Author: admin

ಮಂಗಳೂರು, ಮೇ. 06 : ನಮ್ಮ ಕನಸು ಬ್ಯಾನರಿನಲ್ಲಿ ಕೆ.ಸುರೇಶ್ ನಿರ್ಮಿಸಿ, ರಮೇಶ್ ಶೆಟ್ಟಿಗಾರ್ ಬರೆದು, ನಿರ್ದೇಶಕ ಸಂತೋಷ್ ಮಾಡ ನಿರ್ದೇಶಿಸಿದ ‘ಪಿದಾಯಿ ತುಳು ಚಲನ ಚಿತ್ರ ಮೇ 9ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸಂತೋಷ್ ಮಾಡ ಅವರು ಎ.26,ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಮುಖ್ಯ ಭೂಮಿಕೆಯಲ್ಲಿ ಮಹಾಮಾಯಿ ಪಾತ್ರಿಯಾಗಿ ಕನ್ನಡದ ಖ್ಯಾತ ನಟ ಶರತ್ ಲೋಹಿತಾಶ್ವ ಅಭಿನಯಿಸಿದ್ದಾರೆ. ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ, ಪುಷ್ಪರಾಜ್ ಬೋಳಾರ್, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ, ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತಿಷ, ನಿಹಾ, ಧ್ರುವ, ಖುಷಿ, ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್ ಮತ್ತಿತ್ತರರು ಅಭಿನಯಿಸಿದ್ದಾರೆ. ಚಿತ್ರಕ್ಕೆ ರಮೇಶ್ ಶೆಟ್ಟಿಗಾರ್ ಹಾಗೂ ಡಿ.ಬಿ.ಸಿ ಶೇಖರ್ ಸಂಭಾಷಣೆ ಬರೆದಿದ್ದಾರೆ. ಛಾಯಾಗ್ರಾಹಣವನ್ನು ಉಣ್ಣೆ ಮಾಡವೂರ್, ಸುರೇಶ್ ಅರಸ್ ಸಂಕಲನ, ಅಜಯ್ ನಂಬೂದಿರಿ ಸಂಗೀತ ನೀಡಿದ್ದು, ಡಾ.ವಿದ್ಯಾಭೂಷಣ್ ಪ್ರಥಮವಾಗಿ ಚಲನಚಿತ್ರದಲ್ಲಿ ಹಾಡಿದ್ದಾರೆ. ಹಿನ್ನಲೆ…

Read More

ನವದೆಹಲಿ, ಮೇ. 06 : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧ ಇಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

Read More

ಮಂಗಳೂರು, ಮೇ. 05 : ಭಾರ್ಗವಿ ಬಿಲ್ಡರ್ ವತಿಯಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಂಡಿರುವ ವಸತಿ ಸಮುಚ್ಚಯ ‘ಕೈಲಾಶ್’ ಎ.30, ಬುಧವಾರ ಉದ್ಘಾಟನೆಗೊಂಡಿತು. ಮಾರೂರು ಅಲ್ಯುಮಿನಿಯಂ ಸಂಸ್ಥೆಯ ಶಶಿಧರ ಪೈ ಮಾರೂರು ಅವರು ವಸತಿ ಸಮುಚ್ಚಯದ ಲಾಬಿ ಉದ್ಘಾಟಿಸಿದರು. ಸಿಎ ಸುಂದರ ಹೆಗ್ಡೆ ಅವರು ಜಿಮ್ಮೇಶಿಯಂಗೆ ಚಾಲನೆ ನೀಡಿದರು. ನಾಯಕ್ ಆ್ಯಂಡ್ ಪೈ ಅಸೋಸಿಯೇಟ್ನ ಆರ್ಕಿಟೆಕ್ಟ್ ಸುರೇಶ್ ಪೈ ಅವರು ಒಳಾಂಗಣಕ್ರೀಡಾ ಕೇಂದ್ರವನ್ನು ಹಾಗೂ ಕೈಲಾಶ್ ವಸತಿ ಸಮುಚ್ಚಯದ ರಾಯಭಾರಿ ಅರವಿಂದ ಬೋಳಾರ್ ಅವರು ಕೈಲಾಶ್ ಮಕ್ಕಳ ಆಟದ ಪ್ರದೇಶವನ್ನು ಉದ್ಘಾಟಿಸಿದರು. ಕೈಲಾಶ್’ನ ಫ್ಲ್ಯಾಟ್ ಮಾಲಕರಾದ ಗುರುರಾಜ್ ಉಡುಪ ಹಾಗೂ ವನಿತಾ ಉಡುಪ ದೀಪಪ್ರಜ್ವಲನೆ ಮಾಡಿದರು. ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ ಶುಭಹಾರೈಸಿದರು. ಪ್ರಕಾಶ್ ಬೀಡಿ ಮಾಲಕರಾದ ಆನಂದ್ ಪ್ರಭು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೆಜರ್ ಸಚ್ಚಿದಾನಂದ ಸ್ವರೂಪ್, ರಮಾ ಕಾಮತ್ ಆ್ಯಂಡ್ ಕೋ. ದ ಮಾಲಕ ಶೋಮಿತ್ ಕಾಮತ್, ದೇವಿದಯಾಲ್ ಕನ್‌ಸ್ಟ್ರಕ್ಷನ್ ಮಾಲಕ ಜಗದೀಶ್ ಶೆಟ್ಟಿ, ಸಿಎ ಎ.ಆರ್.ಹೆಗ್ಡೆ…

Read More

ಮಂಗಳೂರು, ಮೇ. 05 : ನಾಗರಾಜ್ ಶಂಕರ್ ನಿರ್ದೇಶನದ, ಮುದೇ ಗೌಡ್ರು ನವೀನ್ ಕುಮಾರ್ ಆರ್.ಒ. ಹಾಗೂ ತೆಲಗಿ ಮಲ್ಲಿಕಾರ್ಜುನಪ್ಪ ನಿರ್ಮಾಣದ ‘ಮರಳಿ ಮನಸಾಗಿದೆ’ ಕನ್ನಡ ಚಿತ್ರ ಜುಲೈಯಲ್ಲಿ ಬಿಡುಗಡೆ ಗೊಳ್ಳಲಿದೆ ಎಂದು ನಿರ್ದೇಶಕ ನಾಗರಾಜ್, ಶಂಕರ್ ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಚಿತ್ರದಲ್ಲಿ ಐದು ಹಾಡುಗಳಿದ್ದು, ಬಿಡುಗಡೆಗೊಂಡಿರುವ ಎರಡು, ಹಾಡುಗಳಿಗೆ ಉತ್ತಮ ಸ್ಪಂದನೆ ದೊರೆತ್ತಿದೆ. ಮೂರನೇ ಹಾಡು ಏನಿದು ರೋಮಾಂಚನ ಉಡುಪಿ ಯಲ್ಲಿ ಮೇ,3ರಂದು ಬಿಡುಗಡೆಗೊಂಡಿದೆ. ಚಿತ್ರದ ನಾಯಕ ನಾಗಿ ಅರ್ಜುನ್ ವೇದಾಂತ್ ನಾಯಕಿಯಾಗಿ ಸ್ಮೃತಿ ವೆಂಕಟೇಶ್ಅಭಿನಯಿಸಿದ್ದಾರೆ ಅವರು, ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ನಿರ್ಮಾಪಕ ನವೀನ್ ಕುಮಾರ್ ಮಾತಾನಾಡಿ ಜುಲೈ- ಆಗಸ್ಟ್ ನಡುವೆ ಚಿತ್ರ ಬಿಡುಗಡೆ ಗೊಳ್ಳಲಿದ್ದು, ಪೂರ್ವಭಾವಿಯಾಗಿ ರಾಜ್ಯಾದ್ಯಂತ ಪ್ರಚಾರ ಕಾರ್ಯ ನಡೆದಿದೆ. ಚಿತ್ರದಲ್ಲಿ ನಟ ಭೋಜರಾಜ ವಾಮಂಜೂರು, ಟಿ.ಎಸ್.ನಾಗಾಭರಣ, ನಿರೀಕ್ಷಾ ಶೆಟ್ಟಿ, ಮಾನಸಿ ಸುಧೀರ್, ಸೀರುಂಡೆ ರಘು, ಸ್ವಾತಿ, ರೋಹನ್ ಅಭಿನಯಿಸಿದ್ದಾರೆ  ಎಂದರು. ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನವಿದೆ. ವಿನು ಮನಸು…

Read More

ಬೆಳ್ತಂಗಡಿ, ಮೇ. 04 : ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಿಯಾರ್ ದೂರು ನೀಡಿದ್ದಾರೆ.ಪೊಲೀಸರು ಶಾಸಕರ ಭಾಷಣದ ವೀಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Read More

ಮಂಗಳೂರು, ಮೇ 05 : ನಿಧಿಲ್ಯಾಂಡ್ ಇನ್ ಫ್ರಾಸ್ಟಕ್ಟರ್ ಡೆವಲಪರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನವರ ವಸತಿ ಸಮುಚ್ಚಯ ‘ಪೂರ್ವಜ್’ ಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಮಲ್ಲಿಕಟ್ಟೆ ಶಿವಬಾಗ್ ಬಳಿ ಬುಧವಾರ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮಹಾನಗರಪಾಲಿಕೆ ಪ್ರಕಾಶ್ ಸಾಲಿಯಾನ್, ನವೀನ್ ಡಿ’ಸೋಜ, ಮಾಜಿ ಸದಸ್ಯರಾದ ಸಿಎಶಾಂತಾರಾಮ ಶೆಟ್ಟಿ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥ ಬಿ.ಕೆ.ವಿಶ್ವೇಶ್ವರಿ, ಲೋಟಸ್ ಪ್ರಾಪರ್ಟೀಸ್ನ ಜಿತೇಂದ್ರ ಕೊಟ್ಟಾರಿ, ನಿಶಾಂತ್ ಶೇಟ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಉಪ್ಪುಂದ ಗಣೇಶ್ ಭಟ್ ಹಾಗೂ ಸಂತ ಆ್ಯಗ್ನೆಸ್ ಕಾನ್ವೆಂಟ್ನ ಸುಪೀರಿಯ ಸಿlಮರಿಯಾ ರೂಪ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. ನಿಧಿಲ್ಯಾಂಡ್ ಬಿಲ್ಲರ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಸನಿಲ್, ಅವರ ತಂದೆ ಯು.ಮಾಧವ ಸುವರ್ಣ, ನಿಧಿಲ್ಯಾಂಡ್ ನಿರ್ದೇಶಕರೂ ಆದ ಪ್ರಶಾಂತ್ ಅವರ ಸೋದರಿ ರೇವತಿ ಸನಿಲ್…

Read More

ಛತ್ತೀಸ್ಗಢ, ಮೇ. 04 : ವ್ಯಕ್ತಿವೊಬ್ಬ ಸ್ಕೂಟರ್ ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು   ಮೃತಪಟ್ಟ   ಘಟನೆ ಅಂಬಿಕಾಪುರದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಸಂಗಮ್ ಚೌಕ್‌ನಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದ್ರಜಿತ್ ಸಿಂಗ್ ಬಾಬ್ರಾ (35 ) ಎಂಬವರು ಮೃತಪಟ್ಟ  ವ್ಯಕ್ತಿ. .ಇಂದ್ರಜಿತ್ ಸಿಂಗ್  ಅವರು ತನ್ನ ವಾಹನವನ್ನು ಪ್ರಾರಂಭಿಸಲು ಪ್ರಯತ್ನಿಸುವಾಗ ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾನೆ.

Read More

ಮಂಗಳೂರು, ಮೇ. 04 : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಬ್ದುಲ್ ಸಪ್ವಾನ್, ನಿಯಾಜ್ ಮತ್ತು ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಬಂಧಿತ ಆರೋಪಿಗಳು ಎಂದು ವಿವರ ನೀಡಿದ್ದಾರೆ.

Read More

ಮಂಗಳೂರು, ಮೇ. 03 : ದುರಸ್ತಿ ಕಾರ್ಯಕ್ಕಾಗಿ ಕಳೆದೊಂದು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಹಳೆಯ ಸೇತುವೆಯನ್ನು ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆ ಗಳಲ್ಲಿ ಒಂದು ಸೇತುವೆಯನ್ನು ಏ.1 ರಿಂದ ದುರಸ್ತಿ ಕಾರ್ಯಕ್ಕಾಗಿ ಮುಚ್ಚಲಾಗಿತ್ತು. ಹಾಗಾಗಿ ವಾಹನಗಳ ಓಡಾಟಕ್ಕೆ ಹೊಸ ಸೇತುವೆಯ ಒಂದು ಬದಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.ಇದರಿಂದಾಗಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಶನಿವಾರ ಬೆಳಗ್ಗಿನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಇಂದಿನಿಂದ ಎರಡೂ ಸೇತುವೆಗಳು ಈಗ ಕೇರಳ ಮತ್ತು ಮಂಗಳೂರು ಕಡೆಗೆ ಹೋಗುವ ವಾಹನಗಳ ಸಂಚಾರಕ್ಕೆ ಲಭ್ಯವಿದೆ.

Read More

ಮಂಗಳೂರು, ಮೇ.1 : ನಿಧಿಲ್ಯಾಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ನೂತನ ಏಷಾರಾಮಿ ವಸತಿ ಸಮುಚ್ಚಯ ಯೋಜನೆ ‘ಸ್ಕೈ ಗಾರ್ಡನ್’ಗೆ  ಭೂಮಿ ಪೂಜೆ ಬುಧವಾರ ನೆರವೇರಿತು. ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಪುರೋ ಹಿತ ಕೃಷ್ಣ ಭಟ್, ಲೇಡಿಹಿಲ್ ಚಚ್ ೯ನ ಧರ್ಮಗುರು ವಂ| ಲಾನ್ಸನ್ ಪಿಂಟೊ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. ವಸತಿ ಸಮುಚ್ಚಯದ ಬ್ರೋಷರ್ ಅನ್ನು ನಿಧಿಲ್ಯಾಂಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಬಿಡುಗಡೆಗೊಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಮಂಗಳೂರು ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥೆ ಬಿ.ಕೆ.ವಿಶ್ವೇಶ್ವರಿ, ಉದ್ಯಮಿ ಡಿ.ಬಿ.ಮೆಹ್ರ ಆರ್ಕಿಟೆಕ್ಟ್  ಧರ್ಮರಾಜ್, ಭೂಮಾಲಕರಾದ ಎಫ್.ಸಿ.ಪಿಂಟೊ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ ಮಾಲಕ ಪ್ರಶಾಂತ್ ಸನಿಲ್, ಮತ್ತಿತರರು ಶಿಲಾನ್ಯಾಸ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆಡಳಿತ ನಿರ್ದೇಶಕ…

Read More