Author: admin

ಮೂಡುಬಿದಿರೆ,ಸೆ.18 : ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ 4 ದಿನಗಳ ಕಾಲ ನಡೆಯ ಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಎಸಿಎಫ್ ಆಂಟನಿ ಎಸ್. ಮರಿಯಪ್ಪ ಕೆನಡಾದ ಪರಿಸರ ಚಿಂತಕ ಡಾ.ಸಿ. ರಾಜಶೇಖರ ಮೂರ್ತಿ, ಪರಿಸರವಾದಿ ಡಾ.ಎಂ.ಡಿ. ಸುಭಾಸ್ ಚಂದ್ರನ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಎಂ. ಕೃಷ್ಣ ಮೂರ್ತಿ, ಡಾ.ಹರೀಶ ಕೃಷ್ಣ ಮೂರ್ತಿ , ಸಂಘಟನಾ ಕಾರ್ಯದರ್ಶಿ ಡಾ.ಎಸ್. ವಿನಯ್ ಉಪಸ್ಥಿತರಿದ್ದರು.

Read More

ಸುಳ್ಯ,ಅ.17: ವಲಯ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ, ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ಸದಸ್ಯ, ದಿವಾಕರ ಮುಂಡಾಜೆ (55) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು. ದಿವಾಕರ್ ಅವರು ಬುಧವಾರ ಬೆಳಿಗ್ಗೆ ತನ್ನ ಅಂಗಡಿಗೆ ತನ್ನ ಕಾರಲ್ಲಿ ಬರುತ್ತಿದ್ದ ವೇಳೆ ದಾರಿ ಮಧ್ಯೆ ಹೃದಯಾಘಾತದಿಂದ ಮೃತರಾಗಿದ್ದಾರೆ. ದಿವಾಕರ್ ಅವರು ಹರಿಹರದಲ್ಲಿ ಸ್ಟುಡಿಯೋ, ಅಂಗಡಿಯನ್ನು ಹೊಂದಿದ್ದು, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

Read More

ಉಳ್ಳಾಲ, ಅ.16 : ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.ಮೃತರನ್ನು ಮಾಡೂರು ನಿವಾಸಿ ನಾಗೇಶ್(51) ಎಂದು ಗುರುತಿಸಲಾಗಿದೆ. ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ನಾಗೇಶ್ ಅವರು ಬುಧವಾರ ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನು ಖರೀದಿಸಿ ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಪು, ಅ. 15: ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತಾಭಿಮಾನಿಗಳ ಸಹಭಾಗಿತ್ವದೊಂದಿಗೆ ಆಯೋಜಿಸಲಾಗಿರುವ ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ವೈಭವದ ವಿಸರ್ಜನ ಶೋಭಾಯಾತ್ರೆ ಮಂಗಳವಾರ ಸಂಜೆ ನಡೆಯಿತು. ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮತ್ತು ಶಾಲಿನಿ– ಶಂಕರ್ ದಂಪತಿ ಪುಷ್ಪಾರ್ಚನೆಗೈಯ್ಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು. ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳಿಗೆ ಕ್ಷೇತ್ರದ ತಂತ್ರಿ ವೇ.ಮೂ. ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಹಾಮಂಗಳಾರತಿ ಮತ್ತು ವಿಸರ್ಜನ ಆರತಿ ಬೆಳಗಿದ ಬಳಿಕ ವಿಗ್ರಹಗಳನ್ನು ಟ್ಯಾಬ್ಲೊಗಳಿಗೆ ಸ್ಥಳಾಂತರಿಸಲಾಯಿತು. ಶ್ರೀ ಮಹಾಲಕ್ಷ್ಮೀ ದ್ವಾರದ ಬಳಿ ಶ್ರೀ ಕ್ಷೇತ್ರ ಮಾತೆ ಮಹಾಲಕ್ಷ್ಮೀ ದೇವರನ್ನೊಳಗೊಂಡ ಅಂಬಾರಿ ಹೊತ್ತ ವೈಶಿಷ್ಟ್ಯ ಪೂರ್ಣವಾದ ಕರಿಯಾನೆಗೆ ಡ್ರೋನ್ ಮೂಲಕ ಪುಷ್ಪಾರ್ಚ ನೆಗೈದು ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಭಜನ ತಂಡಗಳು, ಸಾಮಾಜಿಕ ಜಾಗೃತಿ ಸಾರುವ ಪ್ರತಿಕೃತಿಯುಳ್ಳ…

Read More

ಮಂಗಳೂರು, ಅ. 15: ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರ ಕಿರುಚಿತ್ರ ‘ಸೇವ್ ಅವರ್ ಸೋಲ್’ ಅ. 18ರಂದು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಿರ್ಮಾಪಕ ಯು.ಜಿ. ರಾಘವ್ ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಸ್ಥ ಅಚಲ್ ಅವರು.ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಸಂದೇಶವಿರುವ ಕಿರುಚಿತ್ರ ಎಂದು ಅವರು ಹೇಳಿದರು.ನಿರ್ಮಾಪಕ ಯು.ಜಿ. ರಾಘವ್, ಎ.ಯು. ಕ್ರಿಯೇಶನ್ಸ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ  ಚಿತ್ರ ನಿರ್ಮಾಣಗೊಂಡಿದೆ  ಎಂದು ಅವರು ತಿಳಿಸಿದರು ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು. ಪ್ರಸಾದ್…

Read More

ಮಂಗಳೂರು,ಅ.14: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ರವಿವಾರ ನಡೆಯಿತು. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಭವ್ಯ ಶೋಭಾಯಾತ್ರೆಯು ಜರಗಿತು. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಶೋಭಾಯಾತ್ರೆ ಮಣ್ಣಗುಡ್ಡ ,ಲಾಲ್ ಬಾಗ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ನ್ಯೂ ಚಿತ್ರಾ ಟಾಕೀಸು, ಅಳಕೆ ಮಾರ್ಗ ವಾಗಿ ಕುದ್ರೋಳಿ ಶ್ರೀ ಕ್ಷೇತ್ರ ಕ್ಕೆ ಮರಳಿ. ಸೋಮವಾರ ಮುಂಜಾನೆ, ಪೂಜೆ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದಾ ವಿಸರ್ಜನೆ ನಡೆಯಿತು. 70ಕ್ಕೂ…

Read More

ಉಪ್ಪಿನಂಗಡಿ, ಅ.13: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಶನಿವಾರ ನಡೆದಿದೆ. ಮೃತರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.

Read More

ಉಡುಪಿ,ಅ.12 : ಉಡುಪಿಯ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ’ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಅ.9ರಂದು ಉದ್ಘಾಟನೆಗೊಂಡಿತು. ನೂತನ ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್‌ನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜಂಟಿಯಾಗಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಅನುಗ್ರಹದಿಂದ ನೂತನವಾಗಿ ಆರಂಭಗೊಂಡ ಈ ಹೋಟೆಲ್ ಯಶಸ್ವಿಯಾಗಲಿ ಎಂದು ಹಾರೈಸಿದರು. ಪೇಜಾವರ ಶ್ರೀಪಾದರು ಆಶೀರ್ವಚನ ನೀಡಿ, ಉಡುಪಿಗೆ ಉದ್ಯಮಿ ಜಯರಾಮ್ ಬನಾನ್ ಅವರು ಈ ಹೊಟೇಲ್ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ಕೃಷ್ಣನ ಅನುಗ್ರಹದಿಂದ ಉದ್ಯಮ ಯಶಸ್ವಿಯಾಗುವುದರೊಂದಿಗೆ ಜನತೆಗೂ ಇದರ ಪ್ರಯೋಜನ ದೊರಕಲಿ ಎಂದು ಹಾರೈಸಿದರು. ಸುಬ್ರಹ್ಮಣ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಉಡುಪಿ ಹೊಟೇಲ್ ಉದ್ಯಮಕ್ಕೆ ಪ್ರಸಿದ್ಧವಾಗಿದೆ. ಜಯರಾಮ್ ಬನಾನ್ ಅವರ ಈ ಹೊಟೇಲ್ ಉದ್ಯಮ ತುಂಬಾ ಜನರಿಗೆ ಉದ್ಯೋಗ ನೀಡಿದ್ದು, ಅವರು ಸಮರ್ಥ ಆಡಳಿತದಿಂದ ಯಶಸ್ವಿಯಾಗಿದ್ದಾರೆ ಎಂದು…

Read More

ಮಂಗಳೂರು, ಅ.11;ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ದೇಶಾ ದ್ಯಂತ 1000ಡಾಕ್ ನಿರ್ಯಾತ್ ಕೇಂದ್ರಗಳಿವೆ ಈ ಪೈಕಿ ಮಂಗಳೂರು ಅಂಚೆ ವಿಭಾಗದಲ್ಲಿ ಮೂರು ಕೇಂದ್ರ ಗಳು ಕಾರ್ಯ ನಿರ್ವಹಿ ಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಅವರು ಬುಧವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಇಂದು ಅಂಚೆ ಇಲಾಖೆಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ ನಗರದ ಮಂಗಳೂರು ಅಂಚೆ ವಿಭಾಗದ ಪ್ರಧಾನ ಅಂಚೆ ಕಚೇರಿ ಇರುವ ಪಾಂಡೇಶ್ವರ, ಹಂಪನಕಟ್ಟೆ ಮತ್ತು ಸುರತ್ಕಲ್ ಅಂಚೆ ಕಚೇರಿಗಳು ಡಾಕ್ ನಿರ್ಯಾತ್ ಕೇಂದ್ರಗ ಳಾಗಿ ವಿದೇಶಗಳಿಗೆ ಗ್ರಾಹಕರ ಉತ್ಪನ್ನಗಳನ್ನು ರಫ್ತು ಮಾಡಲು ನೆರವು ನೀಡುತ್ತಿವೆ. ಪ್ರಪಂಚ ದಾದ್ಯಂತದ ವಿವಿಧ ದೇಶಗಳಿಗೆ ಗ್ರಾಹಕರು ಉತ್ಪನ್ನ ಗಳನ್ನು ರಫ್ತು ಮಾಡುವ ಚಟುವಟಿಕೆ ಗಳಿಗೆ ಈ ಕೇಂದ್ರಗಳ ಮೂಲಕ ಸಹಾಯ ಮಾಡಲಾಗುತ್ತದೆ ಎಂದು ಸುಧಾಕರ ಮಲ್ಯ ಹೇಳಿದರು. ಅಂಚೆ ಇಲಾಖೆಯ ಮೂಲಕ…

Read More

ಮಂಗಳೂರು, ಅ.10: ರಾಷ್ಟ್ರಮಟ್ಟದ ಮಾನ್ಯತೆ ಪಡೆದುಕೊಳ್ಳುತ್ತಿರುವ ತುಳುನಾಡಿನ ಹುಲಿವೇಷ ಕುಣಿತದ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅ. 11ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ಕುಡ್ಲದ ಪಿಲಿ ಪರ್ಬ’ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿರುವ ಕುಡ್ಲದ ಪಿಲಿಪರ್ಬ  ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳ ಲಿದೆ ಎಂದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 5 ಲಕ್ಷ ರೂ., ದ್ವಿತೀಯ ಬಹುಮಾನ 3 ಲಕ್ಷ ರೂ., ತೃತೀಯ ಬಹುಮಾನ 2 ಲಕ್ಷ ರೂ. ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಕಪ್ಪು ಪಿಲಿ, ಪರ್ಬದ ಪಿಲಿ, ಮರಿ ಹುಲಿ, ತಾಸೆ, ಮುಡಿ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ…

Read More