Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜ. 04 : ಧರ್ಮಪ್ರಾಂತ್ಯ ದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಮೆರವಣಿಗೆಯು ಜ. 7, ಭಾನುವಾರ ನಗರದ ಮಿಲಾಗ್ರಿಸ್ ಚರ್ಚ್ ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ಚರ್ಚ್ ತನಕ ನಡೆಯಿತು. ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅವರು ಪ್ರವಚನ ನೀಡುತ್ತಾ, ಪರಮ ಪವಿತ್ರ ಪ್ರಸಾದದಲ್ಲಿ ನಾವು ಜಗತ್ತಿನ ಜ್ಯೋತಿಯಾಗಲು ಶಕ್ತಿಯನ್ನು ಪಡೆಯುತ್ತೇವೆ ಮತ್ತು ನಮ್ಮ ಜೀವನದ ಪ್ರತಿಯೊಂದು ಹಂತದಲ್ಲೂ ಕ್ರಿಸ್ತನ ಪ್ರೀತಿಯನ್ನು ಪ್ರತಿಬಿಂಬಿಸಲು ನಮಗೆ ಪ್ರೇರಣೆ ಸಿಗುತ್ತದೆ ಎಂದು ಹೇಳಿದರು. ಬಲಿಪೂಜೆಯ ನಂತರ, ಪವಿತ್ರ ಪ್ರಸಾದವನ್ನು ಹೊತ್ತ ಅಲಂಕೃತ ವಾಹನವು ನಗರದ ಹಂಪನಕಟ್ಟೆ, ಕ್ಲಾಕ್ ಟವರ್ ವೃತ್ತ, ಎ.ಬಿ. ಶೆಟ್ಟಿ ವೃತ್ತ ಮತ್ತು ನೆಹರು ವೃತ್ತದ ಮೂಲಕ ಸಾಗಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡರು, ರೊಸಾರಿಯೂ ಕೆಥೆಡ್ರಲ್ನಲ್ಲಿ ನಡೆದ ಆರಾಧನೆ ಮತ್ತು ಪ್ರಾರ್ಥನಾ ವಿಧಿಯನ್ನು…
ಮಂಗಳೂರು,ಜ.03 : ಉರ್ವ,ಹೊಗೆಬೈಲು ಬೈಕಾಡಿ ಪ್ರತಿಷ್ಠಾನ (ರಿ.) ವತಿಯಿಂದ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5 ರಂದು ಸೋಮವಾರ ಸಂಜೆ 4 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಭರತ್ ರಾಜ್ ಬೈಕಾಡಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೈಕಾಡಿ ಜನಾರ್ದನ ಆಚಾರ್ ಅವರ ಧೈಯೋದ್ದೇಶಗಳನ್ನು ಮುಂದುವರಿಸಿಕೊಂಡು ಹೋಗುವ ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ಸಮಾಜಸೇವೆ ಹಾಗೂ ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 5 ಜನವರಿ 2021ರಲ್ಲಿ ಬೈಕಾಡಿ ಪ್ರತಿಷ್ಠಾನವನ್ನು ಹುಟ್ಟು ಹಾಕಲಾಯಿತು. ಪ್ರತಿ ವರ್ಷದಂತೆ ಬೈಕಾಡಿಯವರ ಹುಟ್ಟುಹಬ್ಬದಂದು “ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ವಿವಿಧ ಕ್ಷೇತ್ರಗಳಲ್ಲಿ ಕೃಷಿಗೈದ ಪ್ರತಿಭಾವಂತರಿಗೆ ಬೈಕಾಡಿ ಪ್ರತಿಷ್ಠಾನವು ನೀಡುತ್ತಾ ಬಂದಿದೆ. ಇದೇ ಜನವರಿ 5, 2026ರಂದು ಬೈಕಾಡಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ಈ ಬಾರಿ ಹಿರಿಯ ಜನಪದ ಕಲಾವಿದ ರಮೇಶ್…
ಮೂಡುಬಿದಿರೆ,ಜ.02 : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಮಾರೂರು ಹೊಸಂಗಡಿ ಬಳಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕನನ್ನು ಹೊಸಂಗಡಿ ನಿವಾಸಿ ನಝೀರ್ ಎಂಬವರ ಪುತ್ರ ಝಾಹಿರ್ (13) ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಜ.01 : ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಅವರು ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ ರಾಗಿರುತ್ತಾರೆ. ವಿನಯ ಹೆಗ್ಡೆ ಅವರು 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಮಂಗಳೂರಿನ ನಿಟ್ಟೆ ಶಿಕ್ಷಣ ಸಂಸ್ಥೆಗಳು ಬೆಂಗಳೂರು ಮತ್ತು ನಿಟ್ಟೆಯಲ್ಲಿ ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳು ಸೇರಿವೆ. ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.
ಮಂಗಳೂರು,ಜ.01 : ಇಲ್ಲಿಯ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಲಯೇಸು ಪುಣ್ಯಕ್ಷೇತ್ರದ ನಿರ್ದೇಶಕರಾದ ವಂದನೀಯ ಫಾ|ಸ್ಟೀಫನ್ ಪಿರೇರಾ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ವಿಶೇಷ ಬಲಿಪೂಜೆಯನ್ನು ನೆರವೇರಿಸುವರು ಎಂದು ಹೇಳಿದರು. ಜನವರಿ 15ರಂದು ಬೆಳಿಗ್ಗೆ 10.00 ಘಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ದುಮಿಂಗ್ ಡಾಯಸ್ ನಡೆಸಿಕೊಡಲಿರುವರು. ಇದು ಮಕ್ಕಳಿಗಾಗಿ ಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ. ಮಹೋತ್ಸವದ ಸಮಾರೋಪ ಪ್ರಾರ್ಥನಾವಿಧಿ ಸಂಜೆ 6.00 ಘಂಟೆಗೆ ಮಂಗಳೂರು ಧರ್ಮಪ್ರಾಂತ್ಯದ…
ಮಂಗಳೂರು,ಜ.01 : ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆದ 9ನೇ ವರ್ಷದ ಮಂಗಳೂರು ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 09 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಸ್ಪರ್ಧೆ ಮಾಡಿದ್ದವು. ಸ್ಪರ್ಧೆಯ ಫಲಿತಾಂಶ : ಅಡ್ಡ ಹಲಗೆ ; ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68) ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83) ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ಹಗ್ಗ ಹಿರಿಯ; ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು…
ಮಂಗಳೂರು,ಡಿ. 28 : ಸಂಸದ ಬೃಜೇಶ್ ಚೌಟರ ನೇತೃತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳದಲ್ಲಿ ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತವೂ ಆಗಿದೆ. ಗ್ರಾಮೀಣ ಪ್ರದೇಶದಲ್ಲಿದ್ದ ಕಂಬಳವನ್ನು ಸಂಸದ ಕ್ಯಾ.ಬೃಜೇಶ್ ಚೌಟರು ನಗರ ಪ್ರದೇಶಕ್ಕೆ ಪರಿಚಯಿಸಿದ್ದಾರೆ. ಕಂಬಳ ಒಂದು ಗ್ರಾಮೀಣ ಕ್ರೀಡೆಯಲ್ಲ ಅದು ರಾಜ್ಯದ ಅಸ್ಥಿತೆ ಎಂದರು. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ಕ್ಯಾ.ಬೃಜೇಶ್ ಚೌಟ ಅವರು, ‘ಬ್ಯಾಕ್ ಟು ಊರು ಪರಿಕಲ್ಪನೆ’ಯು ದೇಶ ಮತ್ತು ವಿದೇಶಗಳಲ್ಲಿ ನೆಲೆಸಿರುವವ ಕರಾವಳಿಗರು ತಾಯ್ನಾಡಿಗೆ ಸಾಮಾಜಿಕ ಕೊಡುಗೆಗಳನ್ನು ನೀಡುವಂತೆ ಪ್ರೇರೇಪಿಸುವ ಕೆಲಸವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ‘ಬ್ಯಾಕ್ ಟು ಊರು’ ಪರಿಕಲ್ಪನೆಯಡಿ ಸಾಧನೆಗೈದ ಒಂಬತ್ತು ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಎಂ.ಆರ್.ಜಿ. ಗ್ರೂಪ್ ನ ಮ್ಹಾಲಕರು ಮತ್ತು ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ.…
ಮಂಗಳೂರು,ಡಿ. 27 : ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ಡಿ.30 ರಂದು ಭಕ್ತಿಪೂರ್ವಕವಾಗಿ ಆಚರಿಸಲಾಗುವುದು ಹಾಗೂ ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ ಮಾಡಲಾಗುವುದೆಂದು ಗಣೇಶ್ ನಾಗ್ವೇಕರ್ ಅವರು ದೇವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ‘ನೈಕಾದಶ್ಯಾಃ ಪರಂ ವ್ರತಂ ಎಂಬ ಪುರಾಣ ವಚನದಂತೆ ಏಕಾದಶಿ ವ್ರತವೇ ಶ್ರೇಷ್ಠವೆಂದು ಶಾಸ್ತ್ರಗಳು ಹೇಳುತ್ತವೆ. ಈ ದಿನ ವೈಕುಂಠದ್ವಾರ ತೆರೆದಿರುತ್ತದೆ ಎಂಬ ಭಕ್ತರ ನಂಬಿಕೆ ಇದೆ. ವೈಕುಂಠ ಏಕಾದಶಿ ದಿನ ಶ್ರೀ ವೆಂಕಟೇಶ್ವರ ಅಥವಾ ಶ್ರೀ ವಿಷ್ಣು ದೇವರ ದರ್ಶನ ಮಾಡಿದರೆ ಸ್ವರ್ಗಪ್ರಾಪ್ತಿ ಹಾಗೂ ಆತ್ಮಿಕ ಶಾಂತಿ ದೊರೆಯುತ್ತದೆ ಎಂಬ ಪ್ರತೀತಿ ಇದೆ ಎಂದರು. ಈ ಪವಿತ್ರ ಪರ್ವಕಾಲದಲ್ಲಿ ಲೋಕಕಲ್ಯಾಣ ಹಾಗೂ ಚೈತನ್ಯಾಭಿವೃದ್ಧಿಯ ಸಂಕಲ್ಪದೊಂದಿಗೆ ಶ್ರೀ ದೇವರ ಸಾನಿಧ್ಯದಲ್ಲಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪ್ರಶ್ನೆಯಾಗ, ಅಷ್ಟಾವಧಾನ ಸೇವೆಗಳನ್ನು ಶ್ರೀ…
ಮಂಗಳೂರು,ಡಿ. 27 : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡು ಕರೆ ‘ಮಂಗಳೂರು ಕಂಬಳ’ ಡಿ.27, ಶನಿವಾರ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ಕಂಕನಾಡಿ ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಅಧ್ಯಕ್ಷ ರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು.ಕಟೀಲು ಕ್ಷೇತ್ರದ ಅರ್ಚಕ ಅನಂತಪದ್ಮನಾಭ ಅಸ್ರಣ್ಣರು ತೆಂಗಿನ ಕೊಂಬು ಅರಳಿಸುವ ಮೂಲಕ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ಕಂಬಳ ಕ್ರೀಡಾಕೂಟವು ಸ್ಥಳೀಯ ಜಾನಪದ ಕ್ರೀಡೆಗಳನ್ನು ಸಂರಕ್ಷಿಸುವ ಸಲುವಾಗಿ ಆಯೋಜಿಸಲಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ತುಳುನಾಡಿನ ಸಂಸ್ಕೃತಿಯು ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಕೆಂಗಿನಮನೆ, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್, ಸಂಜಯ್ ಪ್ರಭು, ಜೋಯಲೆಸ್ ಡಿಸೋಜ, ವಸಂತ್ ಜೆ. ಪೂಜಾರಿ,…
ಮಂಗಳೂರು, ಡಿ.26 : ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ದೇಶ ಕಂಡ ಮಹಾನಾಯಕ ಅಟಲ್ ಜೀ ನೆನಪಿನಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಮ್ಮ ಕ್ಷೇತ್ರದ ಈ ಶಾಲೆಯಲ್ಲಿ ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ನೆಡಲಾಗುತ್ತಿದೆ. ಆ ಮೂಲಕ ದೇಶ ಕಂಡ ಅಪರೂಪದ ನಾಯಕರ ಸ್ಮರಣೆ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪ್ರಮುಖರಾದ ಪೂರ್ಣಿಮಾ, ಅಶ್ವಿತ್ ಕೊಟ್ಟಾರಿ, ಪೂರ್ಣಿಮಾ ರಾವ್, ಮೋಹನ್ ಪೂಜಾರಿ, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು, ಕಾರ್ಯಕರ್ತರು, ಶಾಲೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












