Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಮೇ.09 : AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ – 2025 ಅನ್ನು ಮೇ 8, 2025ರಂದು ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್ ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಲಾಯಿತು. ಬಳಿಕ ಶ್ರೀ ಉಲ್ಲಾಸ್ ಕಾಮತ್ ಅವರು ಮಾತಾಡಿದರು. ರೆ. ಫಾ. ಕಿರಣ್ ಕೊತ್ ಎಸ್ಜೆ ಅವರು ಕಾರ್ಯಕ್ರಮದಲ್ಲಿಅಧ್ಯಕ್ಷೀಯ ಭಾಷಣ ಮಾತಾಡಿದರು. ನಂತರ ವಥಿಕಾವ್ ಇಂಟರ್ನ್ಯಾಷನಲ್ ಟ್ರಾವೆಲ್ಸ್ ನ ಮಾಲಕಿಯಾದ ಮಿಸೆಸ್ ವಥಿಕಾ ಪೈ ಅವರು ಉಪನ್ಯಾಸ ನೀಡಿದರು. ಸಂಗೀತ ಮತ್ತು ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಯುವ ಉದ್ಯಮಿ ಮಾಸ್ಟರ್ ಜಿತೇನ್ ಅರುಣ್ ಅವರು ಪ್ರೇರಣಾದಾಯಕ ಪ್ರಸ್ತುತಿ ನೀಡಿದರು. ಕಾರ್ಯಕ್ರಮದಲ್ಲಿ ಫೆಡರಲ್ ಬ್ಯಾಂಕ್ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ಆಗಿರುವ ಶ್ರೀ ಅಜಯ್ ಕಾಮತ್ ಕೆ., ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಉಲ್ಲಾಸ್ ಕಾಮತ್,…
ಮಂಗಳೂರು, ಮೇ.08: ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಚೇರಿ ಹಾಗೂ ಸ್ಥಳಾಂತರ ಗೊಂಡ ಉರ್ವ ಶಾಖೆಯ ಕಚೇರಿ ಬಿಜೈ ಕಾಪಿಕಾಡ್ ರಸ್ತೆಯಲ್ಲಿರುವ ಗಿರಿ ಅಪಾರ್ಟ್ ಮೆಂಟ್ನ ಪಿಂಟೋ ಚೇಂಬರ್ಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಕುದ್ರೋಳಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ದೀಪ ಬೆಳಗಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಅವರು ಸ್ವಾವಲಂಬಿಗಳಾಗಿ ಜೀವನದಲ್ಲಿ ಸಾಧಿಸಬೇಕು ಎಂಬ ಉದ್ದೇಶದಿಂದ ಶ್ರೀ ಗುರು ಹಾರ್ದ ಸಹಕಾರಿ ಸಂಘ ಆರಂಭವಾಗಿದೆ ಎಂದರು. ಸಂಘದ ಅಧ್ಯಕ್ಷೆ ಸುಮಲತಾ ನವೀನ್ಚಂದ್ರ ಸುವರ್ಣ ಮಾತನಾಡಿ, ಆರ್ಥಿಕವಾಗಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದ ಉದ್ದೇಶವಾಗಿದೆ. 17 ವರ್ಷಗಳಿಂದ ಎಲ್ಲಾ ಸಮಾಜದವರನ್ನು ಒಟ್ಟುಗೂಡಿಸಿ ಸಂಘ ಬೆಳೆಯುತ್ತಿದೆ. ಬಜಪೆ, ತೊಕ್ಕೊಟ್ಟು ಉರ್ವ, ಕೈಕಂಬ, ಬಿ.ಸಿ.ರೋಡು,ಕಿನ್ನಿಗೋಳಿಯಲ್ಲಿ ಶಾಖೆ ಯನ್ನು ಹೊಂದಿದೆ ಎಂದರು. ಶಾಖೆಯನ್ನುಉದ್ಘಾಟಿಸಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಲ್ಯಾನ್ಸ್ಲೋಟ್…
ಮಂಗಳೂರು, ಮೇ. 07 : ಸ್ನೇಹಕೃಪಾ ಲಾಂಛನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸುವ ಗಂಟ್ ಕಲ್ವೆರ್’ ತುಳು ಚಲನ ಚಿತ್ರ ಮೇ 23ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಸುಧಾಕರ ಬನ್ನಂಜೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುನ್ನುಸುಧಾಕರ್ ಬನ್ನಂಜೆ ಅವರು ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಗಿರೀಶ್ ಪೂಜಾರಿ ಸಹಕಾರವಿದ್ದು, ಮಮತಾ ಎಸ್. ಬನ್ನಂಜೆ, ಕೃತಿ ಆರ್.ಶೆಟ್ಟಿ, ಪ್ರಾರ್ಥನ್ ಬನ್ನಂಜೆ, ಪ್ರೇರಣ್ ಬನ್ನಂಜೆ ಸಹ ನಿರ್ಮಾಪಕರಾಗಿದ್ದಾರೆ. ಸಂಗೀತ ನಿರ್ದೇಶಕ ವಿ.ಮನೋಹರ್ ಅವರು ಸಂಗೀತ ನೀಡಿದ್ದಾರೆ. ಕಲಾನಿರ್ದೇಶನ ತಮ್ಮ ಲಕ್ಷ್ಮಣ, ಸಂಕಲನ ಕೆ.ಗಿರೀಶ್ ಕುಮಾರ್, ಪ್ರಚಾರ ಬಾಳ ಜಗನ್ನಾಥ ಶೆಟ್ಟಿ,ಛಾಯಾ ಗ್ರಹಣ ಶಂಕರ್ ರವಿಕಿಶೋರ್, ಸಹ ನಿರ್ದೇಶಕರಾಗಿ ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ತು ದುಡಿದಿದ್ದಾರೆ ಎಂದರು. ನಾಯಕ ನಟನಾಗಿ ಆರ್ಯನ್ ಶೆಟ್ಟಿ, ನಾಯಕ ನಟಿಯಾಗಿ ಸ್ಮಿತಾ ಸುವರ್ಣ, ತಾರಾಗಣದಲ್ಲಿ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಉಮೇಶ್ ಮಿಜಾರು, ಸುಧೀರ್…
ಕುಂದಾಪುರ, ಮೇ. 07 : ಕಾಂತಾರಾ-2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಭಾಗದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್ ಮತ್ತು ತಂಡ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.
ಮಂಗಳೂರು, ಮೇ. 07 : ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರಸಿದ್ದ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸ್ಟಾರ್ ಶಾರುಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಅವರು ಸಹಿ ಮಾಡಿದ್ದಾರೆ. ಕರ್ನಾಟಕದ ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ ಕಾರ್ಪೊರೇಷನ್ ಕಳೆದ ಮೂರು ದಶಕಗಳಿಂದ ಹಿಲ್ ಕ್ರೆಸ್ಟ್, ಹೈ ಕ್ರೆಸ್ಟ್, ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್ ಇತ್ಯಾದಿ ಪ್ರಮುಖ ಡೆವಲಪ್ಮೆಂಟ್ಗಳೊಂದಿಗೆ ಮಂಗಳೂರಿನ ಆಕಾಶದೆತ್ತರದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಯೋಜನೆಗಳು ಆಧುನಿಕತೆ, ನಾವೀನ್ಯತೆಯಿಂದ ಕೂಡಿವೆ. ರೋಹನ್ ಕಾರ್ಪೊರೇಷನ್ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಡಾ. ರೋಹನ್ ಮೊಂತೇರೊ ಶಾರುಖ್ ಖಾನ್ ಅವರನ್ನು ಕುರಿತು,ಶಾರುಖ್ ಖಾನ್ರನ್ನು ಹೊಂದಿರುವುದು ರೋಹನ್ ಕಾರ್ಪೊರೇಷನ್ ಪಾಲುದಾರಿಕೆಗಿಂತ ಹೆಚ್ಚಿನದ್ದೆಂದು ಪ್ರತಿನಿಧಿಸುತ್ತದೆ- ಇದು ಕನಸು ಹಾಗೂ ಬದ್ಧತೆಯ ಸಮ್ಮಿಲನವಾಗಿದೆ. ಶಾರುಖ್ ಖಾನ್ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿರುವಂತೆ, ರೋಹನ್ ಕಾರ್ಪೊರೇಷನ್ ಜೀವನವನ್ನು ಮಾರ್ಪಡಿಸುವ ಮೂಲಕ ಸ್ಫೂರ್ತಿ…
ನವದೆಹಲಿ,ಮೇ.07 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿ ನಡೆಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಹಿರಂಗಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು. ಪಾಕಿಸ್ತಾನದಲ್ಲಿ ನಾಗರಿಕರ ಸಾವುನೋವುಗಳ ವರದಿಗಳಿಲ್ಲ ಎಂದರು. ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 70 ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು, ಮೇ. 07 : ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್ನಲ್ಲಿ ಮಂಗಳವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು, ಮೇ. 06 : ನಮ್ಮ ಕನಸು ಬ್ಯಾನರಿನಲ್ಲಿ ಕೆ.ಸುರೇಶ್ ನಿರ್ಮಿಸಿ, ರಮೇಶ್ ಶೆಟ್ಟಿಗಾರ್ ಬರೆದು, ನಿರ್ದೇಶಕ ಸಂತೋಷ್ ಮಾಡ ನಿರ್ದೇಶಿಸಿದ ‘ಪಿದಾಯಿ ತುಳು ಚಲನ ಚಿತ್ರ ಮೇ 9ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸಂತೋಷ್ ಮಾಡ ಅವರು ಎ.26,ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಮುಖ್ಯ ಭೂಮಿಕೆಯಲ್ಲಿ ಮಹಾಮಾಯಿ ಪಾತ್ರಿಯಾಗಿ ಕನ್ನಡದ ಖ್ಯಾತ ನಟ ಶರತ್ ಲೋಹಿತಾಶ್ವ ಅಭಿನಯಿಸಿದ್ದಾರೆ. ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ, ಪುಷ್ಪರಾಜ್ ಬೋಳಾರ್, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ, ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತಿಷ, ನಿಹಾ, ಧ್ರುವ, ಖುಷಿ, ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್ ಮತ್ತಿತ್ತರರು ಅಭಿನಯಿಸಿದ್ದಾರೆ. ಚಿತ್ರಕ್ಕೆ ರಮೇಶ್ ಶೆಟ್ಟಿಗಾರ್ ಹಾಗೂ ಡಿ.ಬಿ.ಸಿ ಶೇಖರ್ ಸಂಭಾಷಣೆ ಬರೆದಿದ್ದಾರೆ. ಛಾಯಾಗ್ರಾಹಣವನ್ನು ಉಣ್ಣೆ ಮಾಡವೂರ್, ಸುರೇಶ್ ಅರಸ್ ಸಂಕಲನ, ಅಜಯ್ ನಂಬೂದಿರಿ ಸಂಗೀತ ನೀಡಿದ್ದು, ಡಾ.ವಿದ್ಯಾಭೂಷಣ್ ಪ್ರಥಮವಾಗಿ ಚಲನಚಿತ್ರದಲ್ಲಿ ಹಾಡಿದ್ದಾರೆ. ಹಿನ್ನಲೆ…
ನವದೆಹಲಿ, ಮೇ. 06 : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧ ಇಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮಂಗಳೂರು, ಮೇ. 05 : ಭಾರ್ಗವಿ ಬಿಲ್ಡರ್ ವತಿಯಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಂಡಿರುವ ವಸತಿ ಸಮುಚ್ಚಯ ‘ಕೈಲಾಶ್’ ಎ.30, ಬುಧವಾರ ಉದ್ಘಾಟನೆಗೊಂಡಿತು. ಮಾರೂರು ಅಲ್ಯುಮಿನಿಯಂ ಸಂಸ್ಥೆಯ ಶಶಿಧರ ಪೈ ಮಾರೂರು ಅವರು ವಸತಿ ಸಮುಚ್ಚಯದ ಲಾಬಿ ಉದ್ಘಾಟಿಸಿದರು. ಸಿಎ ಸುಂದರ ಹೆಗ್ಡೆ ಅವರು ಜಿಮ್ಮೇಶಿಯಂಗೆ ಚಾಲನೆ ನೀಡಿದರು. ನಾಯಕ್ ಆ್ಯಂಡ್ ಪೈ ಅಸೋಸಿಯೇಟ್ನ ಆರ್ಕಿಟೆಕ್ಟ್ ಸುರೇಶ್ ಪೈ ಅವರು ಒಳಾಂಗಣಕ್ರೀಡಾ ಕೇಂದ್ರವನ್ನು ಹಾಗೂ ಕೈಲಾಶ್ ವಸತಿ ಸಮುಚ್ಚಯದ ರಾಯಭಾರಿ ಅರವಿಂದ ಬೋಳಾರ್ ಅವರು ಕೈಲಾಶ್ ಮಕ್ಕಳ ಆಟದ ಪ್ರದೇಶವನ್ನು ಉದ್ಘಾಟಿಸಿದರು. ಕೈಲಾಶ್’ನ ಫ್ಲ್ಯಾಟ್ ಮಾಲಕರಾದ ಗುರುರಾಜ್ ಉಡುಪ ಹಾಗೂ ವನಿತಾ ಉಡುಪ ದೀಪಪ್ರಜ್ವಲನೆ ಮಾಡಿದರು. ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ ಶುಭಹಾರೈಸಿದರು. ಪ್ರಕಾಶ್ ಬೀಡಿ ಮಾಲಕರಾದ ಆನಂದ್ ಪ್ರಭು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೆಜರ್ ಸಚ್ಚಿದಾನಂದ ಸ್ವರೂಪ್, ರಮಾ ಕಾಮತ್ ಆ್ಯಂಡ್ ಕೋ. ದ ಮಾಲಕ ಶೋಮಿತ್ ಕಾಮತ್, ದೇವಿದಯಾಲ್ ಕನ್ಸ್ಟ್ರಕ್ಷನ್ ಮಾಲಕ ಜಗದೀಶ್ ಶೆಟ್ಟಿ, ಸಿಎ ಎ.ಆರ್.ಹೆಗ್ಡೆ…












