿನಲ್ಲಿರುವ ಎಸ್.ಡಿ.ಎಮ್. ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿವೆ. ಉಜಿರೆ ಮತ್ತು ಧರ್ಮಸ್ಥಳದಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕೂಡಾ ಉತ್ತಮ ಸೇವೆಯಲ್ಲಿ ಚಿರಪರಿಚಿತವಾಗಿವೆ ಎಂದರು. ಪೂನಾದ ಕಾನೂನು ಕಾಲೇಜಿನ ಡೀನ್ ಹಾಗೂ ಮಂಗಳೂರಿನ ಎಸ್.ಡಿ.ಎಮ್.…

Read More

ಮಂಗಳೂರು, ಸೆ. 19 : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಬಂಟ, ನಾಡವರನ್ನು ಪ್ರತ್ಯೇಕವಾಗಿ ಪರಿಗಣಿಸಬಾರದು. ಇವೆರಡೂ ಒಂದೇ ಜಾತಿ, ಸಮುದಾಯವಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಅದನ್ನು ಸಷ್ಟವಾಗಿ ಕಾಣಿಸಬೇಕು ಎಂದು ಬಂಟರ ಯಾನ ನಾಡವರ ಮಾತೃಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಗುರುವಾರ ಬಂಟರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸಮೀಕ್ಷೆಗೆ ವಿರೋಧವಿಲ್ಲ. ಆದರೆ ನಮ್ಮ ಹೆಸರು ಉಲ್ಲೇಖ ಸ್ಪಷ್ಟವಾಗಿರಬೇಕು. ಸಮೀಕ್ಷೆಗೆ ಬರುವಾಗ ಸಮುದಾಯದವರು ಮೊಬೈಲ್ ಆಪ್ ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-0227) ರಂತೆ ಬಂಟ್ ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ ಎಂದು ನಮೂದಿಸಬೇಕು. ಇದೇ ರೀತಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ  (A- 1026)…

Read More

ಮಂಗಳೂರು, ಸೆ. 19 : ಶ್ರೀ ರಾಮ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಮಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸೆ.12, ಶುಕ್ರವಾರ ನಡೆಯಿತು. ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮಕ್ಕೆ ಸಂಸದ ದಕ. ಜಿಲ್ಲಾ ಸಂಸದ ಕ್ಯಾ ಬೃಜೇಶ್ ಚೌಟ ಚಾಲನೆ ನೀಡಿ ಮಾತಾಡಿದ ಅವರು, ನಮ್ಮ ದೇಶದಲ್ಲಿ ಶೇ. 65ರಷ್ಟು ಯುವ ಸಮೂಹವು ಇದೆ. ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕಾಗಿದೆ.ಉಳ್ಳವರು ಮು೦ದೆ ಬಂದು ವಿದ್ಯಾರ್ಜನೆಗೆ ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಾಮಾಜಿಕ ಕಲಾ ಮತ್ತು ಕ್ರೀಡಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕಂತ ಮಹಾಲಿಂಗ ನಾಯಕ್ ಅಮೈ, ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ವಿಜೇತ ಕುಮಾರಿ ರೆಮೋನಾ ಇವೆಟ್ ಪರೇರಾ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಗಳಾದ ಮೋಹನ್ (ಸೆನ್ ಪೊಲೀಸ್ ಠಾಣೆ…

Read More

ಮಂಗಳೂರು, ಸೆ. 18 : ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿವೆ ಎಂದು ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯ ಪ್ರಧಾನ ಸಂಯೋಜಕರಾದ ಕೆ ರಾಜೇಶ್ ಶೆಟ್ಟಿ ಶಬರಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಲಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ…

Read More

ಮಂಗಳೂರು, ಸೆ. 18 : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 18ನೇ ವಾರ್ಷಿಕ ಸಮಾರಂಭದ ಪ್ರಯುಕ್ತ ಸ್ವರ ಕುಡ್ಡ ಗ್ರಾಂಡ್ ಫಿನಾಲೆ ಹಾಗೂ ವಾರ್ಷಿಕ ಸಮಾರಂಭ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಾ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದರು. ಪತ್ರಕರ್ತ ವಾಲ್ಟರ್ನಂದಳಿಕೆ ಮಾತನಾಡಿ, ಸಂಗೀತ ಕಲಾವಿದರು ತಮ್ಮ ಸಂಗೀತದ ಮೂಲಕ ಜನರನ್ನು ರಂಜಿಸುತ್ತಾರೆ. ತುಳುನಾಡಿನಲ್ಲಿ ಕಲಾವಿದರಿಗೆ ಬೆಲೆ ಕಟ್ಟುವುದಕ್ಕಿಂತ ಬೆಲೆ ನೀಡುವವರಿದ್ದಾರೆ. ಜನರಿಗೆ ಮನೋರಂಜನೆ ನೀಡುವುದು ಸುಲಭವಲ್ಲ ಎಂದರು. ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದ ಹಿರಿಯ ಕಲಾ ಸಾಧಕರಾದ ತೊನ್ನೆ ಪುಷ್ಕಳ ಕುಮಾರ್, ಐವನ್ ಸೀಕ್ವೆರಾ, ಹನೀಫ್ ಪರ್ಲಿಯಾ ಪರವಾಗಿ ಹುಸೈನ್ ಕಾಟಿಪಳ್ಳ ಅವರಿಗೆ ಕರಾವಳಿ ಸಂಗೀತ…

Read More

ಸುಳ್ಯ, ಸೆ. 15 : ತೆಂಗಿನ ಮರದಿಂದ ಕಾಯಿಯನ್ನು ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ವಿದ್ಯುತ್ ಲೈನಿಗೆ ತಾಗಿ ಶಾಕ್ ಹೊಡೆದು ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಸಾವನಪ್ಪಿದ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ತೋಟದ ಬದಿಯಲ್ಲಿ ಹಾದು ಹೋಗಿರುವ ಎಚ್.ಟಿ. ಲೈನ್ಗೆೆ ತಾಗಿ ದೋಟಿಯ ಮೂಲಕ ವಿದ್ಯುತ್ ಹರಿದು ರಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಸೆ. 16 : ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ದೇವಸ್ಥಾನದ ಪ್ರಾಂಗಣದಲ್ಲಿ 43ನೇ ವರ್ಷದ ಮಕ್ಕಳ ಉತ್ಸವ, ಶ್ರೀ ಕೃಷ್ಣವೇಷ ಸ್ಪರ್ಧೆ ಸೆ. 14,ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ವಚನದಲ್ಲಿ ಕಲ್ಕೂರ ಪ್ರತಿಷ್ಠಾನವು ಕಳೆದ 43 ವರ್ಷಗಳಿಂದ ಶ್ರೀ ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ.. ಶ್ರೀ ರಾಮ, ಕೃಷ್ಣನ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಮುಂದಾಗಬೇಕು. ಮುಂದಿನ ವರ್ಷದಿಂದ ಕಲ್ಕೂರ ಪ್ರತಿಷ್ಠಾನ ಆಯೋಜಿಸುವ ಸ್ಪರ್ಧೆಯಲ್ಲಿ ಶ್ರೀ ಕೃಷ್ಣನ ಹೆಸರಿನ ಮಕ್ಕಳಿಗೆ ಬಹುಮಾನ ನೀಡಬೇಕು ಎಂದು ಸ್ವಾಮೀಜಿ ಹೇಳಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ ಮಾತನಾಡಿದರು. ಕಾರ್ಯಕ್ರಮದಲ್ಲಿಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎ.ಜೆ.ಶೆಟ್ಟಿ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ, ಶರವು ಮಹಾಗಣಪತಿ ದೇವಸ್ಥಾನದ ಧರ್ಮದರ್ಶಿ ರಾಘವೇಂದ್ರ ಶಾಸ್ತ್ರೀ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಮುಖಂಡ ಶಶಿಧರ ಹೆಗ್ಡೆ, ಉದ್ಯಮಿ ರತ್ನಾಕರ ಜೈನ್m ಲೀಲಾಕ್ಷ…

Read More

ಮಂಗಳೂರು, ಸೆ. 15: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ ರೂ.1174.00 ಕೋಟಿಗಳಷ್ಟು ರೂ. ವ್ಯವಹಾರ ನಡೆಸಿದ್ದು, ಒಟ್ಟು ರೂ.12.79 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರ ರವಿರಾಜ್ ಹೆಗ್ಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಅವರು, 751 ಹಾಲು ಸಂಘಗಳು 3.97 ಲಕ್ಷ ಲೀಟರ್ ಹಾಲು ಶೇಖರಣೆ ಮಾಡುತ್ತಿದೆ. ಹಾಲಿನ ಶೇಖರಣೆ 2024-25 ನೇ ಸಾಲಿನಲ್ಲಿ ದಿನಕ್ಕೆ 3.42 ಲಕ್ಷ ಲೀಟರ್ ಸಂಗ್ರಹಣೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಶೇ.16ರಷ್ಟು ಏರಿಕೆಯಾಗಿದ್ದು, ಒಟ್ಟು 3.97 ಲಕ್ಷ ಲೀಟರ್‌ನಷ್ಟು ಹಾಲು ಸಂಗ್ರಹಣೆಯಾಗುತ್ತಿದೆ ಎಂದರು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನಲ್ಲಿ ಒಕ್ಕೂಟಕ್ಕೆ 10.30 ಎಕರೆ ಸರಕಾರಿ ಜಾಗ ಒದಗಿಸಿರುವುದು ನಮ್ಮ ಯೋಜನೆ ವಿಸ್ತರಣೆಗೆ ಅನುಕೂಲವಾಗಿದೆ. ರೈತ ಕಲ್ಯಾಣ ಟ್ರಸ್ಟ್ 2024-25 ನೇ ಸಾಲಿನಲ್ಲಿ ಒಟ್ಟು ರೂ.2.05 ಕೋಟಿಯಷ್ಟು ಮೊತ್ತವನ್ನು ರೈತರ ಮರಣ, ವೈದ್ಯಕೀಯ ವೆಚ್ಚ ರಾಸುಗಳ…

Read More

ಬೆಂಗಳೂರು, ಸೆ. 15 : ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್”(BRAT) ಚಿತ್ರದ “ಗಂಗಿ ಗಂಗಿ” ಎಂಬ ಮಾಸ್ ಹಾಡು  ಅದ್ದೂರಿಯಾಗಿ  ಇತ್ತೀಚಿಗೆ  ಬೆಂಗಳೂರು ನಗರದ ಮಂತ್ರಿ ಮಾಲ್ ನ ಒಳ ಆವರಣದಲ್ಲಿ ಬಿಡುಗಡೆಯಾಯಿತು. ಈಗಾಗಲೇ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಗೊಂಡಿದೆ. ಈ “ಬ್ರ್ಯಾಟ್” ಚಿತ್ರವನ್ನು ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿದ್ದು , ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬಿಡುಗಡೆಯಾಗಿರುವ ಈ ಹಾಡು ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ತಾವೇ ರಚಿಸಿ ಹಾಡಿದ್ದಾರೆ. ಇವರೊಂದಿಗೆ ಗಾಯಕಿ ಇಂದು ನಾಗರಾಜ್ ಕೂಡ ಸಾಥ್ ನೀಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕಂಪೋಸಿಂಗ್ ನಲ್ಲಿ ಬಂದಿರುವ ಈ ಹಾಡಿಗೆ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮುಂಬೈ ಬೆಡಗಿ ಅನೈರಾ ಸ್ಟೆಪ್ ಹಾಕಿದ್ದಾರೆ. ಈ ಹಾಡು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡ ನಂತರ ಚಿತ್ರತಂಡ ಚಿತ್ರದ ಕುರಿತು ಮಾಹಿತಿಯನ್ನು ಹಂಚಿಕೊಂಡರು.…

Read More