Subscribe to Updates
Get the latest creative news from FooBar about art, design and business.
Author: admin
ಕಾಸರಗೋಡು, ಜು, 28: ಮನೆ ಸಮೀಪದ ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಸಾವನ್ನಪ್ಪಿದ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ಗುರುವಾರ ನಡೆದಿದೆ. ಮೃತರನ್ನುಜನಾರ್ಧನ ನಾಯಕ್(42) ಎಂದು ಗುರುತಿಸಲಾಗಿದೆ. ಸಂಜೆ ನೀರು ಸೇದಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತು ಮಗು ಸಂಜೆ ಮನೆಗೆ ಬಂದಾಗ ಜನಾರ್ಧನ ನಾಪತ್ತೆಯಾಗಿದ್ದು, ಪರಿಸರ ವಾಸಿಗಳಿಗೆ ತಿಳಿಸಿದ್ದರು. ಹುಡುಕಟ ನಡೆಸಿದಾಗ ಬಾವಿಗೆ ಬಿದ್ದಿರುವುದು ಪತ್ತೆಯಾಗಿದೆ. ಪರಿಸರವಾಸಿಗಳು ಮತ್ತು ಮುಳುಗು ತಜ್ಞರ ಸಹಾಯದಿಂದ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು ಎಂದು ವರದಿಯಾಗಿದೆ.
ರೋಡ್ಸ್, ಜು. 27 : ಕಾಡ್ಗಿಚ್ಚು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡದು ಪತನಗೊಂಡು ಇಬ್ಬರು ಪೈಲಟ್ಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗ್ರೀಸ್ನಲ್ಲಿ ನಡೆದಿದೆ. ಎವಿಯಾ ದ್ವೀಪದಲ್ಲಿರುವ ಕಾಡಿನಲ್ಲಿ ಕಾಡ್ಗಿಚ್ಚಿನಿಂದಾಗಿ ಬೆಂಕಿ ಧಗಧಗಿಸುತ್ತಿತ್ತು, ಬೆಂಕಿಯನ್ನು ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನವು ಬಂದಿತ್ತು, ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಡಿಕ್ಕಿ ಹೊಡೆದು ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಇಬ್ಬರು ಪೈಲಟ್ಗಳು ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ.
ನೆಲ್ಯಾಡಿ, ಜು. 26 : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ಜು.25, ಮಂಗಳವಾರ ನಡೆದಿದೆ. ಮೃತರನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇಕ್ಬಾಲ್ ಅವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಕ್ಬಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು, ಜು. 24 : ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ – ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ರವಿವಾರ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಎಸ್. ಯಾನೆ ಚರಣ್ (20) ಮೃತ ಬೈಕ್ ಸವಾರ. ಚರಣ್ ಅವರು ಪುತ್ತೂರಿನಿಂದ ಸೇಡಿಯಾಪು ಕಡೆ ಬೈಕ್ ಚಲಾಯಿಸಿ ಹೋಗುತ್ತಿದ್ದಾಗ ಕೆಮ್ಮಾಯಿ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಇದರಿಂದಾಗಿ ಸವಾರ ಚರಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಾಂಗ್ಲಾದೇಶ, ಜು. 23: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಕೆರೆಗೆ ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಝಲ್ಕಾತಿ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಬಸ್ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಭಂಡಾರಿಯಾ ಉಪ ಜಿಲ್ಲೆಯಿಂದ ನೈಋತ್ಯ ವಿಭಾಗೀಯ ಪ್ರಧಾನ ಕಚೇರಿ ಬರಿಸಾಲ್ಗೆ ಎಂಬಲ್ಲಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದು 17 ಮಂದಿ ಮೃತಪಟ್ಟಿದ್ದಾರೆ. ಈಗಾಗಲೇ 17 ಶವ ಹೊರ ತೆಗೆಯಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಂಟ್ವಾಳ, ಜು. 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಲಾರಿಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದಿದೆ ಎನ್ನಲಾಗಿದೆ.
ಮಂಗಳೂರು, ಜು. 21: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತಪಟ್ಟಿರುವ ಮಗು ಎಂದು ಹೇಳಲಾಗಿದೆ. ಬುಧವಾರ ಸಂಜೆ ಮಗು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜು. 20 : ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬುಧವಾರ ಮಂಗಳೂರಿನಲ್ಲಿ ಸಂಭವಿಸಿದೆ. ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು,ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಉಡುಪಿ, ಜು. 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ವರ್ಗವಣೆಯಾಗಿದ್ದಾರೆ. ವಿದ್ಯಾಕುಮಾರಿ ಕೆ. ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ.
ನವದೆಹಲಿ,ಜು. 11: ದೆಹಲಿ – ಮೀರತ್ ಎಕ್ಸ್ಪ್ರೆಸ್ ವೇಯಲ್ಲಿ ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಗಾಜಿಯಾಬಾದ್ ನಲ್ಲಿ ಮಂಗಳವಾರ ನಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಸದಸ್ಯರು ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.