Author: admin

ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ  ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ, ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದ ಕಾರಣ ಅವರ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿಲ್ಲ. ಇದು ಅವರು ಕಾಣೆಯಾದ ಮೊದಲ ಘಟನೆಯಲ್ಲ; ಈ ಹಿಂದೆಯೂ ಒಮ್ಮೆ ಕಾಣೆಯಾಗಿದ್ದರು. ಮಾರ್ಚ್ 22, 2025 ರಂದು  ಗಿರಿ ಅವರನ್ನು ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ಗೆ ದಾಖಲಿಸಲಾಯಿತು. ಈಶ್ವರ್ ಮಲ್ಪೆ ಅವರು  ಗಿರಿ ಅವರನ್ನು ಸ್ನೇಹಾಲಯಕ್ಕೆ ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮಗ್ರ ಚಿಕಿತ್ಸೆಯ ನಂತರ, ಏಪ್ರಿಲ್ 11,…

Read More

ಉಳ್ಳಾಲ, ಮೇ 18: ಉಳ್ಳಾಲ ದರ್ಗಾ ಉರೂಸ್ ಪ್ರಯುಕ್ತ ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ ದರ್ಗಾ ವಠಾರದಲ್ಲಿ ನಡೆಯಿತು.ಉಳ್ಳಾಲ ಖಾಝಿ ಇಂಡಿಯನ್ ಉಳ್ಳಾಲ ಗ್ಯಾಂಡ್ ಮುಷ್ಟಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಅರೆಬಿಕ್ ಕಾಲೇಜು ಶಿಕ್ಷಣ ಪಡೆದು ತೇರ್ಗಡೆ ಹೊಂದಿದ 33 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಸಯ್ಯದ್ ಹಾಮಿದ್ ಇಂಬಿಚ್ಚಿ ತಂಙಳ್ ದುಆ ನೆರವೇರಿಸಿದರು. ಸಮಸ್ತ ಕೇರಳ ಸುನ್ನಿ ಜಂಇಯ್ಯತುಲ್ ಉಲಮಾ ಅಧ್ಯಕ್ಷ ರಈಸುಲ್ ಉಲಮಾ ಇ. ಸುಲೈಮಾನ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪೊನ್ಮಲ ಅಬ್ದುಲ್ ಖಾದಿರ್ ಮುಸ್ಲಿಯಾರ್ ಸನದುದಾನ ಭಾಷಣ ಮಾಡಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಯ್ಯಿದ್ ಅತ್ತಾವುಲ್ಲ ತಂಙಳ್ ಆಶೀರ್ವಚನ ನೀಡಿದರು.ಯು.ಟಿ. ಖಾದರ್ ಮಾತನಾಡಿ, ಉಳ್ಳಾಲ ಶೈಕ್ಷಣಿಕ ಕೇಂದ್ರವಾಗಿ ಬೆಳೆಯಬೇಕು. ಇದಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ. ದರ್ಗಾ ಸೌಹಾರ್ದದ ಕೇಂದ್ರ ಆಗಬೇಕು ಎಂದರು. ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿ ಆದರೆ ಎಷ್ಟು ಸಂತೋಷ ಆಗುತ್ತದೆಯೋ…

Read More

ಕಾರ್ಕಳ, ಮೇ.17 : ಬೃಹತ್ ಗಾತ್ರದ ಬಾವಿಯನ್ನು ಸ್ವಚ್ಛಗೊಳಿಸಲು ಇಳಿದು ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ಅಗ್ನಿ ಶಾಮಕ ದಳದವರು ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಸಾಣೂರು ಕ್ಯಾಶ್ಯೂ ಬಳಿಯ ಹಿತ್ತಲಿನ 35 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸಲು ಹರೀಶ್ ಆಚಾರ್ಯ (55) ಎಂಬವರು  ಶುಕ್ರವಾರ ಬೆಳಿಗ್ಗೆ 11.55 ವೇಳೆಗೆ ಇಳಿದಿದ್ದರು. ಬಳಿಕ ಮೇಲಕ್ಕೆ ಬರಲು ಸಾಧ್ಯವಾಗದೆ ಸಿಲುಕಿದ್ದು , ಅಪಾಯದಲ್ಲಿದ್ದ ಅವರನ್ನು ಕಾರ್ಕಳ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆ ಎತ್ತಿ  ರಕ್ಷಣೆ ಮಾಡಿದ್ದಾರೆ.

Read More

ಮಂಗಳೂರು, ಮೇ 16 : ಫಳ್ನೀರ್ ನ ಲುಲು ಸೆಂಟರ್‌ನಲ್ಲಿರುವ ದಾರುಲ್ ಇಲ್ಮ್ ಮದ್ರಸ ತನ್ನ 20ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಅದರ ಹಳೆಯ ಕಟ್ಟಡವನ್ನು ನವೀಕರಿಸಿ, ಮೇ 17 ರಂದು ಸಂಜೆ 4.30ಕ್ಕೆ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ದಾರುಲ್ ಇಲ್ಡ್ ಸ್ಥಾಪಕ ರಫೀಉದ್ದೀನ್ ಕುದ್ರೋಳಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುದ್ರೋಳಿ ಜಾಮಿಯ ಮಸೀದಿ ಖಾಝಿ ಮುಷ್ಠಿ ಮುತಾಹ ಹುಸೈನ್ ಕಾಸಿಮಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಸಿ.ಪಿ. ಹಬೀಬ್ ರಹ್ಮಾನ್, ಎಸ್.ಎಂ. ರಶೀದ್, ಅಬ್ದುಸ್ಸಲಾಮ್ ಪುತ್ತಿಗೆ, ಅಬ್ದುಲ್ ಖಾದರ್ ಬಾವ, ಹೈದರ್ ಪರ್ತಿಪ್ಪಾಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಧ್ಯಾಪಕ ಮುಹಮ್ಮದ್ ಸೈಫುದ್ದೀನ್, ಶೇಖ್ ಅಹ್ಮದ್, ಮುಹಮ್ಮದ್ ಆಸಿಫ್, ಅಬೂಬಕರ್, ಆರ್ಶ್‌ಲಾನ್ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿ ಹಡಗು ಮುಳುಗಿದೆ. ಆರು ಮಂದಿ ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿದ ವೇಳೆ ಎಲ್ಲಾಸಿಬ್ಬಂದಿ ಹಡಗಿನಿಂದ ಸಣ್ಣ ಡಿಂಗಿ ಬೋಟಿನ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ.ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

Read More

ಉಡುಪಿ, ಮೇ. 16 : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್‌ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ,…

Read More

ಉಡುಪಿ, ಮೇ. 15 : ನೂತನವಾಗಿ ನಿರ್ಮಿಸಲಾದ ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಶಿರಿಬೀಡುವಿನ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಗುರವಾರ ಉದ್ಘಾಟನೆಗೊಂಡಿತು. ಬಾರ್ಕೂರು ಮಹಾ ಸಂಸ್ಥಾನದ ಪೀಠಾಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವಸಂತೋಷ ಭಾರತೀ ಗುರೂಜಿ ಅವರು ರಿಬ್ಬನ್ ತುಂಡರಿಸುವ ಮೂಲಕ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಮನೋಹರ್ ಎಸ್. ಶೆಟ್ಟಿ ನೇತೃತ್ವದ ಸಾಯಿರಾಧಾ ಗ್ರೂಪ್ ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಉತ್ತಮ ಸಂಸ್ಥೆಯಾಗಿ ಬೆಳೆದಿದೆ. ಸಾಯಿರಾಧಾ ಗ್ರೂಪ್ನ ಕಾರ್ಪೊರೇಟ್ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಲಿ ಎಂದು ಶುಭಹಾರೈಸಿದರು. ಬಳಿಕ ಟಿ ಎಂ ಎ ಪೈ ಫೌಂಡೆಶನ್ ನ ಅಧ್ಯಕ್ಷರಾದ ಟಿ ಅಶೋಕ್ ಪೈ ಮಾತನಾಡಿ, ಮನೋಹರ ಶೆಟ್ಟಿಯವರು ಸಮಾಜದಲ್ಲಿ ಸಾಯಿರಾಧ ಎನ್ನುವ ಸಂಸ್ಥೆಯನ್ನು ನಿರ್ಮಿಸಿ ಹಲವಾರು ಜನರಿಗೆ ಉದ್ಯೋಗವನ್ನು ನೀಡಿದವರಾಗಿದ್ದಾರೆ. ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ…

Read More

ಮಂಗಳೂರು, ಮೇ. 15: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ರಾಷ್ಟ್ರೀಯ ಸಮಿತಿಯಲ್ಲಿ ಬೇರೆ ಬೇರೆ ರಾಜ್ಯಗಳ 4 ಮಂದಿ ಸ್ಪೀಕರ್ ಮಾತ್ರ ಇರಲಿದ್ದಾರೆ. ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾದ್ದಾರೆ. ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದಾರೆ.

Read More

ಉಳ್ಳಾಲ,ಮೇ.14 :: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ರಾಜ್ಯ ಸರ್ಕಾರವು ವಿಧಾನಸಭಾ ಸ್ಪೀಕರ್ ಅವರ ಬೇಡಿಕೆಯನ್ನು ಪುರಸ್ಕರಿಸಿ ಮೂರು ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಅವರು ಖುತ್ ಬುಝಮಾನ್ ಹಝತ್ ಅಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಬಳ್ ಅವರ ಹೆಸರಿನಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಪ್ರಯುಕ್ತ ಮೇ.10, ಶನಿವಾರ ಭೇಟಿ ನೀಡಿ ದರ್ಗಾ  ಝಿಯಾರತ್ ನಡೆಸಿದ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಕ್ಷಾಂತರ ಜನರು ಉಳ್ಳಾಲ ದರ್ಗಾ ಉರೂಸ್ ನಲ್ಲಿ ಗೆ ಆಗಮಿಸುತ್ತಾರೆ. ಇಲ್ಲಿನ ಉರೂಸ್ ನ ಕೊನೆಯ ದಿನ ಭಕ್ತಾದಿಗಳಿಗೆ ನೀಡಲಾಗುವ ಅನ್ನದಾನ ವ್ಯವಸ್ಥೆಗೆ 50 ಕುರಿಗಳನ್ನು ನಾನು ದಾನ ನೀಡುತ್ತೇನೆ ಎಂದು ಅವರು ಹೇಳಿದರು. ಸಂಸ್ಥೆಗೆ ಹಣ ಕೊಡುವುದು ಮುಖ್ಯ ಅಲ್ಲ. ಸಂಸ್ಥೆಯು ಸಾಮಾಜಿಕ, ಶೈಕ್ಷಣಿಕವಾಗಿ ಎಷ್ಟು ಜನರನ್ನು ಪರಿವರ್ತನೆ ಮಾಡುತ್ತದೆ ಎಂಬುದು ಮುಖ್ಯ ಆಗಿರುತ್ತದೆ. ಈ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ದರ್ಗಾ ಸಮಿತಿ ನೀಡಬೇಕು…

Read More

ಮಂಗಳೂರು,ಮೇ.14 : ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ನಿರ್ಮಿಸಿರುವ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದ ಲೈಟ್ ಹೌಸ್ ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ. ಲೈಟ್ ಹೌಸ್ ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದೆ. ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದರು. ಶೋಭರಾಜ್ ಪಾವೂರು, ಪ್ರಕಾಶ್ ತೂಮಿನಾಡು, ಮಾನಸಿ ಸುಧೀರ್, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್…

Read More