Author: admin

ಮಂಗಳೂರು, ಮೇ. 05 : ನಾಗರಾಜ್ ಶಂಕರ್ ನಿರ್ದೇಶನದ, ಮುದೇ ಗೌಡ್ರು ನವೀನ್ ಕುಮಾರ್ ಆರ್.ಒ. ಹಾಗೂ ತೆಲಗಿ ಮಲ್ಲಿಕಾರ್ಜುನಪ್ಪ ನಿರ್ಮಾಣದ ‘ಮರಳಿ ಮನಸಾಗಿದೆ’ ಕನ್ನಡ ಚಿತ್ರ ಜುಲೈಯಲ್ಲಿ ಬಿಡುಗಡೆ ಗೊಳ್ಳಲಿದೆ ಎಂದು ನಿರ್ದೇಶಕ ನಾಗರಾಜ್, ಶಂಕರ್ ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಚಿತ್ರದಲ್ಲಿ ಐದು ಹಾಡುಗಳಿದ್ದು, ಬಿಡುಗಡೆಗೊಂಡಿರುವ ಎರಡು, ಹಾಡುಗಳಿಗೆ ಉತ್ತಮ ಸ್ಪಂದನೆ ದೊರೆತ್ತಿದೆ. ಮೂರನೇ ಹಾಡು ಏನಿದು ರೋಮಾಂಚನ ಉಡುಪಿ ಯಲ್ಲಿ ಮೇ,3ರಂದು ಬಿಡುಗಡೆಗೊಂಡಿದೆ. ಚಿತ್ರದ ನಾಯಕ ನಾಗಿ ಅರ್ಜುನ್ ವೇದಾಂತ್ ನಾಯಕಿಯಾಗಿ ಸ್ಮೃತಿ ವೆಂಕಟೇಶ್ಅಭಿನಯಿಸಿದ್ದಾರೆ ಅವರು, ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ನಿರ್ಮಾಪಕ ನವೀನ್ ಕುಮಾರ್ ಮಾತಾನಾಡಿ ಜುಲೈ- ಆಗಸ್ಟ್ ನಡುವೆ ಚಿತ್ರ ಬಿಡುಗಡೆ ಗೊಳ್ಳಲಿದ್ದು, ಪೂರ್ವಭಾವಿಯಾಗಿ ರಾಜ್ಯಾದ್ಯಂತ ಪ್ರಚಾರ ಕಾರ್ಯ ನಡೆದಿದೆ. ಚಿತ್ರದಲ್ಲಿ ನಟ ಭೋಜರಾಜ ವಾಮಂಜೂರು, ಟಿ.ಎಸ್.ನಾಗಾಭರಣ, ನಿರೀಕ್ಷಾ ಶೆಟ್ಟಿ, ಮಾನಸಿ ಸುಧೀರ್, ಸೀರುಂಡೆ ರಘು, ಸ್ವಾತಿ, ರೋಹನ್ ಅಭಿನಯಿಸಿದ್ದಾರೆ  ಎಂದರು. ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನವಿದೆ. ವಿನು ಮನಸು…

Read More

ಬೆಳ್ತಂಗಡಿ, ಮೇ. 04 : ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಿಯಾರ್ ದೂರು ನೀಡಿದ್ದಾರೆ.ಪೊಲೀಸರು ಶಾಸಕರ ಭಾಷಣದ ವೀಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Read More

ಮಂಗಳೂರು, ಮೇ 05 : ನಿಧಿಲ್ಯಾಂಡ್ ಇನ್ ಫ್ರಾಸ್ಟಕ್ಟರ್ ಡೆವಲಪರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನವರ ವಸತಿ ಸಮುಚ್ಚಯ ‘ಪೂರ್ವಜ್’ ಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಮಲ್ಲಿಕಟ್ಟೆ ಶಿವಬಾಗ್ ಬಳಿ ಬುಧವಾರ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮಹಾನಗರಪಾಲಿಕೆ ಪ್ರಕಾಶ್ ಸಾಲಿಯಾನ್, ನವೀನ್ ಡಿ’ಸೋಜ, ಮಾಜಿ ಸದಸ್ಯರಾದ ಸಿಎಶಾಂತಾರಾಮ ಶೆಟ್ಟಿ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥ ಬಿ.ಕೆ.ವಿಶ್ವೇಶ್ವರಿ, ಲೋಟಸ್ ಪ್ರಾಪರ್ಟೀಸ್ನ ಜಿತೇಂದ್ರ ಕೊಟ್ಟಾರಿ, ನಿಶಾಂತ್ ಶೇಟ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಉಪ್ಪುಂದ ಗಣೇಶ್ ಭಟ್ ಹಾಗೂ ಸಂತ ಆ್ಯಗ್ನೆಸ್ ಕಾನ್ವೆಂಟ್ನ ಸುಪೀರಿಯ ಸಿlಮರಿಯಾ ರೂಪ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. ನಿಧಿಲ್ಯಾಂಡ್ ಬಿಲ್ಲರ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಸನಿಲ್, ಅವರ ತಂದೆ ಯು.ಮಾಧವ ಸುವರ್ಣ, ನಿಧಿಲ್ಯಾಂಡ್ ನಿರ್ದೇಶಕರೂ ಆದ ಪ್ರಶಾಂತ್ ಅವರ ಸೋದರಿ ರೇವತಿ ಸನಿಲ್…

Read More

ಛತ್ತೀಸ್ಗಢ, ಮೇ. 04 : ವ್ಯಕ್ತಿವೊಬ್ಬ ಸ್ಕೂಟರ್ ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು   ಮೃತಪಟ್ಟ   ಘಟನೆ ಅಂಬಿಕಾಪುರದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಸಂಗಮ್ ಚೌಕ್‌ನಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದ್ರಜಿತ್ ಸಿಂಗ್ ಬಾಬ್ರಾ (35 ) ಎಂಬವರು ಮೃತಪಟ್ಟ  ವ್ಯಕ್ತಿ. .ಇಂದ್ರಜಿತ್ ಸಿಂಗ್  ಅವರು ತನ್ನ ವಾಹನವನ್ನು ಪ್ರಾರಂಭಿಸಲು ಪ್ರಯತ್ನಿಸುವಾಗ ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾನೆ.

Read More

ಮಂಗಳೂರು, ಮೇ. 04 : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಬ್ದುಲ್ ಸಪ್ವಾನ್, ನಿಯಾಜ್ ಮತ್ತು ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಬಂಧಿತ ಆರೋಪಿಗಳು ಎಂದು ವಿವರ ನೀಡಿದ್ದಾರೆ.

Read More

ಮಂಗಳೂರು, ಮೇ. 03 : ದುರಸ್ತಿ ಕಾರ್ಯಕ್ಕಾಗಿ ಕಳೆದೊಂದು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಹಳೆಯ ಸೇತುವೆಯನ್ನು ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆ ಗಳಲ್ಲಿ ಒಂದು ಸೇತುವೆಯನ್ನು ಏ.1 ರಿಂದ ದುರಸ್ತಿ ಕಾರ್ಯಕ್ಕಾಗಿ ಮುಚ್ಚಲಾಗಿತ್ತು. ಹಾಗಾಗಿ ವಾಹನಗಳ ಓಡಾಟಕ್ಕೆ ಹೊಸ ಸೇತುವೆಯ ಒಂದು ಬದಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.ಇದರಿಂದಾಗಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಇಂದಿನಿಂದ ಎರಡೂ ಸೇತುವೆಗಳು ಈಗ ಕೇರಳ ಮತ್ತು ಮಂಗಳೂರು ಕಡೆಗೆ ಹೋಗುವ ವಾಹನಗಳ ಸಂಚಾರಕ್ಕೆ ಲಭ್ಯವಿದೆ.

Read More

ಮಂಗಳೂರು, ಮೇ.1 : ನಿಧಿಲ್ಯಾಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ನೂತನ ಏಷಾರಾಮಿ ವಸತಿ ಸಮುಚ್ಚಯ ಯೋಜನೆ ‘ಸ್ಕೈ ಗಾರ್ಡನ್’ಗೆ  ಭೂಮಿ ಪೂಜೆ ಬುಧವಾರ ನೆರವೇರಿತು. ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಪುರೋ ಹಿತ ಕೃಷ್ಣ ಭಟ್, ಲೇಡಿಹಿಲ್ ಚಚ್ ೯ನ ಧರ್ಮಗುರು ವಂ| ಲಾನ್ಸನ್ ಪಿಂಟೊ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. ವಸತಿ ಸಮುಚ್ಚಯದ ಬ್ರೋಷರ್ ಅನ್ನು ನಿಧಿಲ್ಯಾಂಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಬಿಡುಗಡೆಗೊಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಮಂಗಳೂರು ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥೆ ಬಿ.ಕೆ.ವಿಶ್ವೇಶ್ವರಿ, ಉದ್ಯಮಿ ಡಿ.ಬಿ.ಮೆಹ್ರ ಆರ್ಕಿಟೆಕ್ಟ್  ಧರ್ಮರಾಜ್, ಭೂಮಾಲಕರಾದ ಎಫ್.ಸಿ.ಪಿಂಟೊ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ ಮಾಲಕ ಪ್ರಶಾಂತ್ ಸನಿಲ್, ಮತ್ತಿತರರು ಶಿಲಾನ್ಯಾಸ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆಡಳಿತ ನಿರ್ದೇಶಕ…

Read More

ಮಂಗಳೂರು, ಎ.30 : ಉದ್ಯಮಿ ಮತ್ತು ಸಮಾಜ ಸೇವಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ. ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬ ಸಂಸ್ಥೆಯನ್ನು 2007 ರಲ್ಲಿ ಸ್ಥಾಪಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಅದರ ಶಾಖೆಗಳನ್ನು ತೆರೆದು ತಮ್ಮ ಸೇವೆಯನ್ನು ವಿಸ್ತರಿಸಿರುತ್ತಾರೆ. ಬೊಂಡಾಲ ಸಚ್ಚಿದಾನಂದ ಶೆಟ್ಟರು 2012 ರಲ್ಲಿ ಶಂಭೂರು ಸರಕಾರಿ ಪ್ರೌಢಶಾಲೆಯನ್ನು ದತ್ತು ಪಡೆದುಕೊಂಡು ತಮ್ಮ ಹಣದಿಂದ ಹಾಗೂ ಇತರರ ನೆರವಿನಿಂದ ಅದರ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಿದ್ದಾರೆ. ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಎಂಬ ಸೇವಾ ಸಂಸ್ಥೆಯನ್ನು ಸ್ಥಾಪಿಸಿರುವ ಬಿ.ಎಸ್. ಶೆಟ್ಟರು ಅದರ ಮೂಲಕ ವಿವಿಧ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ…

Read More

ಮಂಗಳೂರು, ಎ.29  : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ ಅವರು, ಹದಿ ಹರೆಯದಲ್ಲೇ ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಛಲ ಮೂಡಿತು.  ಹಾಗಾಗಿ ಬಡತನ ಇದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿದೆ.ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಛಲ, ಶಿಸ್ತು, ಕಠಿಣ ಪರಿಶ್ರಮ ಅಗತ್ಯ. ಎಂದು ಅವರು ಹೇಳಿದರು. ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ , ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಉಪಸ್ಥಿತರಿದ್ದರು. ಪ್ರೆಸ್ಕ್ಲಬ್ ಪ್ರಧಾನ  ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ.ಭಟ್  ಕಾರ್ಯಕ್ರಮ ನಿರೂಪಿಸಿದರು.

Read More

ಸುರತ್ಕಲ್, ಎ.29 : ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಾಗಮಂಡಲ ಸೇವೆ ಎ.25, ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನಾಗಪಾತ್ರಿ ರಾಮಮೂರ್ತಿ ಬೆಳ್ಳಿಪಾಡಿ ರಮಾನಂದ ಭಟ್ಟರ ನೇತೃತ್ವದಲ್ಲಿ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗ ಮಧೂರು ಅವರ ಡಮರು ಮೇಳದಲ್ಲಿ ಬಾಲಕೃಷ್ಣ ವೈದ್ಯ ಮತ್ತು ನಟರಾಜ ವೈದ್ಯರ ನಾಗಕನ್ನಿಕಾ ನೃತ್ಯ ಸೇವೆಯೊಂದಿಗೆ ನಾಗ ಮಂಡಲ ಸೇವೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಡಾ.ಶಿವ ಪ್ರಸಾದ್ ತಂತ್ರಿ ದೇರೆಬೈಲ್ ನೇತೃತ್ವ ವಹಿಸಿದ್ದ ರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಯಾದವ ಕೋಟ್ಯಾನ್ ಪೆರ್ಮುದೆ, ಕಾರ್ಯಾ ಧ್ಯಕ್ಷ ಪ್ರಶಾಂತ್ ಮೂಡಾಯಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ.ಸದಾಶಿವ ಐತಾಳ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಕುಮಾರ್ ಭಂಡಾರಿ, ಎ.ವಾದಿರಾಜ, ಜಿ.ಕೆ. ಸುಂದರ್, ಪ್ರಧಾನ ಅರ್ಚಕ ಸುನಿಲ್ ಭಟ್, ಅನುರಾಧಾ, ಹೇಮಾವತಿ, ಹೊನ್ನಯ್ಯ ಕೋಟ್ಯಾನ್, ದಯಾನಂದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More