Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜೂ.20: ಹನಿಜೆನಿಕ್ಸ್ ಬೀ ಫಾರ್ಮ್ಸ್ ಮತ್ತು ರೋಟರಿ ಇಂಟರ್ ನ್ಯಾಷನಲ್ ಮಂಗಳೂರು ವತಿಯಿಂದ ಜೂ.21 , 22ರಂದು ನಗರದ ಬೆಂದೂರ್ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’ವನ್ನು ಆಯೋಜಿಸಲಾಗಿದೆ ಎಂದು ಸಂಯೋಜಕ ಅಶ್ವಿನ್ ಸಿಕ್ವೇರಾ ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.21ರ ಪೂರ್ವಾಹ್ನ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ರಾತ್ರಿ 8 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿದ್ದು ರಾಜ್ಯದ ವಿವಿಧ ಜಿಲ್ಲೆಗಳು ಕೃಷಿಕರು ಭಾಗವಹಿಸಲಿದ್ದಾರೆ. ಸ್ಥಳೀಯ ಕೃಷಿ, ಆಹಾರ ಪರಂಪರೆ ಮತ್ತು ಉದ್ಯಮಶೀಲನತೆಯನ್ನು ಉತ್ತೇಜಿಸಲು ಈ ಪೆಲಕಾಯಿ ಪರ್ಬದ ಆಯೋಜನೆಯಾಗಿದೆ ಎಂದು ತಿಳಿಸಿದರು. ರಾಮನಗರದಿಂದ ನಾಲ್ಕು ಮಂದಿ ರೈತರು ಮಾವು, ಚಿಕ್ಕಬಳ್ಳಾಪುರ ಮತ್ತು ಸ್ಥಳೀಯ ರೈತರು ಹಲಸು, ಮಡಿಕೇರಿಯಿಂದ ಬೆಣ್ಣೆ ಹಣ್ಣು ಹಾಗೂ ಕಿತ್ತಳೆ, ಬೆಂಗಳೂರಿನಿಂದ ವಿವಿಧ ಹಣ್ಣುಗಳ ಮೌಲ್ಯವರ್ಧಿತ ಉತ್ಪನ್ನಗಳು ಸೇರಿದಂತೆ ಸ್ಥಳೀಯವಾಗಿ, ಹಲಸಿನ ಹಣ್ಣಿನಿಂದ ತಯಾರಿಸಿದ ವಿವಿಧ ಖಾದ್ಯಗಳು ಪರ್ಬದಲ್ಲಿರಲಿವೆ. ಹಲಸಿನ ಪ್ರಿಯರಿಗೆ ಇದೊಂದು ಹಬ್ಬವಾಗಲಿದೆ ಎಂದರು.…
ಟೆಲ್ ಅವಿವ್/ಟೆಹ್ರಾನ್, ಜೂ.19. : ಆಪರೇಷನ್ ʻರೈಸಿಂಗ್ ಲಯನ್ʼ ಬಳಿಕ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇರಾನ್ ಕೂಡ ಇಸ್ರೇಲ್ ಮೇಲೆ ಭೀಕರ ದಾಳಿ ನಡೆಸಿದೆ. ಇರಾನ್ ಮಿಸೈಲ್ ದಾಳಿಗೆ ಇಸ್ರೇಲ್ ಕೂಡ ಮಿಸೈಲ್ಗಳ ಸುರಿಮಳೆಯನ್ನೇ ಸುರಿಸಿದೆ. ಅಣ್ವಸ್ತ್ರ , ಮಿಲಿಟರಿ ನೆಲೆಗಳ ಬಳಿಕ ಇರಾನ್ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ಮಾಡಲು ಶುರು ಮಾಡಿದೆ. ಇರಾನ್ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯಲ್ಲಿ ಇರಾನಿನ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಇರಾನ್ ಕೂಡ ಇಸ್ರೇಲ್ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್ಗಳಿಂದ ದಾಳಿ ನಡೆಸಿದೆ. ಟೆಲ್ ಅವಿವ್, ಜೆರುಸಲೆಮ್ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ…
ಮಂಗಳೂರು, ಜೂ.18 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ, ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ, ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಅಧಿಕಾರಿಯಾಗಿದ್ದಾರೆ. ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೆ ಮುಗಿಲನ್ ಅವರ ನೋಂದಣಿ ಮತ್ತು ಮುದ್ರಾಂಕದ ಐಜಿ ಅವರನ್ನು ನೇಮಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರ ಸ್ವರೂಪ ಟಿ.ಕೆ ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.
ಮಂಗಳೂರು, ಜೂ. 18 : ಆಧ್ಯಾತ್ಮಿಕ ನಾಯಕರೂ ಧಾರ್ಮಿಕ ವಿದ್ವಾಂಸರೂ ಆಗಿದ್ದ ಖಾಝಿ ಅಸ್ಸಯ್ಯಿದ್ ಉಮರುಲ್ ಫಾರೂಕ್ ಆಲ್ ಬುಖಾರಿ ಪೊಸೋಟ್ ತಂಳ್ ಅವರ ಹತ್ತನೇ ಉರೂಸ್ ಹಾಗೂ ಅವರು ಸ್ಥಾಪಿಸಿದ ಮಂಜೇಶ್ವರ ಹೊಸಂಗಡಿ ಮಳ್ಹರ್ ವಿದ್ಯಾಸಂಸ್ಥೆಯ ರಜತ ಮಹೋತ್ಸವವು ಜೂ. 19ರಿಂದ 22ರವರೆಗೆ ನಡೆಯಲಿದೆ ಎಂದು ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಜಲಾಲುದ್ದೀನ್ ಬುಖಾರಿ ತಂಙಳ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಜೂ. 19 ಗುರುವಾರ ಸಂಜೆ 4.30ಕ್ಕೆ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧ್ಯಕ್ಷ ಸಯ್ಯಿದ್ ಆಟಕೋಯ ತಂಳ್ ಕುಂಬೋಲ್ ಉದ್ಘಾಟಿಸಲಿದ್ದು, ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಂಜೇಶ್ವರ ಶಾಸಕ ಎಂ.ಕೆ.ಎಂ. ಆಶ್ರಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಹೇಳಿದರು. ಅಂದು ರಾತ್ರಿ 8ಕ್ಕೆ ಸಂಸ್ಥೆಯ ಮುಖ್ಯಸ್ಥ ಸಯ್ಯದ್ ಶಹೀರ್ ಅಲ್…
ಕುಂದಾಪುರ, ಜೂ. 17 : ಖಾಸಗಿ ಬಸ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸಿಗಂದೂರು ನಿವಾಸಿ ಶರತ್(25) ಎಂದು ಗುರುತಿಸಲಾಗಿದೆ. ಬಸ್ ಹೆಮ್ಮಾಡಿಯಿಂದ ಕೊಲ್ಲೂರು ಕಡೆಗೆ ಹೋಗುತ್ತಿದ್ದಾಗ, ವೇಗವಾಗಿ ಬಂದ ಬೈಕ್ ಬಸ್ಗೆ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆಗೆ ಬಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಶರತ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿ ಹೊತ್ತಿಕೊಂಡು ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂ. 17 : ನಗರದ ನಂತೂರಿನ ತಾರೆತೋಟ ಬಳಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕೇರಳ ಮೂಲದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ. ಫಿಸಿಯೋಥೆರಪಿ ವೈದ್ಯ ಡಾ. ಮೊಹಮ್ಮದ್ ಅಮಲ್ ಅವರು ನಂತೂರಿನಿಂದ ಪಂಪ್ವೆಲ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಾಗಿದೆ.
ಕಾಸರಗೋಡು, ಜೂ. 16 : ಬಾಲಕನೊಬ್ಬ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಕ್ಕೆಜಾಲ್ ನ ಸಾದತ್ ಎಂಬುವವರ ಪುತ್ರ ಸುಲ್ತಾನ್ (7) ಎಂದು ಗುರುತಿಸಲಾಗಿದೆ. ಮನೆ ಸಮೀಪ ಆಟವಾಡುತ್ತಿದ್ದ ಸುಲ್ತಾನ್ ನಾಪತ್ತೆಯಾಗಿ ದ್ದು, ಮನೆಯವರು ಶೋಧ ನಡೆಸಿದರೂ ಬಾಲಕನ ಸುಳಿವು ಪತ್ತೆಯಾಗಲಿಲ್ಲ. ಬಳಿಕ ಘಟನಾ ಸ್ಥಳಕ್ಕೆ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಹಾಗೂ ಸ್ಥಳೀಯರು ಶೋಧ ನಡೆಸಿ, ಮನೆಯಿಂದ 500 ಮೀಟರ್ ದೂರದ ತೋಡಿನ ಬದಿಯ ಪೊದೆಯಲ್ಲಿ ಬಾಲಕ ಸಿಲುಕಿರುವುದು ಪತ್ತೆಯಾಗಿದೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.. ಮನೆ ಸಮೀಪವೇ ತೋಡು ಹಾದುಹೋಗುತ್ತಿದ್ದು, ಆಕಸ್ಮಿಕವಾಗಿ ಬಾಲಕ ತೋಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಕೇದಾರನಾಥ, ಜೂ. 15 : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ್ ಪ್ರದೇಶದ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ನಲ್ಲಿದ್ದ 7 ಮಂದಿ ಸಾವಪ್ಪಿನದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್ನಲ್ಲಿ ಪೈಲಟ್ ಸೇರಿದಂತೆ 7 ಜನರಿದ್ದರು ಎನ್ನಲಾಗಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್ನದು ಎಂದು ಹೇಳಲಾಗುತ್ತಿದೆ. ಪೈಲೆಟ್, 23 ತಿಂಗಳ ಮಗು ಸೇರಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಟ್ಟ ಹವಾಮಾನವೇ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.ಗೌರಿಕುಂಡ್ ಮೇಲೆ ಹುಲ್ಲು ಕಡಿಯುತ್ತಿದ್ದ ನೇಪಾಳಿ ಮೂಲದ ಮಹಿಳೆಯರು ಹೆಲಿಕಾಪ್ಟರ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನವಾಗಿರುವುದನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ದೃಢಪಡಿಸಿದ್ದಾರೆ. ಸಾವಪ್ಪಿದವರೆಲ್ಲರೂ ಮಹಾರಾಷ್ಟ್ರದ ಜೈಸ್ವಾಲ್ ಕುಟುಂಬಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯ ಬೆನ್ನಲ್ಲೇ ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಕೆಟ್ಟ ಹವಾಮಾನದಿಂದಾಗಿ, ರಕ್ಷಣಾ ಕಾರ್ಯವು ತೊಂದರೆಗಳನ್ನು…
ಅಹಮದಾಬಾದ್,ಜೂ. 14 : ಗುಜರಾತ್ನ ಅಹಮದಾಬಾದ್ನಿಂದ ಇಂಗ್ಲೆಂಡ್ (ಗ್ಯಾಟ್ವಿಕ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಜೂ. 12, ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿದೆ.ಅಹಮ್ಮದಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ವರದಿಯಾಗಿದೆ. ಪತನಗೊಂಡಿರುವ ಈ ವಿಮಾನದಲ್ಲಿ12 ಸಿಬ್ಬಂದಿ ಸೇರಿದಂತೆ 242 ಜನರು ಇದ್ದರು. ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಡಾಕ್ಟರ್ ಹಾಸ್ಟೆಲ್ನ ಒಳಗೆ ನುಗ್ಗಿದೆ. ಇದರಿಂದ ವಿಮಾನದಲ್ಲಿರುವ ಪ್ರಯಾಣಿಕರು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತಿದೆ.
ಮಂಗಳೂರು,ಜೂ, 13 : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾರತದ ಲೆಕ್ಕಪರಿಶೋಧಕರ ಸಂಸ್ಥೆ ಮಂಗಳೂರು ಶಾಖೆ ವತಿಯಿಂದ ಬೋರ್ಡ್ ಆಫ್ ಸ್ಟಡೀಸ್, ಐಸಿಎಐ ಮುಂದಾಳತ್ವದಲ್ಲಿ ‘ವಿಮರ್ಶ್’ ಎಂಬ ಶೀರ್ಷಿಕೆಯಡಿಯಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ ಶುಕ್ರವಾರ ಜರಗಿತು. ಮೆಗಾ ಸಮ್ಮೇಳನವನ್ನು ಯುನಿಕೋರ್ಟ್ ಐಎನ್ಸಿ, ಸಂಸ್ಥಾಪಕ ಮತ್ತು ಮುಖ್ಯ ತಾಂತ್ರಿಕ ಅಧಿಕಾರಿ ಪ್ರಶಾಂತ್ ಶೆಣೈ ಕಟ್ಟಾಡಿ ಅವರು ಉದ್ಘಾಟಿಸಿದರು. ನಂತರ ಸಿಎ ವಿದ್ಯಾರ್ಥಿಗಳಿಗೆ ಪ್ರೆಸೆಂಟೇಶನ್ ನೀಡಿದರು. ಸಮ್ಮೇಳನದ ನಿರ್ದೆಶಕರು, ಐಸಿಎಐ ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿಎ. ಮದುಕರ್ ನಾರಾಯಣ ಹಿರೆಗಂಗಾ ಮತ್ತು ಎಸ್ಐಸಿಎಎಸ್ ಅಧ್ಯಕ್ಷ ಬಂಟ್ವಾಳ ನಿತಿನ್ ಬಾಳಿಗ ಅವರು ಮಾತಾಡಿದರು. ಈ ಸಮ್ಮೇಳನದಲ್ಲಿ ಐಸಿಎಐ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ನಡೆಯಿತು. ಹಾಗೇನೆ ವಿದ್ಯಾರ್ಥಿಗಳು, ಮಾರ್ಗದರ್ಶಕರು ಮತ್ತು ಉದ್ಯಮ ತಜ್ಞರ ಪರಸ್ಪರ ಸಂವಾದ ಕಾರ್ಯಕ್ರಮ ನಡೆಯಿತು.ವಿವಿಧ ತಜ್ಞರಿಂದ ಅಧಿವೇಶನಗಳು, ಗುಂಪು ಚರ್ಚೆಗಳು ನಡೆದವು. ಐಸಿಎಐ ಮಂಗಳೂರು ಶಾಖೆಯ ಅಧ್ಯಕ್ಷ ಪ್ರಶಾಂತ್ ಪೈ ಕೆ. ಅವರು ಪ್ರಾಸ್ತಾವಿಕವಾಗಿ…












