Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು, ನ. 28 : ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಜೋಜು ಜಾರ್ಜ್ ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿದೆ.ಇದೀಗ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಇದೊಂದು ಮಾಸ್ ಮತ್ತು ಕಮರ್ಷಿಯಲ್ ಚಿತ್ರವಾಗಿದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕೇರಳದಲ್ಲಿ ಬಿಡುಗಡೆಯಾಗಿ ಈ ಚಿತ್ರ ಯಶಸ್ವಿಯಗಿದೆ. ಕನ್ನಡದಲ್ಲೂ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ ಎಂದು ನಿರ್ದೇಶಕ…
ಉಳ್ಳಾಲ, ನ. 27: ಕೋಟೆಕಾರು ಮಾಡೂರಿನ ಮೆಡ್ ಪ್ಲಸ್ ಮೆಡಿಕಲ್ ಎದುರುಗಡೆಯ ಕಟ್ಟಡದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ 16ನೇ ಮಾಡೂರು ಶಾಖೆ ಉದ್ಘಾಟನೆಗೊಂಡಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರು ಆಧುನಿಕ ಕಾಲದಲ್ಲಿ ಬಳಕೆಯಲ್ಲಿರುವ ಪ್ಲಾಸ್ಟಿಕ್, ಸ್ಟೀಲ್ ಪ್ಲೇಟಿನ ಪಾತ್ರೆಗಳ ಸಂಸ್ಕೃತಿಯ ನಡುವೆಯು ಮಣ್ಣಿನ ಮಡಕೆಯನ್ನು ತಯಾರಿಸಿ ಜನರಿಗೆ ಒದಗಿಸುವಂತಹ ದೊಡ್ಡ ಮಟ್ಟಿನ ಕಾರ್ಯ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ವತಿಯಿಂದ ಸಮಾಜದಲ್ಲಿ ಆಗುತ್ತಿದೆ. ಸಂಘದ ಮಣ್ಣಿನ ಪಾತ್ರೆಗಳ ನಿರ್ಮಾಣದ ಘಟಕಕ್ಕೆ ಸೋಲಾರ್ ಪೂರೈಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಹೇಳಿದರು. ಮುಡಿಪು ಕುಲಾಲ ಸಮಾಜ ಸಂಘದ ಅಧ್ಯಕ್ಷ ಪುಂಡರೀಕಾಕ್ಷ ಯು. ಅವರು ನೂತನ ಶಾಖೆಗೆ ಚಾಲನೆ ನೀಡಿ ಶಾಖೆಯ ಪ್ರಥಮ ಠೇವಣಿ ಪತ್ರವನ್ನು ಪಡೆದು ಮಾತನಾಡಿ ಕುಂಬಾರಿಕೆ ವೃತ್ತಿಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಆರಂಭಗೊಂಡ ಈ ಸಹಕಾರ ಸಂಘ ಉತ್ತಮ ಕಾರ್ಯವನ್ನು ಮಾಡುತ್ತಿದೆ ಎಂದರು. ಮರೋಳಿ ಶ್ರೀ…
ಮಂಗಳೂರು,ನ. 26 :ಬ್ರೇಕ್ ಫೇಲ್ ನಿಂದ ನಡೆದ ರಿಕ್ಷಾ ಅಪಘಾತದಲ್ಲಿ ಚಾಲಕ ಮೃತಪಟ್ಟಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಆದಿತ್ಯವಾರ ನಡೆದಿದೆ. ಮೃತರನ್ನು ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಎಂದು ಗುರುತಿಸಲಾಗಿದೆ. ರಿಕ್ಷಾ ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ಇಳಿಯುತ್ತಿದ್ದಂತೆ ರಿಕ್ಷಾದ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ನ.25 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಇದರ ಮಂಗಳೂರಿನ ಶಾಖೆ ಕದ್ರಿ ಕಂಬಳದ ವ್ಯಾಸರಾವ್ ರಸ್ತೆಯ ವರ್ಟೆಕ್ಸ್ ಟಿಆರ್ ನ ನೆಲ ಮಹಡಿಯಲ್ಲಿಭಾನುವಾರ ಶುಭಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಸಿಸಿಐ ಅಧ್ಯಕ್ಷ ಭಾರತ್ ಬೀಡಿ ವಕ್ಸ್ ೯ ಪೈ.ಲಿ. ವ್ಯವಸ್ಥಾಪಕ ನಿರ್ದೇಶಕ ಆನಂದ್ ಜಿ. ಪೈ ಅವರು ಮಾತನಾಡಿ, ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಮಂಗಳೂರು ನಗರದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿ, ವಿವಿಧ ಕಡೆಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಉನ್ನತಿ ಸಾಧಿಸಲಿ ಎಂದು ಶುಭಹಾರೈಸಿದರು. ಹ್ಯಾಂಗ್ಯೂ ಐಸ್ ಕ್ರೀಮ್ ಪೈ ಲಿ. ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಜಿ. ಪೈ ಅವರು ಮಾತನಾಡಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ತನ್ನ ಬ್ಯಾಂಕಿಂಗ್ ಕ್ಷೇತ್ರವನ್ನು ಮಂಗಳೂರಿಗೂ ವಿಸ್ತರಿಸಿದ್ದು, ಇಲ್ಲಿನ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ. ಶಿರಸಿ ಅಧ್ಯಕ್ಷ ಜೈದೇವ್ ಯು,…
ಮಂಗಳೂರು, ನ. 25 : ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ನಿರ್ಮಾಣಗೊಂಡಿರುವ ದಿ | ಲೋಕನಾಥ್ ಬೋಳಾರ್ ಸ್ಮಾರಕ ನೂತನ ಕಟ್ಟಡ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರು ಬಂದರಿನಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ| ಜಿ. ಶಂಕರ್ ಅವರು ಮಾತಾನಾಡಿ ಮೀನುಗಾರ ಸಮುದಾಯದವರು ರಾಜಕೀಯ ರಹಿತವಾಗಿ ಒಂದಾಗಬೇಕು. ನಮ್ಮಲ್ಲಿ ಒಗ್ಗಟ್ಟಿದ್ದರೆ ಮಾತ್ರ ನಮಗೆ ಬೇಕಾದ ಸಲವತ್ತು ಗಳನ್ನು ಸರಕಾರದಿಂದ ಪಡೆಯಲು ಸಾಧ್ಯ ಎಂದು ಹೇಳಿದರು. ಬೋಳೂರು ಅಮೃತಾನಂದಮಯಿ ಶಾಖಾ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಮಾತನಾಡಿ, ಮೀನುಗಾರ ಸಮುದಾಯದವರ ಸಂಘದ ಸಮಾಜಮುಖಿ ಕಾರ್ಯ ಶ್ಲಾಘನೀಯ, ಇಂತಹ ಸೇವಾ ಕಾರ್ಯ ಗಳು ಸಂಘದಿಂದ ನಿರಂತರ ನಡೆಯಲಿ ಎಂದರು. ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಏಕರೂಪದ ಮೀನು ಗಾರಿಕೆ ನೀತಿ ಜಾರಿಗೊಳಿಸುವ ಮೂಲಕ ಮೀನುಗಾರಿಕೆಯಲ್ಲಿ ಶಿಸ್ತು ತರಲು ಸಾಧ್ಯ. ಈ…
ಕಾರ್ಕಳ, ನ.24 : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಎಂಬಲ್ಲಿ ನ.23ರಂದು ನಡೆದಿದೆ. ಮೃತರನ್ನು ಕರಲಗುಡ್ಡೆ ಸುರೇಖಾ ನಗರದ ನಿವಾಸಿ ಅಜಿತ್ ಕುಮಾರ್(21ಎಂದು ಗುರುತಿಸಲಾಗಿದೆ. ಬಸ್ ಮದ್ಯ ಭಾಗಕ್ಕೆ ಬೈಕ್ ಢಿಕ್ಕಿಯಾಗಿದ್ದು, ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ನ.23 :ಮಿಜ್ ಕ್ಲಾಸಿಕ್ ಕರಾವಳಿ ಬಾಡಿಬಿಲ್ಡಿಂಗ್ ಮತ್ತು ಫಿಟ್ನೆಸ್ ಎಕ್ಸ್ಪೋ ನ.24ರಂದು ಅಪರಾಹ್ನ 3ರಿಂದ ರಾತ್ರಿ 10ರವರೆಗೆ ನಗರದ ಫಿಜಾ ಬೈ ನೆಕ್ಸಸ್ ಮಾಲ್ನ ಹೊರಾಂಗಣದಲ್ಲಿ ನಡೆಯಲಿದೆ ಎಂದು ರಾಮೀಝ್ ಮಿಝ್ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ.ಅಬ್ದುಲ್ ಶಕೀಲ್ ಅವರ ಸಹಭಾಗಿತ್ವದಲ್ಲಿ , ಕನ್ನಡ ಹೆಲ್ತ್ ಆ್ಯಂಡ್ ಫಿಟ್ನೆಸ್, ತುಳು ಫ್ಯಾಶನ್ ಆ್ಯಂಡ್ ಫಿಟ್ನೆಸ್, ಅಬೂಬಕ್ಕರ್ ಅಶ್ರಫ್ ಅವರ ನೆರವಿನಿಂದ ಚಾಂಪಿಯನ್ ಶಿಪ್ ನಡೆಯಲಿದೆ. ಉಡುಪಿ, ದ.ಕ., ಕೊಡಗು, ಕಾಸರಗೋಡು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಿಸ್ಟರ್ ಏಷ್ಯಾ ವಿಜೇತ ರಾಮೀಝ್ ಮಿಝ್, ಒಲಿಂಪಿಕ್ ಸ್ಪೋರ್ಟ್ನ ನಿರ್ವಹಣಾ ನಿರ್ದೇಶಕ ಮುಹಮ್ಮದ್ ಶರೀಫ್, ಸಂಘಟಕ ತುಫೈಲ್, ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಉಪಸ್ಥಿತರಿದ್ದರು.
ಮಂಗಳೂರು, ನ. 23 : ಯಂಗ್ ಬ್ರದರ್ ಸ್ಪೋರ್ಟ್ಸ್ ಕ್ಲಬ್ ಇದರ ದಿವಾಕರ್ ಪಾಂಡೇಶ್ವರ ನೇತೃತ್ವದಲ್ಲಿ ಕಳೆದ 19 ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ದೀಪೋತ್ಸವ ಪ್ರಯುಕ್ತ ನಡೆಯುವ ಪಾಂಡೇಶ್ಚರ ನೈಟ್ 2024 ಕಾರ್ಯಕ್ರಮ ಪಾಂಡೇಶ್ವರ ಅಶ್ವಥಕಟ್ಟೆ ಬಳಿ ಶುಕ್ರವಾರ ನಡೆಯಿತು. ಪಾಂಡೇಶ್ವರ ಅಶ್ವತ್ಥಕಟ್ಟೆಯ ಬಳಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದರು. ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ, ವಿದ್ಯಾರ್ಥಿ ವೇತನ ಪ್ರದಾನಿಸಲಾಯಿತು. ಅಶಕ್ತ ಕುಟುಂಬಗಳಿಗೆ ಆರ್ಥಿಕ ಸಹಾಯ ಹಸ್ತಾಂತರಿಸಲಾಯಿತು. ಸಮಾಜ ಸೇವಕ ಈಶ್ವರ ಮಲ್ಪೆ ಹಾಗೂ ಪಿಡಬ್ಲೂಡಿ ಅಧಿಕಾರಿ ಮಿಥುನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ಸುಧೀರ್…
ಮಂಗಳೂರು, ನ. 22 : ಇಟಲಿಯ ಮೀರ್ ಗ್ರೂಪ್ ತನ್ನ ವ್ಯವಹಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (ಎಂಎಸ್ಇಝೆಡ್)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ನಗರದ ಓಶಿಯನ್ ಪರ್ಲ್ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಸಮಕ್ಷಮದಲ್ಲಿ ಇಟಲಿಯ ಮೀರ್ ಗ್ರೂಪ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್ಚ್ ರಫೆಲ್ ಮರ್ರಾರೆ ಮತ್ತು ಮಂಗಳೂರು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (ಎಂಎಸ್ಇಝೆಡ್) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ. ಸೂರ್ಯನಾರಾಯಣ ಅವರು ಒಪ್ಪಂದಕ್ಕೆ ಸಹಿ ಮಾಡಿದರು. ಈ ಸಂದರ್ಭ ಮಾತನಾಡಿದ ಎಂಎಸ್ಇಝೆಡ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂರ್ಯನಾರಾಯಣ ವಿ ಅವರು ಇಟಲಿಯ ಮೀರ್ ಸಮೂಹ ಸಂಸ್ಥೆಯು ತನ್ನ ಕಟ್ಟಡ ಸಾಮಗ್ರಿಗಳು ಮತ್ತು ಇತರ ವಿನ್ಯಾಸ ಸಾಮಗ್ರಿಗಳ ಉತ್ಪಾದನೆಯ ಘಟಕವನ್ನು ಮಂಗಳೂರಿನಲ್ಲಿ ಆರಂಭಿಸಲು ಆಸಕ್ತಿ ವಹಿಸಿದೆ. ಘಟಕ ಸ್ಥಾಪನೆಯ ಉದ್ದೇಶಕ್ಕಾಗಿ 10 ಎಕ್ರೆ ಜಮೀನು ದೊರಕಿಸಿಕೊಡುವಂತೆ ಮನವಿ ಮಾಡಿದೆ ಎಂದು ಹೇಳಿದರು. ಮೀರ್ ಗ್ರೂಪ್ ಸಿಇಒ ರಫೇಲೆ ಅವರು ಮಾತನಾಡಿ, ಮಂಗಳೂರು…
ನವದೆಹಲಿ, ನ.21:ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಕಾರ್ಯಕ್ರಮ ಇಂದು ಗುರುವಾರ ನಡೆಯಿತು. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದು ಅವರು ತಿಳಿಸಿದರು.…












