Author: admin

ಹೈದರಾಬಾದ್, ಜೂ. 30 : ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಿಸಿದ್ದಾರೆ. ಘಟನಾ ಸ್ಥಳದಿಂದ ಆರು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ಇನ್ನು ಕೆಲ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು, ಜೂ. 29: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ ಆ.1-2ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ|ಎಂ. ಮೋಹನ್ ಆಳ್ವ ಅವರು ಜೂ. 23, ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಆಳ್ವಾಸ್ ವಿದ್ಯಾಸಂಸ್ಥೆಯು ಇಲ್ಲಿಯವರೆಗೆ ವಿವಿಧ ಭಾಗಗಳಲ್ಲಿ 21 ಬೃಹತ್ ಉದ್ಯೋಗ ಮೇಳವನ್ನು ನಡೆಸಿದೆ. ಪ್ರತೀ ಮೇಳದಲ್ಲಿ ಸರಾಸರಿ 200 ರಷ್ಟು ಪ್ರತಿಷ್ಠಿತ ಕಂಪೆನಿಗಳು ಪಾಲ್ಗೊಂಡಿವೆ. ಈ ಬಾರಿಯೂ ಬ್ಯಾಂಕಿಂಗ್ ಮತ್ತು ಹಣಕಾಸು,ಮ್ಯಾನುಫ್ಯಾಕ್ಚರಿಂಗ್, ಐಟಿ, ಐಟಿಎಸ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟಾಲಿಟಿ, ಆಟೋ ಮೊಬೈಲ್, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ ಜಿ ಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ .ಈ ಬಾರಿ ಈವರೆಗೆ 80 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 130 ಕಂಪೆನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ.…

Read More

ಬೆಳ್ತಂಗಡಿ, ಜೂ. 28 : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್ ತಗುಲಿದ ಪರಿಣಾಮ ಮದ್ದು ಸಿಂಪಡನೆ ಮಾಡುತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಅರಸಿನಮಕ್ಕಿ ಎಂಜಿರ ಎಂಬಲ್ಲಿ ನಡೆದಿದೆ. ಮೃತರನ್ನು ಉಡೈರೆ ಕೃಷ್ಣಪ್ಪ ಕುಲಾಲ್ (49) ಎಂದು ಗುರುತಿಸಲಾಗಿದೆ. ವಿದ್ಯುತ್ ಆಘಾತಕ್ಕೆ ಈಡಾದ ಕೃಷ್ಣಪ್ಪ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎನ್ನಲಾಗಿದೆ .

Read More

ಮೆಕ್ಸಿಕೋ, ಜೂ. 27 : 3,000 ಕಾರುಗಳನ್ನು ಮೆಕ್ಸಿಕೋಗೆ ಸಾಗಿಸುತ್ತಿದ್ದ ಕಾರ್ಗೋ ಶಿಪ್ (ಸರಕು ಸಾಗಣೆ ಹಡಗು) ಉತ್ತರ ಪೆಸಿಫಿಕ್ ಸಾಗರದಲ್ಲಿ ಮುಳುಗಡೆಯಾಗಿದೆ. ಮಾರ್ನಿಂಗ್ ಮಿಡಾಸ್ ಹೆಸರಿನ ಕಾರ್ಗೋ ಶಿಪ್ ನ್ನು ಹಡಗು ನಿರ್ವಹಣಾ ಕಂಪನಿ ಲಂಡನ್ನ ಜೋಡಿಯಾಕ್ ಮ್ಯಾರಿಟೈಮ್ ನಿರ್ವಹಣೆ ಮಾಡುತ್ತಿತ್ತು. ಸರಕು ಸಾಗಣೆ ಹಡಗು ಹೊಸ ಕಾರುಗಳನ್ನು ಅಲಾಸ್ಕಾದ ಅಡಕ್ ದ್ವೀಪದಿಂದ ಹೊತ್ತು ಮೆಕ್ಸಿಕೋದ ಬಂದರಿಗೆ ಭೂಪ್ರದೇಶದಿಂದ 300 ಮೈಲುಗಳು ದೂರದಲ್ಲಿ ಸಾಗುತ್ತಿತ್ತು. ಜೂನ್ 3 ರಂದು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಈ ಬಗ್ಗೆ ಹಡಗಿನಲ್ಲಿದ್ದ ಸಿಬ್ಬಂದಿ ಕೋಸ್ಟ್ ಗಾರ್ಡ್ಗೆ ಮಾಹಿತಿ ರವಾನಿಸಿದ್ದರು. ಪ್ರತಿಕೂಲ ಹವಾಮಾನ ಮತ್ತು ನೀರು ಸೋರಿಕೆಯಾದ ಕಾರಣ ಸಿಬ್ಬಂದಿಗೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಕಳೆದೊಂದು ವಾರದಿಂದ ಬೆಂಕಿಯಲ್ಲಿ ಉರಿಯುತ್ತಲೇ ಹಡಗು ದಡದತ್ತ ಸಾಗಿ ಬಂದಿದೆ. ಹೀಗಾಗಿ ಸರಕು ಸಾಗಣೆ ಹಡಗು ಸಮೇತ 800 ಎಲೆಕ್ಟ್ರಿಕ್ ವಾಹನಗಳೊಂದಿಗೆ ತುಂಬಿದ್ದ 3,000 ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ ಎಂದು ವರದಿಯಾಗಿದೆ.

Read More

ಮಂಗಳೂರು, ಜೂ. 27 : ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ಈ ಚಟುವಟಿಕೆಗಳು  ನಡೆಯುತ್ತವೆ. ಕಾರ್ಯಕ್ರಮದ ಕುರಿತು ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ  ಅವರು, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ಸಾಹಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕಾಗಿ ಅವರು ಸಂತೋಷ ವ್ಯಕ್ತಪಡಿಸಿ ಪೋಷಣೆಯ ಶೈಕ್ಷಣಿಕ ವಾತಾವರಣವನ್ನು ಒದಗಿಸಿದ್ದಕ್ಕಾಗಿ ಸಂಸ್ಥೆಗಳನ್ನು ಶ್ಲಾಘಿಸಿದರು. ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ…

Read More

ಮಂಗಳೂರು, ಜೂ.25: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮಂಗಳೂರು ಶಾಖೆಯ ವತಿಯಿಂದ ಅಂತಾರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ ಪ್ರಯುಕ್ತ ಜೂ.27ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಗಳೂರಿನ ಕರಂಗಲ್ಪಾಡಿಯ ಮಹೇಂದ್ರ ಆರ್ಕೆಡ್‌ನಲ್ಲಿರುವ ಐಸಿಎಐ ಭವನದಲ್ಲಿ ‘ಐಸಿಎಐ ಎಂಎಸ್ ಎಂಇ ಮಹೋತ್ಸವ’ ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಐಸಿಎಐ ಎಸ್‌ ಐಆರ್‌ಸಿಯ ಮಂಗಳೂರು ಶಾಖೆಯ ಅಧ್ಯಕ್ಷ ಸಿಎ ಪ್ರಶಾಂತ್‌ ಪೈ ಕೆ. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಭಾರತೀಯ ಕೈಗಾರಿಕಾ ಒಕ್ಕಟದ ಅಧ್ಯಕ್ಷ ನಟರಾಜ್ ಹೆಗ್ಡೆ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿ.ನ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಎಂ.ಎಸ್‌.ಎಂ ಸಚಿವಾಲಯದ ಎಂಎಸ್ ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ನಿವೃತ್ತ ಜಂಟಿ ನಿರ್ದೇಶಕ ಡಾ| ಕೆ.ಸಾಕ್ರೆಟಿಸ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ. ತಜ್ಞರ ಅಧಿವೇಶನದಲ್ಲಿ ಎ ಸಂಕೇತ್ ನಾಯಕ್‌ ಬೆಂಗಳೂರು ಅವರು ಎಂಎಸ್ ಎರರಗಳು ಮತ್ತು ಸ್ಟಾರ್ಟ್‌ಪ್‌ಗಳ ಪ್ರಯೋಜನಗಳು, ಹಣಕಾಸು ಮತ್ತು ತೆರಿಗೆಯನ್ನು ಅರ್ಥಮಾಡಿಕೊಳ್ಳುವುದರ…

Read More

ಬೆಳ್ತಂಗಡಿ, ಜೂ. 24 : ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಬಾದ್ಯಾರ್ ಬಳಿ ನಡೆದಿದೆ. ಸಹಪ್ರಯಾಣಿಕ ಗಾಯಗೊಂಡಿದ್ದಾನೆ. ಮೃತರನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಚಾಲಕ ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಸಂಚರಿಸುತ್ತಿದ್ದಾಗ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಾನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆ ದ್ದರು. ಆದಾಗಲೇ ಅವರು ಮೃತಪಟ್ಟಿದ್ದರು. ಆಟೋ ರಿಕ್ಷಾದಲ್ಲಿದ್ದ ಸಹಪ್ರಯಾಣಿಕ ಶಿವರಾಜ್ ಕೂಡ ಗಾಯಗೊಂಡಿದ್ದು, ಸದ್ಯ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಮಂಗಳೂರು, ಜೂ.23 : ಕೊಂಕಣಿ ಕವಿ ಎಚ್. ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಅನ್ನು ಶುಕ್ರವಾರ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ ಶ್ರೀ ಮೈಕಲ್ ಡಿ ಸೊಜಾ ಅಧ್ಯಕ್ಷತೆ ವಹಿಸಲಿರುವರು. ಅಖಿಲ ಭಾರತೀಯ ಕೊಂಕಣಿ ಪರಿಷದ್ ಪ್ರಧಾನ ಕಾರ್ಯದರ್ಶಿ ಸ್ನೇಹಾ ಸಬನೀಸ ಮತ್ತು ಕವಿತಾ ಟ್ರಸ್ಟ್ ಅಧ್ಯಕ್ಷ ಕಥೆಗಾರ ಕಿಶೂ, ಬಾರ್ಕೂರ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಎಚ್.ಎಮ್. ಪೆರ್ನಾಲ್ ಸದ್ಯ ಕಿಟಾಳ್ ಅಂತರ್ಜಾಲ ಸಾಹಿತ್ಯ ಪತ್ರಿಕೆಯ ಸಂಪಾದಕ, ಆರ್ಸೊ ಕೊಂಕಣಿ ಸಾಹಿತ್ಯ ಪತ್ರಿಕೆಯ ಪ್ರಕಾಶಕ ಮತ್ತು ಮೈಕಲ್ ಡಿಸೊಜಾ ವಿಶನ್ ಕೊಂಕಣಿ ಪುಸ್ತಕ…

Read More

ಮಂಗಳೂರು, ಜೂ. 22: ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗ ದಲ್ಲಿ ಮಾವು -ಹಲಸು ಮೇಳ ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದ ಆವರಣದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಿತು. ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜೀ ಅವರು ಆಶೀರ್ವಚನ ನೀಡಿದರು. ಮಾವು -ಹಲಸು ಮೇಳ ಉದ್ಘಾಟಿಸಿದ ಆರೂರು ಲಕ್ಷ್ಮೀ’ ರಾವ್ ಮಾತನಾಡಿ, ಪ್ರಕೃತಿಯಲ್ಲಿ ಸಿಗುವ  ಮಾವು ಮತ್ತು ಹಲಸು ಆರೋಗ್ಯಕರ ಹಣ್ಣುಗಳಾಗಿದ್ದು, ನಮ್ಮ ಆಹಾರ ಪದ್ಧತಿಯನ್ನು ನೆನಪಿಸಲು ಇಂತಹ ಮೇಳಗಳು ಪೂರಕ ಎಂದರು. ಶರವು ದೇವಸ್ಥಾನದ ಶಿಲೆ ಶಿಲೆ ಮೊತ್ತೇಸರ ರಾಘವೇಂದ್ರ ಶಾಸ್ತ್ರಿ , ಶಾರದಾ ಸಮೂಹ ಸಂಸ್ಥೆಗಳ ಪ್ರೊ| ಎಂ.ಬಿ. ಪುರಾಣಿಕ್, ಶಾಸಕ ಡಿ. ವೇದವ್ಯಾಸ ಕಾಮತ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ವದೇಶಿ ಗೋವುಗಳ ಹಾಗೂ ಪ್ರಾದೇಶಿಕ ಸಸ್ಯಗಳ ತಳಿ ಸಂರಕ್ಷಕ ಡಾ| ಮನೋಹರ ಉಪಾಧ್ಯಾಯ ಅವರು ಆಹಾರ ಪದ್ಧತಿ ಬಗ್ಗೆ ಉಪನ್ಯಾಸ…

Read More

ಮಂಗಳೂರು, ಜೂ. 21 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ  ದಿನಾಚರಣೆಯನ್ನು ಇಂದು   ಜಿಲ್ಲಾ ಬಿಜೆಪಿ ಕಚೇರಿಯಲ್ಲಿ  ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಎಲ್ಲರಿಗೂ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಭಾರತವು ವಿಶ್ವದ ಆರೋಗ್ಯದ ರಾಯಭಾರಿಯಾಗಿದ್ದು ಪ್ರತಿಯೊಬ್ಬ ವ್ಯಕ್ತಿಯ ದೈಹಿಕ ಚೈತನ್ಯ ಹಾಗೂ ಮಾನಸಿಕ ಶಾಂತಿಗೆ ಯೋಗ ಅತ್ಯಗತ್ಯವಾಗಿದೆ.  ಸನಾತನ ಸಂಸ್ಕೃತಿಯಲ್ಲಿ ಯೋಗಕ್ಕೆ ಶ್ರೇಷ್ಠ ಸ್ಥಾನವಿದೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಪೂರ್ಣಿಮಾ, ಕ್ಯಾ.ಗಣೇಶ್ ಕಾರ್ಣಿಕ್, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಅಶ್ವಿತ್ ಕೊಟ್ಟಾರಿ, ಸಂಜಯ್ ಪ್ರಭು, ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಸೇರಿದಂತೆ ಪಕ್ಷದ ಪ್ರಮುಖರು, ಮಂಡಲದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More