Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಅ. 09 : ಶಕ್ತಿ ಶಿಕ್ಷಣ ಸಂಸ್ಥೆಯ ವತಿಯಿಂದ ನ. 16ರಂದು ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ 8ರಿಂದ 12ನೇ ತರಗತಿಯ ವಿದ್ಯಾರ್ಥಿಗಳ ಕಲೆ, ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸುವ ‘ಶಕ್ತಿ ಫೆಸ್ಟ್ 2024’ ಆಯೋಜಿಸಲಾಗಿದೆ ಎಂದು ಮಂಗಳವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಶಕ್ತಿ ಎಜುಕೇಶನ್ ಟ್ರಸ್ಟ್ನ ಪ್ರಧಾನ ಸಲಹೆಗಾರ ರಮೇಶ್ ಕೆ. ಹೇಳಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 14 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆ, ಉತ್ಪನ್ನ ಬಿಡುಗಡೆ (ಶಾರ್ಕ್ ಟ್ಯಾಂಕ್), ರಂಗೋಲಿ (ವಿಷಯ ನವರಾತ್ರಿ), ಮುಖವರ್ಣಿಕೆ ( ವಿಷಯ ಡ್ರಗ್ ಅಬ್ಯುಸ್) ಪುಷ್ಪಗುಚ್ಛ ತಯಾರಿ, ರೀಲ್ ಮೇಕಿಂಗ್, ಏಕ ವ್ಯಕ್ತಿ ಗಾಯನ – ಭಾವಗೀತೆ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ಹೇಳಿದರು. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜನಪದ ಕುಣಿತ, ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಪೋಸ್ಟರ್, ಮೇಕಿಂಗ್, ಪೆನ್ಸಿಲ್ ಸ್ಕೆಚ್, ಪರಿಸರ ಸ್ನೇಹಿ ನವ ಅವಿಷ್ಕಾರ…
ಮಂಗಳೂರು, ಅ.09 : ನಗರದ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ದಸರಾ ಕ್ರೀಡಾಕೂಟ ಭಾನುವಾರ ನಡೆಯಿತು. ದಸರಾ ಕ್ರೀಡಾಕೂಟವನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಬಿ. ಜನಾರ್ದನ ಪೂಜಾರಿಯವರು, ಪ್ರತಿಯೊಬ್ಬರಿಗೂ ಆರೋಗ್ಯ ಬಹಳ ಅಗತ್ಯ ಈ ನಿಟ್ಟಿನಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಅವರು ಬಹಳಷ್ಟು ಆರೋಗ್ಯವಂತರಾಗಿ ಇರು ತ್ತಾರೆ. ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ನಡೆಯುವ ದಸರಾ ಕ್ರೀಡಾಕೂಟವು ಸಾಕಷ್ಟು ಹೊಸ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ನೀಡಿರುವುದು ಒಳ್ಳೆಯ ಬೆಳವಣಿಗೆ ಎಂದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಕ್ರೀಡಾಕೂಟಗಳು ಹೆಚ್ಚಾಗಿ ನಡೆದರೆ ಕ್ರೀಡಾ ಪಟುಗಳಿಗೆ ಹೆಚ್ಚು ಅವಕಾಶ ದೊರೆಯುತ್ತದೆ. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾ ಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು. ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ, ಸರಕಾರ ಮಟ್ಟದಲ್ಲಿ ದಸರಾ ಕ್ರೀಡಾಕೂಟಗಳು ನಡೆಯುತ್ತಿದೆ. ಆದರೆ…
ಇಂದ್ರಾಳಿ, ಅ.8: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ, ಅ.07 : ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್ನಲ್ಲಿ ನಡೆದ ಏರ್ ಶೋ ವೇಳೆ ಬಿಸಿಲಿನ ಝಳಕ್ಕೆ ಐವರು ಮೃತಪಟ್ಟಿದ್ದಾರೆ, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್ ಮೃತರು. ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿ,ಉಸಿರಾಡಲಾಗದೇ 230ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು, ,ಅ.06 :ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ನಡೆಯಲಿರುವ ಅದ್ಧೂರಿ ದಸರಾ ಮಹೋತ್ಸವವನ್ನು ಅಕ್ಟೋಬರ್ 3 ಗುರುವಾರದಂದು ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದೇವಾಲಯದಲ್ಲಿ ನವದುರ್ಗೆ ಮತ್ತು ಶಾರದಾ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು, ಶಾರದ ದೇವಿಯ ವಿಗ್ರಹವನ್ನು ದೇವಾಲಯದ ಆವರಣದಲ್ಲಿ ಸರಳ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಪ್ರತಿಷ್ಠಾಪನೆಗೂ ಮುನ್ನ ಹುಲಿ ಕುಣಿತ ನಡೆಯಿತು. ಒಂಬತ್ತು ದಿನಗಳ ಕಾಲ ನಡೆಯುವ ದಸರಾ ಮಹೋತ್ಸವದಲ್ಲಿ ದೇವರಿಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಗೆ ದಸರಾ ಮಹೋತ್ಸವದ ಭವ್ಯ ಮೆರವಣಿಗೆ ಆರಂಭವಾಗಲಿದೆ.
ಬೆಂಗಳೂರು,ಅ.05 : Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಈಗಾಗಲೇ ಚಾಲನೆ ಸಿಕ್ಕಿದೆ. 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ ನೀಡಿದ್ದಾರೆ. ಜನಸಾಮಾನ್ಯರಿಗೆ ಅನುಕೂಲ ವಾಗುವಂತಹ ಮತ್ತು ಸಾಮಾಜಿಕ ಕೆಲಸವನ್ನು ಮಾಡುತ್ತಿರುವ ಟಿವಿ9 ಎಕ್ಸ್ಪೋಗೆ, ರಾಯಲ್ ಸಿನಿಮಾ ಸೌಂಡ್ ಮಾಡುತ್ತಿರುವ ಹೊತ್ತಲ್ಲೆ ನಟಿ ಸಂಜನಾ ಹಾಗೂ ನಟ ವಿರಾಟ್ ಒಟ್ಟಿಗೆ ಬಂದು ವಿಸಿಟ್ ಕೊಟ್ಟಿದ್ದು,ನ್ಯೂ ಮಾಡೆಲ್ ಕಾರ್ ಗಳನ್ನ ಅನ್ ವೇಲ್ ಮಾಡಿದ್ದಾರೆ. ಗ್ರಾಹಕರಿಗೆ ಬೇಕಾರಗಿರುವ ಅಷ್ಟು ವಸ್ತುಗಳು, ಕಾರುಗಳು ಒಂದೇ ಸೂರಿನಡಿ ಲಭ್ಯವಾಗ್ತಿದೆ.. ಅಷ್ಟೇ ಅಲ್ಲ ತ್ರಿಪುರ ವಾಸಿನಿಯಲ್ಲಿ ಪಾರ್ಕಿಂಗ್ಗೆ ಕೂಡ ವ್ಯವಸ್ಥೆ ಮಾಡಲಾಗಿದೆ. ಒಂದು ದಿನ ಪೂರೈಸಿರುವ ಎಕ್ಸ್ಪೋ, ಇನ್ನೂ 5,6 ರಂದು ಕಾರ್ಯಕ್ರಮಕ್ಕೆ ಉಚಿತ ಪ್ರವೇಶ…
ಬೈಂದೂರು, ಅ.04 : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.
ಸುಳ್ಯ,ಅ.04 :ನಗರ ಪಂಚಾಯತ್ ವತಿಯಿಂದ ಗಾಂಧಿಚಿಂತನ ವೇದಿಕೆ, ಗಾಂಧಿನಗರದ ಗಾಂಧಿ ಪಾರ್ಕ್ ಗೆಳೆಯರ ಬಳಗದ ಸಹಕಾರದಲ್ಲಿ ಗಾಂಧಿ ಪಾರ್ಕ್ ನ ಗಾಂಧಿ ಕಟ್ಟೆಯಲ್ಲಿ ಗಾಂಧಿ ಪ್ರತಿಮೆಯ ಅನಾವರಣ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಾಂಧಿಚಿಂತನ ವೇದಿಕೆಯ ಸಂಚಾಲಕರು ಹಾಗೂ ಲೇಖಕರಾದ ಡಾ. ಸುಂದರ ಕೇನಾಜೆ, ಪೌರಾಣಿಕ ಹಾಗೂ ಚಾರಿತ್ರಿಕ ವ್ಯಕ್ತಿತ್ವದ ಮತ್ತು ನಾಯಕತ್ವದ ಪ್ರತೀಕ ಗಾಂಧೀಜಿ. ಹೊಸ ತಲೆಮಾರು ಗಾಂಧೀಜಿಯವರನ್ನು ಅರಿಯಬೇಕಾದ ಅನಿವಾರ್ಯತೆ ಇದೆ. ಸತ್ಯ ಮತ್ತು ಅಹಿಂಸೆಯನ್ನು ಬಯಸುವವರು ಎಲ್ಲರೂ ಗಾಂಧೀಜಿಯವರನ್ನು ಒಪ್ಪುತ್ತಾರೆ. ಜಗತ್ತು ಅಚ್ಚರಿಯಿಂದ ನೋಡುವಂತೆ ಬದುಕಿದ ಗಾಂಧೀಜಿಯವರ ಆದರ್ಶ ಇಂದಿನ ಪರಿಸ್ಥಿತಿಯಲ್ಲಿ ಅತ್ಯಂತ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಮಾತನಾಡಿದರು. ಗಾಂಧಿ ಚಿಂತನ ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಂಧಿಚಿಂತನ ವೇದಿಕೆಯ ಸಂಚಾಲಕರಾದ ಚಂದ್ರಶೇಖರ ಪೇರಾಲು, ಶಂಕರ ಪೆರಾಜೆ, ಶರೀಫ್ ಕಂಠಿ, ಕೆ.ಎಸ್.ಉಮ್ಮರ್, ಉನೈಸ್ ಪೆರಾಜೆ, ನೇಶ್ ಮಡಪ್ಪಾಡಿ ಮತ್ತಿತರರು…
ಬೆಳ್ತಂಗಡಿ, ಅ.02 :ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದೆ. ನವಾಫ್ ಆತೂರಿನ ಆಯೇಷಾ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಯಾಗಿದ್ದ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಬಾಲಕನನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಕುಂದಾಪುರ, ಅ.01 : ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ . ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












