Author: admin

ಮಂಗಳೂರು, ಜು.20 : ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಜು.19 ಶನಿವಾರ ಆದೇಶ ಹೊರಡಿಸಿದೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್ ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. ಎಸ್.ಐ.ಟಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ ಎಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಧರ್ಮಸ್ಥಳ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿಯೋರ್ವ…

Read More

ಮಂಗಳೂರು,ಜು. 19: ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು 50ನೇ ದಿನದ ಸಂಭ್ರಮಾಚರಣೆಯನ್ನು ಶುಕ್ರವಾರ ಸಿಟಿ ಸೆಂಟರ್ ಮಾಲ್ ನ  ಭಾರತ್ ಸಿನೆಮಾಸ್ ನಲ್ಲಿ   ನಡೆಸಿತು. ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನೆಮಾಸ್ ನಲ್ಲಿ  ನಡೆದ 50ನೇ ದಿನದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ನಿರ್ಮಾಪಕ ಸತ್ಯೇಂದ್ರ ಪೈ, ತುಳು ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್, ಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಮತ್ತಿತರರು ಮಾತಾನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕರಿಗೆ ಸಿನೆಮಾ ಪ್ರದರ್ಶನ ಏರ್ಪಡಿಸಿ, ಗೌರವಿಸ ಲಾಯಿತು. ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ  ಕೆ.ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ ಕನ್ನಡ  ಚಲನಚಿತ್ರದಲ್ಲಿ  ರಝಾಕ್ ಪುತ್ತೂರು ಇವರು ಚಿತ್ರ ದ ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಸಹ ನಿರ್ಮಾಪಕ ಅಕ್ಷತ್ ವಿಟ್ಲ,  ನಾಗೇಶ್ ಕಾಮತ್, ಯು. ವಿಶ್ವನಾಥ ಕುಯಿಲಾಡಿ ಸುರೇಶ್…

Read More

ಮಂಗಳೂರು, ಜು. 18 : ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ರೋಷನ್ ಸಲ್ಡಾನ ಎಂಬಾತನನ್ನು ಗುರುವಾರ ರಾತ್ರಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಬಂಧಿಸಿರುವ ಆರೋಪಿ ರೋಶನ್ ಸಲ್ಡಾನ (43) ವಿರುದ್ಧ ಚಿತ್ರದುರ್ಗ ಹಾಗೂ ಮುಂಬೈನಲ್ಲೂ ವಂಚನೆ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರಾದ  ಸುಧೀರ್ ರೆಡ್ಡಿ ಅವರು ತಿಳಿಸಿದ್ದಾರೆ. ಆರೋಪಿ ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ದೇಶದ ವಿವಿಧ ಭಾಗಗಳ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದ. ಕಳೆದ 3 ತಿಂಗಳಲ್ಲಿ ಆರೋಪಿಯ ವ್ಯವಹಾರ ಪರಿಶೀಲಿಸಿದಾಗ ಇತನು ಗೋವಾ, ಬೆಂಗಳೂರು, ಪುಣೆ, ವಿಜಯಪುರ, ತುಮಕೂರು, ಕಲ್ಕತ್ತಾ, ಸಾಂಗ್ಲಿ, ಲಕ್ನೋ ,ಬಾಗಲಕೋಟೆ ಇತ್ಯಾದಿ ಕಡೆಗಳಲ್ಲಿ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಸುಮಾರು 32 ಕೋಟಿ ರೂ. ಗಳನ್ನುಆರೋಪಿ ಮತ್ತು ಇತರರು ಪಡೆದುಕೊಂಡಿರುವುದು ಕಂಡುಬಂದಿರುತ್ತದೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು ತನ್ನ…

Read More

ಬೆಳ್ತಂಗಡಿ,ಜು. 17 : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ ವೃದ್ಧನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಸೌತಡ್ಕ ನಿವಾಸಿ ಬಾಲಕೃಷ್ಣ(60) ಎಂದು ಗುರುತಿಸಲಾಗಿದೆ. ಗ್ರಾಮಸ್ಥರ ಗುಂಪೊಂದು ಗುರುವಾರ ಬೆಳಿಗ್ಗೆ ಆನೆಗಳ ಹಿಂಡನ್ನು ಓಡಿಸಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ, ಅರಣ್ಯ ಇಲಾಖೆ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Read More

ಬೆಂಗಳೂರು, ಜು. 16 : ನಗರದ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಎಂಬಾತನ ಹತ್ಯೆ ನಡೆದಿತ್ತು.ಈ ಕೊಲೆ ಸಂಬಂಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅಲ್ಲದೆ ಜಗದೀಶ್, ಕಿರಣ್, ವಿಮಲ್ ಮತ್ತು ಅನಿಲ್ ಎಂಬವವರ ಮೇಲೂ ಎಫ್ಐಆರ್ ದಾಖಲಾಗಿದೆ. ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಅವರ ಮೇಲೆ ಹಲಸೂರು ಕೆರೆಯ ಬಳಿಯ ಅವರ ನಿವಾಸದ ಬಳಿ ಐದು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಹಲ್ಲೆಯ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರ ತಾಯಿ ವಿಜಯಲಕ್ಷ್ಮಿ ಅವರು ಭಾರತಿನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಭೈರತಿ ಬಸವರಾಜ್, ಅವರ ಸಹಾಯಕ ಜಗದೀಶ್ ಅಲಿಯಾಸ್ ಜಗ್ಗಾ ಮತ್ತು ಕಿರಣ್ ಎಂಬ ಸಂಬಂಧಿ ಸೇರಿದಂತೆ ಹಲವು ವ್ಯಕ್ತಿಗಳ ಹೆಸರುಗಳಿವೆ. ಶಾಸಕರು ಕೊಲೆಗೆ ಕುಮ್ಮಕ್ಕು ನೀಡಿದ್ದಾರೆ…

Read More

ಮಂಗಳೂರು, ಜು. 15 : ಇತ್ತೀಚೆಗೆ ರಾಜ್ಯದ ಯುವ ಜನರಲ್ಲಿ ಹೃದಯಾಘಾತದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ,ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ ಎಂದು ಹೃದಯ ತಜ್ಞ, ಮಂಗಳೂರು ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಅವರು ಸೋಮವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬದಲಾದ ಜೀವನ ಪದ್ಧತಿಯಿಂದಾಗಿ ಯುವ ಸಮುದಾಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಫಾಸ್ಟ್ ಫುಡ್ ಸೇವನೆಯು ತೀವ್ರವಾಗಿ ಹೆಚ್ಚಾಗಿದ್ದು, ಇದರಲ್ಲಿ, ಕೃತಕ ಪದಾರ್ಥಗಳು ಇದ್ದು ಆರೋಗ್ಯಕ್ಕೆ ಹಾನಿಕಾರಕವಾಗುತ್ತವೆ. ಮನೆಯ ಅಡುಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಅತಿಯಾದ ಎಣ್ಣೆ ಪದಾರ್ಥ ಸೇವನೆಯೂ ಕೂಡ ಅಪಾಯಕಾರಿ. ಮೀನು ಸೇವನೆ ಹೃದಯದ ಆರೋಗ್ಯಕ್ಕೆ ಸೂಕ್ತವಾಗಿದೆ. ದೈಹಿಕ ಚಟುವಟಿಕೆಗಳು, ವ್ಯಾಯಾಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.ಶಾಲೆ ಕಾಲೇಜುಗಳಲ್ಲ ದೈಹಿಕ ಚಟುವಟಿಕೆಗಳಿಗೆ ಆಧ್ಯತೆ ನೀಡಬೇಕು ಎಂದವರು ಹೇಳಿದರು. ಧೂಮಪಾನ, ಮದ್ಯಪಾನ, ಮಾದಕ ವಸ್ತು ಸೇವನೆ, ಕೆಲಸದ ಒತ್ತಡ, ವೈಯಕ್ತಿಕ ಜೀವನದ ಉದ್ವಿಗ್ನತೆ, ಶುಗರ್, ರಕ್ತದೊತ್ತಡ, ಕೊಬ್ಬು,…

Read More

ಬೆಂಗಳೂರು, ಜು. 14  : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87 ) ಅವರು ವಯೋ ಸಹಜ ಅನಾರೋಗ್ಯದಿಂದಾಗಿ ಸೋಮವಾರ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಸರೋಜಾ ದೇವಿ ಅವರು 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರ ತಂದೆ ಬೈರಪ್ಪ ತಾಯಿ ರುದ್ರಮ್ಮಾ. ಸರೋಜಾ ದೇವಿ ಅವರು ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು. ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ನಟಿಸಿದ್ದರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು.

Read More

ಬೆಳ್ತಂಗಡಿ,ಜು. 13 : ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೊಯ್ಯೂರಿನ ದರ್ಖಾಸ್ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಎಂದು ಗುರುತಿಸಲಾಗಿದೆ. ರಮ್ಯಾ ಅವರು  ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ರಮ್ಯಾ  ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜುಲೈ 12: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆಯ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಕಾರ್ಯಕ್ರಮವು ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ  ಅದ್ದೂರಿಯಾಗಿ  ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ತಾರೆಗಳು ಭಾಗವಹಿಸಿದ್ದರು. ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡುವ ಮೂಲಕ  ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಲಿದೆ. ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು. ಕಾರ್ಯಕ್ರಮವನ್ನು  ನಿರೂಪಕಿ ರೀನಾ ಡಿಸೋಜಾ ಅವರು ನಿರೂಪಿಸಿದರು.

Read More

ಉಡುಪಿ, ಜು. 11 : ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಒಬ್ಬ ಮೀನುಗಾರ ಮೃತಪಟ್ಟ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ. ಮೃತರನ್ನು ಪಿತ್ರೋಡಿ ನಿವಾಸಿ ನೀಲು (48) ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮಗುಚಿದ ಸಂದರ್ಭದಲ್ಲಿ ನೀಲು ಅವರು ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಅವರು ಮೀನುಗಾರಿಕಾ ಬಲೆಗಳು ಮತ್ತು ಇತರ ಸಲಕರಣೆಗಳಲ್ಲಿ ಸಿಲುಕಿಹಾಕಿಕೊಂಡಿದ್ದ ಪರಿಣಾಮ ನೀರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಉಳಿದ ಮೀನುಗಾರರು ಅವರನ್ನು ಬಲೆಯಿಂದ ಬಿಡಿಸಿ ದಡಕ್ಕೆ ತಂದು ನೋಡಿದಾಗ, ಅವರು ಮೃತಪಟ್ಟಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More