Subscribe to Updates
Get the latest creative news from FooBar about art, design and business.
Author: admin
ಉಡುಪಿ: ಅಜಾಗರುಕತೆಯಿಂದ ಬೈಕ್ ಚಲಾಯಿಸಿ ಪಾದಚಾರಿಯ ಸಾವಿಗೆ ಕಾರಣರಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. 2018ರ ಡಿಸೆಂಬರ್ 17ರಂದು ಅಪರಾಹ್ನ 3.50ರ ಸುಮಾರಿಗೆ ಉಪ್ಪೂರು ಮೂಡುಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತ ಉಡುಪಿ ಪುತ್ತೂರು ಗ್ರಾಮದ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಕಾರಣ ರಸ್ತೆ ಬದಿ ನಿಂತಿದ್ದ ನಾಗೇಶ್ ಡಿ ಪ್ರಭು ಎಂಬವರಿಗೆ ಬೈಕ್ ಡಿಕ್ಕಿಯಾಗಿ ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆ ಹಾಗೂ ದೇಹದ ಇತರ ಭಾಗಗಳು ತೀವ್ರಗಾಯಗೊಂಡು ಮೃತಪಟ್ಟಿದ್ದರು. ಈ ಕುರಿತು ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಆಶಿಶ್ ಶೆಟ್ಟಿಗೆ…
ಮಂಗಳೂರು : 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15, ಸೋಮವಾರ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ರಾಷ್ಟ್ರ ಪ್ರೇಮ ಮತ್ತು ದೇಶ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರಲ್ಲಿ ಬಿತ್ತಲು ಮತ್ತು ಬೆಳೆಸಲು ಇದೇ ಅಗಸ್ಟ್-13 ರಿಂದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು ಹರ್ ಘರ್ ತಿರಾಂಗ ಅಭಿಯಾನ ಪ್ರಯುಕ್ತ ದ. ಕ. ಜಿಲ್ಲೆಯಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಮನೆಗಳಲ್ಲಿ, ಅಂಗಡಿಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ ಇನ್ನಿತರ ಕಟ್ಟಡಗಳಲ್ಲಿ ಹಾರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ…
ನವದೆಹಲಿ:76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆ.15 ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಮಂಗಲ್ ಪಾಂಡೆ, ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಜವಹಾರ್ ಲಾಲ್ ನೆಹರೂ, ಬಾಬಾ ಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಸೇರಿದಂತೆ ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಅವರಿಗೆ ಕೃತಜ್ಞರಾಗಿದ್ದೇವೆ. ಹೋರಾಟಗಾರರು ತಮ್ಮ ಸರ್ವಸ್ವವನ್ನೂ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.
ಕಡಬ : ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದಿದೆ. ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಆ.15,2022 ರಂದು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಜಿ ಯೋಧ ಗಂಗಾಧರ ಗೌಡ ಎಂದು ಹೇಳಲಾಗಿದೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದು ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜು. 29ರಿಂದ ಆಗಸ್ಟ್ 1ರವರೆಗೆ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಕೆಲವು ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿಮುಟ್ಟಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿರುವುದರಿಂದ ಕಾನೂನು ಸುವ್ಯವಸ್ಥೆಗೆ ಯಾವುದೇ ದಕ್ಕೆಯುಂಟಾಗದಂತೆ ಜಿಲ್ಲೆಯಾದ್ಯಂತ ಬಿಗಿ ಕ್ರಮಗಳನ್ನು ಕೈ ಗೊಳ್ಳಲಾಗಿದೆ. ಅದರ ಪ್ರಕಾರ ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ ತೆರೆಯಲು ಅವಕಾಶವಿರುವುದಿಲ್ಲ. ಬಸ್ಸು, ಟ್ಯಾಕ್ಸಿ ಮತ್ತು ಆಟೋರಿಕ್ಷಾಗಳ ಸಂಚಾರಕ್ಕೆ ಅವಕಾಶವಿರುತ್ತದೆ . ಅಗತ್ಯ ವಸ್ತುಗಳ ಸಾಗಾಣಿಕೆಗೆ ಅವಕಾಶವಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಫಾಝಿಲ್(23) ಎಂಬ ಯುವಕನ ಕೊಲೆ ಜುಲೈ 28ರ ಗುರುವಾರ ರಾತ್ರಿ ವೇಳೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ. ಸುರತ್ಕಲ್ ಜಂಕ್ಷನ್ನ ಎಸ್.ಕೆ ಮೊಬೈಲ್ ಅಂಗಡಿ ಮುಂಭಾಗದಲ್ಲಿ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ. ಸುರತ್ಕಲ್ನಲ್ಲಿ ನಡೆದಿರುವ ಫಾಝಿಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸು ರತ್ಕಲ್, ಬಜಪೆ, ಮುಲ್ಕಿ ಮತ್ತು ಪಣಂಬೂರು ಠಾಣಾ ವ್ಯಾಪ್ತಿಗಳಲ್ಲಿ ಶನಿವಾರದವರೆಗೆ ಸೆಕ್ಷನ್ 144 ಜಾರಿಗೊಳಿಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ
ಬೆಳ್ಳಾರೆ : ಸುಳ್ಯದ ಬೆಳ್ಳಾರೆಯಲ್ಲಿನಿನ್ನೆ ರಾತ್ರಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ಲಾಠಿಚಾರ್ಜ್ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸುದ್ದಿಯಾಗಿದೆ. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿದ್ದಾರೆ.
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಸಾವನ್ನಪ್ಪಿದ್ದಾರೆ.ಮೃತ ವ್ಯಕ್ತಿಯನ್ನು ಕಾವೂರು ಜ್ಯೋತಿನಗರದ ನಿವಾಸಿ ಪ್ರದೀಪ್ (24) ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಸುಮಾರು 6ಕ್ಕೆ ನಂತೂರು ಬಳಿ ಸ್ಕೂಟರ್ ಮತ್ತು ಕಾರು ಡಿಕ್ಕಿಯಾಗಿ ಬಳಿಕ ಲಾರಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮವಾಗಿ ಸಂಭವಿಸಿದೆ. ಅಪಘಾತದಲ್ಲಿ ಪ್ರದೀಪ್ರ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ಬೀಡಿ ಕಾರ್ಮಿಕರ ಈಗಿರುವ ಆರ್ಥಿಕ ಹಾಗೂ ಆರೋಗ್ಯಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವರ ಉನ್ನತ್ತಿಗೆ ಕೇಂದ್ರ ಸರಕಾರ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ (ಎಚ್ಎಂಎಸ್ ಸಂಯೋಜಿತ) ಆಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ರವಿವಾರ ಜರಗಿದ ಬೀಡಿ ಕಾರ್ಮಿಕರ ಸಮಾವೇಶ ಹಾಗೂ ಬೀಡಿ ಬದುಕು ಅಧ್ಯಯನ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೀಡಿ ಉದ್ಯಮ ಆರ್ಥಿಕತೆಗೆ ದೊಡ್ಡ ಶಕ್ತಿ ನೀಡಿದೆ. ಬೀಡಿ ಉದ್ಯಮಕ್ಕೆ ಶೇ.28 ಜಿಎಸ್ಟಿ ವಿಧಿಸಿರುವುದು ಕಾರ್ಮಿಕರಿಗೆ, ಉದ್ಯಮಕ್ಕೆ ಬಹುದೊಡ್ಡ ಹೊಡೆತ ನೀಡಲಿದೆ. ಅದುದರಿಂದ ಬೀಡಿ ಉದ್ಯಮಕ್ಕೆ ಜಿಎಸ್ಟಿಯಿಂದ ಸಂಪೂರ್ಣ ವಿನಾಯತಿ ನೀಡಬೇಕುಎಂದು ಅಭಿಪ್ರಾಯ ಪಟ್ಟಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ ಬೀಡಿ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು…
ಮುಂಬೈ : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಮೇರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ ಕಂಡಿದ್ದು ಫಾರೆಕ್ಸ್ ಮಾರುಕಟ್ಟೆಯಲ್ಲಿ ರೂಪಾಯಿ ವಿನಿಮಯ ದರ ರೂ80.04 ತಲುಪಿದೆ. ಇನ್ನು ರೂಪಾಯಿ ದುರ್ಬಲವಾದರೆ ಆಮದು ಹೊರೆಯಾಗಲಿದ್ದು, ನಾವು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಡಾಲರ್ನಲ್ಲಿ ಪಾವತಿಸಿದರೆ, ನಾವು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಇನ್ನು ತೈಲ ದರ ಏರಿಕೆ ಮತ್ತು ನಿರಂತರ ಹಣದುಬ್ಬರದ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.