Author: admin

ಮಂಗಳೂರು,ಫೆ.01 : ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ,ಚಿತ್ರಕಥೆ ,ನಿರ್ದೇಶನ ಮಾಡುತ್ತಿರುವ “ಕಥೆ ಕೈಲಾಸ” ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಶುಕ್ರವಾರ ಜರುಗಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಿನಿಮಾಕ್ಕೆ ಕ್ಲಾಫ್ ಮಾಡಿ ಮಾತಾಡಿದರು. ಸೂರಜ್ ಶೆಟ್ಟಿ ನೇತೃತ್ವದಲ್ಲಿ ಮೂಡಿಬರಲಿರುವ ಸಿನಿಮಾ ಆದಷ್ಟು ಬೇಗ ಚಿತ್ರೀಕರಣ ನಡೆದು ತೆರೆಯ ಮೇಲೆ ಬರಲಿ ಎಂದರು. ಸಮಾರಂಭದಲ್ಲಿ ಕದ್ರಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಶುಭಾಶಂಸನೆಗೈದರು. ಶ್ರೀರಂಗ ಐತಾಳ್ ದೀಪ ಪ್ರಜ್ವಲನೆಗೈದರು. ನಿರ್ಮಾಪಕರಾದ ಕಿಶೋರ್ ಡಿ ಶೆಟ್ಟಿ, ಪುರುಷೋತ್ತಮ್ ಭಂಡಾರಿ, ಮೋಹನ್ ಕೊಪ್ಪಲ, ಪ್ರದೀಪ್ ಆಳ್ವ, ದಿವಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪ್ರಕಾಶ್ ಪಾಂಡೇಶ್ವರ, ಕದ್ರಿ ನವನೀತ ಶೆಟ್ಟಿ, ಶಶಿಧರ ಶೆಟ್ಟಿ, ಮಹಾಗಣಪತಿ ಟ್ರಾನ್ಸ್ ಪೋರ್ಟ್ ,ಆರ್ ಕೆ ಮಾಧವ ನಾಯ್ಕ್, ಬಾಳ ಜಗನ್ನಾಥ ಶೆಟ್ಟಿ, ರವಿ ರೈ ಕಳಸ, ಲೀಲಾಕ್ಷ ಕರ್ಕೇರ,…

Read More

ಮಂಗಳೂರು,ಜ.31: ಅಳಕೆ ಶ್ರೀ ನಾಗಬ್ರಹ್ಮ ದೇವಸ್ಥಾನ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನ ಮತ್ತು ಅಳಕೆ ಶ್ರೀ ನಾಗಬ್ರಹ್ಮ ಸೇವಾ ಟ್ರಸ್ಟ್ (ರಿ.) ಇದರ ಸಹಯೋಗದಲ್ಲಿ ಜ. 30 ರಿಂದ ಫೆ. 01 ತನಕ ಅಳಕೆ ಶ್ರೀ ನಾಗಬ್ರಹ್ಮದೇವರ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ಜಾತ್ರಾ ಮಹೋತ್ಸವವು ಜರಗಲಿದೆ. ಈ ಪ್ರಯುಕ್ತ ಜ. 30 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ,ಮಧ್ಯಾಹ್ನ ಮಹಾಪೂಜೆ, ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಕಲಶ ಪ್ರತಿಷ್ಠೆ, ಶ್ರೀ ನಾಗಬ್ರಹ್ಮ ದೇವಸ್ಥಾನದ ಪರಿಸರದ ಮಕ್ಕಳಿಂದ ಭಕ್ತಿ ಹಾಗೂ ಜಾನಪದ ನೃತ್ಯ, ರಾತ್ರಿ ಶ್ರೀ ಸತ್ಯನಾರಾಯಣ ಪೂಜೆಯ ಮಂಗಳಾರತಿ, ಮಹಾಪೂಜೆ ನಡೆಯಿತು. ಜ. 31 ರಂದು ಬೆಳಿಗ್ಗೆ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ, ರಾತ್ರಿ ಶ್ರೀ ನಾಗಬ್ರಹ್ಮ ದೇವರಿಗೆ ವಿಶೇಷ ಹೂವಿನ ಪೂಜೆ, ಮಹಾಪೂಜೆ ನಡೆಯಿತು. ಜ. 01 ಶನಿವಾರ ಬೆಳಿಗ್ಗೆ ಪೂಜೆ, ನಾಗಬನದಲ್ಲಿ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪಂಚಗವ್ಯ, ಪಂಚಾಮೃತಾಭಿಷೇಕ, ಮಧ್ಯಾಹ್ನ ಮಹಾಪೂಜೆ ಮತ್ತು…

Read More

ಮಂಗಳೂರು,ಜ.31: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ಬಿಡುಗಡೆಯಾಯಿತು. ಪ್ರಾಸ್ತಾವಿಕವಾಗಿ ಮಾತಾನಾಡಿದ ದ ನಟ ವಿನೀತ್ ಕುಮಾರ್ ಅವರು, ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾ ತಂಡ ಕುಟುಂಬ ಸಮೇತರಾಗಿ ಕೂತು ನೋಡುವಂತಹ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಸಿನಿಮಾ ನಿರ್ಮಿಸಿದೆ. ನೀವು ಈ ಬಿಗ್ ಬಜೆಟ್ ಸಿನಿಮಾವನ್ನು ನೋಡಿ ಪ್ರೊತ್ಸಾಹಿಸಿ, ಈ ಚಿತ್ರವನ್ನು ಗೆಲ್ಲಿಸಿ ಎಂದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತಾಡಿ, ತುಳುಭಾಷೆ ಬೆಳವಣಿಗೆಗೆ ತುಳು ಸಿನಿಮಾಗಳು ಬಹಳಷ್ಟು ಸಹಕಾರ ನೀಡುತ್ತಿವೆ. ತುಳು ಸಿನಿಮಾಗಳನ್ನು ನೋಡಿ ಬೆಂಬಳಿಸಿ, ಮಿಡಲ್ ಕ್ಲಾಸ್ ಫ್ಯಾಮಿಲಿ ಸಿನಿಮಾವನ್ನು ನೋಡಿ ಪ್ರೊತ್ಸಾಹಿಸಿ ಎಂದು ಹೇಳಿದರು. ರೋಹನ್ ಮೊತೆರೊ ಮಾತನಾಡಿ ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾಗಳನ್ನು ನೋಡಿ ಪ್ರೊತ್ಸಾಹಿಸಿ,…

Read More

ಮಂಗಳೂರು, ಜ.30  : ತಪಸ್ಯಾ ಫೌಂಡೇಶನ್ ವತಿಯಿಂದ ದ.ಕ. ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಜನವರಿ 31 ರಿಂದ ಫೆಬ್ರವರಿ 2ರ ತನಕ ತಣ್ಣೀರುಬಾವಿಯ ಮಂಗಳೂರು ಸರ್ಫ್ ಕ್ಲಬ್ ಬೀಚ್‌ನಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ಹಾಗೂ ಮಂಗಳೂರು ಟ್ರಯಾಥಾನ್ ಆಯೋಜಿಸಲಾಗಿದೆ. ಜನವರಿ 31ರಂದು ಸಂಜೆ 5.30ಗಂಟೆಗೆ ಬೀಚ್ ಫೆಸ್ಟಿವಲ್ ಉದ್ಘಾಟನಾ ಸಮಾರಂಭ ನಡೆಯಲಿದ್ದು,ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಎಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಜಿಲ್ಲೆಯ ಸಂಸದರು, ಶಾಸಕರು, ಗಣ್ಯರು ಉಪಸ್ಥಿತರಿರುವರು. ಶಾಸಕ ಡಾ.ವೈ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಪಸ್ಯಾ ಫೌಂಡೇಶನ್ನ ಸ್ಯಾಪಕಿ ಸಬಿತಾ ಶೆಟ್ಟಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆಬ್ರವರಿ 1ರಂದು ಸಂಜೆ 5ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಟಾಟಾ ಸ್ಮಾರಕ ಆಸ್ಪತ್ರೆಯ ಉಪ ನಿರ್ದೇಶಕ ಡಾ. ಶೈಲೇಶ್ ಶ್ರೀಖಂಡೆ ಮತ್ತು ಕಟೀಲು ಸಂಜೀವಿನ ಆಸ್ಪತ್ರೆಯ ಡಾ. ಸುರೇಶ್ ರಾವ್ ಅವರಿಗೆ ಜೀವಮಾನ…

Read More

ಮಂಗಳೂರು: ಜ.30 :”ಮೀರಾ“ ತುಳು ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮವು ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಜರುಗಿತು. ಕಾರ್ಯಕ್ರಮವನ್ನು ಸಿನಿಮಾ ನಿರ್ಮಾಪಕ ಲಂಚುಲಾಲ್  ಕೆ.ಎಸ್  ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ”ಮೀರಾ“ತುಳು ಸಿನಿಮಾದಲ್ಲಿ ಹೆಣ್ಣಿನ ಬದುಕಿನ ಕುರಿತಾದ ಕಥೆಯಿದೆ.ಫೆ.21ಕ್ಕೆ ನಮ್ಮ ಸಿನಿಮಾ ಬಿಡುಗಡೆಯಾಗಲಿದೆ. ಎಲ್ಲರೂ ಸಿನಿಮಾ ನೋಡಿ ನಮ್ಮನ್ನು ಬೆಂಬಲಿಸಿ ಎಂದು ಹೇಳಿದರು. ಬಾಲನಟಿ ಲಕ್ಷ್ಯ ಮಾತಾಡಿ, ನನಗೆ ಸಿನಿಮಾದಲ್ಲಿ ನಟಿಸಲು ಆಸಕ್ತಿಯಿತ್ತು. ಈ ಸಿನಿಮಾ ನನಗೆ ಅವಕಾಶ ನೀಡಿತು. ನನಗೆ ತುಂಬಾ ಖುಷಿಯಾಗುತ್ತಿದೆ ಎಂದರು.ನಟಿ ಇಶಿತಾ ಶೆಟ್ಟಿ ಮಾತಾಡಿ, ನಾನು ಕಾಸರಗೋಡು ಮೂಲದವಳು. ನನಗೆ ಈ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ.ತುಂಬಾ ಖುಷಿಯಾಗುತ್ತಿದೆ ಎಂದು ಹೇಳಿದರು. ಸಮಾರಂಭದಲ್ಲಿ ನಟ ಮಂಜು ರೈ ಮೂಳೂರು ಅವರು ಮಾತಾಡಿ, ತುಳು ಚಿತ್ರವನ್ನು ನೋಡಲು ಸಿನಿಮಾ ಮಂದಿರಕ್ಕೆ ಜನರು ಬರುವುದಿಲ್ಲ. ಈ ವೇಳೆಯಲ್ಲಿ ಲಂಚುಲಾಲ್ ದೊಡ್ಡ ಮನಸ್ಸು ಮಾಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು…

Read More

ಮಂಗಳೂರು: ಜ.30; ಮುಲುಂಡ್ ಕ್ರಿಯೇಶನ್ಸ್ ನ ನಾಗರಾಜ್ ಎಸ್. ಮುಳಗುಂದ ನಿರ್ಮಾಣದ ಒಲವಿನ ಪಯಣ ಚಿತ್ರ ಫೆ.21ರಂದು ಬಿಡುಗಡೆ ಗೊಳ್ಳಲಿದೆ ಎಂದು ನಿರ್ದೇಶಕ ಕಿಶನ್ ಬಲಾಡ್ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚಿತ್ರದ ನಾಯಕ ನಟನಾಗಿ ಸುನೀಲ್, ನಟಿಯಾಗಿ ಪ್ರಿಯ ಹೆಗ್ಡೆ, ಖುಶಿ ಅಭಿನಯಿಸಿದ್ದಾರೆ. ಜೀವನ್ ಗೌಡ ಛಾಯಾಗ್ರಹಕರಾಗಿ, ಕೀರ್ತಿರಾಜ್ ಸಂಕ ಲನ, ಗುರುಪ್ರಸಾದ್ ಕಲರಿಸ್ಟ್, ನವೀನ್ ಎಸ್ ಎಫ್ ಎಕ್ಸ್ ಸಾಯಿ ಸರ್ವೇಶ್ ಸಂಗೀತ, ಪೋಷಕ ಕಲಾವಿದರಾಗಿ ಪದ್ಮಜಾ ರಾವ್, ಬಲ ರಾಜ್ವಾಡಿ, ನಾಗೇಶ್ ಮಯ್ಯ, ಪೃಥ್ವಿರಾಜ್, ಸುಧಾ ಕರ ಬನ್ನಂಜೆ, ಸೂರ್ಯಕಿರಣ್ ಧನಂಜತ್, ಸಮೀಕ್ಷಾ, ಬೇಬಿ ರಿಧಿ ಅಭಿನಯಿಸಿದ್ದಾರೆ. ಒಲವಿನ ಪಯಣ ಇದೊಂದು ಹಳ್ಳಿಯ ಮಧ್ಯಮ ವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆಯಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರಾದ ನಾಗರಾಜ್ ಮುಳಗುಂದ, ನಟರಾದ ಸುನೀಲ್, ನಟಿ ಯರಾದ ಕುಶಿ, ಪ್ರಿಯ ಹೆಗ್ಡೆ, ಕಲಾವಿದ ನಾಗೇಶ್ ಮಯ್ಯ ಉಪಸ್ಥಿತರಿದ್ದರು

Read More

ಬಾಗಲಕೋಟೆ, ಜ.29 : ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡು ರಸ್ತೆಯಲ್ಲಿ ಒಂದು ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಸಂಭವಿಸಿದೆ. ಗಂಗಾವತಿ ಬಳಿ ಸಾಗಿದ 30 ಟನ್ ಅಕ್ಕಿಯೊಂದಿಗೆ ಲಾರಿ ಕೊಲ್ಲಾಪುರಕ್ಕೆ ಹೊರಟಿದ್ದಾಗ, ರಾಜ್ಯ ಹೆದ್ದಾರಿ ಮಧ್ಯದಲ್ಲೇ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿ ಟಯರ್ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

Read More

ಮಂಗಳೂರು,ಜ.28 : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್‌ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತವೆ.ಈ KCET ಕೋರ್ಸುಗಳು ಪ್ರಾದೇಶಿಕ ಮಾರುಕಟ್ಟೆಗಳಲ್ಲಿ ತನ್ನ ನೆಲೆಗಳನ್ನು ವಿಸ್ತರಿಸುವ ಮತ್ತು ರಾಜ್ಯಗಳ ಪದವಿಪೂರ್ವ ಮಂಡಳಿಗಳ ವಿದ್ಯಾರ್ಥಿಗಳೊಂದಿಗೆ ಸಿಬಿಎಸ್ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿಯನ್ನು ಒದಗಿಸುವ ಆಕಾಶ್ ಅವರ ಕಾರ್ಯತಂತ್ರದ ಭಾಗವಾಗಿದೆ ರಾಜ್ಯ ಇಂಜಿನಿಯರಿಂಗ್ ಪ್ರವೇಶಗಳು ಮತ್ತು ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳೆರಡಕೂ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸುಗಳು ಸಮಗ್ರವಾದ ಸಾಧನವಾಗಿ ಸಹಾಯಕವಾಗುತ್ತವೆ. ವಾರ್ಷಿಕ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆಯನ್ನು ಬರೆಯುತ್ತಿದ್ದು…

Read More

ಮಂಗಳೂರು,ಜ.28 :  ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ಸಿನೆಮಾ ಜನರಿಗೆ ಮನೋರಂಜನೆ ನೀಡುವಲ್ಲಿ ಒಂದು ಉತ್ತಮ ಚಲನಚಿತ್ರ. ಈ ಚಲನ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಎರಡು ವಾರದ ಒಳಗೆ ಟಿಕೆಟ್ ದಾಖಲೆ ತೋರಿಸುವವರಿಗೆ ರೋಹನ್ ಕಾರ್ಪೊರೇ ಷನ್ ಪ್ರೊಜೆಕ್ಟ್ ಬುಕ್ ಮಾಡುವವರಿಗೆ ಶೇ 10 ವಿನಾಯಿತಿ ನೀಡಲಾಗುವುದು ಎಂದು ಚಲನ ಚಿತ್ರವನ್ನು ಅರ್ಪಿಸುತ್ತಿರುವ ರೋಹನ್ ಕಾರ್ಪೊರೇ ಷನ್’ನ ಎಂ.ಡಿ ಹಾಗೂ ಚೇರ್ ಮ್ಯಾನ್ ರೋಹನ್ ಮೊಂತೆರೊ ಮಂಗಳವಾರ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಚಲನಚಿತ್ರದ ನಿರ್ದೇಶಕ ಮಾತನಾಡಿ ರೋಹನ್ ಕಾರ್ಪೊರೇ ಷನ್’ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ. ಆರ್ ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಮಂಗಳೂರಿನ ರೂಪವಾಣಿ, ಭಾರತ್ ಮಾಲ್’ನ ಬಿಗ್ ಸಿನಿಮಾಸ್, ಪಿವಿಆರ್,ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ,…

Read More

ಮಂಗಳೂರು,ಜ.28 : ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಊರ ಪರವೂರ ಭಕ್ತರ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ ಆಡಳಿತದೊಂದಿಗೆ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದ್ದು, ಮಾರ್ಚ್ 1 ರಿಂದ 14ರವರೆಗೆ ತನಕ ತಂತ್ರಿವರೇಣ್ಯರಾದ ವಾಮಂಜೂರು ಶ್ರೀ ಅನಂತ ಉಪಾಧ್ಯಾಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ…

Read More