Author: admin

ಮಂಗಳೂರು, ಮಾ.21 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಗುಜರಾತ್ನ ಸ್ಮತಿ ವನದ ರೂವಾರಿ ಡಾ.ಆರ್.ಕೆ. ನಾಯರ್ ಅವರು, ನಾನು ಹುಟ್ಟಿದ್ದು ಕಾಸರಗೋಡಿನಲ್ಲಿ. ತಾನು ಚಿಕ್ಕವನಿದ್ದಾಗ ನಮ್ಮ ಕುಟುಂಬ ಸುಳ್ಯದ ಅರಂಬೂರಿಗೆ ಸ್ಥಳಾಂತರಗೊಂಡಿತು. ಸ್ಥಳೀಯ ಈಶ್ವರ ಭಟ್ಟರ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಾ ಬೆಳೆದೆವು. ವಾಸ್ತವ್ಯಕ್ಕೆ ಸ್ವಂತ ಮನೆ ಇರಲಿಲ್ಲ. ಮುಂದೆ ಜಾಲ್ಲೂರಿನಲ್ಲಿ ಮನೆ ಮಾಡಿದೆವು ಎಂದರು. ಬಳಿಕ ಮಾತಾನಾಡಿದ ಅವರು, ದ್ವಿತೀಯ ಪಿಯುಸಿ ತನಕ ಶಿಕ್ಷಣ. ಪಿಯುಸಿ ಪರೀಕ್ಷೆ ಯ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಮನೆಯಲ್ಲಿ ತಾಯಿಯತ್ತಿರ ಹಠ ಹಿಡಿದು 500 ರೂ.ಪಡೆದು ಸ್ನೇಹಿತ ಕಿಶೋರ್ ಜೊತೆ ಮುಂಬೈಗೆ ಬಸ್ ಹತ್ತಿದೆ. ಮುಂಬೈನಲ್ಲಿ ಅಣ್ಣನ ನೆರವಿನಲ್ಲಿ ಮೆಡಿಕಲ್ ಸ್ಟೋರ್ ಗೆ ಸೇರಿದೆ. ಸ್ನೇಹಿತ ಕಿಶೋರ್ ಗಾರ್ಮೆಂಟ್ಸ್ನಲ್ಲಿ ಕೆಲಸಕ್ಕೆ ಸೇರಿದರು. ಮುಂದೆ ಹೋಟೆಲ್, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿದೆ.ಮುಂದೆ ಸೌಪರ್ಣಿಕಾ ಎಕ್ಸ್ಪೊರ್ಟ್ಸ್ ಎಂಬ ಕಂಪೆನಿ  ಪ್ರಾರಂಬಿಸಿ,10 ವರ್ಷಗಳಲ್ಲಿ ದೊಡ್ಡ…

Read More

ಮಂಗಳೂರು,ಮಾ.20 : ದ.ಕ. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟವು ಬುಧವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ರೀಡಾಪಟುವನ್ನಾಗಿ ಮಾಡುವುದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಬಹಳಷ್ಟಿದೆ ಎಂದರು. ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟಾನಿ ಅಲ್ವಾರೀಸ್ ಧ್ವಜಾರೋಹಣಗೈದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಕ್ರೀಡಾ ಜ್ಯೋತಿ ಯನ್ನು ಹಸ್ತಾಂತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸಂಘದ ಕಾರ್ಯಾಧ್ಯಕ್ಷ ಮಾಮುಚ್ಚನ್ ಎಂ., ಪಪೂ ದೈಹಿಕ ಶಿಕ್ಷಣ ವಿಭಾಗದ ಜಿಲ್ಲಾಧ್ಯಕ್ಷ ಪ್ರೇಮ ನಾಥ ಶೆಟ್ಟಿ, ತಾಲೂಕು…

Read More

ಮಂಗಳೂರು ಮಾ.18 : ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ದುರ್ಗಾ ಗಣೇಶ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಬಳಿಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿ ಅಗತ್ಯವಾಗಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸ್ಥಳೀಯ ಪ್ರಮುಖರು ಗಮನಕ್ಕೆ ತಂದ ನಂತರ, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು. ಈ ಸಂದರ್ಭದಲ್ಲಿ ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ಗಂಗಾಧರ ಸಾಲ್ಯಾನ್, ಲೋಕೇಶ್ ಸುವರ್ಣ, ಮೀರಾ ಕರ್ಕೇರ, ಚೇತನ್ ಬೆಂಗ್ರೆ, ನರಸಿಂಹ ಶ್ರೀಯಾನ್, ಭಾಸ್ಕರ್ ಚಂದ್ರ ಶೆಟ್ಟಿ, ಯೋಗೀಶ್ ಕಾಂಚನ್, ಮೋಹನ್ ಸಾಲ್ಯಾನ್, ಹೇಮಚಂದ್ರ ಸಾಲ್ಯಾನ್, ಕೇಶವ ಗುರಿಕಾರ, ಹರಿಶ್ಚಂದ್ರ ಪುತ್ರನ್, ಸುರೇಂದ್ರ ಪಾಂಗಳ್, ಸುಂದರ ಸಾಲ್ಯಾನ್, ಪುಂಡಲಿಕ ಮೆಂಡನ್, ಮನೋಜ್ ಬೆಂಗ್ರೆ, ಸುಕೇಶ್ ಪುತ್ರನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕಾಪು, ಮಾ.18 :ಕರ್ನಾಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಐಪಿಎಸ್ ಅವರು ತಮ್ಮ ಪುತ್ರಿಯೊಂದಿಗೆ ಮಾರ್ಚ್ 17 ರಂದು ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮುಖ್ಯ ಸಂಯೋಜಕರು ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ಅವರು ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಮುಖ್ಯಸ್ಥ ಯೋಗೇಶ್ ವಿ ಶೆಟ್ಟಿ ಬಾಲಾಜಿ, ರವೀಂದ್ರ ಮಲ್ಲರ್, ಚರಿತ್ ದೇವಾಡಿಗ, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ನಿರ್ವಹಣಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Read More

ಕಾಸರಗೋಡು, ಮಾ.17 : ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗ ದಲ್ಲಿ ನಡೆದಿದೆ. ಮೃತರನ್ನು ಕುಂಬಳೆ ಕಣ್ಣೂರಿನ ತ್ಯಾಂಪಣ್ಣ ಪೂಜಾರಿ ರವರ ಪುತ್ರ ರವಿಚಂದ್ರ (35) ಎಂದು ಗುರುತಿಸಲಾಗಿದೆ. ಬೈಕ್ ಕುಂಬಳೆ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ರವಿಚಂದ್ರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು,ಮಾ.16 :ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶಿವಾಜಿ ಪಾರ್ಕ್ ಬಳಿ ಆಟೋ ರಿಕ್ಷಾ ನಿಲ್ದಾಣ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಂಡು ಎಲ್ಲರ ಉಪಯೋಗಕ್ಕೆ ಸಿಗುವಂತಾಗಲಿ ಎಂದು ಹಾರೈಸಿದರು. ಗಂಗಾಧರ ಸಾಲ್ಯಾನ್, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ಲೋಕೇಶ್ ಸುವರ್ಣ, ಚೇತನ್ ಬೆಂಗ್ರೆ, ನರಸಿಂಹ ಶ್ರೀಯಾನ್, ಭಾಸ್ಕರ್ ಚಂದ್ರ ಶೆಟ್ಟಿ, ಯೋಗೀಶ್ ಕಾಂಚನ್, ಮೋಹನ್ ಸಾಲ್ಯಾನ್, ಹೇಮಚಂದ್ರ ಸಾಲ್ಯಾನ್, ಮೀರಾ ಕರ್ಕೇರ, ಕೇಶವ ಗುರಿಕಾರ, ಹರಿಶ್ಚಂದ್ರ ಪುತ್ರನ್, ಸುರೇಂದ್ರ ಪಾಂಗಳ್, ಸುಂದರ ಸಾಲ್ಯಾನ್, ಪುಂಡಲಿಕ ಮೆಂಡನ್, ಮನೋಜ್ ಬೆಂಗ್ರೆ, ಸುಕೇಶ್ ಪುತ್ರನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Read More

ಕೈಕಂಬ, ಮಾ. 15 : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 9 ರಿಂದ 16ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ವೇ। ಮೂ। ಕೃಷ್ಣರಾಜ ತಂತ್ರಿ, ದೇಗುಲದ ಪವಿತ್ರಪಾಣಿ ರಮೇಶ್ ಉಡುಪ ಹಾಗೂ ಪ್ರಧಾನ ಅರ್ಚಕ ಎ. ಸದಾಶಿವ ಭಟ್, ಮಹೇಶ್ ಭಟ್ ಉಪಸ್ಥಿತಿಯಲ್ಲಿ ನವಗ್ರಹ ಶಾಂತಿ, ಸ್ವ ಶಾಂತಿ, ಚೋರ ಶಾಂತಿ, ಅದ್ಭುತ ಶಾಂತಿ ಹೋಮಗಳು, ಬೆಳಗ್ಗೆ 11ರ ವೃಷಭ ಲಗ್ನ ಸುಮುಹೂರ್ತದಲ್ಲಿ ನವಗ್ರಹ, ಶ್ರೀ ಶಾಸ್ತಾ ದೇವರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷಸುಜಿತ್ ಆಳ್ವ ಬೈಲು ಏತಮೊಗರು ಗುತ್ತು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ, ಮುಂಬಯಿ ದೇಗುಲದ ರಕ್ಷಕ ಮನೆತನದ ರಮಾನಾಥ ಅತ್ತಾರ್ಏತಮೊಗರು, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ, ಅಧ್ಯಕ್ಷ ಪ್ರಕಾಶ್ ಬಿ. ಭಂಡಾರಿ, ಉಪಾಧ್ಯಕ್ಷ ಸದಾನಂದ ಡಿ.ಶೆಟ್ಟಿಸಂಕೇಶ, ವ್ಯವಸ್ಥಾಪನ, – ಜೀರ್ಣೋ ದ್ಧಾರ, ಬ್ರಹ್ಮಕಲಶೋತ್ಸವ…

Read More

ಮೂಡುಬಿದಿರೆ,ಮಾ.14 : ಕರ್ನಾಟಕ, ಗೋವಾ ರಾಜ್ಯಗಳಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮೂಡುಬಿದರೆಯ ಜೈನ್ಸಟೆ ಬಡಗ ಬಸದಿ ಎದುರಿನ ಫಾರ್ಚೂನ್-2 ಬಹುಮಹಡಿ ಕಟ್ಟಡದ ಮೊದಲ ಮಹಡಿಯಲ್ಲಿ ಮಾ.16ರಂದು ಶುಭಾರಂಭಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಪ್ರಸಾದ್ ನೇತ್ರಾಲಯವು ಉಡುಪಿ, ಮಂಗಳೂರು, ಸುಳ್ಯ ತೀರ್ಥಹಳ್ಳಿ ಶಿವಮೊಗ್ಗ, ಗೋವಾ, ಪುತ್ತೂರು ಹಾಗೂ ಕಾಸರಗೋಡುನಲ್ಲಿ ಚಿಕಿತ್ಸಾ ಕೇಂದ್ರಗಳ ಮೂಲಕ ಜನರಿಗೆ ಸೇವೆಯನ್ನು ನೀಡುತ್ತಿದೆ. ನೇತ್ರ ಚಿಕಿತ್ಸೆಯಲ್ಲಿ ಅತ್ಯಾಧುನಿಕ  ಚಿಕಿತ್ಸಾ ಉಪಕರಣಗಳನ್ನು ಅಳವಡಿಸಿಕೊಂಡು ತಜ್ಞ ವೈದ್ಯರು ಹಾಗೂ ತಾಂತ್ರಿಕ ಸಹಾಯಕರ ತಂಡದೊಂದಿಗೆ ಚಿಕಿತ್ಸೆ ನೀಡುತ್ತಿದೆ ಎಂದರು. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ನೂತನ ಚಿಕಿತ್ಸಾ ಕೇಂದ್ರವು ಮೂಡುಬಿದರೆ ಜೈನ್ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ  ಅವರು ಆಶೀರ್ವದಿಸುವ ಮೂಲಕ ಶುಭಾರಂಭಗೊಳಿಸಲಿದ್ದಾರೆ. ನೂತನ ಆಸ್ಪತ್ರೆಯ ಉದ್ಘಾಟನೆಯನ್ನು ಆಳ್ವಾಸ್ ಎಜುಕೇಷನ್…

Read More

ಮಂಗಳೂರು,ಮಾ.13: ಕರ್ನಾಟಕ ಕೊಂಕಣಿ ಸಾಹಿತ್ಯ ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಮೈಸೂರು ಸಹಯೋಗದೊಂದಿಗೆ 23 ಮಾರ್ಚ್ 2025, ಆದಿತ್ಯವಾರ ಸಂಜೆ 5.00 ಗಂಟೆಗೆ ಕೊಂಕಣ್ ಭವನ್, ವಿಜಯನಗರ್ 2nd ಸ್ಟೇಜ್,ಮೈಸೂರಿನಲ್ಲಿ2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಜರುಗಲಿರುವುದು ಎಂದು ಸ್ಟಾನಿ ಅಲ್ವಾರಿಸ್ ಅವರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರದಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ 2024 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹಾನಿಯರನ್ನು ಆಯ್ಕೆ ಮಾಡಲಾಗಿದೆ. 2024ನೇ ಸಾಲಿನ ಗೌರವ ಪ್ರಶಸ್ತಿ: ಕೊಂಕಣಿ ಸಾಹಿತ್ಯ : ಮಂಗಳೂರಿನ ಶ್ರೀ ಎಂ. ಪ್ಯಾಟ್ರಿಕ್ ಮೊರಾಸ್, ಕೊಂಕಣಿ ಕಲೆ : ಮಂಗಳೂರಿನ ಶ್ರೀ ಜೊಯಲ್ ಪಿರೇರಾ, ಕೊಂಕಣಿ ಜಾನಪದ : ಹಳಿಯಾಳದ ಶ್ರೀಮತಿ ಸೊಬೀನಾ ಮೊತೇಶ್ ಕಾಂಬ್ರೆಕರ್, 2024ನೇ ಸಾಲಿನ ಪುಸ್ತಕ…

Read More

ಕಾಪು, ಮಾ.13:ಸ್ಕೂಟರ್ ಗೆ  ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತರು. ಗಂಭೀರವಾಗಿ ಗಾಯಗೊಂಡ ಸಹ ಸವಾರ ನಿಹಾಲ್ ವಿಲ್ಸನ್. ರಿತೇಶ್ ಶೆಟ್ಟಿ ಅವರು ನೀಡಿದ ದೂರಿನ ಪ್ರಕಾರ, ಕಾಪುದಿಂದ ಪಡುಬಿದ್ರಿಯ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪ್ರತೀಶ್ ಅದಾಗಲೇ ಮೃತಪಟ್ಟಿರುತ್ತಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More