Author: admin

ಮಂಗಳೂರು, ಮೇ.೦5 : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ವೈ ಶೆಟ್ಟಿ ಅವರು ಬಡಗ ಎಡಪದವು ಪಂಚಾಯತ್ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಬಂಟ್ವಾಳ, ಮೇ.೦5 : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಕರೋಪಾಡಿ ಮತ್ತು ಕನ್ಯಾನ ಗ್ರಾಮದ ವಿವಿಧ ಭಾಗಗಳಿಗೆ ಮತ್ತು ಎಸ್.ಸಿ.ಕಾಲೋನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭ್ಡದಲ್ಲಿ ಸದಸ್ಯರಾದ ರಘನಾಥ ಶೆಟ್ಟಿ ಪಟ್ಟ ರಘುರಾಮ ಶೆಟ್ಟಿ, ಧರ್ಣಮ್ಮ ಜೆ.ಪಿ.ಗೌಡ, ಮನೋಜ್ ಬನಾರಿ, ಪ್ರಮುಖರಾದ ಯೋಗೀಶ್ ಕುಳ, ಶಿವಪ್ರಸಾದ್ ಶೆಟ್ಟಿ, ವಿನೋದ್ ಶೆಟ್ಟಿ ಹರೀಶ್ ಬೇಡಗುಡ್ಡೆ, ಉದಯರಮಣ ಭಟ್,ಕುಮಾರ್ ಭಟ್, ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕನ್ಯಾನ ಭಾರತಿ ಸೇವಾಶ್ರಮ, ಶ್ರೀ ಕ್ಷೇತ್ರ ಕಣಿಯೂರು ಗೆ ಬೇಟಿ ನೀಡಿ ಶ್ರೀ ಮಹಾಬಲ ಸ್ವಾಮೀಜಿ ಯವರ ಆಶೀರ್ವಾದ ಪಡೆದರು.

Read More

ಬಂಟ್ವಾಳ, ಮೇ.4: ರಮಾನಾಥ ರೈ ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿ ಬಿಜೆಪಿಯವರ ಆಡಳಿತ ಅವಧಿಯಲ್ಲಿ ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಬಡವರಿಗೆ ಏಳು ಕೆಜಿ ಅಕ್ಕಿ ಕೊಟ್ಟದ್ದು ಕಾಂಗ್ರೆಸ್. ರೈತರಿಗೆ ಉಚಿತ ವಿದ್ಯುತ್ ಅನ್ನು ಈಗಾಗಲೇ ನೀಡಲಾಗುತ್ತಿದೆ. ಇವತ್ತು ರೈತರು ಉಚಿತವಾಗಿ ವಿದ್ಯುತ್ ಪಡೆದು ಹಲವು ಪಂಪ್ ಗಳನ್ನು ಅಳವಡಿಸಿ ತಮ್ಮ ತೋಟಗಳಿಗೆ ನೀರು ಹರಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾಂಗ್ರೆಸ್ ಸರಕಾರ ಕಾರಣ. ಇದು ಸಾಧ್ಯವಿರುವಾಗ ಬಡವರಿಗೆ 200 ಯೂನಿಟ್ ಉಚಿತವಾಗಿ ಕೊಡುವುದಕ್ಕೆ ಯಾಕೆ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ಖಚಿತವಾಗಿ ಈ ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ವಿದೇಶದಿಂದ ಕಪ್ಪು ಹಣ ತಂದು ಬಡವರಿಗೆ 15 ಲಕ್ಷ ಹಂಚುತ್ತೇವೆ ಎಂದಿದ್ದರು. ನಿರುದ್ಯೋಗಿಗಳಿಗೆ…

Read More

ಸುರತ್ಕಲ್, ಮೇ. 01: ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಲಾಯಿತು. ಜೆಡಿಎಸ್ ಸರಕಾರದ ಅವಧಿಯಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಸಿಕ್ಕಿತು, ರೈತರ ಸಾಲ ಮನ್ನಾ ಆಗಿ ರೈತರಿಗೆ ನೆಮ್ಮದಿಯ ಜೀವನ ಸಿಕ್ಕಿತು  ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಿಂದಿನ ಶಾಸಕ ಮೊಯ್ದಿನ್ ಬಾವ ಅವರ ಅವಧಿಯಲ್ಲಿ ಆಗಿವೆ. ಭತ್ತದ ತೆನೆ ಹೊತ್ತ ಚಿಹ್ನೆ ಗೆ ಮತ ಕೊಟ್ಟು ಹರಸಿ. ಜೆಡಿಎಸ್ ಪಕ್ಷದ ಅಭ್ಯರ್ಥಿ ಮೊಯ್ದಿನ್ ಬಾವಾ ಅವರನ್ನು ಗೆಲ್ಲಿಸಿ ಎಂದರು.

Read More

ಮಂಗಳೂರು, ಏ. 30: ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರಿನಲ್ಲಿ ಏ. 29, ಶನಿವಾರ ರೋಡ್ ಶೋ ನಡೆಸಿದ್ದಾರೆ. ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಕೊಡಿಯಾಲ್ ಬೈಲ್ನ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ ರೋಡ್ ಶೋ ನಡೆಯಿತು.ಈ ರೋಡ್ ಶೋನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಅವರು ಅಮಿತ್ ಶಾಗೆ ಸಾಥ್ ನೀಡಿದ್ದಾರೆ.

Read More

ಮಂಗಳೂರು, ಏ. 28 : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಘೋಷಣೆ ಘೋಷಿಸಿದ್ದಾರೆ. ಇದು ಕಾಂಗ್ರೆಸ್ನ ಐದನೇ ಗ್ಯಾರಂಟಿಯಾಗಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಬಿಜೆಪಿ ಸರಕಾರ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ಮೂಲಕ ಈ ರಾಜ್ಯದ ಮಹಿಳೆಯರ ಹಣವನ್ನು ಕಸಿದುಕೊಂಡಿದೆ. ಆ ಹಣವನ್ನು ಈ ರಾಜ್ಯದ ಮಹಿಳೆಯರಿಗೆ ನಾವು ಮರಳಿಸಲಿದ್ದೇವೆ ಎಂದ ರಾಹುಲ್ ಗಾಂಧಿ, ಅದೇ ಹಣದಲ್ಲಿ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ…

Read More

ಮಂಗಳೂರು, ಏ.28: ನಗರದ ಅಟಲ್ ಸೇವಾ ಕೇಂದ್ರದಲ್ಲಿ ಏ.24 ಸೋಮವಾರ ವೇದವ್ಯಾಸ ಕಾಮತ್ ಅವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿಯ ಕಾರ್ಯಗಳ “ಅಭಿವೃದ್ಧಿ ಪಥ” ಪುಸ್ತಕ ವನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿ, ಶಾಸಕನಾಗಿ ಕಳೆದ ಐದು ವರ್ಷಗಳ ಅವಧಿಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದೇನೆ. 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣಗೊಂಡಿದೆ ಎಂದರು. ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದೆ. ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಕಾರ್ಯಯೋಜನೆಗೊಂಡು 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ದಕ್ಷಿಣ ವಿಧಾನಸಭಾ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಈ ಐದು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 792 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ನೀರಿನ ಪೈಪ್ ಗಳಲ್ಲಿ ಲೋಪ ಕಂಡು…

Read More

ಸಿದ್ಧಕಟ್ಟೆ, ಎ.26: ಬಂಟ್ವಾಳ  ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರು ಸಿದ್ಧಕಟ್ಟೆ ಚರ್ಚ್ ಬಳಿಯಿಂದ ಪೇಟೆಯ ತನಕ ಬುಧವಾರ ಸಂಜೆ ರೋಡ್ ಶೋ ನಡೆಸಿ ಮತ ಯಾಚಿಸಿದರು. ಹಲವಾರು ಕಾರ್ಯಕರ್ತರೊಂದಿಗೆ ಸಿದ್ಧಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾ ಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ಧಕಟ್ಟೆ ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡುತ್ತಿದ್ದು, ಇದು ಕಾರ್ಯಕರ್ತರ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ. ಪಕ್ಷ ಇದೀಗ ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಜನತೆ ಆಶೀರ್ವಾದ ಮಾಡಿದರೆ ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನು ರೂಪಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಚುನಾವಣಾ ಪ್ರಭಾರಿ ರವಿಶಂಕರ್ ಮಿಜಾರ್‌, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಕರ್ಕಳ, ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ,ಕೇರಳ-ಪಾಲಕ್ಕಾಡ್ ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್, ಕುಕ್ಕಿಪಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ, ಪಕ್ಷ…

Read More