Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜು. 10 : ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ,ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ ಎಂದರು.. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ…
ಮಂಗಳೂರು, ಜು. 09 : ಅದ್ರಿ ಸ್ಟಾರ್ ಫಿಲಂಸ್ ಅರ್ಪಿಸುವ ಸಾನ್ವಿಕ ಅವರ ನಿರ್ದೇಶನದ “ಜಾವ ಕಾಫಿ” ಕನ್ನಡ ಚಿತ್ರ ಜು. 11 ರಂದು ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕಿ, ನಾಯಕಿ, ನಿರ್ದೇಶಕಿ ಸಾನ್ವಿಕ ಅವರು ಮಂಗಳವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಜಾವ ಕಾಫಿʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಬೆಂಗಳೂರು, ಮಂಗಳೂರು, ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಅಜಯ್ ವರ್ಧನ್ ನಾಯಕರಾಗಿ, ಸಾನ್ವಿಕ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಮಂಜುನಾಥ್, ಪ್ರತಿಮ, ಭವಾನಿ ಶಂಕರ್, ವಿಜಯ್ ಕುಮಾರ್, ರಾಮಚಂದ್ರ, ರಾಮಲಿಂಗಪ್ಪ ನಟಿಸಿದ್ದಾರೆ. ಧ್ರುವ ದೇವರಾಯನ್ ಹಿನ್ನೆಲೆ ಸಂಗೀತ, ನೃತ್ಯ ನಿರ್ದೇಶಕರಾಗಿ ಪಾಲಾಶ್ ಮಾಸ್ಟರ್, ಶ್ರೀಧರ್ ಕರ್ಕೇರ ಸಂಗೀತ ನೀಡಿದ್ದಾರೆ ಎಂದು ತಿಳಿಸಿದರು. ನಾಯಕ ನಟ ಅಜಯ್ ವರ್ಧನ್ ಮಾತನಾಡಿ, ಈಗಾಗಲೇ ತುಳು ಚಿತ್ರದಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ. ಸಾನ್ವಿಕ ಅವರು ಒಂದೊಳ್ಳೆ ಚಿತ್ರ ಮಾಡಿದ್ದಾರೆ. ನಾನು ಪತ್ರಕರ್ತನ ಪಾತ್ರ…
ಮಂಗಳೂರು, ಜು. 08 : ಅಲ್ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಕ್ರೌಡ್ ಫಂಡ್ ಸಂಗ್ರಹ ಮಾಡುವುದಲ್ಲದೆ ಯುವತಿಯರ ಮೊಬೈಲ್ ನಂಬರ್ ಪಡೆದು, ತನ್ನ ಆನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾನೆ. ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸಿದ್ದೀಕ್ ಪಾಂಡವರಕಲ್ಲು ಎಂಬವರು ನನ್ನ ವಿರುದ್ಧ ಸುಳ್ಳುಕೇಸು ದಾಖಲಿಸಿರುವುದಾಗಿ ಮಂಗಳೂರಿನ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ದಿ ವಾಯ್ಸ್ ಆಪ್ ಬ್ಲಡ್ ಡೋನರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ದಾಖಲೆಯ ಮಟ್ಟದಲ್ಲಿ ರಕ್ತದಾನ ಮಾಡಿದ್ದೇನೆ. ವಿಕಲಚೇತನರಿಗೆ ವೀಲ್ ಚೇರ್ ಮುಂತಾದ ಪರಿಕರಗಳನ್ನು ನೀಡುತ್ತಾ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ ಎಂದು ಹೇಳಿದರು. ಸಿದ್ದೀಕ್ ಪಾಂಡವರಕಲ್ಲು ಮುಸ್ಲಿಂ ಸಮುದಾಯದ ಅಮಾಯಕ ಯುವತಿಯರನ್ನು ತನ್ನ ತೀಟೆ ತೀರಿಸಿಕೊಳ್ಳಲು…
ಬಂಟ್ವಾಳ, ಜು. 07 : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಜು. 05, ಶನಿವಾರ ನಡೆದಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ನೌಫಲ್ ಅವರು ಶನಿವಾರ ಬೆಳಿಗ್ಗೆ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ, ಜು. 06 : ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ರಿಯಾಝ್ ಕಡಂಬು ಅವರು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಮಾತನಾಡಿರುವುದಾಗಿ ದೂರಲಾಗಿದೆ. ಈ ಹೇಳಿಕೆ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತಿದೆ. ರಿಯಾಝ್ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿ ಶ್ರೀ ಕೃಷ್ಣ ಜೆ.ರಾವ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶ್ರೀಕೃಷ್ಣ ಜೆ.ರಾವ್ ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು. ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಕೃಷ್ಣ ರಾವ್ ಅವರನ್ನು ಪತ್ತೆಹಚ್ಚಿ, ಜುಲೈ 4 ರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ನಂತರ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮಂಗಳೂರಿಗೆ ಕರೆದೊಯ್ಯಲಾಯಿತು. ಆರೋಪಿಯನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದನು. ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ…
ಉಡುಪಿ, ಜು.4 : ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಆರೋಪಿ ಶರಣ್ ಪಂಪ್ ವೆಲ್ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದಾಗಿ ದೂರಲಾಗಿದೆ. ಅದರಂತೆ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎಲ್ ಸಿಆರ್ ಐ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವಿಶ್ವಸ್ಥ ಮಂಡಳಿ ಸದಸ್ಯ ಮೈಮ್ ರಾಮ್ದಾಸ್ ಅವರು ಗುರುವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಅವರಿಗೆ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯಲಿದೆ.2008ರಲ್ಲಿ ಪ್ರಾರಂಭವಾದ ರಂಗ ಸಂಗಾತಿ ಸಂಸ್ಥೆಯು ಬಹುಮುಖ ಪ್ರತಿಭೆ, ರಂಗಸಂಗಾತಿಯ ಸ್ಥಾಪಕ ಸದಸ್ಯ ದಿ. ಭಾಸ್ಕರ ನೆಲ್ಲಿತೀರ್ಥ ಅವರ ನೆನಪಿನಲ್ಲಿ ರಂಗ ಭಾಸ್ಕರ ಪ್ರಶಸ್ತಿಯನ್ನುನೀಡುತ್ತಿದೆ. ಈಗಾಗಲೇ 10 ಮಂದಿ ಸಾಧಕರಿಗೆ ರಂಗ ಭಾಸ್ಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಲಕ್ಷ್ಮಣ ಕುಮಾರ್ ಮಲ್ಲೂರು, ಬಾಲ ನಟನಾಗಿ ರಂಗ ಪ್ರವೇಶ ಮಾಡಿ 65 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 30ಕ್ಕೂ ಹೆಚ್ಚು ಕನ್ನಡ, ತುಳು ಸಿನೆಮಾಗಳಲ್ಲಿ…
ಮಂಗಳೂರು ,ಜು. 02: ಸುನಿ ಸಿನಿಮಾಸ್ ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಇದೇ ಜುಲೈ 4ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ರಕ್ಷಿತ್ ಕುಮಾರ್ ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಣ್ಣ ಹಳ್ಳಿ ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಕಾಡಿನಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆದಿದೆ. ಹೆಚ್ಚಾಗಿ ಕರಾವಳಿಯ ಕಲಾವಿದರನ್ನು ಸೇರಿಸಿ ನಿರ್ಮಿಸಲಾಗಿದೆ ಎಂದರು. ಹಾಸ್ಯ ನಟ ಪುಷ್ಪರಾಜ್ ಬೊಳ್ಳಾರ್ ಮಾತನಾಡಿ, ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರದಲ್ಲಿ ನಾಯಕ ನಟನಾಗಿ ಯಶ್ ಶೆಟ್ಟಿ , ನಾಯಕಿಯಾಗಿ ಹರ್ಷಿತಾ, ಚಂದ್ರಹಾಸ್ ಉಳ್ಳಾಲ್, ಉಗ್ರಂ ಮಂಜು, ಹರ್ಷಿತಾ ರಾಮಚಂದ್ರ ಬಲ ರಾಜವಾಡಿ, ದೀಪಕ್ ರೈ ಪಾಣಾಜೆ, ಚಂದ್ರಹಾಸ್ ಉಳ್ಳಾಲ್ ಅಭಿನಯಿಸಿದ್ದಾರೆ. ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಗೀತ ಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ತೇಜಸ್ವಿ, ಸಂಕಲನ ಮನು ಶೇಡ್ಗರ್ ,ಕಲಾ ನಿರ್ದೇಶನ ವರದರಾಜ್…
ಶಿವಕಾಶಿ, ಜು. 01 : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಚಿನ್ನಕ್ಕಂಪಟ್ಟಿಯಲ್ಲಿ ಇಂದು ಮಂಗಳವಾರ ನಡೆದಿದೆ. ಕಾರ್ಖಾನೆಯಲ್ಲಿ ಕಾರ್ಮಿಕರು ದಿನನಿತ್ಯದ ಕೆಲಸದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಪರಿಣಾಮ ಅನೇಕರು ಗಾಯಗೊಂಡಿದ್ದಾರೆ. ಈ ಸ್ಥಳಕ್ಕೆ ತಲುಪಿದ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪಟಾಕಿ ಉತ್ಪಾದನಾ ಘಟಕಕ್ಕೆ ಆಗಮಿಸಿದ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.












