Subscribe to Updates
Get the latest creative news from FooBar about art, design and business.
Author: admin
ಮಂಗಳೂರು: ಮನರಂಜನಾ ಕ್ಷೇತ್ರದಲ್ಲಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್(45) ಅವರು ಮೇ 22 ,ರವಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುನಿಲ್ ಬಜಾಲ್ ಅವರು ಕೊಂಕಣಿ ನಾಟಕ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.ಕೊಂಕಣಿ ಧಾರಾವಾಹಿ ‘ಗಾಡ್ ಫಾದರ್’ ಮತ್ತು ಕೊಂಕಣಿ ಚಲನಚಿತ್ರ ‘ಕೊಂಬ್ಯಾಟ್’ ನಲ್ಲಿಯೂ ನಟಿಸಿದ್ದಾರೆ.ಮಂಗಳೂರಿನ ಕೊಂಕಣಿ ನಾಟಕ ಸಭಾದ ಸಕ್ರಿಯ ಸದಸ್ಯರೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮತ್ತು ಏರುತ್ತಿರುವ ಹಣದುಬ್ಫರದ ನಡುವೆ, ಕೇಂದ್ರ ಸರ್ಕಾರವು ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 9.5 ರೂಪಾಯಿ, ಡೀಸೆಲ್ ದರ 7 ರೂಪಾಯಿ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದು ,ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀ. 9.5 ರೂಪಾಯಿ ಮತ್ತು ಡೀಸೆಲ್ ಮೇಲಿನ ಸುಂಕ ಲೀ. 7 ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದು, ಈ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸ್ಮರಣಾರ್ಥ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಇಂದು ಮೇ.22ರ ಭಾನುವಾರ ಸಂಸದರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಸ್ಮಾರಕಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.,ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ನವದೆಹಲಿ: ದೇಶಾದ್ಯಂತ ಜೂನ್ ತಿಂಗಳಿಂದ ಕೋವಿಡ್ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ. ಜೂನ್ ನಿಂದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಮನೆಗೂ ಲಸಿಕೆ ಅಭಿಯಾನವನ್ನು ನಡಸಬೇ ಕು. ಕೋವಿಡ್ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಇನ್ನೂ ಲಸಿಕೆ ಪಡೆದುಕೊಳ್ಳದೇ ಇರುವವರಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮುಂದುವರಿಸಬೇಕು ಎಂದು ತಿಳಿಸಲಾಗಿದೆ.
ಮುಂಬೈ: ಬಾಲಿವುಡ್ ನಟಿ, ಐಟಂ ಗರ್ಲ್ ತಮ್ಮ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಸ್ವಯಂವರದ ಮೂಲಕ ರಿತೇಶ್ ಎಂಬಾತನನ್ನು ವರಿಸಿದ್ದ ಬಾಲಿವುಡ್ ಐಟಂ ಗರ್ಲ್ ರಾಖಿ ಸಾವಂತ್ ನಂತರ ಅವರಿಂದ ದೂರವಗಿದ್ದರು.ಆನಂತರ ತಮಗೆ ಇನ್ನೊಬ್ಬರೊಂದಿಗೆ ಮದುವೆಯಾವಾಗಿರುವುದಾಗಿ ಹೇಳಿಕೊಂಡು, ಆತನನ್ನು ಎಲ್ಲರಿಗೂ ಪರಿಚಯಿಸಿದ್ದರು.ಆದರೆ ನಂತರ ಇದು ಸುಳ್ಳು ಎಂದು ತಿಳಿಯಿತು. ಇದೀಗ ರಾಖಿ ಸಾವಂತ್ ಮತ್ತೆ ಸುದ್ದಿಯಲ್ಲಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ತಮಗೆ ಹೊಸ ಪ್ರೇಮಿ ಸಿಕ್ಕಿರುವುದಾಗಿ ರಾಖಿ ಸಾವಂತ್ ಹೇಳಿಕೊಂಡಿದ್ದಾರೆ. ಅವರ ಹೊಸ ಪ್ರೇಮಿ ಮೈಸೂರಿನ ಆದಿಲ್ ಎಂಬವರು ಆಗಿರುತ್ತಾರೆ.ಮೈಸೂರಿನ ಆದಿಲ್ ಎಂಬವರು ತನಗೆ ಬಿಎಂಡಬ್ಲ್ಯೂ ಕಾರ್ ನೀಡಿ ಪ್ರಪೋಸ್ ಮಾಡಿದ್ದಾರೆ ಎಂದು ರಾಖಿ ಸಾವಂತ್ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಸೋಮವಾರದಂದು ಬೆಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಇದೀಗ ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ದಿಯವರನ್ನು ನೇಮಕ ಮಾಡಲಾಗಿದೆ.
ನ್ಯೂಯಾರ್ಕ್ : ನ್ಯೂಯಾರ್ಕ್ನನಲ್ಲಿನ ಬಫಲೋದ ಸೂಪರ್ಮಾರ್ಕೆಟ್ ನಲ್ಲಿ. ದುಷ್ಕರ್ಮಿಯೊಬ್ಬ ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಸೂಪರ್ ಮಾರ್ಕೆಟ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ 10 ಮಂದಿಯನ್ನು ಕೊಂದಿದ್ದಾನೆ. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಏಕಾಏಕಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ದಾಳಿ ಕೃತ್ಯವನ್ನು ಕ್ಯಾಮೆರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ 1,000 ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಹೆಚ್ಚುವರಿ 1,000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಹಾಗೂ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಉತ್ತೇಜಿಸಲು ವಿಶೇಷ ಡ್ರೈವ್ ನಡೆಸಲಾಗುವುದು ಎಂದರು. ಇವಿ ಚಾರ್ಜಿಂಗ್ ಕೇಂದ್ರಗಳನ್ನು ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ,ಜಿಲ್ಲಾ ಕೇಂದ್ರಗಳಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು : ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್ ಪ್ರಕರಣಗಳು ಇದೀಗ ಮತ್ತೆ ಅಲ್ಪ ಜೀವ ಪಡೆದುಕೊಂಡಿದೆ. ಕೊರೊನಾ ವೈರಸ್ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳು ಕೂಡ ಸಡಿಲಗೊಂಡಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ . ಅದ್ದರಿಂದ ಇದೀಗ ಮತ್ತೆ ಕೆಲವು ನಿರ್ಬಂಧಗಳತ್ತ ಸರಕಾರ ಮುಖಮಾಡಿದೆ. ಹರಿಯಾಣ , ದೆಹಲಿ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಸ್ವಲ್ಪ ಹೆಚ್ಚಳವಾಗುತ್ತಿವೆ. ಅಲ್ಲದೆ ಇದೀಗ ಕರ್ನಾಟಕ ರಾಜ್ಯದಲ್ಲಿಯೂ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿವೆ. ಅದ್ದರಿಂದ ಈ ರಾಜ್ಯಗಳಲ್ಲಿ ಮಾಸ್ಕ್ ಧರಿಸಲು ಮತ್ತೆ ಸೂಚಿಸಲಾಗಿದೆ. ಇದರ ಅನುಸರಣೆ ಮಾಡದಿದ್ದರೆ ದಂಡ ಪ್ರಯೋಗಕ್ಕೆ ಆದೇಶಿಸಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಉಲ್ಬಣವನ್ನು ಕಡಿಮೆ ಮಾಡಲು, ಪೂರ್ವಭಾವಿ ಹೆಜ್ಜೆಯಾಗಿ, ರಾಜ್ಯ ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಮಾರ್ಗಸೂಚಿ ಆದೇಶವನ್ನು ಹೊರಡಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಪ್ರಯಾಣ ಸಮಯದಲ್ಲಿ…
ಮಂಗಳೂರು :ಪೊಳಲಿ ಜಾತ್ರೆ ಎಂದರೆ ಒಂದೆರಡು ದಿನಗಳ ಸಂಭ್ರಮವಲ್ಲ ಇದು ಒಂದು ತಿಂಗಳ ಕಾಲ ನಡೆಯುವ ಉತ್ಸವವಾಗಿದೆ. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ ಈ ಬಾರಿಯಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೆಯು 07-04-2022 ರಿಂದ 14-04-2022ರ ತನಕ ಸಂಭ್ರಮದಿಂದ ಜರುಗಿತು. ಏಪ್ರಿಲ್ 14, ಗುರುವಾರ ರಾತ್ರಿ ಕ್ಷೇತ್ರದ ಪ್ರಧಾನ ದೈವ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆದಿದ್ದು,ಸಂಪೋಕ್ಷಣೆ,ಮಂತ್ರಾಕ್ಷತೆಯೊಂದಿಗೆ ಈ ಬಾರಿಯ ಪೊಳಲಿ ಜಾತ್ರಾ ಮಹೋತ್ಸವವು ಸಮಾಪನಗೊಂಡಿದೆ. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಪರವೂರ ಭಕ್ತಭಿಮಾನಿಗಳು ಭಾಗವಹಿಸಿದ್ದರು.