Author: admin

ಹಳೆಯಂಗಡಿ, ಫೆ. 10 : ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ.4ರಿಂದ ಮಾ.8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಬೆಲ್ಮಡ, , ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಸುನೀಲ್ ಆಳ್ವ,ದಿವಾಕರ ಸಾಮಾನಿ,ಕಸ್ತೂರಿ ಪಂಜ,ಚಂದ್ರ ಶೇಖರ ನಾನಿಲ್,ಗೀತಾ ಪಿ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉದಯ ಸುವರ್ಣ ಅಗ್ನಿದ ಕಳಿಯ, ವಿನೋದ್ ಸಾಲ್ಯಾನ್ ಬೆಳ್ಳಾಯರು,ವಿನೋದ್ ಬೋಳೂರು ದಿನಕರ ಎಸ್. ಹಳೆಯಂಗಡಿ, ಗೀತಾಂಜಲಿ ಸುವರ್ಣ,ಕಿರಣ್ ಗುರಿಕಾರ ಮೊದಲಾದವರು ಉಪಸ್ಥಿತರಿದ್ದರು. ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Read More

ಕಾಸರಗೋಡು, ಫೆ. 09 : ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಪಚ್ಚಂಬಳ ನಿವಾಸಿ , ಪ್ರಸ್ತುತ ಕನ್ಯಾನದಲ್ಲಿ ವಾಸವಾಗಿರುವ ಅಬ್ದುಲ್ ಮುನೀರ್ (38) ಎಂದು ಗುರುತಿಸಲಾಗಿದೆ. ಕಾರು ಮತ್ತು ದ್ವಿ ಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಅಬ್ದುಲ್ ಮುನೀರ್ ಅವರು ಉಪ್ಪಳದಲ್ಲಿ ಹೊಟೇಲ್ ಕಾರ್ಮಿಕನಾಗಿದ್ದರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ವಿಟ್ಲ, ಫೆ. 08 : ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ನಡೆದಿದೆ. ಮೃತರನ್ನು ವಿಟ್ಲದ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ(68) ಎಂದು ಗುರುತಿಸಲಾಗಿದೆ. ಅತೀ ವೇಗವಾಗಿ ಬಂದ ಬೈಕ್ ಸೀತಾ ಶೆಟ್ಟಿ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ. ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಬೆಳ್ತಂಗಡಿ,ಫೆ.07 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಫೆ.8, ಭಾನುವಾರ ಸಂಜೆ 4 ಗಂಟೆಗೆ ಉದ್ಘಾಟನೆಯಾಗಲಿದೆ. ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ, ವಾಕ್ ಇನ್ ಟು ವಿದ್ವತ್, ಎ ಸ್ಟೆಪ್ ಇನ್ ಟು ಸಕ್ಸಸ್ ಎಂಬ ವಿಶೇಷ ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ.ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ. ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬರೋಡದ ಖ್ಯಾತ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಮೆಸ್ಕಂ ಚೇರ್ ಮನ್ ಕೆ.ಹರೀಶ್ ಕುಮಾರ್, ಬೆಳ್ತಂಗಡಿ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ, ಬೆಳ್ತಂಗಡಿ ಪೊಲೀಸ್ ವಿಭಾಗದ ಡಿವೈ.ಎಸ್.ಪಿ. ರೋಹಿಣಿ ಸಿ.ಕೆ., ಭಾಗವಹಿಸಲಿರುವರು. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ,…

Read More

ಉಳ್ಳಾಲ, ಫೆ.07: ಕಾಪಿಕಾಡು ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಉಮಾಮಹೇಶ್ವರಿ ದೇವಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪರಮೇಶ್ವರ ಜೋಷಿ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ನವ ನಿರ್ಮಾಣಗೊಂಡ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಟೆ ನೆರವೇರಿತು. ಅಷ್ಟಬಂಧ ಬ್ರಹ್ಮಕಲಶಾ ಭಿಷೇಕ ಮತ್ತು ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಪ್ರತಿಷ್ಠಾ ಬಲಿ, ಮಹಾಪೂಜೆ, ಮಹಾ ಮಂತ್ರಾಕತೆ, ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಆಡಳಿತ ಮೊತ್ತೇಸರ ಎ.ಜೆ. ಶೇಖರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು, ಕಾರ್ಯಾಧ್ಯ ಕ್ಷ ಸುರೇಶ್ ಭಟ್ನಗರ, ಕ್ಷೇತ್ರದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಅತ್ತಾವರ, ಕೋಶಾಧಿಕಾರಿ ಟಿ. ರಘುರಾಮ್ ಶೆಟ್ಟಿ ಮೊತ್ತೇಸರರಾದ ಈಶ್ವರ ಉಳ್ಳಾಲ, ಡಾ| ಆರ್.ಕೆ. ಶೆಟ್ಟಿ ಮಹಾಲಿಂಗ, ಕೂಸಪ್ಪಗಟ್ಟಿ ನಿರ್ಮಲಾ ಕುಂಞಂಬು, ಶರತ್ ಕುಮಾರ್, ಸೇವಾ ಸಮಿತಿಯ ಅಧ್ಯಕ್ಷ…

Read More

ಮಂಗಳೂರು, ಫೆ. 06 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಜಗದೀಶ್ ಶೆಣೈ, ಮಂಡಲದ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಿರಣ್ ಮರೋಳಿ, ಮಂಡಲದ ಉಪಾಧ್ಯಕ್ಷರಾದ ಅಜಯ್ ಕುಲಶೇಖರ, ಪ್ರಶಾಂತ್ ಮರೋಳಿ, ಕಿರಣ್ ರೈ, ರವಿ ರಾಮನಗರ, ಪ್ರದೀಪ್ ಕುಮಾರ್ ಶೆಟ್ಟಿ, ನಿತ್ಯ ಕರುಣ್ ನಾಯಕ್, ಕೃಷ್ಣ ಎಸ್ ಆರ್, ಅರುಣ್ ಶೆಟ್ಟಿ, ಮಾಲತಿ, ಸರಳ, ಅರುಣ್ ಬಜ್ಜೋಡಿ, ಪ್ರಶಾಂತ್ ಶೆಣೈ, ಭೋಜ ಅಮೀನ್, ಸುಪ್ರಿತಾ, ಸತೀಶ್ ಅಲಂಗಾರ್, ರಾಜೇಶ್ ಅಲಂಗಾರ್, ರವಿ ರಾಮನಗರ, ತೇಜಸ್ ಸುವರ್ಣ, ಹರಿಣಾಕ್ಷ ಭಂಡಾರಿ, ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು, ಫೆ. 06 : ಮಂಗಳೂರು ಧರ್ಮಕ್ಷೇತ್ರದಲ್ಲಿ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ (SSVP) ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮವು ನಗರದ ಫಾದರ್ ಮುಲ್ಲರ್ ಕನ್ನೆನನ್ ಸೆಂಟರ್‌ನಲ್ಲಿ ಜನವರಿ 25ರಂದು ಭಾನುವಾರ ಜರುಗಿತು. ಸ್ಟೇಯ್‌ನಿಂದ ದೇಶದಿಂದ ಆಗಮಿಸಿದ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ ಅಂತರಾಷ್ಟ್ರೀಯ ಅಧ್ಯಕ್ಷರಾದ ಜುವಾನ್ ಮ್ಯಾನುಯೆಲ್ ಬಿ. ಗೊಮೆಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸ್ಥಾಪಕರಾದ ಫ್ರೆಡರಿಕ್ ಒಝನಾಮ್ ಅವರು ದಾನ ಧರ್ಮ ಮಾಡುವುದೆಂದರೆ ಸಂಕಷ್ಟದಲ್ಲಿರುವವರನ್ನು ನಮ್ಮ ಸಮಾನರಂತೆ ಕಾಣುವುದು, ಇದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ- ಎಂದು ಹೇಳಿದ್ದರು. ಅವರ ಆಶಯದಂತೆ ಕಳೆದ ಒಂದು ಶತಮಾನದಿಂದ ಮಂಗಳೂರು ಧರ್ಮಪ್ರಾಂತ್ಯದ ಎಸ್‌ಎಸ್‌ವಿಪಿ ಸದಸ್ಯರು ನಿಸ್ವಾರ್ಥತೆಯಿಂದ ಪರರ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅವರು ಮೂತ್ರಪಿಂಡ ಚಿಕಿತ್ಸೆ ಪಡೆಯುತ್ತಿರುವ ದಕ್ಷಿಣ ಕನ್ನಡದ ಅರ್ಹ ಬಡರೋಗಿಗಳ ಡಯಾಲಿಸಿಸ್ ಮತ್ತು ಇತರ ಚಿಕಿತ್ಸಾ ವೆಚ್ಚದ ಶೇ 50 ರಷ್ಟನ್ನು ಭರಿಸುವ ಜೋಸೆಫ್ ಎಲಿಯಾಸ್…

Read More

ಮಣಿಪುರ, ಫೆ. 03 : ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಬಿಜೆಪಿ ಪಕ್ಷ ಆಯ್ಕೆ ಮಾಡಲಾಗಿದೆ. ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ನಡುವೆ 2025ರ ಫೆಬ್ರವರಿ 9ರಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯಾಗಿತ್ತು. ಅದಾದ ಕೆಲವೇ ದಿನಗಳ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯ ನಂತರ ಮಣಿಪುರದ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಘೋಷಿಸಲಾಯಿತು. ಖೇಮ್ಚಂದ್ ಸಿಂಗ್ ಎರಡುಬಾರಿ ಶಾಸಕರಾಗಿದ್ದಾರೆ. ಅವರು 2017ರಲ್ಲಿ ಮತ್ತು ನಂತರ 2022ರಲ್ಲಿ ಸಿಂಗ್ಜಮೈ ವಿಧಾನಸಭಾ ಸ್ಥಾನದಿಂದ ಸತತ ಎರಡು ಅವಧಿಗೆ ಆಯ್ಕೆಯಾಗಿದ್ದರು. ಮಾಜಿ ಸಚಿವ  ಯುಮ್ನಮ್ ಖೇಮ್ಚಂದ್ ಸಿಂಗ್ ಅವರು ಈಶಾನ್ಯ ರಾಜ್ಯದಲ್ಲಿ ಬಿಜೆಪಿಯ ಎರಡನೇ ಮುಖ್ಯಮಂತ್ರಿಯಾಗಲಿದ್ದಾರೆ.

Read More

ಮಂಗಳೂರು, ಫೆ.03: ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ಶಿಬಿರ ನಡೆಯಲಿದೆ ಎಂದು ಸಂಚಾಲಕ ಲವ ಬಂಗೇರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಈ ಶಿಬಿರದಲ್ಲಿ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ. ಪತ್ರಕರ್ತರ ಕುಟುಂಬದ ಸದಸ್ಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರು ಉಚಿತ ತಪಾಸಣೆ ಪಡೆಯಬಹುದಾಗಿದೆ. ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ಶ್ರವಣ ಯಂತ್ರದ (Hearing Machine) ವೆಚ್ಚದ 40% ಮೊತ್ತವನ್ನು ಭರಿಸುತ್ತಿದೆ. ಮೊದಲ 30 ನೋಂದಾಯಿತ ವ್ಯಕ್ತಿಗಳು ಮಾತ್ರ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಅಂತಾರಾಷ್ಟ್ರೀಯ…

Read More

ಮಂಗಳೂರು, ಫೆ. 02 : ಫೆ.6ರಂದು ರಾಜ್ಯದಾದ್ಯಂತ ಕರಿಕಾಡ ಸಿನಿಮಾ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ ಎಂದು ಚಿತ್ರದ ನಾಯಕ ನಟ ಕಾಡ ನಟರಾಜ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರಾಗಿದೆ. ಚಿತ್ರದಲ್ಲಿ ಮಂಜು ಸ್ವಾಮಿ , ಯಶ್ ಶೆಟ್ಟಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ , ದಿ.ರಾಕೇಶ್ ಪೂಜಾರಿ , ವಿಜಯ್ ಚಂಡೂರು , ಚಂದ್ರಪ್ರಭ , ಕರಿಸುಬ್ಬು , ಗಿರಿ , ಬಲರಾಜ್ ವಾಡಿ , ಮಾಸ್ಟರ್ ಆರ್ಯನ್ ಮುಂತಾದವರು ನಟಿಸಿದ್ದಾರೆ ಎಂದು ಮಾಹಿತಿ ನೀಡಿದರು. ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6…

Read More