Subscribe to Updates
Get the latest creative news from FooBar about art, design and business.
Author: admin
ಉರ್ವ, ಏ.21 : ಉರ್ವ ಬೋಳೂರು ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 19ನೇ ವಾರ್ಷಿಕ ನೇಮೋತ್ಸವವು ತಾ. 18-04-2025 ನೇ ಶುಕ್ರವಾರದಿಂದ 20-04-2025 ರವಿವಾರದ ತನಕ ವಿಜ್ರಂಭಣೆಯಿಂದ ಜರಗಿತು. ಎ. 18ರಂದು ಶುಕ್ರವಾರ ಪ್ರಾರ್ಥನೆ, ಪುಣ್ಯಹ, ಗಣಹೋಮ, ನವಕ ಕಲಶ, ಪರ್ವ ಪೂಜೆ, ತೋರಣ ಮುಹೂರ್ತ ವೇ। ಮೂ। ಶ್ರೀ. ಕೆ. ಪುರುಷೋತ್ತಮ ಭಟ್ (ಶ್ರೀ ವೆಂಕಟರಮಣ ದೇವಸ್ಥಾನ, ಬೊಕ್ಕಪಟ್ಟ ಮಂಗಳೂರು) ಇವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 10ಕ್ಕೆ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ಸೀಯಾಳಾಭಿಷೇಕ ನಂತರ ಪರ್ವ ಸೇವೆ, ಪ್ರಸಾದ ವಿತರಣೆ ನಡೆಯಿತು. ಎ. 19ರಂದು ಶನಿವಾರ ಸಂಜೆ ಶ್ರೀ ಚಾಮುಂಡೇಶ್ವರಿ-ಕತ್ತಲೆಕಾನ ಗುಳಿಗ ದೈವಗಳ ಸಿರಿ ಸಿಂಗಾರದ ನೇಮೋತ್ಸವ,ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಗಂಧ ಪ್ರಸಾದ ವಿತರಣೆ ನಡೆಯಿತು. ಈ ಪ್ರಯುಕ್ತ ತಾ. 20-04-2025 ಆದಿತ್ಯವಾರ ರಾತ್ರಿ 7.00 ಗಂಟೆಗೆ ಕ್ಷೇತ್ರದ ಪ್ರಧಾನ ದೈವ ಸಾರಲ ಪಟ್ಟದ ಕೊರಗಜ್ಜನಿಗೆ ದೊಂದಿ ಬೆಳಕಿನ (ತುಡರ ಕೋಲ) ಸೇವೆ ನಂತರ ಅಗೇಲು ಸೇವೆ,…
ಮಂಗಳೂರು, ಎ.20 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ನ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2025 (ಸೆಷನ್- 2) ನಲ್ಲಿ ತಮ್ಮ ವಿದ್ಯಾರ್ಥಿಗಳ ಸಾಧನೆಯನ್ನು ಹೆಮ್ಮೆಯಿಂದ ಘೋಷಿಸಿದೆ. ಮಂಗಳೂರಿನ ಅನಿಕೇತ್ ಡಿ ಶೆಟ್ಟಿ (99.90) ವಿಟ್ಟಲ್ ದಾಸ್ ಎ (99.90), ರೈಮೆಂಡ್ ಎಲಿಜಾ ಪಿಂಟೋ (99.62,) ಆಯುಷಾ ಯು ನಾಯಕ್ (99.34) ಪರೀಕ್ಷೆಯ ಎರಡನೇ ಅವಧಿಯಲ್ಲಿ 99.90 ಶೇಕಡಾ ಅಂಕಗಳನ್ನು ಗಳಿಸಿದ್ದಾರೆ. ಈ ಫಲಿತಾಂಶಗಳು ಸವಾಲಿನ ಪರೀಕ್ಷೆಯಲ್ಲಿ ದೊರೆತ ಯಶಸ್ಸು ಆಗಿರುತ್ತದೆ. ಜೆಇಇ ಮೇನ್ 2025 ರಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಕಠಿಣ ಪರಿಶ್ರಮ ಈ ಅತ್ಯುತ್ತಮ ಫಲಿತಾಂಶಗಳಿಗೆ ಕಾರಣವಾಗಿದೆ. ನಮ್ಮ ಎಲ್ಲಾ ಯಶಸ್ವಿ ವಿದ್ಯಾರ್ಥಿಗಳಿಗೆ ಪ್ರಯಾಣದ ಮುಂದಿನ ಹಂತಗಳಿಗೆ ಶುಭ ಹಾರೈಸುತ್ತೇವೆ ಎಂದು ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ನ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು ತಿಳಿಸಿದರು. ಈ ವರ್ಷ ನಿಗದಿಯಾಗಿದ್ದ ಎರಡನೇ…
ಸುರತ್ಕಲ್,ಏ.19 : ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸುರತ್ಕಲ್ ಜಂಕ್ಷನನಿಂದ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣಾ ಭವ್ಯ ಶೋಭಾಯಾತ್ರೆ ಏ.12 ಶನಿವಾರ ನಡೆಯಿತು. ಈ ಸಂದರ್ಭದಲ್ಲಿ,ಶ್ರೀ ಕ್ಷೇತ್ರ ಗಣೇಶಪುರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಕಾರ್ಯನಿರ್ವಹಣಾಧಿಕಾರಿ , ಗ್ರಾಮಸ್ಥರು ಭಕ್ತರು ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಎ.೧೯ : ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ ನೆರವೇರಿತು.ಫಾ.ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ವಂ|ಫಾ|ರಿಚಾರ್ಡ್ ಕುವೆಲ್ಲೊ ಅವರು ಆಶೀರ್ವದಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡು ಜನರ ಬಳಕೆಗೆ ಶೀಘ್ರ ಸಿಗುವಂತಾಗಲಿ ಎಂದರು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಕಳೆದೊಂದು ತಿಂಗಳಲ್ಲೇ ರೋಹನ್ ಸಂಸ್ಥೆಯ ನಾಲ್ಕು ಪ್ರಮುಖ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಾಗಿದೆ, ಬಹುತೇಕ ಎಲ್ಲ ಫ್ಲಾಟ್ಗಳೂ ಮಾರಾಟಗೊಂಡಿವೆ, ಕಂಕನಾಡಿಯ ಪ್ರಮುಖ ಆಯಕಟ್ಟಿನ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಇಥೋಸ್ನ ಉಳಿದ ಫ್ಲಾಟ್ಗಳೂ ಕೂಡಾ ಶೀಘ್ರ ಮಾರಾಟಗೊಳ್ಳಲಿವೆ, ಜನರ ಅಭಿರುಚಿಗೆ ತಕ್ಕಂತೆಯೇ ಕಟ್ಟಡಗಳನ್ನು ನಿರ್ಮಿಸುವ ಕಾರಣ ಇದು ಸಾಧ್ಯವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಅವರು ಮಾತನಾಡಿ, ಕಂಕನಾಡಿ ಪ್ರದೇಶದಲ್ಲಿ ಈಗ ನಿರ್ಮಾಣಗೊಳ್ಳಲಿರುವ ರೋಹನ್ ಇಥೋಸ್ ಆಕರ್ಷಕ ಫ್ಲಾಟ್ ಆಗಿ ಮೂಡಿಬರಲಿದೆ. ರೋಹನ್ ಮೊಂತೇರೊ ಅವರ ಪ್ರಾಮಾಣಿಕತೆ ಅವರು ಇಷ್ಟು ಎತ್ತರಕ್ಕೇರಲು ಕಾರಣ ಎಂದರು. ಮಾಜಿ…
ಕಾಸರಗೋಡು,ಏ.18, ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ ಪರಿಣಾಮಗಳನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ಪರಿಚಯಿಸುವುದು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಮಾತನಾಡಿ, ಕಾಸರಗೋಡು ಜಿಲ್ಲೆಯಲ್ಲಿನ ಮಾದಕವಸ್ತು ಬಳಕೆಯಲ್ಲಿರುವ ಯುವಜನತೆಗೆ ಸೂಕ್ತ ಚಿಕಿತ್ಸೆ ನೀಡಲು ಇರುವ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಚಿಂತೆಯನ್ನು ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಸ್ನೇಹಾಲಯವು ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಅಮೋಘ ಸೇವೆಗಳಿಗೆ ಪ್ರಶಂಶೆ ಅರ್ಪಿಸಿದರು. ಜೊತೆಗೆ, ಇತ್ತೀಚೆಗೆ ಈ ಸಂಸ್ಥೆಯು ಸ್ಥಾಪಿಸಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಯುಕ್ತಗೊಂಡಿರುವ…
ಮಂಗಳೂರು , ಎ. 17 : ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ. ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ. ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು…
ಮಂಗಳೂರು , ಎ. 17 : ನಗರದ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ 2025ರ ಮಾರ್ಚ್ 31ಕ್ಕೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 13 ಕೋಟಿ ರೂ. ವ್ಯಾವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ ಶೇ.1.30 ಎನ್.ಪಿ.ಎ. ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು ಮಂಗಳವಾರ ಎಂ.ಸಿ.ಸಿ ಬ್ಯಾಂಕ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, 2024-25ನೇ ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ76 ಕೋಟಿ ರೂ.ನಿಂದ 86.68 ಕೋಟಿ ರೂ.ಗೆ ತಲುಪಿದೆ. ಬ್ಯಾಂಕಿನ ವ್ಯವಹಾರ 1240 ಕೋಟಿ ರೂ. ದಾಟಿದ್ದು, ಕಳೆದ ವರ್ಷಕ್ಕಿಂತ ಶೇ.15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇ.11 ಪ್ರಗತಿ ಸಾಧಿಸಿದ್ದು, 705.40 ಕೋಟಿ ರೂ. ಠೇವಣಿ, – ಒಟ್ಟು ಮುಂಗಡದಲ್ಲಿ ಶೇಕಡಾ 20.37 ಪ್ರಗತಿ ಸಾಧಿಸಿದ್ದು 535.49 ಕೋಟಿ ರೂ. ಮುಂಗಡಗಳು, ದುಡಿಯುವ ಬಂಡವಾಳ 836.73…
ಬೆಂಗಳೂರು, ಏ.16 ,: ಮೆಟ್ರೊ ಕಾಮಗಾರಿ ನಿರ್ಮಾಣ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆಟೊ ಚಾಲಕ ಸಾವನಪ್ಪಿದ ಘಟನೆ ಮಂಗಳವಾರ ಕೋಗಿಲು ಕ್ರಾಸ್ ಬಳಿ ನಡೆದಿದೆ. ಮೆಟ್ರೋ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದಸಂದರ್ಭ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ ಬಿದ್ದ ಪರಿಣಾಮ ಆಟೊ ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಖಾಸಿಂ ಸಾಬ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ತಡರಾತ್ರಿ ಏರ್ಪೋರ್ಟ್ ಮಾರ್ಗದ ಮೆಟ್ರೊ ಕಾಮಗಾರಿಗೆ ಬಳಸಲು ವಯಾಡಕ್ಟ್ ಕೊಂಡೊಯ್ಯುತ್ತಿದ್ದ ಲಾರಿ ತಿರುವು ಪಡೆಯುವಾಗ ಅವಘಡ ಸಂಭವಿಸಿದ್ದು. ಅವಘಡದ ಮುನ್ಸೂಚನೆ ಅರಿತ ಪ್ರಯಾಣಿಕ ಆಟೊದಿಂದ ತಕ್ಷಣ ಇಳಿದಿದ್ದಾರೆ. ಆದರೆ, ಖಾಸೀಂ ಸಾಬ್ ಅವರು ಇಳಿಯುವಷ್ಟರಲ್ಲಿ ವಯಾಡೆಕ್ಟ್ ಉರುಳಿ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಂಗಳೂರು , ಎ. 15 : ಕುಲಶೇಖರ ಬೈತುರ್ಲಿಯಲ್ಲಿ ಶನಿವಾರ ರೋಹನ್ ಕಾರ್ಪೊ ರೇಶನ್ನ ಹೊಸ ಅಪಾರ್ಟ್ಮೆಂಟ್ ಯೋಜನೆ ರೋಹನ್ ಮಿರಾಜ್ಗೆ ಭೂಮಿಪೂಜೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ಮಂಗಳೂರು ನಗರ ಬಿಟ್ಟು ಹೊರಗೂ ಹೋಗಿ ಫ್ಲ್ಯಾಟ್ಗಳನ್ನು ನಿರ್ಮಾಣ ಮಾಡುತ್ತಿರುವುದು ರೋಹನ್ ಅವರ ಧೈರ್ಯವನ್ನು ಮೆಚ್ಚಬೇಕು. ಕನಿಷ್ಠ ಲಾಭವಿಟ್ಟುಕೊಂಡು ಗ್ರಾಹಕರಿಗೆ ಗರಿಷ್ಠ ಸೌಲಭ್ಯ ನೀಡುವುದು ರೋಹನ್ ಮೊಂತೇರೊ ಅವರ ಯೋಜನೆಗಳ ಹಿರಿಮೆ, ಹಾಗಾಗಿ ಅವರ ಫ್ಲ್ಯಾಟ್ಗಳು ಶೀಘ್ರ ಮಾರಾಟವಾಗುತ್ತಿವೆ ಎಂದು ಹೇಳಿದರು. ಕುಲಶೇಖರ ಚರ್ಚ್ನ ಧರ್ಮಗುರು ಫಾದರ್ ಕ್ಲಿಫರ್ಡ್ ಫರ್ನಾಂಡಿಸ್ ಭೂಮಿಪೂಜೆ ನೆರವೇರಿಸಿ, ಯೋಜನೆಯು ಯಾವುದೇ ಅಡೆತಡೆ ಇಲ್ಲದೆ ಶೀಘ್ರ ಅನುಷ್ಠಾನಗೊಂಡು, ಇಲ್ಲಿ ನೆಲೆಸುವವರು ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ಆಶೀರ್ವಚನ ನೀಡಿದರು. ಮಾಜಿ ಶಾಸಕ ಜೆ.ಆರ್.ಲೋಬೊ, ನ್ಯಾಯವಾದಿ ಪದ್ಮರಾಜ್ ಆ., ಮಾಜಿ ಕಾರ್ಪೊರೇಟರ್ಗಳಾದ ಭಾಸ್ಕರ ಕೆ., ಲ್ಯಾನ್ಸಿ ಲಾಟ್ ಪಿಂಟೊ, ನವೀನ್ ಡಿಸೋಜ, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ,…
ಮಂಗಳೂರು , ಎ. 15 : ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ಮಂಗಳೂರು ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ‘ಕುಲಾಲ ಪರ್ಬ’ ಕಾರ್ಯಕ್ರಮ ರವಿವಾರ ಜರಗಿತು. ‘ಕುಲಾಲ ಪರ್ಬ’ ಕಾರ್ಯಕ್ರಮವನ್ನು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉದ್ಘಾಟಿಸಿದರು.ನಂತರ ಮಾತಾಡಿದ ಅವರು,ಕುಲಾಲ ಸಮುದಾಯ ದವರು ಪ್ರೀತಿ, ಬಾಂಧವ್ಯದಿಂದ ಮುನ್ನಡೆಯಬೇಕು. ಕುಲಾಲ ಪ್ರತಿಷ್ಠಾನದಿಂದ ಇನ್ನಷ್ಟು ಉತ್ತಮ ಸಾಮಾಜಿಕ ಕಾರ್ಯಕ್ರಮಗಳು ಆಗಲಿ ಎಂದರು. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕುಲಾಲ್ ಮಂಗಳಾದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಲಾಲ ಸಮಾಜದ 25 ಸಾಧಕರಿಗೆ ‘ಕುಲಾಲ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಮಾಜಿ ಅಧ್ಯಕ್ಷ ಎಂ.ಪಿ. ಬಂಗೇರ, ಬೆಳ್ವಣ್ ಕುಂಭ ನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಕುಶ ಆರ್. ಮೂಲ್ಯ, ಕುಲಶೇಖರ ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್ನ ಅಧ್ಯಕ್ಷ ರಾಮಪ್ರಸಾದ್ ಎಸ್., ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಶಿವಾನಂದ ಕನಡ, ಓಲ್ಡ್…












