Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು, ಆ. 05 :ಸ್ಯಾಂಡಲ್ ವುಡ್ ನ ಯುವ ನಟ ಸಂತೋಷ್ ಬಾಲರಾಜ್ (34) ಆ 5,ಇಂದು ಬೆಳಗ್ಗೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.
ಉರ್ವಸ್ಟೋರ್, 04 : ಕುಂದಾಪ್ರದ ವಾಟ್ಸಾಪ್ ಬಳಗದ ವತಿಯಿಂದ ‘ಕುಂದಾಪ್ರ ಕನ್ನಡ ಹಬ್ಬ’ ಕಾರ್ಯಕ್ರಮ ಮಂಗಳೂರಿನ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕುಂದಾಪುರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ| ದೀಪಕ್ ಶೆಟ್ಟಿ ಅವರು ಮಾತಾನಾಡಿ, ಕುಂದಾಪುರದ ಮೂಲ ಭಾಷೆಯ ಆಚಾರ ವಿಚಾರ ಮತ್ತು ಅದರ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶ ದಿಂದ ಈ ‘ಕುಂದಾಪ್ರ ಕನ್ನಡ ಹಬ್ಬ’ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮವರೊಂದಿಗೆ ನಮ್ಮ ಭಾಷೆ ಬಳಸಿ ಅಗತ್ಯಕ್ಕೆ ತಕ್ಕಂತೆ ಇತರ ಭಾಷೆ ಬಳಸಬೇಕು.ಮಂಗಳೂರಿನಲ್ಲಿರುವ ಕುಂದಾಪ್ರ ಕನ್ನಡಿಗರು ತಮ್ಮ ಮೂಲ ಭಾಷೆಯೊಂದಿಗೆ ತುಳುವನ್ನು ಕೂಡ ಬಳಸುತ್ತಾರೆ. ಸ್ವಾತಂತ್ರ್ಯ ಹೋರಾಟ,ಸಾಹಿತ್ಯ, ಯಕ್ಷಗಾನ, ಧಾರ್ಮಿಕ ಕ್ಷೇತ್ರಕ್ಕೂಕುಂದಾಪುರದವರ ಕೊಡುಗೆ ಅಪಾರ.ಭಾವನಾತ್ಮಕ ಸಂಬಂಧ, ಭಾಷೆಯ ಬಗ್ಗೆ ಮಾತನಾಡುವವರ ಅಭಿಮಾನದಿಂದ ವಿಶ್ವ ಕುಂದಾಪುರ ಕನ್ನಡ ದಿನ ಯಶಸ್ವಿಯಾಗಿದೆ ಎಂದರು. ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಬಿ. ಮಾತನಾಡಿ, ಭಾಷೆಯ ಹೆಸರಿನಲ್ಲಿ ವಿಶ್ವ ಮಟ್ಟದ ಕಾರ್ಯಕ್ರಮ ಆಯೋಜನೆಯ ಕೀರ್ತಿ ಕುಂದಾಪ್ರ ಕನ್ನಡಕ್ಕೆ ಸಲ್ಲುತ್ತದೆ.ತುಳುವಿನಂತೆ ಕುಂದಾಪ್ರ…
ಮಂಗಳೂರು, ಆ. 04 : ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರು ಆಶೀರ್ವದಿಸಿ, ಹೊಸ ಶಾಖೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಬು ಶೆಟ್ಟಿ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟಿಸಿದರು ಇ-ಸ್ಟ್ಯಾಂಪಿಂಗ್ ಸೌಲಭ್ಯವನ್ನು ಬೈಂದೂರಿನ ಸೈಂಟ್ ಥಾಮಸ್ ವಸತಿ ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಫಿಲಿಪ್ ನೆಲಿವಿಲ್ಲಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಶ್ರೀ…
ಚೆನ್ನೈ, ಆ. 03 : ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಮದನ್ ಬಾಬ್ (71) ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು ಎಂದು ವರದಿಯಾಗಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಮದನ್ ಬಾಬ್ ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಮದನ್ ಬಾಬ್ ಅವರ ಮೂಲ ಹೆಸರು ಎಸ್. ಕೃಷ್ಣಮೂರ್ತಿ. ಚಿತ್ರರಂಗದಲ್ಲಿ ಅವರು ಮದನ್ ಬಾಬ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ರಜನಿಕಾಂತ್, ಕಮಲ್ ಹಾಸನ್, ಅಜಿತ್ ಕುಮಾರ್, ಸೂರ್ಯ, ವಿಜಯ್ ಮುಂತಾದ ಸ್ಟಾರ್ ಕಲಾವಿದರ ಸಿಮಾಗಳಲ್ಲಿ ಮದನ್ ಬಾಬ್ ನಟಿಸಿದ್ದರು.
ಮೂಡುಬಿದಿರೆ, , ಆ. 02 : ಮಾನವ ಸಂಪನ್ಮೂಲದ ಸಂಪೂರ್ಣ ಬಳಕೆ ಆಗುವಂಥ ಶಿಕ್ಷಣ ಮಕ್ಕಳಿಗೆ ಲಭಿಸಿದಾಗ ಅವರು ಸ್ವಾವಲಂಬಿಯಾಗುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ಗುಂಡೂರಾವ್ ಅವರು ಶುಕ್ರವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2025ರ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ಅವರು ಮಾತನಾಡುತ್ತಾ, ಉದ್ಯೋಗಾರ್ಥಿಗಳು ಉದ್ಯೋಗ ಕೇಳಿಕೊಂಡು ಕಂಪೆನಿಗಳ ಬಾಗಿಲು ತಟ್ಟದೆ ನಿಮ್ಮ ಕೌಶಲದಿಂದ ಕಂಪೆನಿಗಳೇ ನಿಮ್ಮನ್ನು ಕರೆದು ಕೆಲಸ ಕೊಡುವಂತಾಬೇಕಾಗಿದೆ ಅಂಥ ವ್ಯಕ್ತಿತ್ವ ನಿಮ್ಮದಾಗಲಿ ಎಂದರು. ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು. ಈ ಸಂದರ್ಭದಲ್ಲಿ ದುಬೈನ ಫಾರ್ಚುನ್ ಗ್ರೂಪ್ ಆಫ್…
.ಮಂಗಳೂರು, ಆ. 02 : ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ . ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ…
ಮಂಗಳೂರು, ಜು. 01: ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದವರ ಆಶ್ರಯದಲ್ಲಿ ‘ಕುಂದಾಪ್ರ ಕನ್ನಡ ಹಬ್ಬ’ ಆಗಸ್ಟ್. 3ರಂದು ಬೆಳಗ್ಗೆ 9 ರಿಂದ ಸಂಜೆ 7ರ ತನಕ ಮಂಗಳೂರಿನ ಉರ್ವ ಸ್ಟೋರ್ನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂಚಾಲಕ ಸಂತೋಷ್ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂದಗನ್ನಡದ ನೆಲದಲ್ಲಿ ಜನಿಸಿ, ವೃತ್ತಿ ನಿಮಿತ್ತ ಮಂಗಳೂರಿಗೆ ಬಂದು ನೆಲೆಸಿ, ತುಳುನಾಡಿನವರೇ ಆಗಿದ್ದರೂ, ತಮ್ಮ ಮೂಲ ನೆಲೆಯ ಭಾಷೆ, ಸಂಸ್ಕೃತಿ ಆಚರಣೆ, ಸಂಪ್ರದಾಯವನ್ನ ಉಳಿಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ವಿಶ್ವ ಕುಂದಾಪ್ರ ದಿನಾಚರಣೆಯನ್ನು ಆಷಾಢ ಮಾಸದ ಒಂದು ದಿನದಲ್ಲಿ ‘ಕುಂದಾಪ್ರ ಹಬ್ಬ’ ಹೆಸರಿನಲ್ಲಿ ಹಲವು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.ಕಾರ್ಯಕ್ರಮದ ದಿನ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಅದರಲ್ಲಿ ಮೂರು ಕಾಲಿನ ಓಟ, ಸೈಕಲ್ ಟೈಯರ್ ಓಟ, ಮಡಲು ನೇಯುವುದು, ಗೇರುಬೀಜದ ಗುರಿ, ರಂಗೋಲಿ, ಹೂವಿನ ಸರ…
ಬೆಂಗಳೂರು, ಆ. 01 : ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2 ರ ಶನಿವಾರ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಘೋಷಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಈಗಾಗಲೇ 14 ತಿಂಗಳುಗಳನ್ನು ನ್ಯಾಯಾಂಗ ಬಂಧನದಲ್ಲಿ ಕಳೆದಿರುವ ರೇವಣ್ಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶನಿವಾರ ನಾಳೆ ಪ್ರಕಟಿಸಲಿದೆ. ಜಡ್ಜ್ ಸಂತೋಷ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ. ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಕರಣ…
ಮಂಗಳೂರು, ಜು.31: ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪೂರ್ವಭಾವಿಯಾಗಿ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯ ಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಆ.3ರಂದು ‘ಬೃಹತ್ ಸ್ವಚ್ಚತಾ ಅಭಿಯಾನ’ ವನ್ನು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ 365 ಸ್ಥಳಗಳಲ್ಲಿ ಏಕಕಾಲದಲ್ಲಿ ವಿವಿಧ ಸಂಘಟನೆಗಳ ಸಹಕಾರ ದೊಂದಿಗೆ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸಹಕಾರಿರತ್ನ ಎ.ಸುರೇಶ್ ರೈ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಈ ಬಾರಿಯ ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಬಾರಿ ಗ್ರಾಮೋತ್ಸವದ ಕಾರ್ಯ ಕ್ರಮಗಳು ಆ.8 ರಂದು ಶ್ರೀ ಸಂಸ್ಥಾನಮ್ನಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ.ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನಮ್ ನ ಪರಮ ಪೂಜ್ಯ ಶ್ರೀ ಗುರು ದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವವನ್ನು ಗ್ರಾಮೋತ್ಸವವಾಗಿ ಗುರುವಂದನೆ-ಸೇವಾ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಸುರೇಶ್ ರೈ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪನೆಯಡ್ಕ…
ಮಂಗಳೂರು,ಜು. 30 : ಎಮ್.ಸಿ.ಸಿ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ 03.08.2025ರಂದು ತೆರೆಯಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಎಮ್.ಸಿ.ಸಿ. ಬ್ಯಾಂಕ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು…