Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಫೆ.20 : ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಲಿದೆ ಎಂದುm ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರದಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆ. 24ರಂದು ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅಭಿವಂದನಾ ಭಾಷಣ ಮಾಡಲಿದ್ದಾರೆ, ಶಾಸಕ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ…
ಮಂಗಳೂರು, ಫೆ. 20 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ನಿ ಅಸೋಸಿಯೇಶನ್ ವತಿಯಿಂದ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ’ಸ್ಮತಿ ಸಂಗಮ 2026′ ಅನ್ನು ಮಾ.1ರಂದು ಮಂಗಳಗಂಗೋತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜಾರಾಮ್ ರಾವ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ,ಬೆಳಗ್ಗೆ 8.30ರಿಂದ 10.30ರವರೆಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎ.ಎಂ. ಖಾನ್, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು. 11.45ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಬಹುಮಾನ ವಿತರಣೆ ಮತ್ತುಸಮಾರೋಪ ಕಾರ್ಯಕ್ರಮ, ಅಪರಾಹ್ನ 3.30ರಿಂದ ಸಂಜೆ 4.30ರವರೆಗೆ ಹಳೆ ವಿದ್ಯಾರ್ಥಿಗಳ ವಿಭಾಗವಾರು ಸಂವಾದ ನಡೆಯಲಿದೆ.…
ಮಂಗಳೂರು,ಫೆ.19 : ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುತ್ತಿರುವ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆಯಾಗಿರುವ ‘ನಾವು ವಿಶ್ವ ಕನ್ನಡಿಗರು (ನಾವಿಕ)’ ಇದರ ಆಶ್ರಯದಲ್ಲಿ 2027ರ ಸೆಪ್ಟೆಂಬರ್ 3 ರಿಂದ 5 ನೇ ತಾರೀಕಿನವರೆಗೆ ಅಮೇರಿಕಾದ ಅಟ್ಲಾಂಟಾ ರಾಜ್ಯದ, ಸೌತ ಕನ್ವೆನ್ಸನ್ ಸೆಂಟರ್ ಅಟ್ಲಾಂಟಾದಲ್ಲಿ,”ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ ನಡೆಯಲಿದೆ ಎಂದು ನಾವಿಕ ಸಂಘಟನೆಯ ಅಧ್ಯಕ್ಷೆಯಾದ ಡಾ|ಅನ್ನಪೂರ್ಣ ಭಟ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾವಿಕ ಸಂಘಟನೆಯು ಈ ವರ್ಷದ ನವೆಂಬರ್ ತಿಂಗಳಿನಲ್ಲಿ ದುಬೈಯಲ್ಲಿ ಕನ್ನಡ ಸಮ್ಮೇಳನವನ್ನು ನಡೆಸಲು ಈಗಾಗಲೇ ರೂಪುರೇಷೆಯನ್ನು ಹಾಕಲಾಗಿದೆ ಎಂದರು. ಸಂಘವು ವಿಶ್ವದ ಬೇರೆ ಬೇರೆ ಭಾಗಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ, ಆರ್ಥಿಕತೆ, ಸಾಮಾಜಿಕ ಸುಧಾರಣೆ, ಉದ್ಯಮಶೀಲತೆ, ಪರಿಸರ, ಶಿಕ್ಷಣ, ಮುಂತಾದ ಕ್ಷೇತ್ರಗಳಲ್ಲಿ ದುಡಿದು ಅನುಭವ ಮತ್ತು ಆಲೋಚನೆ ಇರುವ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕನ್ನಡ ಮತ್ತು ಕನ್ನಡಿಗರ ಭವಿಷ್ಯದ ಕಾರ್ಯಸೂಚಿಯನ್ನು ಸಿದ್ಧಪಡಿಸುವ ಉದ್ದೇಶವಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಐಎಂಎ ಜಿಲ್ಲಾ…
ಬೆಂಗಳೂರು, ಫೆ. 18 : ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವು ತನ್ನ ಮೊಟ್ಟಮೊದಲ ವಿದ್ಯಾರ್ಥಿವೇತನ ದಿನಾಚರಣೆಯಾದ “ರೂಟ್ಸ್ ಟು ವಿಂಗ್ಸ್” ಅನ್ನು ಶುಕ್ರವಾರದಂದು ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮರ್ಕ್ ಕೆಜಿಎಎ ಸಂಸ್ಥೆಯ ಆರ್ ಅಂಡ್ ಡಿ ವಿಭಾಗದ ಮುಖ್ಯಸ್ಥರಾದ ಡಾ. ಮಾರ್ಕಸ್ ಓಬ್ಕಿರ್ಚರ್ ಅವರು ಮಾತನಾಡುತ್ತಾ, ವಿದ್ಯಾರ್ಥಿವೇತನವು ವಿದ್ಯಾರ್ಥಿಗಳ ಮೇಲಿಟ್ಟಿರುವ ನಂಬಿಕೆಯಾಗಿದ್ದು, ಬುದ್ಧಿವಂತಿಕೆ ಮತ್ತು ಪ್ರಾಮಾಣಿಕತೆಯಿಂದ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಅವರು ಕರೆ ನೀಡಿದರು. ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರೆ. ಫಾದರ್ ಡಯೋನಿಶಿಯಸ್ ವಾಜ್ ಅವರು ಅಧ್ಯಕ್ಷೀಯ ಭಾಷಣ ದಲ್ಲಿ, ವಿದ್ಯಾರ್ಥಿಗಳನ್ನು ಮೌಲ್ಯಾಧಾರಿತ ಶಿಕ್ಷಣದ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು ಸಂಸ್ಥೆಯ ಧ್ಯೇಯ ವಾಗಿದೆ ಎಂದು ಹೇಳಿದರು. ಕುಲಪತಿಗಳಾದ ಡಾ. ಫಾದರ್ ವಿಕ್ಟರ್ ಲೋಬೋ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಸಂಚಾಲಕರು ಹಾಗೂ ಹಣಕಾಸು ಅಧಿಕಾರಿಗಳಾದ ಫಾದರ್ ಅರುಣ್ ಪ್ರಶಾಂತ್ ಡಿಸೋಜಾ ಅವರು ವಂದನಾರ್ಪಣೆ ಸಲ್ಲಿಸಿದರು. ಈ ವಿಶೇಷ ದಿನದಂದು ವಿವಿಧ ವರ್ಗಗಳ…
ಮಂಗಳೂರು,ಫೆ.17: ಎಸ್ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮಾತಾಡಿ, ನಮ್ಮ ಬ್ಯಾಂಕ್ ಬೇರೆ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು ಹಿಂದಿನ ವರ್ಷಗಳಲ್ಲಿ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಾ ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರು ಮಾತಾಡಿ, ಐಎಂಪಿಎಸ್ ಮೂಲಕ ಶೀಘ್ರವಾಗಿ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ…
ಮಂಗಳೂರು, ಫೆ.16 : ಮಂಗಳೂರಿನ ಶಕ್ತಿನಗರದ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ವು ಫೆ.18 ರಿಂದ 24 ರವರೆಗೆ ನಡೆಯಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯರು ಹಾಗು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ಮೋನಪ್ಪ ಭಂಡಾರಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.22 ರಂದು ಶಕ್ತಿನಗರದ ಮುತ್ತಪ್ಪ ಕ್ಷೇತ್ರದಲ್ಲಿ ತಂತ್ರಿ ಬ್ರಹ್ಮಶ್ರೀ ಪೂಂತೋಟತ್ತಿಲ್ ಪುಡವರ್ ಪರಮೇಶ್ವರನ್ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು. ಫೆ.18 ರಂದು ಬೆಳಿಗ್ಗೆ 9 ಗಂಟೆಗೆ ಉಗ್ರಾಣದಲ್ಲಿ ಗಣಹೋಮ, ಸಾಯಂಕಾಲ 4 ಗಂಟೆಗೆ ಹಸಿರು ಹೊರೆಕಾಣಿಕೆ, ಸಾಯಂಕಾಲ 6.15 ಕ್ಕೆ ಉಗ್ರಾಣ ಉದ್ಘಾಟನೆ, 6.30 ಕ್ಕೆ ಕುಣಿತ ಭಜನೆ,6.45 ಕ್ಕೆ ದ್ವಾರ ಉದ್ಘಾಟನೆ ಮತ್ತು 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಒಡಿಯೂರ್ ಗುರುದೇವದತ್ತ ಸಂಸ್ಥಾನಮ್ ನ…
ಬೆಂಗಳೂರು,ಫೆ. 15 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವಾದಲ್ಲಿ ಐದು ಮಂದಿ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ನಡೆದಿದೆ. ಅತೀ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 43 ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ಅಪಘಾತವಾದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲದ ಜಿಂದಾಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತವಾದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಲಲಿತ್ (22) ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವರನ್ನು ತಕ್ಷಣ ನೆಲಮಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.…
ಮಂಗಳೂರು,ಫೆ, 14 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34 ನೇ ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ 36 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ ಅವರು, ಈ ಭಾಗದ ರಸ್ತೆಯು ಸಂಪೂರ್ಣ ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆಯಾದ ಕಾವ್ಯ ನಟರಾಜ ಆಳ್ವರವರು ಅನೇಕ ಬಾರಿ ಮನವಿ ಮಾಡಿದ್ದರು. ಸತತ ಪ್ರಯತ್ನದ ನಂತರ ಇದೀಗ ಮರಳಿ ಕಾಮಗಾರಿಗೆ ಚಾಲನೆ ದೊರೆಯುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ಕಾಮಗಾರಿಯಿಂದ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಟರಾಜ್ ಆಳ್ವ, ಪದ್ಮನಾಭ ನಾಯಕ್, ನವೀನ್ ಶೆಣೈ, ಯೋಗೇಶ್ ಶೆಣೈ, ವರುಣ್ ಅಂಬಟ್, ಅಲ್ಪಸಂಖ್ಯಾತ ಮೋರ್ಚಾದ ಟೀನಾ, ಪೂರ್ಣಿಮಾ, ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಉಪ್ಪಿನಂಗಡಿ, ಫೆ. 13 : ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮೇಲ್ಭಾಗದ ರಸ್ತೆ ಯಿಂದ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಹೇಮಚಂದ್ರ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೆಯಂಗಡಿ, ಫೆ. 10 : ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ.4ರಿಂದ ಮಾ.8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಬೆಲ್ಮಡ, , ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಸುನೀಲ್ ಆಳ್ವ,ದಿವಾಕರ ಸಾಮಾನಿ,ಕಸ್ತೂರಿ ಪಂಜ,ಚಂದ್ರ ಶೇಖರ ನಾನಿಲ್,ಗೀತಾ ಪಿ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದಯ ಸುವರ್ಣ ಅಗ್ನಿದ ಕಳಿಯ, ವಿನೋದ್ ಸಾಲ್ಯಾನ್ ಬೆಳ್ಳಾಯರು,ವಿನೋದ್ ಬೋಳೂರು ದಿನಕರ ಎಸ್. ಹಳೆಯಂಗಡಿ, ಗೀತಾಂಜಲಿ ಸುವರ್ಣ,ಕಿರಣ್ ಗುರಿಕಾರ ಮೊದಲಾದವರು ಉಪಸ್ಥಿತರಿದ್ದರು. ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.












