Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಸೆ.13: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತಾಡಿ, ಕಲ್ಜಿಗ ಸಿನಿಮಾ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವಾಗಿದೆ. ಇಂತಹ ಇನ್ನೂ ಚಿತ್ರಗಳು ನಿರ್ಮಾಣವಾಗಲಿ ಎಂದರು. ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮದಲ್ಲಿ ಕಲ್ಜಿಗ ಸಿನಿಮಾಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ಶರತ್ ಕುಮಾರ್ ಎ.ಕೆ.,ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ತಮ್ಮ ಲಕ್ಷ್ಮಣ, ಪ್ರಕಾಶ್ ಧರ್ಮನಗರ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ದೇಶಕ ಸುಮನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಶರತ್ ಕುಮಾರ್ ಎ.ಕೆ. ಕಲ್ಜಿಗ ಚಿತ್ರದ ನಿರ್ಮಾಪಕರಾಗಿದ್ದಾರೆ. ಸುಮನ್ ಸುವರ್ಣ ಅವರು ಕಲ್ಜಿಗದ ಸಿನಿಮಾದ ನಿರ್ದೇಶಕರು, ಕಥೆ ,ಚಿತ್ರಕಥೆ, ಸಂಭಾಷಣೆಯನ್ನು…
ಬೆಂಗಳೂರು,ಸೆ.12: ‘ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳಲ್ಲಿ ನಟಿಸಿರುವ ನಟ ಟೊವಿನೋ ಥಾಮಸ್ ಅವರ ಎ ಆರ್ ಎಂ 50ನೇ ಚಿತ್ರ. ಟೊವಿನೋ ಥಾಮಸ್ ಅವರು ಎ ಆರ್ ಎಂ (ಅಜಯಂತೇ ರಂದಮ್ ಮೋಷನಂ) ಎಂಬ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಗುಣಮಟ್ಟದ ತಾಂತ್ರಿಕತೆ ಹೊಂದಿದೆ. ಚಿತ್ರದಲ್ಲಿ ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಎ ಆರ್ ಎಂ ಆ್ಯಕ್ಷನ್ ಸಿನಿಮಾವಾಗಿದೆ. ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳನ್ನುನಿರ್ವಹಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ವಿಷಯವನ್ನು ಬಿಂಬಿಸುವ ಚಿತ್ರವಾಗಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದ.ಎ ಆರ್ ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದೆ.ಆ್ಯಕ್ಷನ್ ಸೀಕ್ವೆನ್ಸ್ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್…
ಮಂಗಳೂರು, ಸೆ.12: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಕನ್ನಡ ಚಿತ್ರ ಸೆ.13ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ಚಿತ್ರದ ಟ್ರೇಲರ್ ಭಾರತ್ ಮಾಲ್ನ ಭಾರತ್ ಸಿನಿಮಾಸ್ನಲ್ಲಿ ಅನಾವರಣಗೊಂಡಿದೆ. ಚಿತ್ರದ ಟ್ರೈಲರ್ ಎ2 ಫಿಲಂಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ ಎಂದು ಕಲ್ಜಿಗ ಸಿನೆಮಾ ನಿರ್ದೇಶಕ ಸುಮನ್ ಸುವರ್ಣ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶರತ್ ಕುಮಾರ್ ಎ.ಕೆ. ಕಲ್ಜಿಗ ಚಿತ್ರದ ನಿರ್ಮಾಪಕರಾಗಿದ್ದಾರೆ. ಕಲ್ಜಿಗದ ಕಥೆ ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಹಂಸಲೇಖ ಈ ಸಿನೆಮಾಕ್ಕೆ ಸಂಗೀತ ನಿರ್ದೇಶನ, ನಟ ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಸುಶ್ಮಿತಾ ಭಟ್ ನಾಯಕಿಯಾಗಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿಯವರ ಹಿನ್ನೆಲೆ ಸಂಗೀತ ನೀಡಿದ್ದಾರೆ ಎಂದರು. ಸಚಿನ್ ಶೆಟ್ಟಿ ಛಾಯಾಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ…
ಮಂಗಳೂರು, ಸೆ.12: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ನೀಡುವ ಕಾರ್ಯಕ್ರಮ ಮಂಗಳವಾರ ಸಂಘದ ನಂದಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ. ನೆಲ್ಕುದ್ರಿ ಸದಾನಂದ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗರಿಷ್ಠ ಅಂಕಗಳನ್ನು ಗಳಿಸಿರುವ ಸರಕಾರಿ ನೌಕರರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಷಯ.ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಎಸ್ಸೆಸಿಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ…
ಬೈಕಂಪಾಡಿ, ಸೆ. 11: ಮೊಗವೀರ ಮಹಾಸಭಾ ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬೈಕಂಪಾಡಿ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ (ಮೀನುಗಾರಿಕ)ಯ ಹೊಸ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ ಮಂಗಳವಾರ ಇಂದಿರಾ ಮಾಧವ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು , ಮೊಗವೀರ ಮಹಾಸಭಾವು ಸಮುದಾಯದವರಿಗಾಗಿ ಕನ್ನಡ ಶಾಲೆ ಕಟ್ಟಿ ಕಾಲಾನಂತರ ಸರಕಾರದ ನೆರವಿನೊಂದಿಗೆ ಶಾಲೆಯನ್ನು ನಡೆಸುತ್ತಾ ಬಂದಿದೆ. ಆರ್ಥಿಕ ಸಂಕಷ್ಟವಿರುವ ಸಮಯದಲ್ಲಿ ದಾನಿಗಳಿಂದ ನೆರವು ಪಡೆದು ಮಕ್ಕಳ ಭವಿಷ್ಯ ಉಜ್ವಲವಾಗಲು ಶ್ರಮ ಪಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಮನವಿ ಪತ್ರ ಬಿಡುಗಡೆ ಮಾಡಿ ನಂತರ ಮಾತನಾಡಿದ ಶಾಸಕ ಡಾ| ಭರತ್ ಶೆಟ್ಟಿ ವೈ. ಅವರು, ಬೈಕಂಪಾಡಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ಮನವಿಯನ್ನು ಈಗಾಗಲೇ ನೀಡಲಾಗಿದೆ. ಶಿಕ್ಷಣ ಸಚಿವರಲ್ಲಿ ಮಾತುಕತೆ ನಡೆಸಿ ಹೊಸ ಕಟ್ಟಡ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಆಂಗ್ಲ ಮಾಧ್ಯಮವನ್ನು ಕೂಡ ಆರಂಭಿಸುವ ಸಲುವಾಗಿ ಬೇಕಾದ…
ಪಡುಬಿದ್ರಿ,ಸೆ.11 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿಕ ಶಾಖೆಯು ಸೋಮವಾರ ಉದ್ಘಾಟನೆಗೊಂಡಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎಸ್.ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು. ನಂತರ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಸಹಕಾರಿ ಸಂಸ್ಥೆಗಳು ಜನರೊಂದಿಗೆ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಅವರು ಹೇಳಿದರು. ಪಡುಬಿದ್ರಿ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಸೈಟಿಯು ರೈತರ ನೆರವಿಗಾಗಿ ರಸಗೊಬ್ಬರ ಖರೀದಿಗೆ ಶೇ.15 ರಿಯಾಯಿತಿ ನೀಡುವ ಮೂಲಕ ಪ್ರಥಮ ಸ್ಥಾನಿಯಾಗಿದೆ. ಪಡುಬಿದ್ರಿ ಸೊಸೈಟಿಯ ಎಲ್ಲ 5 ಶಾಖೆಗಳು ಹವಾನಿಯಂತ್ರಿಕ ವ್ಯವಸ್ಥೆ ಹೊಂದಿವೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ,…
ಬೆಂಗಳೂರು, ಸೆ.11 : ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್ ಎಂ ಚಿತ್ರದ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ. ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ. ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ…
ಮಂಗಳೂರು, ಸೆ.10: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಕಡೆಂಜ ಅಶೋಕ್ ಕುಮಾರ್ ಚೌಟ ಚಾಲನೆ ನೀಡಿದರು. ಶೋಭಾಯಾತ್ರೆ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟ್ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಸಂಚಾಲಕ ಬಿ.ನಾಗರಾಜ್ ಶೆಟ್ಟಿ, ಕಾಸರಗೋಡು ಜಿಲ್ಲಾ ಸಂಚಾಲಕ ಸಂಜೀವ ಶೆಟ್ಟಿ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ್ ಮೋಹನ್ ರೈ, ಸಂಜೀವ ಶೆಟ್ಟಿ ಸಂಪಿಗೆ ಅಡಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ರೈ, ಸಿಎ ಶಾಂತಾರಾಮ ಶೆಟ್ಟಿ, ಕೃಷ್ಣಪ್ರಸಾದ್ ರೈ, ಸುಧಾಕರ ಎಸ್.ಪೂಂಜ, ಬಿ. ಶೇಖರ ಶೆಟ್ಟಿ, ಉಲ್ಲಾಸ್ ಶೆಟ್ಟಿ, ಭಾರತಿ ಶೆಟ್ಟಿ,…
ಉಡುಪಿ, ಸೆ.10 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೇರಿ 11 ಮಂದಿ ಭಾರತೀಯ ಜನತಾ ಪಾರ್ಟಿಯ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಹೆದ್ದಾರಿ ತಡೆದು ಭಾರತೀಯ ಜನತಾ ಪಾರ್ಟಿಯ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು. ಈ ವೇಳೆ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು.ಈ ಬಗ್ಗೆ ಎನ್ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ…
ಬೆಂಗಳೂರು, ಸೆ.09 : ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಬಿಡುಗಡೆಗೊಳ್ಳಲಿದ್ದು, ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಚಿತ್ರವು ಒಟ್ಟು ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್,…