Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಮಾ.05 : ‘ಶಿವಾಜಿ’ ತುಳು ನಾಟಕ ಕಟೀಲು ಕ್ಷೇತ್ರದಲ್ಲಿ ಇದೇ 6 ರಂದು ಪ್ರಥಮ ಬಾರಿ ಪ್ರದರ್ಶನಗೊಳ್ಳಲಿದೆ. ತಾ. 13 ರಂದು ಪುರಭವನದಲ್ಲಿ ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಾಜಿ ತುಳು ನಾಟಕದ ಶೀರ್ಷಿಕೆ ಗೀತೆ ಕನ್ನಡದಲ್ಲಿದೆ. ಸಂಭಾಷಣೆ ತುಳುವಿನಲ್ಲಿ ಇದೆ. ಅಲ್ಲಲ್ಲಿ ಹಿಂದಿ ಭಾಷೆಯನ್ನು ಬಳಸಿದ್ದೇವೆ. ಒಟ್ಟು 3 ಹಾಡುಗಳಿದ್ದು, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಿರಾಜ್ ಕಾವೂರು ಕಥೆ ರಚಿಸಿದ್ದಾರೆ ಎಂದು ಹೇಳಿದರು. ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್, ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ.ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ದೇವದಾಸ್ ಕಾಪಿಕಾಡ್ ಅವರು ಹಾಡುಗಳನ್ನು ಹಾಡಿದ್ದಾರೆ. ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಪ್ರೀತೇಶ್ ಬಳ್ಳಾಲ್ಬಾಗ್ ಶಿವಾಜಿ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಎ.ಕೆ.…
ಉಡುಪಿ, ಮಾ.05: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಮಹಾಬ್ರಹ್ಮಕಲಶಾಭಿಷೇಕ ನಡೆಸುವ ಮೂಲಕ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಬುಧವಾರ ಸಂಪನ್ನಗೊಂಡಿತು. ವೇದಮೂರ್ತಿ ಕೆ.ಜಿ.ರಾಗವೇಂದ್ರ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಮಹಾ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಮಂಗಳ ಗಣಯಾಗ, ಶಾಂಭವಿ ಕಾಲಾಮಾತೃಕಾರಾಧನೆ, ಕಾಲರಾತ್ರೀಕಾಲಾಮಾತೃಕಾರಾಧನೆ, ಮಂಡಲಾರ್ಚಣೆಯೊಂದಿಗೆ ಮಹಾ ಬ್ರಹ್ಮಕಲಶಾಭಿಷೇಕದ ಧಾರ್ಮಿಕ ವಿಧಿವಿಧಾನಗಳು ಮಾರಿಯಮ್ಮ ದೇವಿಯ ಬ್ರಹ್ಮಕಲಶಾಭಿಷೇಕದೊಂದಿಗೆ ಮುಕ್ತಾಯಗೊಂಡವು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟಿತ್ತು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಒಟ್ಟು 1,008 ಕಲಶಗಳನ್ನು ಭಕ್ತರಿಗೆ ವಿತರಿಸಲಾಯಿತು,ಮಹಾ ಬ್ರಹ್ಮಕಲಶಾಭಿಷೇಕದ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕರೆ ರತ್ನಾಕರ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗೌರವಾಧ್ಯಕ್ಷರಾದ…
ಕದ್ರಿ ಮಾ. 04 : ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಮಂಗಳೂರು ಇದರ ವತಿಯಿಂದ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ನವೀಕೃತ ಗೊಂಡ ಶ್ರೀ ಗೋರಕ್ಷನಾಥ ಜ್ಞಾನ ಮಂದಿರ ಸಭಾಭವನ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಮಾ. 2ರಂದು ಜರಗಿತು. ಕದ್ರಿ ಶ್ರೀ ಯೋಗೇಶ್ವರ. ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ರಾಜಾ ಯೋಗಿ ನಿರ್ಮಲ್ ನಾಥ್ ಜೀ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ನವೀಕೃತ ಗೊಂಡ ಶ್ರೀ ಗೋರಕ್ಷನಾಥ ಜ್ಞಾನ ಮಂದಿರ ಲೋಕಾರ್ಪಣೆ ಸಂಘದ ಅಧ್ಯಕ್ಷ ಕಿರಣ್ ಜೋಗಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ವೇದವ್ಯಾಸ ಕಾಮತ್ ಅವರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮನಪಾ ಮಾಜಿ ಸದಸ್ಯೆ ಶಕೀಲಾ ಕಾವಾ, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ ಎ.ಜೆ. ಶೆಟ್ಟಿ, ಕದ್ರಿ ಶ್ರೀ ಕೃಷ್ಣ ಮಂದಿರ ಇಲ್ಲಿನ ಸುಧಾಕರ ರಾವ್ ಪೇಜಾವರ, ಜೋಗಿ ಸಮಾಜದ…
ಬೆಂಗಳೂರು, ಮಾ.03 : ಶಾಸಕರ ವೇತನವನ್ನು ಶೇ 50 ರಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ. ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ. ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪಿಸಿದ್ದರು.
ಮಂಗಳೂರು, ಮಾ .02 : ನಗರದ ನೀರೇಶ್ವಾಲ್ಯ, ಗೂಡ್’ಶೆಡ್ ರಸ್ತೆ ಯಲ್ಲಿರುವ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶಾಸಕರ ನಿಧಿಯಿಂದ ಅಭಿವೃದ್ಧಿಗೊಂಡ ಮೇಲ್ಛಾವಣಿ ಹಾಗೂ ಸರ್ವರ ಸಹಕಾರದಿಂದ ನಿರ್ಮಾಣಗೊಂಡ ಅನ್ನಪೂರ್ಣೇಶ್ವರಿ ಭೋಜನಾಲಯವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ದೇವರ ಉತ್ಸವದ ಸಂದರ್ಭದಲ್ಲಿ ನಡೆಯುವ ಅನ್ನಸಂತರ್ಪಣಾ ಸೇವೆಯು ಭಕ್ತರಿಗೆ ಸಾಂಗವಾಗಿ ನಡೆಯುವ ಉದ್ದೇಶದೊಂದಿಗೆ ಇಲ್ಲಿ ಸುಸಜ್ಜಿತವಾದ ಭೋಜನಾಲಯ ಹಾಗೂ ಭಕ್ತರ ಹಿತದೃಷ್ಟಿಯಿಂದ ಮೇಲ್ಛಾವಣಿಯನ್ನು ನಿರ್ಮಿಸಲಾಗಿದ್ದು ಪವಿತ್ರ ಶಿವರಾತ್ರಿಯ ಸಂದರ್ಭದಲ್ಲೇ ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹೆಚ್. ಅಶೋಕ್ ನಾಯಕ್, ಸಹ ಮೊಕ್ತೇಸರರಾದ ಶ್ರೀ ಎನ್. ಶಿವಪ್ರಸಾದ್ ನಾಯಕ್, ಶ್ರೀಮತಿ ಲಲಿತಾ ಮತ್ತು ಶ್ರೀ ಎಚ್. ಪ್ರಭಾಕರ ನಾಯಕ್ ಹೊನ್ನಕಟ್ಟೆ, ಸುಷ್ಮಾ ಮತ್ತು ಸುರೇಶ ಮಾಧವ ನಾಯಕ್ ಕೋಡಿಕಲ್, ಮತಿ ಸುಪ್ರಿಯ ಮತ್ತು ಪ್ರವೀಣಚಂದ್ರ ಸುಂದರ ನಾಯಕ್ ಮಣ್ಣಗುಡ್ಡೆ, ಚಾರೋಡಿ ಅಭ್ಯುದಯ ಸಂಘದ ಅಧ್ಯಕ್ಷರಾದಬಿ. ಮಧುಕರ ನಾಯಕ್ ಅಲ್ಲದೇ ಅನೇಕರು ಉಪಸ್ಥಿತರಿದ್ದರು.
ಕಠ್ಮಂಡು, ಫೆ. 01 : ನೇಪಾಳದಲ್ಲಿ ಫೆ.28 ರಂದು ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಾಗೆನೇ ಭಾರತ, ಟಿಬೆಟ್ ಮತ್ತು ಚೀನಾದ ಗಡಿ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಹಿಮಾಲಯನ್ನ ಮಧ್ಯಭಾಗದ ಸಿಂಧುಪಾಲ್ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಸ್ಥಳೀಯ ಕಾಲಮಾನ ಬೆಳಗಿನ ಜಾವ 2.51ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ. ನೇಪಾಳದ ಸಂಭವಿಸಿದ ಭೂಕಂಪನದಿಂದ ಯಾವುದೇ ಜೀವಹಾನಿಯಾಗಲಿ, ಗಾಯಗೊಂಡಿರುವುದಾಗಲಿ ವರದಿಯಾಗಿಲ್ಲ. ಆದರೆ ಭೂಕಂಪನ ಸಂಭವಿಸಿದ ಪ್ರದೇಶಗಳಲ್ಲಿ ಜನ ಆತಂಕಗೊಂಡಿದ್ದಾರೆ ಎಂದು ವರದಿಯಾಗಿದೆ
ಮಂಗಳೂರು, ಫೆ.28 : ನಗರದ ಸಿಟಿಲೈಟ್ ಕಾಂಪ್ಲೆಕ್ಸ್ ನಲ್ಲಿ ಸಾಂಪ್ರದಾಯಿಕ ಸಿಹಿತಿನಸು ಬ್ರ್ಯಾಂಡ್ ಗಳಲ್ಲಿ ಒಂದಾಗಿರುವ ಇಂಡಿಯಾ ಸ್ವೀಟ್ ಹೌಸ್ ಇದರ 40ನೇ ಮಳಿಗೆ ಉದ್ಘಾಟನೆಗೊಂಡಿತು. ಇಂಡಿಯಾ ಸ್ವೀಟ್ ಹೌಸ್ ಮಳಿಗೆಯನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ನಂತರ ಎ.ಜೆ. ಗ್ರೂಪ್ ಇದರ ಚೇಯರ್ ಮ್ಯಾನ್ ಡಾ.ಎ.ಜೆ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಂಪನಕಟ್ಟೆಯ ಸಿಟಿ ಲೈಟ್ ಬಿಲ್ಡಿಂಗ್ ನಲ್ಲಿ ಆರಂಭವಾಗಿರುವ ಈ ಹೊಸ ಮಳಿಗೆ ಈಗ ಮಂಗಳೂರಿನ ಗ್ರಾಹಕರಿಗೆ ಅತ್ಯುತ್ತಮ ಸಿಹಿ ತಿನಿಸುಗಳು ಮತ್ತು ತಿಂಡಿಗಳನ್ನು ಒದಗಿಸಲಿದೆ. ಎಂದು ಸಂಸ್ಥೆಯ ಸಹ ಸಂಸ್ಥಾಪಕರಾದ ವಿಶ್ವನಾಥ ಮೂರ್ತಿ ಹೇಳಿದರು. ನಮ್ಮ 40ನೇ ಮಳಿಗೆಯನ್ನು ಆರಂಭಿಸಲು ಇದು ಉತ್ತಮ ಸ್ಥಳ ಎನ್ನುವುದು ನಮ್ಮ ಭಾವನೆ. ಹಾಗಾಗಿ ನಮ್ಮ ಮಳಿಗೆಯನ್ನು ಇಲ್ಲಿ ಪ್ರಾರಂಭಿಸಿದ್ದೇವೆ .ನಾವು ಐದು ವರ್ಷಗಳಲ್ಲಿ ಎಷ್ಟು ದೂರ ಬಂದಿದ್ದೇವೆ ಎಂಬುದಕ್ಕೆ ಈ ಮಳಿಗೆ ಅತ್ಯುತ್ತಮ ಪುರಾವೆಯಾಗಿದೆ ಎಂದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿದೊಡ್ಡ ಹಾಗೂ ವಿಶಿಷ್ಟ…
ವಿಟ್ಲ,ಫೆ.28 : ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಶಿವರಾತ್ರಿ ಜಾಗರಣೆ ಮತ್ತು ಸಾಮೂಹಿಕ ಶಿವ ಯೋಗ ನಮಸ್ಕಾರವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನೆಡೆಯಿತು. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶಿಕ ಮೊಕ್ತೇಸರ ಜಯರಾಮ ಬಲ್ಲಾಳ್ ಮತ್ತು ಅರಮನೆಯ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿ ಶುಭ ಹಾರೈಸಿದರು. ಜಾಗರಣೆಯು ರಾತ್ರಿ 9.30ರಿಂದ ಭಜನೆಯೋಂದಿಗೆ ಅರಂಭವಾದ 108ಬಾರಿ ಮೃತ್ಯುಂಜಯ ಜಪ,1008ಬಾರಿ ಶಿವ ಪಂಚಾಕ್ಷರಿ ಪಠಣೆ, ಶಿವಷ್ಟೋತ್ತರ ಶತನಾಮಾನಿ ಪಠಣೆ, ಹಾಗೂ ಬಿಲ್ವ ಪತ್ರ ಅರ್ಚನೆಯೋಂದಿಗೆ ಒಟ್ಟು 4ಅವೃತ್ತಿಗಳಲ್ಲಿ 11ಯೋಗ ಶಿವ ನಮಸ್ಕಾರವು ಶಿವ ಸ್ತೋತ್ರ ಪಠಣದೊಂದಿಗೆ 6.00ಕ್ಕೆ ಕಾರ್ಯಕ್ರಮ ಸಮಾಪನಗೊಂಡಿತು. ಸುಮಾರು 200ಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ವಿಟ್ಲ,ಪುಣಚ,ಕಾಪುಮಜಲು, ಕೆಲಿಂಜ, ಮಾಮೇಶ್ವರ, ಭಾಗದ ಯೋಗ ಬಂಧುಗಳು ಭಾಗವಹಿಸಿದ್ದರು. ಶ್ರೀ ಕ್ಷೇತ್ರದಲ್ಲಿ ಶಿಸ್ತಿಬದ್ದವಾಗಿ ಯೋಗ ಶಿವ ನಮಸ್ಕಾರ ಮಾಡಲಾಯಿತು. ಜಿಲ್ಲಾ ಸಹ ಸಂಚಾಲಕರಾದ ಶ್ರೀಮತಿ ಮಾಧುರಿ , ವಿಟ್ಲ ನಗರದ ಪ್ರಮುಖರಾದ ಶ್ರೀಮತಿ ಮೀರಾ, ಪ್ರಕಾಶ ಅಣ್ಣಡ್ಕ ಇವರು ಶಿಕ್ಷಣ ವಿಧಿಯ ಮಾರ್ಗದರ್ಶನ…
ಮಂಗಳೂರು, ಫೆ.27 : ಇತಿಹಾಸ ಪ್ರಸಿದ್ಧ ಕಾವೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮಾರ್ಚ್ 6ರಂದು ಬೆಳಗ್ಗೆ 11 ಗಂಟೆ ಯಿಂದ 12ರವರೆಗೆ ನವೀಕೃತ ಗರ್ಭಗೃಹದಲ್ಲಿ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಮಾರ್ಚ್ 9ರಂದು ಬೆಳಗ್ಗೆ 8:10ರಿಂದ 8:40ರ ಮೀನಲಗ್ನ ಸುಮುಹೂರ್ತದಲ್ಲಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವು ಜರುಗಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಮಾರ್ಚ್ 1ರ ಶನಿವಾರದಿಂದ ಮೊದಲ್ಗೊಂಡು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮ ಹಾಗೂ ಮಾರ್ಚ್ 9ರ ವರೆಗೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಹಾಕಲಾಶಾಭಿಶೇಕಕ್ಕೆ ಭಕ್ತಭಿಮಾನಿಗಳು ತ್ರಿಕರಣಪೂರ್ವಕವಾಗಿ ಸಹಕರಿಸಬೇಕು ಎಂದು ಹೇಳಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ರಮಾನಂದ ಭಂಡಾರಿ ಮಾತಾಡಿ, ಮಾರ್ಚ್ 1ರಂದು ಕೂಳೂರು, ಪಡುಕೋಡಿ, ಶಾಂತಿನಗರ, ಗಾಂಧಿನಗರ, ಅತ್ರಬೈಲು, ಕುಂಜತ್ತಬೈಲು, ಮರಕಡ, ಕಾವೂರು, ಪಡುಶೆಡ್ಡೆಜಾರ, ಬೋಂದೇಲ್, ಪಚ್ಚನಾಡಿ, ಪದವಿನಂಗಡಿ, ಮೇರಿಹಿಲ್,…
ಉಡುಪಿ, ಫೆ.26 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು, ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಂಗಳವಾರ ಪ್ರಾರಂಭವಾದವು. ವೇದಮೂರ್ತಿ ಕೆ.ಜಿ. ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ ಮತ್ತು ದೇವಾಲಯದ ಪ್ರಧಾನ ಅರ್ಚಕರಾದ ವೇದಮೂರ್ತಿ ಕೆ.ಪಿ. ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ, ದೇವಾಲಯದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಧಾರ್ಮಿಕ ವಿಧಿಗಳಿಗೆ ಚಾಲನೆ ನೀಡಿದರು. ನಂತರ, ಋತ್ವಿಲಾರ್ವಣ, ವಿಶ್ವಕರ್ಮ ಪೂಜೆ ಮತ್ತು ಇತರ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅರಣಿ ಮಥನ ಪ್ರಕ್ರಿಯೆಯ ಮೂಲಕ ಬೆಂಕಿ ಬೆಳಗಿಸಲಾಯಿತು. ೨೪ ಕಾಯಿ ಗಣಯಾಗ ಸೇರಿದಂತೆ ಹವನ ಸಮಾರಂಭಗಳ ಸರಣಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೆಎಂಆರ್ಜೆ ಗ್ರೂಪ್ಸ್ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ, ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ,…