Author: admin

ಮಂಗಳೂರು, ಮೇ. 04 : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಬ್ದುಲ್ ಸಪ್ವಾನ್, ನಿಯಾಜ್ ಮತ್ತು ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಬಂಧಿತ ಆರೋಪಿಗಳು ಎಂದು ವಿವರ ನೀಡಿದ್ದಾರೆ.

Read More

ಮಂಗಳೂರು, ಮೇ. 03 : ದುರಸ್ತಿ ಕಾರ್ಯಕ್ಕಾಗಿ ಕಳೆದೊಂದು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಹಳೆಯ ಸೇತುವೆಯನ್ನು ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆ ಗಳಲ್ಲಿ ಒಂದು ಸೇತುವೆಯನ್ನು ಏ.1 ರಿಂದ ದುರಸ್ತಿ ಕಾರ್ಯಕ್ಕಾಗಿ ಮುಚ್ಚಲಾಗಿತ್ತು. ಹಾಗಾಗಿ ವಾಹನಗಳ ಓಡಾಟಕ್ಕೆ ಹೊಸ ಸೇತುವೆಯ ಒಂದು ಬದಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.ಇದರಿಂದಾಗಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಇಂದಿನಿಂದ ಎರಡೂ ಸೇತುವೆಗಳು ಈಗ ಕೇರಳ ಮತ್ತು ಮಂಗಳೂರು ಕಡೆಗೆ ಹೋಗುವ ವಾಹನಗಳ ಸಂಚಾರಕ್ಕೆ ಲಭ್ಯವಿದೆ.

Read More

ಮಂಗಳೂರು, ಮೇ.1 : ನಿಧಿಲ್ಯಾಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ನೂತನ ಏಷಾರಾಮಿ ವಸತಿ ಸಮುಚ್ಚಯ ಯೋಜನೆ ‘ಸ್ಕೈ ಗಾರ್ಡನ್’ಗೆ  ಭೂಮಿ ಪೂಜೆ ಬುಧವಾರ ನೆರವೇರಿತು. ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಪುರೋ ಹಿತ ಕೃಷ್ಣ ಭಟ್, ಲೇಡಿಹಿಲ್ ಚಚ್ ೯ನ ಧರ್ಮಗುರು ವಂ| ಲಾನ್ಸನ್ ಪಿಂಟೊ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. ವಸತಿ ಸಮುಚ್ಚಯದ ಬ್ರೋಷರ್ ಅನ್ನು ನಿಧಿಲ್ಯಾಂಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಬಿಡುಗಡೆಗೊಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಮಂಗಳೂರು ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥೆ ಬಿ.ಕೆ.ವಿಶ್ವೇಶ್ವರಿ, ಉದ್ಯಮಿ ಡಿ.ಬಿ.ಮೆಹ್ರ ಆರ್ಕಿಟೆಕ್ಟ್  ಧರ್ಮರಾಜ್, ಭೂಮಾಲಕರಾದ ಎಫ್.ಸಿ.ಪಿಂಟೊ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ ಮಾಲಕ ಪ್ರಶಾಂತ್ ಸನಿಲ್, ಮತ್ತಿತರರು ಶಿಲಾನ್ಯಾಸ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆಡಳಿತ ನಿರ್ದೇಶಕ…

Read More

ಮಂಗಳೂರು, ಎ.30 : ಉದ್ಯಮಿ ಮತ್ತು ಸಮಾಜ ಸೇವಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ. ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬ ಸಂಸ್ಥೆಯನ್ನು 2007 ರಲ್ಲಿ ಸ್ಥಾಪಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಅದರ ಶಾಖೆಗಳನ್ನು ತೆರೆದು ತಮ್ಮ ಸೇವೆಯನ್ನು ವಿಸ್ತರಿಸಿರುತ್ತಾರೆ. ಬೊಂಡಾಲ ಸಚ್ಚಿದಾನಂದ ಶೆಟ್ಟರು 2012 ರಲ್ಲಿ ಶಂಭೂರು ಸರಕಾರಿ ಪ್ರೌಢಶಾಲೆಯನ್ನು ದತ್ತು ಪಡೆದುಕೊಂಡು ತಮ್ಮ ಹಣದಿಂದ ಹಾಗೂ ಇತರರ ನೆರವಿನಿಂದ ಅದರ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಿದ್ದಾರೆ. ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಎಂಬ ಸೇವಾ ಸಂಸ್ಥೆಯನ್ನು ಸ್ಥಾಪಿಸಿರುವ ಬಿ.ಎಸ್. ಶೆಟ್ಟರು ಅದರ ಮೂಲಕ ವಿವಿಧ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ…

Read More

ಮಂಗಳೂರು, ಎ.29  : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ ಅವರು, ಹದಿ ಹರೆಯದಲ್ಲೇ ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಛಲ ಮೂಡಿತು.  ಹಾಗಾಗಿ ಬಡತನ ಇದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿದೆ.ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಛಲ, ಶಿಸ್ತು, ಕಠಿಣ ಪರಿಶ್ರಮ ಅಗತ್ಯ. ಎಂದು ಅವರು ಹೇಳಿದರು. ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ , ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಉಪಸ್ಥಿತರಿದ್ದರು. ಪ್ರೆಸ್ಕ್ಲಬ್ ಪ್ರಧಾನ  ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ.ಭಟ್  ಕಾರ್ಯಕ್ರಮ ನಿರೂಪಿಸಿದರು.

Read More

ಸುರತ್ಕಲ್, ಎ.29 : ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಾಗಮಂಡಲ ಸೇವೆ ಎ.25, ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನಾಗಪಾತ್ರಿ ರಾಮಮೂರ್ತಿ ಬೆಳ್ಳಿಪಾಡಿ ರಮಾನಂದ ಭಟ್ಟರ ನೇತೃತ್ವದಲ್ಲಿ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗ ಮಧೂರು ಅವರ ಡಮರು ಮೇಳದಲ್ಲಿ ಬಾಲಕೃಷ್ಣ ವೈದ್ಯ ಮತ್ತು ನಟರಾಜ ವೈದ್ಯರ ನಾಗಕನ್ನಿಕಾ ನೃತ್ಯ ಸೇವೆಯೊಂದಿಗೆ ನಾಗ ಮಂಡಲ ಸೇವೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಡಾ.ಶಿವ ಪ್ರಸಾದ್ ತಂತ್ರಿ ದೇರೆಬೈಲ್ ನೇತೃತ್ವ ವಹಿಸಿದ್ದ ರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಯಾದವ ಕೋಟ್ಯಾನ್ ಪೆರ್ಮುದೆ, ಕಾರ್ಯಾ ಧ್ಯಕ್ಷ ಪ್ರಶಾಂತ್ ಮೂಡಾಯಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ.ಸದಾಶಿವ ಐತಾಳ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಕುಮಾರ್ ಭಂಡಾರಿ, ಎ.ವಾದಿರಾಜ, ಜಿ.ಕೆ. ಸುಂದರ್, ಪ್ರಧಾನ ಅರ್ಚಕ ಸುನಿಲ್ ಭಟ್, ಅನುರಾಧಾ, ಹೇಮಾವತಿ, ಹೊನ್ನಯ್ಯ ಕೋಟ್ಯಾನ್, ದಯಾನಂದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಂಗಳೂರು, ಎ. 28 : ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ತಾ. ಎ.24 ರಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಫಾ| ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ಅವರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಾತಾಡಿದ ಪೌಸ್ತಿನ್ ಲೋಬೊ ಅವರು, ತಮ್ಮ ಜೀವನದುದ್ದಕ್ಕೂ ಸರಳ ಮತ್ತು ವಿನಮ್ರ ಜೀವನಶೈಲಿಯನ್ನು ನಡೆಸುವ ಮೂಲಕ ಸಂತ ಫ್ರಾನ್ಸಿಸ್ ಅಸ್ಸಿಸಿಯ ಹೆಜ್ಜೆಗಳನ್ನು ಅಕ್ಷರಶ: ಅನುಸರಿಸಿದರು. ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಪ್ರಗತಿಪರರಾಗಿದ್ದರು ಮತ್ತು ಅನಗತ್ಯ ಮತ್ತು ಅಪ್ರಸ್ತುತ ಅಭ್ಯಾಸಗಳನ್ನು ತೆಗೆದುಹಾಕುವಲ್ಲಿ ನಂಬಿಕೆ ಇಟ್ಟಿದರು. ಪ್ರಪಂಚದಾದ್ಯಂತ ಯುದ್ದಗಳು ಮತ್ತು ಸಂಘರ್ಷಗಳಿಂದಾಗಿ ಬಳಲುತ್ತಿರುವ ಮಾನವಕುಲದ ಬಗ್ಗೆ ಅವರು ಆಳವಾದ ಸಹಾನಭೂತಿಯನ್ನು ಹೊಂದಿದ್ದರು. ಅವರು ಜನರಲ್ಲಿ ಅಂತರ್ ಧರ್ಮೀಯ ಸಾಮರಸ್ಯವನ್ನು ಪ್ರತಿಪಾದಿಸಿದರು ಮತ್ತು ಶಾಂತಿಯನ್ನು ತರಲು ಬಯಸಿದರು ಎಂದು ಅವರು ಹೇಳಿದರು. ಬ್ಯಾಂಕಿನ ನಿರ್ದೇಶಕಿ ಶ್ರೀಮತಿ ಐರಿನ್ ರೆಬೆಲ್ಲೊ…

Read More

ಮಂಗಳೂರು, ಎ.27: ನಗರದ ಎಸ್ಸಿಎಸ್ ಹಾಸ್ಪಿಟಲ್ ಪಕ್ಕದಲ್ಲಿ ಎ ಯುನಿಟ್ ಆಫ್ ಡಾಕ್ಟರ್ಸ್ ಎಂ ಆರ್ ಐ ಪ್ರೈವೇಟ್ ಲಿಮಿಟೆಡ್ ನ ಸುಸಜ್ಜಿತ,ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಎಕ್ಸೆಲ್ ಎಂ ಆರ್ ಐ ಡಯಾಗ್ನೋಸ್ಟಿಕ್ಸ್ ಕೇಂದ್ರವು ಭಾನುವಾರ ಉದ್ಘಾಟನೆಗೊಂಡಿತು. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ನೂತನ ಡಯಾಗ್ನೋಸ್ಟಿಕ್ಸ್ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ.ವೇದವ್ಯಾಸ ಕಾಮತ್, ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮುಖ್ಯ ಅತಿಥಿಯಾಗಿದ್ದರು. ಸಮಾರಂಭದಲ್ಲಿ ಕೇಂದ್ರದ ಸ್ಥಾಪಕ ನಿರ್ದೇಶಕರಾದ ಡಾ.ಆಲಮ್ ನವಾಝ್ ಮತ್ತು ಡಾ.ವರ್ಗೀಸ್ ಜೋ, ಡಾ.ಹೆರಾಲ್ಡ್ ಮಸ್ಕರೇನಸ್, ತಜ್ಞ ವೈದ್ಯರಾದ ಡಾ.ಜಯಕೃಷ್ಣನ್, ಡಾ.ಕೆ.ಆರ್.ಕಾಮತ್, ಡಾ.ಶೋಭಿತಾ, ಡಾ.ಮುನೀರ್ ಅಹ್ಮದ್, ಡಾ.ರಿಝ್ವಾನ್ ಅಹ್ಮದ್, ಡಾ.ಹಸೀಬ್ ಅಮನ್, ಡಾ.ಮುರಳೀಧರ್ ಎಡಿಯಾಲ್, ಡಾ.ಆರ್.ಎಲ್.ಕಾಮತ್, ಡಾ.ಭಾಸ್ಕರ ಶೆಟ್ಟಿ, ಡಾ.ದಿವಾಕರ, ಡಾ.ಜೀವರಾಜ ಸೊರಕೆ, ಡಾ.ತಾಜುದ್ದೀನ್, ಡಾ.ಥಾಮಸ್, ಡಾ.ಸಲೀಮ್ ಉಪಸ್ಥಿತರಿದ್ದರು.

Read More

ಮಂಡ್ಯ, ಏ.26 : ಚಲಿಸುತ್ತಿದ್ದ ಖಾಸಗಿ ಬಸ್ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಸಮೀಪ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದ್ದು, ಕೂಡಲೇ ಬಸ್ ಚಾಲಕ ಬಸ್‌ನಲ್ಲಿದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲಗೇಜ್ ಸಹಿತ ಕೆಳಗೆ ಇಳಿಸಿದ್ದಾರೆ.ಬಳಿಕ ಬಸ್ ಧಗಧಗನೇ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ನ ಬೆಂಕಿಯನ್ನು ನಂದಿಸಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಎ. 26: ನಗರದ 32 ಮಂದಿ ತಜ್ಞ ವೈದ್ಯರ ತಂಡವು ಸುಸಜ್ಜಿತ,ಅತ್ಯಾಧುನಿಕ ಎಂ ಆರ್ ಐ ಸೌಲಭ್ಯದಿಂದ ಕೂಡಿದ ಎಕ್ಸೆಲ್ ಎಂ ಆರ್ ಐ  ಡಯಾಗ್ನೊಸ್ಟಿಕ್  ಕೇಂದ್ರವನ್ನು ನಗರದಲ್ಲಿ ಆರಂಭಿಸು ತ್ತಿದ್ದು, ಎ. 27ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದೆ ಎಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಾ. ಜೋ ವರ್ಗೀಸ್ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ| ಜೋ ವರ್ಗೀಸ್ ಅವರು, ಎಂ ಆರ್ ಐ  ಸ್ಕ್ಯಾನ್ ಮೂಲಕ ದೇಹದ ಯಾವ ಮೂಲೆಯಲ್ಲೂ ಇರುವಂತಹ ಅತೀಸೂಕ್ಷ್ಮ ತೊಂದರೆಗಳನ್ನೂ ವೀಕ್ಷಿಸಿ, ಪರಿಹರ ಕಂಡುಕೊಳ್ಳಲು ಸಾಧ್ಯ. ಅಂತಹ ಅತ್ಯಾಧುನಿಕ ಎಂ ಆರ್ ಐ  ಮೆಷಿನ್ ಗಳನ್ನು ಈ ಎಕ್ಸೆಲ್ ಎಂ ಆರ್ ಐ  ಕೇಂದ್ರ ದಲ್ಲಿ ಅಳವಡಿಸಲಾಗಿದೆ ಎಂದವರು ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ. ಖಾದರ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್. ಆರ್. ತಿಮ್ಮಯ್ಯ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ| ಆಲಂ ನವಾಝ್, ಡಾ| ಹೆರಾಲ್ಡ್…

Read More