Subscribe to Updates
Get the latest creative news from FooBar about art, design and business.
Author: admin
ಉರ್ವ, ಫೆ. 20 : ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ ಮಂಗಳವಾರ ಸಂಪನ್ನಗೊಂಡಿತು. ಸೋಮವಾರ,ಫೆ. 17ರಂದು ರಾತ್ರಿ ದೇವಿಗೆ ಮಹಾರಂಗ ಪೂಜೆಯಾಗಿ ಹಾಲು ಉಕ್ಕಿಸುವ ಪೂಜೆ ನೆರವೇರಿತು. ತಡರಾತ್ರಿ ಮಹಾಪೂಜೆ ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು. ಮಂಗಳವಾರ ಬೆಳಗ್ಗೆ ನಿತ್ಯಪೂಜೆ, ಮಧ್ಯಾಹ್ನ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ ಮಹಾಪೂಜೆ, ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು. ರಾತ್ರಿ ಸುಡುಮದ್ದು ಪ್ರದರ್ಶನ ನೆರವೇರಿತು. ಬಳಿಕ ನೈವೇದ್ಯ ಬಲಿ, ಮಹಾರಾಶಿ ಪೂಜೆ ನಡೆಯಿತು. ಫೆಬ್ರವರಿ 22ರಂದು ರಾತ್ರಿ 7ರಿಂದ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮ ನಡೆಯಲಿದೆ.
ಮಂಗಳೂರು,ಫೆ.19 : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ಇದರ ನೇತೃತ್ವದಲ್ಲಿ ಫೆ.22 ಮತ್ತು 23, 2025 ರಂದು ಮೋರ್ಗನ್ಸ್ ಗೇಟ್ನಲ್ಲಿರುವ ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ಎಂಬ ರಾಮಕ್ಷತ್ರಿಯರ ಸಮಾವೇಶ ನಡೆಯಲಿದೆ ಎಂದು ಸಂಚಾಲಕರಾದ ಜೆ.ಕೆ.ರಾವ್ ನಗರದ ಪಾಲೆಮಾರ್ ಗಾರ್ಡನ್ ನಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಸಮಾಜವನ್ನು ಒಟ್ಟುಗೂಡಿಸುವುದು ಮತ್ತು ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಆಚರಣೆ, ಪರಂಪ ರೆಯನ್ನು ತಿಳಿಯಪಡಿಸುವುದು ಸಮಾವೇಶದ ಮುಖ್ಯ ವಿಷಯವಾಗಿದೆ. ಈ ಸಮಾವೇಶದಲ್ಲಿ ರಾಮಕ್ಷತ್ರಿಯ ಸಮಾಜದ ಎಲ್ಲಾ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವ ಸಮುದಾಯ, ಮಹನೀಯರು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ ಸುಮಾರು 52 ಸಂಘಗಳ ಪ್ರತಿನಿಧಿ ಗಳು ಮತ್ತು ಸದಸ್ಯರು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ ಎಂದರು. ಫೆ. 22 ರಂದು ಬೆಳಗ್ಗೆ ಗಂಟೆ 9ರಿಂದ ರಾಮತಾರಕ ಯಜ್ಞ ಮತ್ತು ಜಪ…
ಕಾಪು, ಫೆ. 19: ಇಲ್ಲಿನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ಮಾರಿಯಮ್ಮ ದೇವಿಯ ಭೇಟಿ ಸಹಿತವಾಗಿ ರಥಾರೋಹಣ ಆ ಬಳಿಕ ಮಹಾ ಅನ್ನಸಂತರ್ಪಣೆ ರಾತ್ರಿ ಶ್ರೀ ಮನ್ಮಹಾರಥೋತ್ಸವ, ಉತ್ಸವ ಬಲಿ,ಕಟ್ಟೆ ಪೂಜೆ,ಭೂತ ಬಲಿ,,ಶಯನೋತ್ಸವ ನೆರವೇರಿತು. ದೇಗುಲದ ಪ್ರಧಾನ ತಂತ್ರಿ ವೇ। ಮೂ। ಶ್ರೀಶ ತಂತ್ರಿ ಕಲ್ಯ, ಅರ್ಚಕ ವೇ। ಮೂ। ನಾರಾಯಣ ತಂತ್ರಿ ಅವರ ಉಪಸ್ಥಿತಿಯಲ್ಲಿ ವೈದಿಕ ವೃಂದದವರ ಪಾಲ್ಗೊಳ್ಳುವಿಕೆಯೊಂದಿಗೆ ವಾರ್ಷಿಕ ಮಹೋತ್ಸವ, ಪಲ್ಲಪೂಜೆ, ರಥಾರೋಹಣ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹಳೇ ಮಾರಿಯಮ್ಮದೇವಸ್ಥಾನದ ಆಡಳಿತ ಮೊಕ್ತಸರ ಪ್ರಸಾದ್ ಜಿ.…
ಮಂಗಳೂರು, ಫೆ.18 : ಫೆಬ್ರವರಿ 22, ಶನಿವಾರದಂದು ಅಪರಾಹ್ನ ಗಂಟೆ 3.30ರಿಂದ ಉರ್ವಾಸ್ಟೋರ್ ಅಂಬೇಡ್ಕರ್ ಭವನದಲ್ಲಿ ಜರಗಲಿರುವ “ಮಾಯಿದ ಮಹಾಕೂಟ” ಸಮಾರಂಭವನ್ನು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಗುರುದೇವದತ್ತ ಸಂಸ್ಥಾನ ಶ್ರೀ ದತ್ತಾಂಜನೇಯ ಕ್ಷೇತ್ರ ಒಡಿಯೂರ್ರವರು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ತುಳುಭಾಷೆ ಸಂಸ್ಕೃತಿ ಅಭಿವೃದ್ಧಿ, ಸಂಪ್ರದಾಯ ನೆಲೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟ ಸ್ಥಾಪನೆಯಾಗಿದೆ. ದೇಶ-ವಿದೇಶದಲ್ಲಿ ಸುಮಾರು 48 ತುಳು ಸೇವಾ ಸಂಘ-ಸಂಸ್ಥೆಗಳು ಒಕ್ಕೂಟದ ಸದಸ್ಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ತುಳು ಭಾಷೆ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ/ಸಮ್ಮೇಳನ ಸಮಾರಂಭ ನಿರಂತರವಾಗಿ ನಡೆಸಿ ತುಳುಭಾಷೆ ಮಾನ್ಯತೆಗೆ ಗಮನ ಸೆಳೆಯುತ್ತಿದೆ.ಕಳೆದ ವರ್ಷ ಅಗಸ್ಟ್ 24ರಂದು ಒಕ್ಕೂಟದ ವತಿಯಿಂದ “ತುಳುನಾಡ ಜಾನಪದ ಉಚ್ಚಯ 2024” ಕಾರ್ಯಕ್ರಮವನ್ನು ನಡೆಸಿ ಇದರಲ್ಲಿ ತುಳುವೆರ ದಿಬ್ಬಣ, ಪೆರ್ಮೆದ ತುಳುವೆ ಪ್ರಶಸ್ತಿ, ಗಿಡ್ಡೆರು ಮಾನಾದಿಗೆ, ಅಕಾಡೆಮಿಗಳ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಹಲವಾರು ಅತಿಥಿ ಗಣ್ಯರ ಉಪಸ್ಥಿತಿ ಬಹಳ ವಿಜೃಂಭನೆಯಿಂದ ಜರುಗಿತ್ತು ಎಂದರು.…
ಮಂಗಳೂರು, ಫೆ.17 : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆ. 21, 22 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. 21ನೇ ತಾರೀಕಿನಂದು ಬೆಳಗ್ಗೆ 8.45 ಕ್ಕೆ ಅಸೈಗೋಳಿಯ ಕೇಂದ್ರ ಮೈದಾನದಿಂದ ಕನ್ನಡ ಸಾಂಸ್ಕೃತಿಕ ದಿಬ್ಬಣ ಆಗಮಿಸಲಿದೆ. ಪದ್ಮಶ್ರೀ ಹರೇಕಳ ಹಾಜಬ್ಬ ಇವರು ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. 10 ಗಂಟೆಗೆ ಸರಿಯಾಗಿ ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭವು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾಗಿರುವ ಡಾ. ಪ್ರಭಾಕರ ಶಿಶಿಲ ಉಪಸ್ಥಿತರಿರುತ್ತಾರೆ. ಹಿರಿಯ ಕವಿಗಳಾಗಿರುವ ಸನ್ಮಾನ್ಯ ಬಿ ಆರ್ ಲಕ್ಷ್ಮಣ ರಾವ್ ಬೆಂಗಳೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರು ಉಳ್ಳಾಲ ತಾಲೂಕಿನ ಶಾಸಕರೂ ಆಗಿರುವ ಸನ್ಮಾನ್ಯ ಯು ಟಿ ಖಾದರ್ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ…
ಮಂಗಳೂರು, ಫೆ.16 : ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿತು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಅಳಪೆ ದಕ್ಷಿಣ ವಾರ್ಡಿನ ಆದರ್ಶ ಮಹಿಳಾ ಮಂಡಲದ ಸದಸ್ಯರು ಅತ್ಯಂತ ಕ್ರಿಯಾಶೀಲ ತಂಡವಾಗಿದ್ದು ಉತ್ತಮ ಕಾರ್ಯ ನಿರ್ವಹಿಸುತ್ತಾ ಸಾಗಿರುವುದು ಅಭಿನಂದನಾರ್ಹ. ಈ ಕಟ್ಟಡದ ಮೇಲ್ಛಾವಣಿಯ ಅಗತ್ಯತೆಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಪೂಜಾರಿಯವರು ಗಮನಕ್ಕೆ ತಂದ ಬಳಿಕ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕಿರಣ್ ರೈ, ನವೀನ್, ಆದರ್ಶ ಮಹಿಳಾ ಮಂಡಲದ ಅಧ್ಯಕ್ಷೆ ಸೀತಾ ಕೆ. ಸಹಿತ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು,ಫೆ.15 : ಕಲರ್ಸ್ ಕನ್ನಡ ಟಿವಿ ಚಾನೆಲ್ ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ನಕ್ಕು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ. ಬಾಯ್ಸ್ V/S ಗರ್ಲ್ಸ್ :- ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಹೆಸರಾಗಿರುವ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ V/S ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಅನ್ನು ಹೊತ್ತು ತರಲಿದೆ. ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ. ಈಗಷ್ಟೇ ಬಿಗ್ ಬಾಸ್ ಗೆದ್ದಿರುವ ಹನುಮಂತ ಲಮಾಣಿ, ಬಿಗ್ ಬಾಸ್ ಧನರಾಜ್ ಆಚಾರ್, ಐಶ್ವರ್ಯಾ ಶಿಂದೊಗಿ, ಶೋಭಾ ಶೆಟ್ಟಿ, ಚೈತ್ರಾ ಕುಂದಾಪುರ…
ಬೆಂಗಳೂರು, ಫೆ.14 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ವಿದ್ವಾಂಸ, ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ. ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಡಾ. ಬಿ.ಎ. ವಿವೇಕ ರೈ ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಅಗ್ರಾಳದವರು. ಇವರು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ, ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಜರ್ಮನಿಯ ವ್ಯೂತ್ ಬರ್ಗ್ ವಿಶ್ವವಿದ್ಯಾನಿಲಯದ ಅತಿಥಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ, ಸಮ್ಮಾನಗಳು…
ಮಂಗಳೂರು, ಫೆ.13 : ನಗರ ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2025 ಗುರುವಾರ, ಫೆ. 13 ರಂದು ನಡೆಯಿತು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಅವರು, ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡಲಾಗುತ್ತದೆ. ರಸ್ತೆ ಅಪಘಾತದಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ರಸ್ತೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಗುತ್ತದೆ. ವಾಹನ ಚಲಾಯಿಸುವಾಗ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ಕಡಿಮೆ ಮಾಡಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಬೋಳಾರ್ ಅವರು, ಹೆಚ್ಚಿನ ರಸ್ತೆ ಅಪಘಾತಗಳು ವಾಹನ ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸುತ್ತವೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ತಪ್ಪಿಸಬಹುದು ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್, ಡಿಸಿಪಿ ಸಿದ್ಧಾರ್ಥ್ ಗೋಯಲ್,…
ಮಂಗಳೂರು, ಫೆ.12 : ಆಕಾಶ್ ಎಜುಕೇಷನ್ ಸರ್ವಿಸ್ ಲಿಮಿಟೆಡ್ನಲ್ಲಿ ತರಬೇತಿ ಪಡೆದ ನಾಲ್ವರು ವಿದ್ಯಾರ್ಥಿಗಳು 2025ರ ಜೆಇಇ ಮೇನ್ಸ್ (ಸೆಷನ್ 1) ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಪೈಕಿ ಅನಿಕೇತಿ ಡಿ.ಶೆಟ್ಟಿ ಮತ್ತು ವಿಟ್ಟಲ್ ದಾಸ್ ಎ. ಇಬ್ಬರೂ 99.90 ಪರ್ಸೆಂಟೈಲ್ ಗಳಿಸಿದರೆ, ರೇಮಂಡ್ ಎಲಿಜಾ ಪಿಂಟೊ 99.62 ಪರ್ಸೆಂಟ್ ಮತ್ತು ಆಯುಷಿ ನಾಯಕ್ 99.34 ಪರ್ಸೆಂಟ್ ಗಳಿಸಿದ್ದಾರೆ. ವಿದ್ಯಾರ್ಥಿಗಳು ಶೇಕಡ 99ಕ್ಕಿಂತ ಹೆಚ್ಚು ಅಂಕ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಫಲಿತಾಂಶಗಳು ವಿದ್ಯಾರ್ಥಿಗಳ ಶೈಕ್ಷಣಿಕ ಉತ್ಕೃಷ್ಟತೆಯನ್ನು ಪ್ರತಿಬಿಂಬಿಸುತ್ತವೆ. ಸವಾಲಿನ ಪರೀಕ್ಷೆಯಲ್ಲಿ ದೊರೆತ ಯಶಸ್ಸು ಇದಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ನಿನ್ನೆ ಈ ಫಲಿತಾಂಶಗಳನ್ನು ಪ್ರಕಟಿಸಿದೆ ಎಂದು ಆಕಾಶ್ ಎಜುಕೇಶನ್ ಸರ್ವಿಸಸ್ ಲಿಮಿಟೆಡ್ನ ಮುಖ್ಯ ಅಕಾಡೆಮಿ ಮತ್ತು ಬ್ಯುಸಿನೆಸ್ ಆಫೀಸರ್ ಶ್ರೀಧೀರ್ ಕುಮಾರ್ ಮಿಶ್ರಾ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅವರು , ನಮ್ಮ ವಿದ್ಯಾರ್ಥಿಗಳು ಜೆಇಇ ಮೇನ್ಸ್ 2025 ಪರೀಕ್ಷೆಯಲ್ಲಿ…












