Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಫೆ. 11 :ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರ ಪಾಲಿಗೆ ಈ ಮೇಲ್ಛಾವಣಿಯ ಅಭಿವೃದ್ಧಿಯು ಸಹಜವಾಗಿ ಸಂತಸ ಮೂಡಿಸಿರುತ್ತದೆ ಎಂದರು. ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯೆ ಪೂರ್ಣಿಮಾ, ಬಿಜೆಪಿ ಪ್ರಮುಖರಾದ ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ಭಾಸ್ಕರ ಚಂದ್ರ ಶೆಟ್ಟಿ, ಸೇರಿದಂತೆ ಶೆಟ್ಟಿ ರಿಕ್ಷಾ ಪಾರ್ಕ್ ಎಸೋಸಿಯೇಶನ್ ನ ಅನೇಕರು ಉಪಸ್ಥಿತರಿದ್ದರು.
ಮಂಗಳೂರು, ಫೆ. 10 : ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ‘ಮಿಷನ್ ಉತ್ವಾನ್’ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ 8 ‘ಇನ್ ಕ್ಯುಬೇಷನ್ ಸೆಂಟರ್’ಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಈ ಯೋಜನೆಯನ್ನು ದಕ್ಷಿಣದ ರಾಜ್ಯಗಳಲ್ಲಿ ಮುನ್ನಡೆಸಲಿರುವ ‘ಸೆಕ್ಷನ್ ಇನ್ಫಿನ್-8 ಫೌಂಡೇಶನ್’ನ ಸ್ಥಾಪಕ ನಿರ್ದೇಶಕ ವಿಶ್ವಾಸ್ ಯು.ಎಸ್. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಉದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಉದ್ಯಮಿಶೀಲತೆಗೆ ಸಂಬಂಧಿಸಿದಂತೆ ಸಂಶೋಧನೆ ಪ್ರೋತ್ಸಾಹಿಸುವುದು ಮಿಷನ್ ಉತ್ಪಾನ್ ಯೋಜನೆಯ ಮುಖ್ಯ ಉದ್ದೇಶ ವಾಗಿದೆ. ಗ್ರಾಮೀಣ ಕೇಂದ್ರಿತ ಸೆಂಟರ್ಗಳನ್ನು ಸ್ಥಾಪಿಸುವುದು ಉದ್ಯಮಶೀಲತೆಯ ಸಂಶೋಧನೆ, ಆರ್ಥಿಕ ಸಬಲೀಕರಣಕ್ಕಾಗಿ ಈ ‘ಇನ್ಕ್ಯುಬೇಷನ್ ಸೆಂಟರ್’ಗಳನ್ನು ಆರಂಭಿಸಲಾಗುವುದು. ಇದಕ್ಕಾಗಿ ಐಐಟಿಯಿಂದ ಉಚಿತವಾಗಿ ತಾಂತ್ರಿಕ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಮಿಷನ್ ಉತ್ಪಾನ್ ಯೋಜನೆಯ ಅನುಷ್ಠಾನ ಕುರಿತಂತೆ ಮಂಗಳೂರಿನ ಕೆನರಾ ಎಂಜಿನಿಯರಿಂಗ್ ಕಾಲೇಜು, ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಮತ್ತು ಉಡುಪಿಯ ಮಧ್ಯ ವಾದಿರಾಜ…
ಪುತ್ತೂರು, ಫೆ.10 : ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಫೆ.8 ರಂದು ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಮಿತ್ತನಾಜೆ ಕೊಟ್ಟಾಯಿಲ್ ನಿವಾಸಿ ಕೆ.ಜೆ.ಜಾನ್ (59) ಎಂದು ಗುರುತಿಸಲಾಗಿದೆ. ಶಿರಾಡಿ ಪೇಟೆಗೆ ಬಂದಿದ್ದ ಜಾನ್ ಅವರು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದ್ದು,ಗಂಭೀರ ಗಾಯಗೊಂಡಿದ್ದ ಜಾನ್ ಅವರನ್ನು ನೆಲ್ಯಾಡಿಯ ಆಸ್ಪತ್ರೆಗೆ ಕರೆದೊಯ್ಯಲಾ ಯಿತಾದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳೂರು,ಫೆ. 9 : ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘ ಮತ್ತು ಯುವವೇದಿಕೆ ಹಾಗೂ ಮಹಿಳಾವೇದಿಕೆ ಸಹಯೋಗದೊಂದಿಗೆ 70ನೇ ವರ್ಷದ ಸವಿನೆನಪಿನ ಸಮುದಾಯ ಸಂಭ್ರಮ 2025 ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಫೆ. 9 ಭಾನುವಾರ ಜರಗಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದ ಅತಿಥಿ ಮಂಗಳೂರು ಮಹಾನಗರಪಾಲಿಕೆಯ ನಗರ ಯೋಜನಾಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷರು ವೀಣಾ ಮಂಗಳ ಅವರು ಮಾತಾನಾಡಿ ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದಿಂದ ನಡೆಯುವ ಸೇವಾ ಕಾರ್ಯಕ್ಕೆ ಶ್ಲಾಘನೀಯ. ಈ ಸಂಘದ ಮೂಲಕ ಇನ್ನೂ ಹೆಚ್ಚು ಸಾಮಾಜಿಕ ಸೇವಾ ಕಾರ್ಯಗಳು ನಡೆಯಲಿ ಎಂದರು. ಮಂಗಳೂರು ಹಸಿರು ದಳ ಇದರ ಸಂಚಾಲಕರು ನಾಗರಾಜ್ ಬಜಾಲ್ ಮಾತಾನಾಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದರಿಂದ ಸ್ವಚ್ಚ ಮತ್ತು ಸ್ವಸ್ತ ಸಮಾಜ ನಿರ್ಮಾಣ ಸಾದ್ಯ ಎಂದರು. ಕಾಸರಗೋಡು ಕೇರಳ ರಾಜ್ಯ ಸರಕು ಮತ್ತು ಸೇವಾ ತೆರಿಗೆ ಅಸ್ಟೆಂಟ್ ಕಮಿಷನರ್ ರಾಜೇಂದ್ರ ಕುಂಟಾರು ಮಾತಾನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ಬಲ್ಯಾಯ ಯಾನೆ ಕಣಿಶನ್…
ಜಪ್ಪಿನಮೊಗರು, ಫೆ. 9 : ಜಯ್ – ವಿಜಯ್ ಜೋಡುಕರೆ ಕಂಬಳ ಸಮಿತಿ ವತಿಯಿಂದ ಕೀರ್ತಿಶೇಷ ಜೆ.ಜಯಗಂಗಾಧರ ಶೆಟ್ಟಿ ಮಗ್ಗುತೋಟಗುತ್ತು ಹಾಗೂ ನಾಡಾಜೆ ಗುತ್ತು ಸ್ಮರಣಾರ್ಥ 15ನೇ ವರ್ಷದ ಹೊನಲು ಬೆಳಕಿನ ಜಯ – ವಿಜಯ ಜೋಡುಕರೆ ಕಂಬಳಕ್ಕೆ ಜಪ್ಪಿನಮೊಗರು ನೇತ್ರಾವತಿ ತೀರದಲ್ಲಿ ಶನಿವಾರ ಚಾಲನೆ ದೊರೆಯಿತು. ವೇ। ಮೂ। ಬ್ರಹ್ಮಶ್ರೀ ವಿಟ್ಠಲದಾಸ ತಂತ್ರಿ ದೇರೆಬೈಲು ಅವರು ಕಂಬಳ ಉದ್ಘಾಟಿಸಿದರು. ಕಂಬಳ, ಸಮಿತಿ ಗೌರವಾಧ್ಯಕ್ಷ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯ ಸರಕಾರದ 5 ಲಕ್ಷ ರೂ. ಮಾತ್ರವಲ್ಲದೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ.ಜಾನಪದ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಕಂರ್ಭಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನ ಆಡಳಿತ ಮೊಕ್ತಸರ ಜೆ, ಅನಿಲ್ ಶೆಟ್ಟಿ ಮನುತೋಟಗುತ್ತು, ಪ್ರಮುಖರಾದ ಮಂಜುನಾಥ ಭಂಡಾರಿ ಮೂಡುಶೆಡ್ಡೆ ಜಪ್ಪುಗುಡ್ಡೆ…
ಬಂಟ್ವಾಳ, ಫೆ.08 : ಫ್ಯಾನ್ ರಿಪೇರಿ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ. ಮೃತರನ್ನುಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ನಬೈಲು ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ರಾಜೇಶ್ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಟ ಫೆ. 7 : ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಹಾಗೂ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮ ಫೆ. 6ರಂದು ಸಂಸ್ಥಾನದ ಅವರಣದಲ್ಲಿ ಜರಗಿತು. ಈ ಪ್ರಯುಕ್ತ ನಡೆದ ತುಳು ಸಾಹಿತ್ಯ ಸಮ್ಮೇಳನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿದರು. ನಂತರ ಮಾತಾಡಿದ ಅವರು ತುಳು ಭಾಷೆಗೆ ಮಾನ್ಯತೆ ಸಿಗಲು ತುಳುವರು ಒಗ್ಗಟ್ಟಾಗಿ ಹೋರಾಡಬೇಕು. ಆಂಗ್ಲ ಸಹಿತ ಎಲ್ಲ ಭಾಷೆಗಳ ಮೇಲೆ ಗೌರವ ಇರಲಿ, ಆದರೆ ತುಳುವರು ತುಳು ಭಾಷೆಯನ್ನು ಮರೆಯಬಾರದು ಎಂದು ಹೇಳಿದರು. ಲೇಖಕ ಭಾಸ್ಕರ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಿ, ಮಾತಾಡಿದ ಅವರು, ಯುವಜನರು ಕೃಷಿ ತ್ಯಜಿಸಿ ಪೇಟೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ಸಂಗತಿಯಾಗಿದೆ. ತುಳುವರು ತುಳು ಭಾಷೆಯಲ್ಲಿ ಮಾತಾಡಿ ತುಳು ಭಾಷೆಯನ್ನು ಪ್ರೋತ್ಸಾಹಿಸಿ ಎಂದರು. ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಡಾ| ವಸಂತ ಕುಮಾರ್ ಪರ್ಲ, ತುಳುನಾಡ ರಕ್ಷಣ…
ಕಾಪು,ಫೆ.06 : ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯಾಭಿವೃದ್ಧಿ, ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಮಂಗಳವಾರ ನವಚಂಡೀಯಾಗ ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ನೇತೃತ್ವದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಉಪಸ್ಥಿತಿಯಲ್ಲಿ ನವಚಂಡೀಯಾಗ ಆರಂಭಗೊಂಡು, ಕಲ್ಲೋಕ್ತ ಪೂಜೆ, ಮಹಾ ಮಂಗಳಾರತಿ, ಪೂರ್ಣಾಹುತಿ, ಮಹಾಪ್ರಸಾದ ವಿತರಣೆ ನಡೆಯಿತು. ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಅಮ್ಮನ 9 ಹೆಸರುಗಳೊಂದಿಗೆ ನವದುರ್ಗಾ ಲೇಖನ ಬರೆದು ಶಿಲಾ ಸೇವೆ ಸಹಿತವಾಗಿ ದೇವಸ್ಥಾನಕ್ಕೆ ತಂದು ಸಮರ್ಪಿಸಿದ ಎಲ್ಲೆಡೆಯ ಹೆಚ್ಚಿನ ಸಂಖ್ಯೆಯ ಭಕ್ತರು ನವಚಂಡೀಯಾಗದ ಸಂಕಲ್ಪದಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ದೀಪ ಪ್ರಜ್ವಲನೆಗೈದರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದಂಪತಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ದಂಪತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ದಂಪತಿ ನವಚಂಡೀಯಾಗದ ಸಂಕಲ್ಪದಲ್ಲಿ…
ಮಂಗಳೂರು,ಜ.05 : ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್ನ್ಯಾಶನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ರಾತ್ರಿ 8:30ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಅವರು,ಬೆಳಿಗ್ಗೆ 8.40ರಿಂದ 9.30 ರವರೆಗೆ ಶ್ರೀಮತಿ ವಿಭಾ ಎಸ್. ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬಲಾದಲ್ಲಿ ವಿಕ್ಷೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ.ಬೆಳಿಗ್ಗೆ 9.40 ರಿಂದ 10.30 ರವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನ,ಬೆಳಿಗ್ಗೆ 10.40 ರಿಂದ…
ಉಡುಪಿ, ಫೆ.02 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆವರಣದ ನೂತನ ಕಟ್ಟಡದ ಉದ್ಘಾಟನೆಯು ಕುತ್ಪಾಡಿ ಉದ್ಯಾವರದಲ್ಲಿ ಜ.31ರಂದು ನಡೆಯಿತು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಆಯುರ್ವೇದದಲ್ಲಿ ಯಾವುದೇ ಕಾಯಿಲೆಗೆ ಔಷಧಿ ಇಲ್ಲ ಎಂದು ಹೇಳಿಲ್ಲ. ಆದರೆ, ಆಧುನಿಕ ವೈದ್ಯ ಪದ್ಧತಿಗಳ ಆಕರ್ಷಣೆಯಿಂದ ಆಯುರ್ವೇದವನ್ನು ಮರೆಯುತ್ತಿದ್ದೇವೆ.ಆಯುರ್ವೇದವು ಅತ್ಯಂತ ಪುರಾತನವಾದ ವೈದ್ಯಕೀಯ ವ್ಯವಸ್ಥೆಯಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ, ಮತ್ತು ಇದು ರೋಗಗಳನ್ನು ಅವುಗಳ ಮೂಲದಲ್ಲಿಯೇ ಚಿಕಿತ್ಸೆ ನೀಡುತ್ತದೆ. ಎಂದರು. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಾ.ಶ್ರೀನಿವಾಸ್ ಪ್ರಸಾದ್ ಬೂದೂರು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಉಪಸ್ಥಿತರಿದ್ದರು.












