Subscribe to Updates
Get the latest creative news from FooBar about art, design and business.
Author: admin
ಬಂಟ್ವಾಳ, ಜು,01 : ವಸತಿ ಸಮುಚ್ಚಯವೊಂದರ ಮನೆಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಜೂ. 30, ಶುಕ್ರವಾರ ನಡೆದಿದೆ. ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಟೆಕ್ನಿಷಿಯನ್ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಅಂಬ್ಯುಲೆನ್ಸ್ ಮೂಲಕ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯದರೂ ಯಾವುದೇ ಪ್ರಯೋಜನವಾಗಿಲ್ಲ. ತಲೆಗೆ ಗಂಭೀರವಾದ ಏಟು ಬಿದ್ದಿರುವುದರಿಂದ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪುತ್ತೂರು, ಜೂ. 20 : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ. ಮೃತರನ್ನು ನೈತಾಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಅವರು ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ವಿಟ್ಲ, ಜೂ. 19 : ಖಾಸಗಿ ಬಸ್ನಲ್ಲಿ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಜೂ. 17,ಶನಿವಾರ ನಡೆದಿದೆ. ಮೃತರನ್ನು ಖಾಸಗಿ ಬಸ್ ಚಾಲಕ ರಮೇಶ್ ಎಂದು ಗುರುತಿಸಲಾಗಿದೆ.ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನ್ಯೂಯಾರ್ಕ್, ಜೂ. 17: ಅಮೆರಿಕನ್ ನಟ ಅಲ್ ಪಸಿನೊ 83ನೇ ವಯಸ್ಸಿನಲ್ಲಿ ತಂದೆಯಾಗಿದ್ದಾರೆ. ಇದುವರೆಗೂ ಮದುವೆಯಾಗಿರದ ಪೆಸಿನೋ ಅವರು 29 ವರ್ಷದ ಪ್ರಿಯತಮೆಯಿಂದ ಮಗುವನ್ನು ಪಡೆದಿದ್ದಾರೆ. ಪೆಸಿನೋ ಅವರು 2022ರಲ್ಲಿ ಅಲ್ಫಲ್ಲಾಹ್ ಅವರನ್ನು ಭೇಟಿ ಮಾಡಿದ್ದು, ಆಗಿನಿಂದಲೇ ಇವರಿಬ್ಬರ ಮಧ್ಯೆ ಲವ್ ಶುರುವಾಗಿದೆ ಎನ್ನಲಾಗಿತ್ತು. ಅಲ್ಫಲ್ಲಾಹ್ ಅವರು ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಗುವಿಗೆ ರೋಮನ್ ಪೆಸಿನೋ ಎಂದು ನಾಮಕರಣ ಮಾಡಿದ್ದಾರೆ. ಪೆಸಿನೋ ಅವರಿಗೆ ಇದು ನಾಲ್ಕನೇ ಮಗುವಾಗಿದೆ. ಇತರ ಇಬ್ಬರು ಪ್ರಿಯತಮೆಯರಿಂದ ಆಂಟೊನ್, ಒಲಿವಿಯಾ ಹಾಗೂ ಜೂಲಿ ಮಾರಿ ಎನ್ನುವ ಮೂರು ಮಕ್ಕಳನ್ನು ಪಡೆದಿದ್ದಾರೆ.
ಮಂಗಳೂರು, ಜೂ. 17 : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅವರು ಜೂ.17, ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮುಲೈ ಮುಹಿಲನ್ ಅವರು ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.
ಕೊಡಗು ಜೂ. 17 : ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಎಫ್ ಎಂಸಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮಡಿಕೇರಿಯ ಭಾವನಾ(21) ಎಂದು ಗುರುತಿಸಲಾಗಿದೆ. ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ಭಾವನಾ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂ. 16 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ದ. ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ಅವರು ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
ಕುಂದಾಪುರ, ಜೂ. 1 5: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಅರಣ್ಯ ಇಲಾಖೆ ಇಟ್ಟ ಬೋನಿಗೆ ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿದೆ.ಕಳೆದ ಐದು ವರ್ಷಗಳಲ್ಲಿಈ ಪ್ರದೇಶದಲ್ಲಿಟ್ಟ ಬೋನಿಗೆ ಬಿದ್ದ8ನೇ ಚಿರತೆ ಇದಾಗಿದೆ. ಈ ಪ್ರದೇಶದಲ್ಲಿ ಹಿಂದೆ ಏಳು ಚಿರತೆಗಳನ್ನು ಅರಣ್ಯ ಇಲಾಖೆ ಬೋನಿಟ್ಟು ಬಂಧಿಸಿತ್ತು. ಮತ್ತೆ ಈಚೆಗೆ ಈ ಪ್ರದೇಶದಲ್ಲಿ ಚಿರತೆಗಳು ಓಡಾಡುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ 8ನೇ ಚಿರತೆಯ ಬಂಧನವಾಗಿದ್ದು ಇಲ್ಲಿನ ಜನ ಭಯಭೀತರಾಗಿದ್ದಾರೆ.
ನೆಲ್ಯಾಡಿ, ಜೂ. 14 : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ. ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಮೃತಪಟ್ಟ ಯುವಕ. ಸಂದೇಶ್ ಅವರು ಬೆಂದೂರ್ವೆಲ್ನಲ್ಲಿರುವ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉಡುಪಿ, ಜೂ. 14 : ಖ್ಯಾತ ಸ್ಯಾಕ್ಸೋಫೋನ್ ವಾದಕ, ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿಯ ಅಲೆವೂರು ಮೂಲದ ಸುಂದರ ಸೇರಿಗಾರ (76) ಅವರು ಜೂ. 14, ಬುಧವಾರ ನಿಧನರಾಗಿದ್ದಾರೆ. ಸುಂದರ ಸೇರಿಗಾರ ಅವರು ಇಂಟರ್ನ್ಯಾಷನಲ್ ವರ್ಚುವಲ್ ಪೀಸ್ ಯುನಿವರ್ಸಿಟಿ ಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಗೌರವವನ್ನು ಕೂಡಾ ಪಡೆದಿದ್ದರು. ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಉತ್ಸವ ಸಂಧರ್ಭದಲ್ಲಿ ಸುಂದರ ಸೇರಿಗಾರ ಅವರು ಸೇವೆಯನ್ನು ನಡೆಸಿಕೊಡುತ್ತಿದ್ದರು.ಅವರ ಮೊಮ್ಮಗಳು ಪೂಜಾ ದೇವಾಡಿಗ ಮುಂಬಯಿಯಲ್ಲಿ ಖ್ಯಾತ ಸ್ಯಾಕ್ಸೋಫೋನಿಸ್ಟ್ ಆಗಿದ್ದಾರೆ. ಸುಂದರ ಸೇರಿಗಾರ ಅವರು ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.