Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಜ.28 : ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ಸಿನೆಮಾ ಜನರಿಗೆ ಮನೋರಂಜನೆ ನೀಡುವಲ್ಲಿ ಒಂದು ಉತ್ತಮ ಚಲನಚಿತ್ರ. ಈ ಚಲನ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಎರಡು ವಾರದ ಒಳಗೆ ಟಿಕೆಟ್ ದಾಖಲೆ ತೋರಿಸುವವರಿಗೆ ರೋಹನ್ ಕಾರ್ಪೊರೇ ಷನ್ ಪ್ರೊಜೆಕ್ಟ್ ಬುಕ್ ಮಾಡುವವರಿಗೆ ಶೇ 10 ವಿನಾಯಿತಿ ನೀಡಲಾಗುವುದು ಎಂದು ಚಲನ ಚಿತ್ರವನ್ನು ಅರ್ಪಿಸುತ್ತಿರುವ ರೋಹನ್ ಕಾರ್ಪೊರೇ ಷನ್’ನ ಎಂ.ಡಿ ಹಾಗೂ ಚೇರ್ ಮ್ಯಾನ್ ರೋಹನ್ ಮೊಂತೆರೊ ಮಂಗಳವಾರ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಚಲನಚಿತ್ರದ ನಿರ್ದೇಶಕ ಮಾತನಾಡಿ ರೋಹನ್ ಕಾರ್ಪೊರೇ ಷನ್’ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ. ಆರ್ ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಮಂಗಳೂರಿನ ರೂಪವಾಣಿ, ಭಾರತ್ ಮಾಲ್’ನ ಬಿಗ್ ಸಿನಿಮಾಸ್, ಪಿವಿಆರ್,ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ,…
ಮಂಗಳೂರು,ಜ.28 : ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಊರ ಪರವೂರ ಭಕ್ತರ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ ಆಡಳಿತದೊಂದಿಗೆ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದ್ದು, ಮಾರ್ಚ್ 1 ರಿಂದ 14ರವರೆಗೆ ತನಕ ತಂತ್ರಿವರೇಣ್ಯರಾದ ವಾಮಂಜೂರು ಶ್ರೀ ಅನಂತ ಉಪಾಧ್ಯಾಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ…
ಮಂಗಳೂರು,ಜ.27 ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಜಾಯಿಂಟ್ ಬದಲಾವಣೆಗಾಗಿ ರೋಬೋಟ್ ಅನ್ನು ಸ್ಮಿತ್ + ನೆಪ್ಯೂದವರ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿ ಯನ್ನು ಬಿಡುಗಡೆ ಮಾಡಿದ್ದು ಅದನ್ನು ನಮ್ಮ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ ಎಂದು ಎ.ಜೆ. ಆಸ್ಪತ್ರೆ ಮತ್ತು ರೀಸರ್ಚ್ ಸೆಂಟರ್ ನ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಈ ತಂತ್ರಜ್ಞಾನದ ಮೂಲಕ ರೋಗಿಯ ಚಿಕಿತ್ಸೆ ಯನ್ನು ನಿಖರತೆಯೊಂದಿಗೆ ಕಾರ್ಯ ಗತಗೊಳಿಸಲು ಸಹಾಯ ಮಾಡು ತ್ತದೆ, ಇದರಿಂದ ರೋಗಿಗಳಿಗಾಗಿ ಉತ್ತಮ ಶಸ್ತ್ರಚಿಕಿತ್ಸಾ ಫಲಿತಾಂಶಗಳು ಮತ್ತು ವೇಗವಾದ ಚೇತರಿಕೆಗೆ ದಾರಿ ನೀಡು ತ್ತದೆ. ಈ ವ್ಯವಸ್ಥೆ ಪ್ರಗತಿಶೀಲ 3ಡಿ ಚಿತ್ರಣ ಮತ್ತು ಸಮಯಕ್ಕೆ ತಕ್ಕ ನವೀಕರಣವನ್ನು ಬಳಸುತ್ತಿದ್ದು ಶಸ್ತ್ರಚಿಕಿತ್ಸಕರಿಗೆ ವೈಯಕ್ಷಿಕ ಶಸ್ತ್ರಚಿಕಿತ್ಸಾ ಯೋಜನೆಗಳನ್ನು ರಚಿಸಲು ಮತ್ತು ಅತೀ ದಕ್ಷವಾದ ಸ್ಥಿರತೆಯೊಂದಿಗೆ ಸಕ್ರಿಯ ಇಂಪ್ಲಾಂಟ್ ತಂತ್ರವನ್ನು ಸಾಧಿಸಲು ಅವಕಾಶ ನೀಡುತ್ತದೆ.ಈ ಸಲಕರಣೆ ಮೊಣಕಾಲು, ಭಾಗಶಃ ಮೊಣಕಾಲು ಮತ್ತು ಸೊಂಟದ ಬದಲಿ ಶಸ್ತ್ರಚಿಕಿತ್ಸೆಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ…
ಬೆಂಗಳೂರು,ಜ.26 : ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಜನ ನಾಯಗಂ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ. ಹೆಚ್. ವಿನೋದ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ದಳಪತಿ ವಿಜಯ್ ಜನ ನಾಯಗಂ 69ನೇ ಚಿತ್ರವಾಗಿದೆ. ಸಿನಿಮಾದಿಂದ ನಿವೃತ್ತಿ ಹೊಂದುವ ಮುನ್ನ ವಿಜಯ್ ನಟಿಸಲಿರುವ ಕೊನೆಯ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ವಿಜಯ್ ಜೊತೆ ಪೂಜಾ ಹೆಗ್ಡೆ ನಾಯಕಿ. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು, ಡಿಜೆ ಅರುಣಾಚಲಂ ಮುಂತಾದ ತಾರಾಗಣ ಕೂಡ ಚಿತ್ರದಲ್ಲಿದ್ದಾರೆ. ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಬೃಹತ್ ಬಜೆಟ್ನಲ್ಲಿ ನಿರ್ಮಿಸುತ್ತಿದೆ. ಸತ್ಯನ್ ಸೂರ್ಯನ್ ಛಾಯಾಗ್ರಹಣ, ಅನಲ್ ಅರಸು ಸಾಹಸ, ಪ್ರದೀಪ್ ಇ ರಾಘವ್ ಸಂಕಲನ, ಸೆಲ್ವಕುಮಾರ್ (ಕಲಾ ನಿರ್ದೇಶನ) ಮುಂತಾದ ದೊಡ್ಡ ತಾಂತ್ರಿಕ ತಂಡದೊಂದಿಗೆ ಜನ ನಾಯಗಂ 69ನೇ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರ ಈ ವರ್ಷ ಅಕ್ಟೋಬರ್ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ನಂತರ ವಿಜಯ್…
ಮಂಗಳೂರು ಜ.26 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಮಾಜಿ ಸಚಿವ,ಲ್ಯಾಂಡ್ಲಿಂಕ್ಸ್ ಸಂಸ್ಥೆಯ ಸಿಇಒ ಕೃಷ್ಣ ಜೆ. ಪಾಲೆಮಾರ್ ಅವರು ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಶಾಲೆಗೆ ಹೋಗುತ್ತಿದ್ದ ಸಂದರ್ಭ ಮೋರ್ಗನ್ಸ್ಗೇಟ್ನ ಗೇರುಬೀಜ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ತಾನು ಮುಂದೊಂದು ದಿನ ಆ ಇಡೀ ಆಸ್ತಿಯನ್ನೇ ಖರೀದಿಸುವಷ್ಟು ಶಕ್ತನಾಗುತ್ತೇನೆಂಬ ಕನಸು ಕಂಡಿರಲಿಲ್ಲ. ಆದರೆ ಅದು ಇಂದು ಸಾಧ್ಯವಾಗಿದೆ ಎಂದವರು ಹೇಳಿದರು. ಸಣ್ಣ ಪುಟ್ಟ ವ್ಯವಹಾರ ನಡೆಸುತ್ತಿದ್ದ ಸಂದರ್ಭ ರಿಯಲ್ ಎಸ್ಟೇಟ್ ಆರಂಭಿಸಿದಾಗ ಸಿ.ಎಲ್. ಡಿಸೋಜಾ ಎಂಬವರು ಗಾಡ್ಫಾದರ್ ಆಗಿ ಬೆಂಬಲ ನೀಡಿದ ಕಾರಣ ವ್ಯವಹಾರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ನೆನಪಿಸಿಕೊಂಡ…
ಮಂಗಳೂರು ಜ.26 : ನಗದದ ಸುಲ್ತಾನ್ ಬತ್ತೇರಿಯಲ್ಲಿರುವ ಸ್ವಸ್ತಿಕ್ ವಾಟರ್ ಪ್ರಂಟ್ ನಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಅತಿಥಿಯಾಗಿದ್ದ ನಗರ ಪೊಲೀಸ್ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಮಾತಾನಾಡಿ, ಜೆಸಿಐ ಸಂಸ್ಥೆಯಿಂದ ನಡೆಯುತ್ತಿರುವ ಸಾಮಾಜಿಕ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ಮಾತಾನಾಡಿ, ಜೆಸಿಐ ಸಂಸ್ಥೆ ನನಗೆ ಸಮಾಜ ಸೇವೆ, ಶಿಸ್ತು ಸೇರಿ ಬಹಳಷ್ಟು ಕಳಿಸಿದೆ ಮತ್ತು ನನ್ನ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಹೇಳಿದರು. ಸಮಾರಂಭದಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಡಾ.ರಾಘವೇಂದ್ರ ಹೊಳ್ಳ, ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ನಿಕಟಪೂರ್ವ ಅಧ್ಯಕ್ಷೆ ದೀಪಾ ರಾವ್, ನಿಯೋಜಿತ ಕಾರ್ಯದರ್ಶಿ ಭೂಮಿಕಾ ಪೂಜಾರಿ, ಅಲ್ವಿನ್ ಸಿಕ್ವೆರ ಮತ್ತಿತ್ತರರು ಉಪಸ್ಥಿತರಿದ್ದರು.ಸಭೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬೆಂಗಳೂರು, ಜ.26 : ಎರಡು ಹೊಸ ಧಾರಾವಾಹಿಗಳನ್ನು ಕಲರ್ಸ್ ವಾಹಿನಿಯಲ್ಲಿ ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ. 27 ರಂದು ಪ್ರಸಾರವಾಗಲಿವೆ. ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30 ಕ್ಕೆ ಪ್ರಸಾರ ಆಗಲಿದೆ. ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ. ವಧು ಧಾರಾವಾಹಿಯಲ್ಲಿ ವಧು ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ವಧು ಮನುಷ್ಯ ಸಂಬಂಧಗಳನ್ನು ಪ್ರೀತಿಸುವ ಮತ್ತು ಗೌರವಿಸುವ ಕಥೆ ಈ ಧಾರಾವಾಹಿಯಲ್ಲಿದೆ. ಸಾರ್ಥಕ್ ಪಾತ್ರದಲ್ಲಿ ಲಕ್ಷಣ ಧಾರಾವಾಹಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸಲಿದ್ದಾರೆ. ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಹಿಸಿದ್ದಾರೆ. ಯಜಮಾನ ಧಾರಾವಾಹಿಯಲ್ಲಿ ರಘು ಒಬ್ಬ ಸ್ವಾರ್ಥವಿಲ್ಲದ ಸರಳ ವ್ಯಕ್ತಿ, ಇವರಿಗೆ ತನ್ನ ಕುಟುಂಬದ ಪ್ರೀತಿ…
ಮೂಡುಬಿದಿರೆ, ಜ.25 : ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯುವ 22ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅಲಂಗಾರು ಚರ್ಚಿನ ಧರ್ಮಗುರು ರೇಫಾ ಮೆಲಸ್ ನೊರೊನ್ಹ ಉದ್ಯಮಿ ಸುಧೀರ್ ಹೆಗ್ಡೆ ಕಂಬಳ ಕರೆಗೆ ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಸಂಪ್ರೋಕ್ಷಿಸಿ ಕಂಬಳಕ್ಕೆ ಶನಿವಾರ ಸಾಂಪ್ರದಾಯಿಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಅವರು ದೀಪ ಬೆಳಗಿಸಿ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕ್ರೀಡೆ ಕಂಬಳವು ಸಾಂಸ್ಕೃತಿಕ ಪರಂಪರೆ ಕ್ರೀಡೆಯಾಗಿದ್ದು ಹಲವು ತಲೆಮಾರುಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಈ ಜನಪದ ಕ್ರೀಡೆಯು ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದರು. ಚಂದ್ರಶೇಖರ್ ಸ್ವಾಮೀಜಿ ಅವರು ಅಬ್ಬಕ್ಕ ರಾಣಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ಕೆಎಂಎಫ್ ಅಧ್ಯಕ್ಷ ಕೆ ಪಿ ಸುಚರಿತ…
ಮೂಡುಬಿದಿರೆ,ಜ.24 : ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ‘ವೀರ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ’ ದಲ್ಲಿ 22ನೇ ವರ್ಷದ ಹೊನಲು ಬೆಳಕಿನ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳೋತ್ಸವವು ಜ.25ರಂದು ನಡೆಯಲಿದೆ ಎಂದು ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಎ.ಕೋಟ್ಯಾನ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಮಯಕ್ಕೆ ಸರಿಯಾಗಿ ಕಂಬಳವನ್ನು ಆರಂಭಿಸಿ ಆದಷ್ಟು ಬೇಗ ಮುಗಿಸುವ ನಿಟ್ಟಿನಲ್ಲಿ ಬೆಳಿಗ್ಗೆ 7ಕ್ಕೆ ಕಾಯ೯ಕ್ರಮವನ್ನು ಆರಂಭಿಸಲಾಗುವುದು.ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆಯಲ್ಲಿ ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊತ್ತೇಸರ ವೇ.ಮೂ ಈಶ್ವರ ಭಟ್, ಅಲಂಗಾರು ಚರ್ಚ್ ಧರ್ಮಗುರು ಮೆಲ್ವಿನ್ ನೊರೊನ್ಹಾ ಪುತ್ತಿಗೆ ನೂರಾನಿ ಮಸ್ಟೀದ್ನ ಮೌಲಾನ ಝಿಯಾವುಲ್ಸ್, ಸುಧೀರ್ ಹೆಗ್ಡೆ ಕುಂಟಾಡಿ ಅವರೆಲ್ಲರೂ ಒಟ್ಟಾಗಿ ಸೇರಿ ಕಂಬಳ ಕರೆಗೆ ಪ್ರಸಾದ ಹಾಕಿ ಹಾಲನೆರೆಯುವ ಮೂಲಕ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಲಿದ್ದು, ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಖ್ಯ…
ಮಂಗಳೂರು,ಜ.23 : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು. ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಮಂಗಳೂರಿನ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆ ಜರುಗಿದ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು ಭಾಗವಹಿಸಿ ಪ್ರಯೋಜನ ಪಡೆದರು. ಶಿಬಿರದಲ್ಲಿ ಜನ್ಮಜಾತ ಹೃದ್ರೋಗವಿದ್ದು ಶಸ್ತ್ರ ಚಿಕಿತ್ಸೆ ಅಗತ್ಯವುಳ್ಳ ಮತ್ತು ಇತರ ಗಂಭೀರ ಪರಿಸ್ಥಿತಿ ಗಳೊಂದಿಗೆ ಗುರುತಿಸಲ್ಲಟ್ಟ ಮಕ್ಕಳಿಗೆ ಕೊಚ್ಚಿಯ ಅಮೃತಾ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಗಳನ್ನು ನೀಡುವ ಭರವಸೆ ನೀಡಲಾಯಿತು.400 ಕ್ಕೂ ಅಧಿಕ ಮಕ್ಕಳು ಈ ಶಿಬಿರದ ಪ್ರಯೋಜನ ಪಡೆಲಿದ್ದಾರೆ. 18 ವರ್ಷದೊಳಗಿನ ಮಕ್ಕಳ ತಪಾಸಣೆಯನ್ನು ಕೊಚ್ಚಿಯ ಅಮೃತಾ ಆಸ್ಪತ್ರೆಯ ಪೀಡಿಯಾಟ್ರಿಕ್ ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಬ್ರಿಜೇಶ್ ಪಿ ಕೆ ನೇತೃತ್ವದ ಮಕ್ಕಳ…












