Author: admin

ಮಂಗಳೂರು, ಮಾ. 28 : ಮಾ.29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ 43ನೇ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಉಪಕುಲಪತಿ ಪ್ರೊ.ಧರ್ಮ ಅವರು ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಘಟಿಕೋತ್ಸವಕ್ಕೆ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘ ಉಪಾಧ್ಯಕ್ಷರು ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿರುವರು. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉದ್ಯಮಿಗಳಾದ ಎಂ.ಎನ್.ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿ ಅವರು ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು. ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 64 (ಕಲಾ ನಿಕಾಯ-12, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-38, ವಾಣಿಜ್ಯ ನಿಕಾಯ – 11, ಶಿಕ್ಷಣ ನಿಕಾಯ – 03) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್…

Read More

ನವದೆಹಲಿ, ಮಾ.28 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿದ ದಿನ ತಾರೀಕು ಏ.14 ರಂದು ದೇಶದಲ್ಲಿರುವ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಜೆಯನ್ನು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ರಜೆಯನ್ನು ಘೋಷಿಸಲಾಗಿದೆ. ಗೌರವಾನ್ವಿತ ಪ್ರಧಾನಿ ಜಿ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. ದೇಶದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏ. 14 ರ ಸೋಮವಾರ ರಜೆ ಇರಲಿದೆ. ಈ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.

Read More

ನೇಪಿಟಾವ್, ಮಾ.28 : ಮ್ಯಾನ್ಮಾರ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 60 ಮಂದಿ ಮೃತಪಟ್ಟಿದ್ದು, 250 ಮಂದಿ ಗಾಯಗೊಂಡಿದ್ದಾರೆ.ಮ್ಯಾನ್ಮಾರ್ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮ್ಯಾನ್ಮಾರ್ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದಿದೆ.ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದೆ.ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್ ‘ತುರ್ತುಸ್ಥಿತಿ’ ಘೋಷಿಸಿದ್ದಾರೆ ಮತ್ತು ಅಂತರರಾಷ್ಟ್ರೀಯ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು, ಮಾ. 27 : ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ. 26ರಿಂದ ಎ. 7ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಅಂಗವಾಗಿ ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹೊರೆಕಾಣಿಕೆ ಸಂಗ್ರಹ ಕೇಂದ್ರ ತೆರೆಯಲಾಗಿದೆ. ಮಾ. 27ರಂದು ಬೆಳಗ್ಗೆ 8.30ಕ್ಕೆ ಶರವು ದೇವಳದಿಂದ ಮಧೂರಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಧುಸೂದನ ಆಯಾ ರ್ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 26ರಂದು ಬೆಳಗ್ಗೆ 10ಕ್ಕೆ ಮಹಾದ್ವಾರ ರಾಜಗೋಪುರ ಮತ್ತು ರಾಜಾಂಗಣ ಲೋಕಾರ್ಪ ಣೆಗೊಳ್ಳಲಿದೆ. ಅಪರಾಹ್ನ 3 ಗಂಟೆಗೆ ಮಧೂರು ಪಂಚಾಯತ್ ವ್ಯಾಪ್ತಿಯ ಹೊರೆಕಾಣಿಕೆ ಕ್ಷೇತ್ರಕ್ಕೆ ಸಮರ್ಪಣೆ ಆಗಲಿದೆ. ಬಳಿಕ ಬೇರೆ ಬೇರೆ ಪ್ರದೇಶಗಳಿಂದ ಹೊರಕಾಣಿಕೆ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಇದೆ.ಬ್ರಹ್ಮಕಲಶೋತ್ಸವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 4 ವೇದಿಕೆಗಳಲ್ಲಿ ಒಟ್ಟು 345 ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ ಎಂದರು. ದಾನಿಗಳಾದ ಸದಾಶಿವ ಶೆಟ್ಟಿಕೂಳೂರು…

Read More

ಮಂಗಳೂರು, ಮಾ.26:ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ನರ್ಸಿಂಗ್ ಫೌಂಡೇಶನ್ ವಿಭಾಗ, ಯೆನೆಪೋಯ ನರ್ಸಿಂಗ್ ಕಾಲೇಜು ದೇರಳಕಟ್ಟೆ ಇವುಗಳ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಕ್ಷಯರೋಗ ದಿನವನ್ನು ಮಾ.24ರಂದು ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವು ಜಾಥಾದ ಮುಖಾಂತರ ಪ್ರಾರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್ ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು ಕ್ಷಯರೋಗ ಕೊನೆಗಾಣಿಸಲು ಕಾರ್ಯನಿರ್ವಹಿಸುವ ಎಲ್ಲರನ್ನೂ ಪ್ರಶಂಶಿಸಿದರು. ಯೆನೆಪೋಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ. ವಿಜಯಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ ಎಸ್ ಗಂಗಾಧರ ಸೋಮಯಾಜಿ ,ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಲೀನಾ ಕೆಸಿ, ನರ್ಸಿಂಗ್, ಫೌಂಡೇಶನ್ ವಿಭಾಗದ ಮುಖ್ಯಸ್ಥ ಪ್ರೊ. ಶಶಿಕುಮಾರ್ ಜವಡಗಿ ಮತ್ತು ಸಹಪ್ರಾಧ್ಯಾಪಕ ಡಾ. ಹೆಝಿಲ್ ರೀಮ್ ಬರ್ಬೋಜ…

Read More

ಮಂಗಳೂರು, ಮಾ.25: ರೋಹನ್ ಕಾರ್ಪೊರೇಷನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ನಗರದ ಅತ್ತಾವರ-ಬಾಬುಗುಡ್ಡದಲ್ಲಿ ನಡೆಯಿತು. ಮಿಲಾಗ್ರಿಸ್ ಚರ್ಚ್ನ ಧರ್ಮಗುರು ರೆ.ಫಾ. ಬೊನೆವೆಂಚರ್ ನಝ್ರತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ಐವನ್ ಡಿಸೋಜ, ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್ನ ಅಧ್ಯಕ್ಷ ರೋಹನ್ ಮೊಂತೆರೋ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.

Read More

ಮಂಗಳೂರು, ಮಾ.24 ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ. 18 ರಿಂದ ಎ. 21 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ, ಭಜನೋತ್ಸವ ಮತ್ತು ಜಾರಂದಾಯ ನೇಮ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದ ವಠಾರದಲ್ಲಿ ಜರಗಿತು. ಚಿತ್ರಾಪುರ ಮಠದ ಶ್ರೀ ವಿದೇಂದ್ರ ತೀರ್ಥ ಶ್ರೀಪಾದರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ, ದೇವಸ್ಥಾನದಲ್ಲಿ ಎ. 18 ರಿಂದ ಎ. 21 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಉತ್ತಮವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಶಾಸಕ ಡಾ| ವೈ ಭರತ್ ಶೆಟ್ಟಿ  ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿ, ದೇವಸ್ಥಾನಗಳು ಹಿಂದೂ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವ ಕೇಂದ್ರವಾಗಿ ಬೆಳೆಯಬೇಕು ಎಂದರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ ಅವರು ಮಾತನಾಡಿ, ಕ್ಷೇತ್ರದಲ್ಲಿ ನಡೆಯುವ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಅವರು ಪ್ರಾಸ್ತಾವಿಕವಾಗಿ…

Read More

ಮಂಗಳೂರು ಮಾ.23 : ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ಬಲ್ಮಠದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಶಾಸಕರಾದ ವೇದವ್ಯಾಸ ಕಾಮತ್ ರವರು ಮಾತನಾಡಿ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲು ಕಂಪ್ಯೂಟರ್ ಲ್ಯಾಬ್ ಗಳ ಅಗತ್ಯವಿರುವ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರುಗಳು ಶಾಸಕ ವೇದವ್ಯಾಸ ಕಾಮತ್ ರಲ್ಲಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಾಸಕರು ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದರು. ಅದರಂತೆ ಇದೀಗ ಪದವಿ ಪೂರ್ವ ಕಾಲೇಜಿಗೆ 25 ಕಂಪ್ಯೂಟರ್ ಗಳು, ಪದವಿ ಕಾಲೇಜಿಗೆ 30 ಕಂಪ್ಯೂಟರ್ ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ಈ ಸಂದರ್ಭದಲ್ಲಿ ಪ್ರೇರಣಾ ಟ್ರಸ್ಟ್ ನ ರವಿರಾಜ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ, ಪದವಿ ಕಾಲೇಜಿನ…

Read More

ಮಂಗಳೂರು ಮಾ.22 : ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಭಯ ಜಿಲ್ಲೆಗಳಲ್ಲಿ ಬಂದ್ ಯಾವುದೇ ಪರಿಣಾಮವನ್ನು ಬೀರದೇ ಎಂದಿನಂತೆ ಜನಜೀವನ ಮುಂದುವರೆಯಿತು. ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು, ಆಟೋರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಅಂಗಡಿಗಳು, ಮಾರುಕಟ್ಟೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು. ಯಾವುದೇ ಅಂಗಡಿಗಳು, ಸಂಸ್ಥೆಗಳು ಮುಚ್ಚಿರುವ ಬಗ್ಗೆ ವರದಿಯಾಗಿಲ್ಲ.

Read More

ಬೆಂಗಳೂರು, ಮಾ.21 : ಟಿವಿ9 ಕನ್ನಡವು ಬೆಂಗಳೂರು ನಗರದ ಜನತೆಗೆ ಲೈಫ್ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋವನ್ನು ಆಯೋಜಿಸುತ್ತಿದೆ. ಈ ಎಕ್ಸ್ಪೋದಲ್ಲಿ ನೀವು ಎಲೆಕ್ಟ್ರಾನಿಕ್ಸ್ ಗ್ಯಾಜೆಟ್ಗಳು, ಫ್ಯಾಷನ್, ಪೀಠೋಪಕರಣಗಳು ಮತ್ತು ಆಟೋಮೊಬೈಲ್ಗಳಲ್ಲಿನ ಇತ್ತೀಚಿನ ಟ್ರೆಂಡ್ ಗಳನ್ನು ಮಾರಾಟಕ್ಕಿಡಲಾಗಿದೆ. ಎಕ್ಸ್ಪೋದಲ್ಲಿ ಅಂತರರಾಷ್ಟ್ರೀಯ ಪೀಠೋಪಕರಣಗಳು ಮತ್ತು ಸ್ಥಳೀಯ ಕುಶಲಕರ್ಮಿಗಳ ಹೊಸ ವಿನ್ಯಾಸಗಳು.ಗೃಹಾಲಂಕಾರ, ಉಪಕರಣಗಳು ಮತ್ತು ಸೌಂದರ್ಯಕ್ಕೆ ಸಂಬಂಧಿಸಿದ ಉತ್ಪನ್ನಗಳು. ನಿಮ್ಮ ಮನಸ್ಸನ್ನು ಅರಳಿಸುವ ಕರಕುಶಲ ಉತ್ಪನ್ನಗಳು.ಆಟೋಮೊಬೈಲ್ ಕ್ಷೇತ್ರದಲ್ಲಿನ ನವೀನ ತಂತ್ರಜ್ಞಾನಗಳು ಲಭ್ಯವಿದೆ. ಈ ಎಕ್ಸ್ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮಾರ್ಚ್ 21 ರಿಂದ 23 ರವರೆಗೆ ನಡೆಯಲಿದೆ. ಸಮಯ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭೇಟಿ ನೀಡಬಹುದು. ಎಕ್ಸ್ಪೋಗೆ ಪ್ರವೇಶ ಉಚಿತವಾಗಿದ್ದು, ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಬಂದು ಶಾಪಿಂಗ್ ಮಾಡಿ ಬೇಕಾಗುವ ವಸ್ತುಗಳನ್ನು ಖರೀದಿಸಬಹುದು.

Read More