Subscribe to Updates
Get the latest creative news from FooBar about art, design and business.
Author: admin
ಉಡುಪಿ, ಮೇ. 13 : ನಾಯಿ ಅಡ್ಡ ಬಂದು ಬೈಕ್ ರಸ್ತೆ ಬದಿಯ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಮೃತರನ್ನು ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್ ಅವರ ಪುತ್ರ ಶೇಖ್ ಅಬ್ದುಲ್ ಸೈಫಾನ್ ಎಂದು ಗುರುತಿಸಲಾಗಿದೆ. ತಂದೆ ಮತ್ತು ಮಗ ಪಡುಬಿದ್ರಿಯಲ್ಲಿ ಪುಸ್ತಕಗಳನ್ನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಇದ್ದಕ್ಕಿದ್ದಂತೆ ನಾಯಿಯೊಂದು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯಲ್ಲಿದ್ದ ಮೈಲಿಗಲ್ಲಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಬಿದ್ದ ಪರಿಣಾಮ ಸೈಫಾನ್ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು, ಮೇ. 12 : ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯಲ್ಲಿ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ನಂದಿಕೂರಿನಲ್ಲಿ ಮೇ 11ರಂದು ನಡೆದಿದೆ. ಮೃತಮಗುವನ್ನು ಕಾಪು ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರ ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ ಮಗುವಿಗೆ ಊಟ ಮಾಡಿಸಿದ ನಂತರ ಸೌಮ್ಯ ಅವರು ಕೈ ತೊಳೆಯಲು ಹೊರಗೆ ಹೋಗಿ ಹಿಂತಿರುಗಿದಾಗ, ವಾಸುದೇವ ಕಾಣೆಯಾಗಿದ್ದ. ತಕ್ಷಣ ಸಭಾಂಗಣದಲ್ಲಿದ್ದ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಹುಡುಕಾಟ ನಡೆಸಿದಾಗ ವಾಸುದೇವನ ದೇಹವು ಪಕ್ಕದಲ್ಲಿದ್ದ ದೇವಾಲಯದ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿತು.ಮಗುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು,ಮೇ.12 : ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು. ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು…
ಮಂಗಳೂರು, ಮೇ 11 : ಬಂಗ್ರ ಕೂಳೂರುನಲ್ಲಿರುವ ಗೋಲ್ಫಿಂಚ್ ಸಿಟಿ ಮೈದಾನದಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವ-ಸಹಾಯ ಗುಂಪುಗಳ ‘ರಜತ ಸಂಭ್ರಮ–2025’ ಸಮಾವೇಶ ಶನಿವಾರ ನಡೆಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ರಜತ ಸಂಭ್ರಮ–2025’ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತಾನಾಡಿ, ಇಪ್ಪತೈದು ವರ್ಷಗಳ ಹಿಂದೆ ನವೋ ದಯ ಸ್ವ-ಸಹಾಯ ಗುಂಪುಗಳ ಆರಂಭದ ದೀಪ ಬೆಳಗಿಸಿದ್ದೆ. ಆ ಜ್ಯೋತಿ ಇಂದು ಲಕ್ಷಾಂತರ ತಾಯಂದಿರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಲಕ ಸಮಾಜದ ಶಕ್ತಿಯನ್ನಾಗಿಸಿದೆ. ನನ್ನ ರಾಜಕೀಯ ಜೀವನ ಆರಂಭವಾಗಿದ್ದೂ ಸಹಕಾರಿ ರಂಗದಿಂದ. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯದ, ಸಹಕಾರಿ ಸಂಘಗಳಲ್ಲಿ ಅತೀ ಹೆಚ್ಚು ಸಾಲಗಳು ಮರುಪಾವತಿದೆ. ಡಾ|ಎಂ.ಎನ್.ರಾಜೇಂದ್ರ ಕುಮಾರ್ | ಅವರ ನೇತೃತ್ವದಲ್ಲಿ ಮಹಿಳೆಯರು ಸ್ವಾವಲಂಬನೆಯ ದಾರಿಕಂಡು ಕೊಂಡಿರುವುದು ಶ್ಲಾಘನಾರ್ಹ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ ಮಾತನಾಡಿ, ನವೋದಯ ಗ್ರಾಮೀಣ ವಿಕಾಸ ಸಂಸ್ಥೆ…
ಮಂಗಳೂರು, ಮೇ11 : ಎಂ.ಸಿ.ಸಿ. ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಮೇ 10, ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಶ್ರೀ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಲಾಯಿತು. ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತಾದ ಸಾಕ್ಷಚಿತ್ರವನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ವಾಗತ ಭಾಷಣದಲ್ಲಿ ಶ್ರೀ ಅನಿಲ್ ಲೋಬೊ ಅವರುಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಬ್ಯಾಂಕಿನ ಸಮಾನತೆಯನ್ನು ವಿವರಿಸಿದರು. ವಂ. ಫಾ| ಡೆನಿಸ್ ಡೆಸಾ ಅವರ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅವರನ್ನೂ ಸ್ಪೂರ್ತಿಯ ಮೂಲ ಮತ್ತು ವೃತ್ತಿಪರತೆಯ ಸಂಕೇತವೆಂದು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ವಂ.ಫಾ| ಡೆನಿಸ್ ಡೆಸಾ ಮಾತನಾಡಿ, ಎಂ.ಸಿ. ಸಿ. ಬ್ಯಾಂಕು ಪ್ರಗತಿಯತ್ತ ಸಾಗಲು ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಕಾರಣವಾಗಿರುತ್ತಾರೆ. ಸಿಬ್ಬಂದಿಗಳು…
ಮಂಗಳೂರು, ಮೇ10 : ಗುರುಪುರ ಫಲ್ಗುಣಿ ನದಿತಟದ ಗೋಳಿದಡಿ ಗುತ್ತುವಿನಲ್ಲಿ ಶ್ರೀ ಗುರು ಮಹಾಕಾಲೇಶ್ವರ ದೇವರ ಏಕ ಶಿಲಾ ಮೂರ್ತಿಯ ಪ್ರತಿಷ್ಠೆ, ಬ್ರಹ್ಮ ಕಲಶ ಮಹೋತ್ಸವ ಸಂಭ್ರಮ ವೇದಕೃಷಿಕ ಬ್ರಹ್ಮರ್ಷಿ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಮೇ 15, 16, 17ರಂದು ನಡೆಯಲಿದೆ ಎಂದು ಬ್ರಹ್ಮ ಕಲಶ ಸಂಭ್ರಮ ಸಮಿತಿಯ ಅಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದ ಪ್ರಥಮ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಏಕೈಕ ಮೂರ್ತಿ ಇದು. ವೇದೋಕ್ತ ವಿಧಿವಿಧಾನಗಳಿಂದ ಪ್ರತಿಷ್ಠಾ ಪಂಚಕಲ್ಯಾಣಯುಕ್ತ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ. 2.5 ಎಕ್ರೆ ಪ್ರದೇಶದಲ್ಲಿ 22.5 ವಿಸ್ತೀರ್ಣದ ಪೀಠ, 23 ಅಡಿ ಎತ್ತರದ ವಿಗ್ರಹ ಸ್ಥಾಪನೆಯಾಗಿದೆ.ತೀರ್ಥಬಾವಿ ಸ್ನಾನಘಟ್ಟದ ವ್ಯವಸ್ಥೆ, ಧ್ಯಾನ ಕೇಂದ್ರ ನಿರ್ಮಿಸಲಾಗಿದೆ ಎಂದರು. ಮೇ 15 ರಂದು ಗುರುವಾರ ಶುದ್ಧಿ ಪ್ರಕ್ರಿಯೆ, ವಾಸ್ತುಶುದ್ಧಿ ಸಹಿತ ನಾನಾ ವೇದೋಕ್ತ ವಿಧಿವಿಧಾನಗಳು ಪ್ರಾರಂಭಗೊಳ್ಳಲಿದೆ. ಮೇ 16 ರ…
ಮಂಗಳೂರು,ಮೇ.09 : AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ – 2025 ಅನ್ನು ಮೇ 8, 2025ರಂದು ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್ ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಲಾಯಿತು. ಬಳಿಕ ಶ್ರೀ ಉಲ್ಲಾಸ್ ಕಾಮತ್ ಅವರು ಮಾತಾಡಿದರು. ರೆ. ಫಾ. ಕಿರಣ್ ಕೊತ್ ಎಸ್ಜೆ ಅವರು ಕಾರ್ಯಕ್ರಮದಲ್ಲಿಅಧ್ಯಕ್ಷೀಯ ಭಾಷಣ ಮಾತಾಡಿದರು. ನಂತರ ವಥಿಕಾವ್ ಇಂಟರ್ನ್ಯಾಷನಲ್ ಟ್ರಾವೆಲ್ಸ್ ನ ಮಾಲಕಿಯಾದ ಮಿಸೆಸ್ ವಥಿಕಾ ಪೈ ಅವರು ಉಪನ್ಯಾಸ ನೀಡಿದರು. ಸಂಗೀತ ಮತ್ತು ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಯುವ ಉದ್ಯಮಿ ಮಾಸ್ಟರ್ ಜಿತೇನ್ ಅರುಣ್ ಅವರು ಪ್ರೇರಣಾದಾಯಕ ಪ್ರಸ್ತುತಿ ನೀಡಿದರು. ಕಾರ್ಯಕ್ರಮದಲ್ಲಿ ಫೆಡರಲ್ ಬ್ಯಾಂಕ್ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ಆಗಿರುವ ಶ್ರೀ ಅಜಯ್ ಕಾಮತ್ ಕೆ., ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಉಲ್ಲಾಸ್ ಕಾಮತ್,…
ಮಂಗಳೂರು, ಮೇ.08: ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಚೇರಿ ಹಾಗೂ ಸ್ಥಳಾಂತರ ಗೊಂಡ ಉರ್ವ ಶಾಖೆಯ ಕಚೇರಿ ಬಿಜೈ ಕಾಪಿಕಾಡ್ ರಸ್ತೆಯಲ್ಲಿರುವ ಗಿರಿ ಅಪಾರ್ಟ್ ಮೆಂಟ್ನ ಪಿಂಟೋ ಚೇಂಬರ್ಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಕುದ್ರೋಳಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ದೀಪ ಬೆಳಗಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಅವರು ಸ್ವಾವಲಂಬಿಗಳಾಗಿ ಜೀವನದಲ್ಲಿ ಸಾಧಿಸಬೇಕು ಎಂಬ ಉದ್ದೇಶದಿಂದ ಶ್ರೀ ಗುರು ಹಾರ್ದ ಸಹಕಾರಿ ಸಂಘ ಆರಂಭವಾಗಿದೆ ಎಂದರು. ಸಂಘದ ಅಧ್ಯಕ್ಷೆ ಸುಮಲತಾ ನವೀನ್ಚಂದ್ರ ಸುವರ್ಣ ಮಾತನಾಡಿ, ಆರ್ಥಿಕವಾಗಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದ ಉದ್ದೇಶವಾಗಿದೆ. 17 ವರ್ಷಗಳಿಂದ ಎಲ್ಲಾ ಸಮಾಜದವರನ್ನು ಒಟ್ಟುಗೂಡಿಸಿ ಸಂಘ ಬೆಳೆಯುತ್ತಿದೆ. ಬಜಪೆ, ತೊಕ್ಕೊಟ್ಟು ಉರ್ವ, ಕೈಕಂಬ, ಬಿ.ಸಿ.ರೋಡು,ಕಿನ್ನಿಗೋಳಿಯಲ್ಲಿ ಶಾಖೆ ಯನ್ನು ಹೊಂದಿದೆ ಎಂದರು. ಶಾಖೆಯನ್ನುಉದ್ಘಾಟಿಸಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಲ್ಯಾನ್ಸ್ಲೋಟ್…
ಮಂಗಳೂರು, ಮೇ. 07 : ಸ್ನೇಹಕೃಪಾ ಲಾಂಛನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸುವ ಗಂಟ್ ಕಲ್ವೆರ್’ ತುಳು ಚಲನ ಚಿತ್ರ ಮೇ 23ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಸುಧಾಕರ ಬನ್ನಂಜೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುನ್ನುಸುಧಾಕರ್ ಬನ್ನಂಜೆ ಅವರು ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಗಿರೀಶ್ ಪೂಜಾರಿ ಸಹಕಾರವಿದ್ದು, ಮಮತಾ ಎಸ್. ಬನ್ನಂಜೆ, ಕೃತಿ ಆರ್.ಶೆಟ್ಟಿ, ಪ್ರಾರ್ಥನ್ ಬನ್ನಂಜೆ, ಪ್ರೇರಣ್ ಬನ್ನಂಜೆ ಸಹ ನಿರ್ಮಾಪಕರಾಗಿದ್ದಾರೆ. ಸಂಗೀತ ನಿರ್ದೇಶಕ ವಿ.ಮನೋಹರ್ ಅವರು ಸಂಗೀತ ನೀಡಿದ್ದಾರೆ. ಕಲಾನಿರ್ದೇಶನ ತಮ್ಮ ಲಕ್ಷ್ಮಣ, ಸಂಕಲನ ಕೆ.ಗಿರೀಶ್ ಕುಮಾರ್, ಪ್ರಚಾರ ಬಾಳ ಜಗನ್ನಾಥ ಶೆಟ್ಟಿ,ಛಾಯಾ ಗ್ರಹಣ ಶಂಕರ್ ರವಿಕಿಶೋರ್, ಸಹ ನಿರ್ದೇಶಕರಾಗಿ ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ತು ದುಡಿದಿದ್ದಾರೆ ಎಂದರು. ನಾಯಕ ನಟನಾಗಿ ಆರ್ಯನ್ ಶೆಟ್ಟಿ, ನಾಯಕ ನಟಿಯಾಗಿ ಸ್ಮಿತಾ ಸುವರ್ಣ, ತಾರಾಗಣದಲ್ಲಿ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಉಮೇಶ್ ಮಿಜಾರು, ಸುಧೀರ್…
ಕುಂದಾಪುರ, ಮೇ. 07 : ಕಾಂತಾರಾ-2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಭಾಗದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್ ಮತ್ತು ತಂಡ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.












