Author: admin

ಬೆಂಗಳೂರು, ಅ. 14 : ಬೆಂಗಳೂರಿನ ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ. ಕಳೆದ ಐದು ವರ್ಷಗಳಿಂದ ಗುಡಿಕೈಗಾರಿಕೆ ರೀತಿ ಮನೆಯಲ್ಲೇ ಅಗರಬತ್ತಿ ಕಾರ್ಖಾನೆ ನಡೆಲಾಗುತ್ತಿ ತ್ತು. ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳಿದ್ದ ಬಾಕ್ಸ್ಗಳು ಬ್ಲಾಸ್ಟ್ ಆಗಿ ರಾಸಾಯನಿಗಳು ರಸ್ತೆಗೆ ಹರಿದ ಪರಿಣಾಮ ರಸ್ತೆಗೂ ಬೆಂಕಿ ಆವರಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ 8 ಬೈಕ್ಗಳು ಸುಟ್ಟು ಭಸ್ಮವಾಗಿವೆ. ವಿಜಯನಗರ ಠಾಣೆಯ  ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಬಂಟ್ವಾಳ, ಅ.13 : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಗುರುವಾರ ನಡೆದಿದೆ. ಮೃತರನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಗುರುತಿಸಲಾಗಿದೆ. ಪಾವನ ಅವರು ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ನವದೆಹಲಿ, ಅ. 12 :ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರು ತಾಯ್ನಾಡಿಗೆ ಮರುಳುವುದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಭಾರತವು ಆಪರೇಶನ್ ಅಜಯ್ ಕಾರ್ಯಾಚರಣೆಗೆ ಚಾಲನೆ ನೀಡಿದೆ ಎಂದು ವಿದೇಶಾಂಗ ಸಚಿವರಾದ ಎಸ್. ಜೈ ಶಂಕರ್ ಬುಧವಾರ ಘೋಷಿಸಿದ್ದಾರೆ. ಮೊದಲ ವಿಮಾನದಲ್ಲಿ ಸ್ವದೇಶಕ್ಕೆ ಮರಳಲು ಬಯಸುವವರ ವಿವರವನ್ನು ಇಸ್ರೇಲ್ ನಲ್ಲಿ ರುವ ರಾಯಭಾರ ಕಚೇರಿಯು ಸಂಗ್ರಹಿಸಿದ್ದು,ಅವರಿಗೆ ಈಗಾಗಲೇ ವಿಮಾನದ ವಿವರಗಳನ್ನು ನೀಡಲಾಗಿದೆ. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಬಾರಿ ಕಚೇರಿಯಲ್ಲಿ ನೊಂದಾಯಿಸಿರುವ ಪ್ರಥಮ ಬ್ಯಾಚ್‌ ನ ನಾಗರಿಕರನ್ನು ಗುರುವಾರದಂದು ಸ್ವದೇಶಕ್ಕೆ ಕರೆತರಲಾಗುವುದು. ಇದೇ ರೀತಿಯ ಇತರೆ ನೋಂದಾಯಿತ ನಾಗರಿಕರನ್ನು ನಂತರದ ವಿಮಾನಗಳಲ್ಲಿ ಕರೆತರಲಾಗುವುದು ಎಂದು ಮಿಷನ್ ತಿಳಿಸಿದೆ.

Read More

ಉಳ್ಳಾಲ, ಅ. 11 : ಸಂಚರಿಸುತ್ತಿದ್ದ ಮೀನು ಸಾಗಾಟದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ಕೋಟೆಕಾರ್ನ ನಿವಾಸಿ ಹನೀಫ್ ಎಂಬವರ ಮಗ ಅಝ್ವೀನ್ (21)ಎಂದು ಗುರುತಿಸಲಾಗಿದೆ. ಅಝ್ವೀನ್ ಮೀನುಗಾರಿಕೆಯ ಕೆಲಸಕ್ಕೆಂದು ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಮೀನು ಸಾಗಾಟ ವಾಹನದ ಚಾಲಕ ಬ್ರೇಕ್ ಹಾಕಿದ ಪರಿಣಾಮ ಬೈಕ್ ನಿಯಂತ್ರಣ ಕಳಕೊಂಡು ಢಿಕ್ಕಿ ಹೊಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಅಝ್ವೀನ್ ಅವರನ್ನು ತಕ್ಷಣ ಆಸ್ಲತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಸವಾರ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Read More

ಬಜ್ಪೆ, ಅ. 10 : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕೊಳಂಬೆ ಗ್ರಾಮದ ಹೊಗೆಪದವಿನ ನಿವಾಸಿ ಶೋಭಾ (40) ಎಂದು ಗುರುತಿಸಲಾಗಿದೆ. ಶೋಭಾ ಅವಿವಾಹಿತೆಯಾಗಿದ್ದು, ಇವರು ಪಕ್ಕದ ಮನೆಯ ತೋಟದಲ್ಲಿದ್ದ ಅವರಣವಿಲ್ಲದ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶೋಭಾ ಅವರು ಭಾನುವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಸೋಮವಾರ ಬೆಳಗ್ಗೆ ಮನೆಯಲ್ಲಿ ಇಲ್ಲದ ಕಾರಣ ಹುಡುಕಾಗಿದಾಗ ರಾಮಕೃಷ್ಣ ಭಟ್ ಅವರ ತೋಟದಲ್ಲಿರುವ ಬಾವಿಯಲ್ಲಿ  ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಾಖಂಡ,ಅ.09: ಬಸ್ಸೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ  ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್)  ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು, ಅ 08 : ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ಬಳಿ ಶುಕ್ರವಾರ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಕುಮಾರ್ ಅವರು ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಅ. 06 : ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜಾ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆಆರ್ ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ಕಾಂಗ್ರೆಸ್ ನಾಯಕ ಮಿಥುನ್ ರೈ, ರವೂಫ್, ಶಶಿಧರ ಹೆಗ್ಡೆ, ಕವಿತಾ ಸನಿಲ್, ಮನಪಾ ಸದಸ್ಯ ಅನಿಲ್ ಕುಮಾರ್,ಟಿ.ಕೆ ಸುಧೀರ್ ಪದ್ಮರಾಜ್, ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ,ಶಾಲೆಟ್ ಪಿಂಟೋ,ಮಮತಾಗಟ್ಟಿ, ಮುತ್ತಿತರ ನಾಯಕರು ಉಪಸ್ಥಿತರಿದ್ದರು.

Read More

ಹೈದರಾಬಾದ್, ಅ. 04: ಹೋಮ್ ವರ್ಕ್ ಮಾಡಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿಯ ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ. ಹೋಮ್ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಯ ಪೋಷಕರು ಮತ್ತು ಕುಟುಂಬ ಇತರ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

Read More

ಮಂಗಳೂರು, ಅ.03: ದಕ್ಷಿಣ ಕನ್ನಡ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 154ನೇ ಜಯಂತಿ ಮಂಗಳೂರು ಪುರ ಭವನ ಬಳಿಯಿರುವ ರಾಜಾಜಿ ಪಾಕ್೯ ನಲ್ಲಿ ಸೋಮವಾರ ನಡೆಯಿತು. ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಸರಳತೆ ಮತ್ತು ಸತ್ಯದ ದಾರಿಯಲ್ಲಿ ನಡೆಯಬೇಕೆಂಬ ಮಹಾತ್ಮಾ ಗಾಂಧಿಯವರ ಪರಿಕಲ್ಪನೆ ನಮಗೆ ಆದರ್ಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ,ಮೇಯರ್ ಸುಧೀರ್ ಶೆಟ್ಟಿ ಕಣ್ಣೂರ್, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಆನಂದ್, ದ.ಕ. ಜಿಲ್ಲಾ ಪಂಚಾಯತ್ ಸಿಇಒ ಆನಂದ್, ಪೊಲೀಸ್ ಆಯುಕ್ತ ಆನುಪಮ್ ಅಗರ್ವಾಲ್, ಜಿಲ್ಲಾ ಎಸ್ಪಿ ರಿಷ್ಯಂತ್…

Read More