Author: admin

ಮಂಗಳೂರು, ಮೇ 24: ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ, ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025ನೇ ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಬೊಂಡಾಲ ಸರಕಾರಿ ಶಾಲೆಯನ್ನು ದತ್ತು ಪಡೆದು ‘ದಿ.ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಯಭಟ…

Read More

ಬೆಂಗಳೂರು,ಮೇ.23 : ‘ಮಾರ್ಕೋ’ ಚಿತ್ರದ ನಿರ್ಮಾಪಕ ಶರೀಫ್ ಮೊಹಮ್ಮದ್ (ಕ್ಯೂಬ್ಸ್ ಎಂಟರ್‌ಟೈನ್‌ಮೆಂಟ್ಸ್) ಮತ್ತೊಂದು ಅದ್ದೂರಿ ಚಿತ್ರಕ್ಕೆ ಕೈ ಹಾಕಿದ್ದಾರೆ.  ಆಕ್ಷನ್ ಥ್ರಿಲ್ಲರ್ ‘ಕಾಟ್ಟಾಲನ್’ ಚಿತ್ರದಲ್ಲಿ ಆಂಟೋನಿ ವರ್ಗೀಸ್ (ಪೆಪೆ) ನಾಯಕರಾಗಿದ್ದು, ಪಾಲ್ ಜಾರ್ಜ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ಯಾನ್-ಇಂಡಿಯನ್ ಮಟ್ಟದಲ್ಲಿ ತಯಾರಾಗುತ್ತಿದೆ. ಈ ಚಿತ್ರದ ಇನ್ನೊಂದು ಮುಖ್ಯ ಅಂಶವೆಂದರೆ, ‘ಕಾಂತಾರ 2’ ಚಿತ್ರಕ್ಕೆ ಸಂಗೀತ ನೀಡಿದ್ದ ಜನಪ್ರಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಶರೀಫ್ ಮೊಹಮ್ಮದ್ ಅವರ ಹೊಸ ಸಹಯೋಗ. ಅಜನೀಶ್ ಅವರ ಉತ್ತಮ ಸಂಗೀತವು ‘ಕಾಟ್ಟಾಲನ್’ ಚಿತ್ರದ ಪ್ರಭಾವವನ್ನು ಮತ್ತಷ್ಟು ಹೆಚ್ಚಿಸಲಿದೆ. ಚಿತ್ರದ ಮೊದಲ ನೋಟದ ಪೋಸ್ಟರ್ ಈಗಾಗಲೇ ಬಿಡುಗಡೆಗೊಂಡಿದೆ. ಪೋಸ್ಟರ್ ನಲ್ಲಿ ಮಳೆಯಲ್ಲಿ ಒದ್ದೆಯಾಗಿ, ಬಿದ್ದಿರುವ ಶವಗಳು ಮತ್ತು ಆನೆಯ ದಂತಗಳ ನಡುವೆ ನಿಂತಿರುವ ಪೆಪೆ ಕಾಣಬಹುದು.’ಜೈಲರ್’, ‘ಲಿಯೋ’, ‘ಜವಾನ್’ ಮತ್ತು ‘ಕೂಲಿ’ ಚಿತ್ರಗಳ ಫಾಂಟ್‌ಗಳನ್ನು ವಿನ್ಯಾಸಗೊಳಿಸಿದ ಐಡೆಂಟ್ ಲ್ಯಾಬ್ಸ್, ‘ಕಾಟ್ಟಾಲನ್’ ಚಿತ್ರದ ಶೀರ್ಷಿಕೆಯ ವಿನ್ಯಾಸವನ್ನು ಮಾಡಿದ್ದಾರೆ. ಕೊಡಲಿಗಳು ಮತ್ತು ದಂತಗಳನ್ನು ಬಳಸಿ ರಚಿಸಲಾದ ಈ ಶೀರ್ಷಿಕೆ,…

Read More

ಮಂಗಳೂರು, ಮೇ 22 : ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆ ಮತ್ತು ಪುಳಿಂಚ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಯಕ್ಷಗಾನದ ನವರಸ ನಾಯಕ ದಿವಂಗತ ಪುಳಿಂಚ ರಾಮಯ್ಯ ಶೆಟ್ಟಿಯವರ ಸರಣಾರ್ಥ ಪಂಚಮ ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರಂದು ಬಂಟ್ವಾಳ ತಾಲೂಕು ಬಾಳ್ತಿಲದ ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆಯಲ್ಲಿ ಜರಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ್ ಶೆಟ್ಟಿ ಪುಳಿಂಚ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು , ಸಮಾರಂಭದಲ್ಲಿ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ ಸಂಜಯ ಕುಮಾರ್ ಶೆಟ್ಟಿಗೋಣಿಬೀಡು ಮತ್ತು ಮಿಜಾರು ತಿಮ್ಮಪ್ಪ ಅವರು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಯನ್ನು ಸ್ವೀಕರಿಸುವರು. ಖ್ಯಾತ ಹಾಸ್ಯಗಾರ ದಿ| ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ನೀಡಲಾಗುವುದು ಎಂದರು. ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ…

Read More

ಬೆಂಗಳೂರು,ಮೇ.22 : ಸ್ಯಾಮಿಸ್ ಡ್ರೀಮ್‌ಲ್ಯಾಂಡ್ ಸಂಸ್ಥೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರ ಹೃದಯಭಾಗದ ನಡುವೆ ನಿರ್ಮಾಣವಾಗುತ್ತಿರುವ ಉನ್ನತ ಮಟ್ಟದ ನಿವಾಸಗಳಿಗಾಗಿ ಎಂಬೆಸಿ ಬೊಲೆವಾರ್ಡ್, ಗೋದ್ರೇಜ್, ಅಸೆಟ್ಜ್, ಪೂರ್ವಂಕರ ಮುಂತಾದ ಪ್ರತಿಷ್ಠಿತ ಬೃಹತ್ ನಿರ್ಮಾಣ ಪಾಲುದಾರರೊಂದಿಗೆ ಸ್ಯಾಮಿಸ್ ಡ್ರೀಮ್‌ಲ್ಯಾಂಡ್ ಕೈಜೋಡಿಸಿದೆ. ಅಂತರಾಷ್ಟ್ರೀಯ ಹಾಗೂ ಅಮೇರಿಕಾದ ವಾಸ್ತುಶಿಲ್ಪ ಶೈಲಿಯಲ್ಲಿ ವಿನ್ಯಾಸಗೊಂಡಿರುವ ಈ ಯೋಜನೆಯು ಪ್ರಸ್ತುತ ಅತ್ಯಂತ ಬೇಡಿಕೆಯಲ್ಲಿದೆ. ನೋಂದಣಿಗಾಗಿ ಈಗ ಅವಕಾಶ ಕಲ್ಪಿಸಲಾಗಿದೆ. ಸ್ಯಾಮಿಸ್ ಡ್ರೀಮ್‌ಲ್ಯಾಂಡ್ ತನ್ನ ಎರಡು ಹೆಗ್ಗುರುತಿನ ವಸತಿ ಯೋಜನೆಗಳಾದ   ನೇಚರ್ಸ್ ಬೊಲೆವಾರ್ಡ್ ಮತ್ತು ಸನ್‌ರೈಸ್ ಬೊಲೆವಾರ್ಡ್   ಇವುಗಳನ್ನು ನಿನ್ನೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಚಾನೆಲ್ ಪಾಲುದಾರರ ಹಾಗೂ ಮಾಧ್ಯಮ ಪ್ರತಿನಿಧಿಗಳ ಸಮಾವೇಶದಲ್ಲಿ ಹೆಮ್ಮೆಯಿಂದ ಲೋಕಾರ್ಪಣೆಗೊಳಿಸಿತು. ಈ ಯೋಜನೆಗಳ ಹಿಂದಿನ ದಾರ್ಶನಿಕರಾದ ಶ್ರೀ ಸ್ಯಾಮಿ ನನ್ವಾನಿ ಅವರು, ನಗರ ವಿಕಾಸದ ಕುರಿತಾದ ತಮ್ಮ ದೀರ್ಘಕಾಲೀನ ಮುನ್ನೋಟವನ್ನು ಸಭಿಕರೊಂದಿಗೆ ಹಂಚಿಕೊಂಡರು. ನೇಚರ್ಸ್ ಬೊಲೆವಾರ್ಡ್ ಮತ್ತು ಸನ್‌ರೈಸ್ ಬೊಲೆವಾರ್ಡ್ಗಳ ಮೂಲಕ  ನಾವು ಕೇವಲ ಗೃಹಗಳನ್ನು ನಿರ್ಮಿಸುತ್ತಿಲ್ಲ  ಬದಲಾಗಿ  ಪ್ರಕೃತಿ ಮತ್ತು ಆಧುನಿಕತೆಗಳು…

Read More

ಪುತ್ತೂರು, ಮೇ. 21 : ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮೇ.18,ಭಾನುವಾರ ತಡರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಎಂಬಲ್ಲಿನ ನಿವಾಸಿ ಸುದೀಪ್(36) ಎಂದು ಗುರುತಿಸಲಾಗಿದೆ. ಶಾಮಿಯಾನ ಸಾಗಿಸುತ್ತಿದ್ದ ಲಾರಿಯು ರಸ್ತೆ ಬದಿಯಲ್ಲಿ ಯಾವುದೇ ಮುನ್ನೆಚ್ಚರಿಕಾ ಫಲಕಗಳಿಲ್ಲದೆ ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದ್ದು, ಜೊತೆಗೆ ತುಂತುರು ಮಳೆಯಿಂದಾಗಿ, ಲಾರಿ ನಿಲ್ಲಿಸಿದ್ದ ಬಗ್ಗೆ ಅರಿವಿಗೆ ಬಾರದೆ ಸುದೀಪ್ ಚಲಾಯಿಸುತ್ತಿದ್ದ ಬೈಕ್ ನೇರವಾಗಿ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

Read More

ಮಂಗಳೂರು, ಮೇ.21 : ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಗೊಂಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರಾಗಿರುವ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ಈ ಆಯ್ಕೆ ನಡೆದಿದೆ. ಇತ್ತೀಚೆಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ..ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೇಶಕರು ಆಯ್ಕೆ ಗೊಂಡಿದ್ದು, ಬಳಿಕ ಡಾ.ಎಂಎನ್ ಆರ್ ಬಳಗದ ರವಿರಾಜ ಹೆಗ್ಡೆ, ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಇದೀಗ ದೇವಿಪ್ರಸಾದ್ ಶೆಟ್ಟಿಯವರು ಕೂಡ…

Read More

ಮಂಗಳೂರು, ಮೇ 20 : ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಇದರ ನೇತೃತ್ವದಲ್ಲಿ ಬೆಸೆಂಟ್ ಸಮೂಹ ಸಂಸ್ಥೆ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಭಾಗಿತ್ವದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಮೇ 25ರಂದು ಬೆಳಗ್ಗೆ 9ಕ್ಕೆ ಕೊಡಿಯಾಲ್‌ಬೈಲ್ನ ಬೆಸೆಂಟ್ ಮಹಿಳಾ ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಮಾಜಿ ಗವರ್ನರ್ ಡಾ.ಬಿ.ದೇವದಾಸ ರೈ ಅವರು ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ಅವರು ಶ್ರವಣದ ಯಂತ್ರಕ್ಕೆ ಆಗುವ ವೆಚ್ಚದ ಶೇ.40 ಮೊತ್ತವನ್ನು ಭರಿಸಲಾಗುತ್ತಿದ್ದು, ರೋಗಿಗಳು ಇವರ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದರು. ಜರ್ಮನ್ ತಯಾರಿಕೆ ಕಂಪನಿಯ ಕಿವಿ ಯಂತ್ರಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದ್ದು,ಈ ಕಿವಿ ಯಂತ್ರಗಳಿಗೆ 2 ವರ್ಷಗಳ ಅಂತರರಾಷ್ಟ್ರೀಯ ವಾರಂಟಿ ಸಹ…

Read More

ಬೆಂಗಳೂರು, ಮೇ. 19 : ನಗರದಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಸಾವನ್ನಪ್ಪಿದ  ಘಟನೆ ನಡೆದಿದೆ. ಘಟನೆಯು ನಗರದ ವೈಟ್ ಫೀಲ್ಡ್ ನ  ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಮೃತ ಮಹಿಳೆ ಯನ್ನು ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಎಂದು ಗುರುತಿಸಲಾಗಿದೆ. ವೈಟ್ ಫೀಲ್ಡ್ ಇಂಡರ್ಷಿಯಲ್ ಏರಿಯಾದ ಇಸ್ಮೋ ಮೈಕ್ರೋ ಸಿಸ್ಟ್ ಕಂಪನಿಯಲ್ಲಿ ಮೃತ ಶಶಿಕಲಾ ಫಸ್ಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿ ಕೆಲವೇ ಹೊತ್ತಿನಲ್ಲೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಶಶಿಕಲಾ ಕೆಲಸ ಮಾಡಿಕೊಂಡಿದ್ದ ಕಂಪನಿಯಿಂದಲೇ ಪರಿಹಾರಕ್ಕೆ ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಿಂದ ಸೂಚನೆ ಹಿನ್ನೆಲೆ ಮೃತ ಮಹಿಳೆಯ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಧನ ಘೋಷಿಸಲಾಗಿದೆ ಎಂದು ವರದಿಯಾಗಿದೆ.

Read More

ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್ ಅವರು ಶನಿವಾರ ಉದ್ಘಾಟಿಸಿದರು. ಬೆಳಗ್ಗೆ ಮೂರು ಮಾರ್ಗದಿಂದ ನಟ ರಮೇಶ್ ಅರವಿಂದ್ ಅವರನ್ನು ತೆರೆದ ಕಾರಿನ ಮೂಲಕ ಮೆರವಣಿಗೆಯಲ್ಲಿ ಚೆಂಡೆ, ಹುಲಿವೇಷದೊಂದಿಗೆ ಶೋ ರೂಂವರೆಗೆ ಕರೆತರಲಾಯಿತು. ಮುಳಿಯ ಸಂಸ್ಥೆಯ ಚೇರ್ಮನ್ ಆಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ,ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹಾಗೂ 7 ಕುಟುಂಬಸ್ಥರು ನಟ ರಮೇಶ್ ಅರವಿಂದ ಅವರನ್ನು ಬರಮಾಡಿಕೊಂಡರು. ಸಭಾ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ರಾಯಭಾರಿ ಹಾಗೂ ನಟ ರಮೇಶ್ ಅರವಿಂದ್ ಅವರು ಮಾತಾಡಿ, ಮುಳಿಯ ಗೋಲ್ಡ್ ಆಂಡ್ ಡೈಮಂಡ್ ಆಭರಣಗಳ ಮಳಿಗೆ ಗ್ರಾಹಕರ ಗಮನ ಸೆಳೆಯಲು ಕಾರಣ ಇಲ್ಲಿ ದೊರೆಯುವ ಉತ್ತಮ ಗುಣಮಟ್ಟದ ಚಿನ್ನಾಭರಣಗಳು. ಇವತ್ತು ಊರಿನ 81 ದೇವಸ್ಥಾನಗಳಿಂದ ದೀಪಗಳನ್ನು ಇಲ್ಲಿ ತಂದು ಬೆಳಗಿಸಿದ್ದಾರೆ. ದೇವಸ್ಥಾನಗಳಿಂದ ದೀಪಗಳನ್ನು…

Read More

ಹೈದರಾಬಾದ್, ಮೇ. 18 : ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ರವಿವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡ ಘಟನೆಯ ಬಗ್ಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಲವಾರು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Read More