Author: admin

ಕಾಸರಗೋಡು, ಸೆ.23: ಅಮಿಬಿಕ್ ಮೆದುಳು ಜ್ವರದಿಂದ ಯುವಕನೋಬ್ಬ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಸಾವನ್ನಪ್ಪಿದವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿದಾಗ ಮಣಿಕಂಠ ಅವರಿಗೆ ಅಮಿಬಿಕ್ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ. ಮಣಿಕಂಠ ಅವರಿಗೆ ಮುಂಬೈಯಲ್ಲಿ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಜ್ವರದ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕುಎಂದು ಆರೋಗ್ಯ ಇಲಾಖೆ ತಿಳಿಸಿದೆ.

Read More

ಮಂಗಳೂರು,ಸೆ.21: ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಕ್ತ ದಸರಾ ಕ್ರೀಡೋತ್ಸವ ಅ.6ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9 ಗಂಟೆಗೆ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಹೇಳಿದರು. ಬೆಳಗ್ಗೆ 8.30ಕ್ಕೆ ಕ್ರೀಡಾಕೂಟದ ಪಥಸಂಚಲನ ನಡೆಯಲಿದ್ದು, ಶಿಸ್ತು ಬದ್ಧ ಮತ್ತು ಉತ್ತಮ ಸಮವಸ್ತ್ರ ತಂಡಕ್ಕೆ ವಿಶೇಷ ಬಹುಮಾನ ನೀಡಲಾಗುತ್ತದೆ. ಹೈಸ್ಕೂಲ್ ವಿಭಾಗ ಹಾಗೂ ಮಹಿಳೆ ಮತ್ತು ಪುರುಷರ ವಿಭಾಗಗಳಿದ್ದು, ಹೈಸ್ಕೂಲ್‌ನಲ್ಲಿ ಅಥ್ಲೆಟಿಕ್ಸ್ ಹಾಗೂ ಕಬಡ್ಡಿ ಸೇರಿದಂತೆ ಮುಕ್ತ ವಿಭಾಗದಲ್ಲೂ ಅಥ್ಲೆಟಿಕ್ಸ್ ಹಾಗೂ ಹಗ್ಗಜಗ್ಗಾಟ ನಡೆಯಲಿದೆ. ವಿಜೇತರಿಗೆ ನಗದು, ಪಾರಿತೋಷಕ, ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಲೋಕನಾಥ…

Read More

ನವದೆಹಲಿ, ಸೆ.21: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತಿಶಿ ಅವರು ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ನೂತನ ಸಿಎಂ ಆಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅತಿಶಿ ಅವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು. ಇದೀಗ ಅತಿಶಿ ಅವರು ದೆಹಲಿಯ ಮೂರನೆಯ ಮಹಿಳಾ ಸಿ ಎಂ ಯಾಗಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

Read More

ಬೆಂಗಳೂರು, ಸೆ.20 : ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶಿಸಿದೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಸ್ಥಾನಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಉಪಯೋಗಿಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

Read More

ಶ್ರೀನಗರ, ಸೆ.20 : ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, 3 ಬಿಎಫ್‌ಎಸ್ ಯೋಧರು ಮೃತಪಟ್ಟು, 28 ಮಂದಿ ಗಾಯಗೊಂಡ ಘಟನೆ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹೇಲ್ ಪ್ರದೇಶದಲ್ಲಿ ನಡೆದಿದೆ. 2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ಸಂದರ್ಭ ಬಸ್ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ಸುಮಾರು 35 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದೆ.

Read More

ಮಂಗಳೂರು, ಸೆ.19: ದ.ಕ. ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಶನ್ ನ ಸ್ವಂತ ಕಚೇರಿಯು ನಗರದ ಕೊಟ್ಟಾರಚೌಕಿಯ ಉದ್ಧವ್ ಸ್ಕ್ವೇರ್ ನ ಎರಡನೇ ಮಹಡಿಯಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಅಸೋಸಿಯೇಶನ್ ನ ಕಚೇರಿ ಉದ್ಘಾಟಿಸಿದ ಎಜೆ ಸಮೂಹ ಸಂಸ್ಥೆಗಳ ಚೇರ್ಮನ್ ಡಾ|ಎ.ಜೆ.ಶೆಟ್ಟಿ ಮಾತನಾಡಿ, ವೈನ್ ಮರ್ಚೆಂಟ್ ಅಸೋಸಿಯೇಶನ್ ಇಲ್ಲದ ಕಾಲದಲ್ಲಿ ಕೆಲಸ ಕಾರ್ಯಗಳಿಗೆ ಪರದಾಡಬೇಕಾಗಿತ್ತು. ಆದರೆ ಇಂದು ಅಸೋಸಿಯೇಶನ್ ಮೂಲಕ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ ಎಂದರು. ಕ್ವಾಲಿಟಿ ಗ್ರೂಪ್ಸ್ ಆಫ್ ಹೊಟೇಲ್ ಇದರ ಎಂ ಡಿ ಡಾ| ಎ. ಸದಾನಂದ ಶೆಟ್ಟಿ ಮಾತನಾಡಿ, ಮದ್ಯ ವ್ಯಾಪಾರ ಹಲವಾರು ಸವಾಲುಗಳನ್ನು ಒಳಗೊಂಡಿದೆ. ಮುಂದಿನ ದಿನಗಳಲ್ಲಿ ಅಸೋಸಿಯೇಶನ್ ಮೂಲಕ ಸಂಘಟಿತರಾಗಿ ಕೆಲಸ ಮಾಡೋಣ ಎಂದು ಹೇಳಿದರು. ಎಂ ಆರ್ ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಹೊಟೇಲ್ ಮದ್ಯ ವ್ಯಾಪಾರದ ಮೂಲಕ ಬಹಳ ಮಂದಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸಾಯಿ ಪ್ಯಾಲೆಸ್ ಸಮೂಹ ಹೊಟೇಲ್ನ ವ್ಯವಸ್ಥಾಪಕ ನಿರ್ದೇಶಕ…

Read More

ಮಂಗಳೂರು, ಸೆ.19 :ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್  ವಾರ್ಡ್‌ನಿಂದ  ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ ನಾಲ್ವರು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸೆ.19ರಂದು ಎಂಸಿಸಿಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.ಮೇಯರ್ ಸ್ಥಾನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಬಿಜೆಪಿಯಿಂದ ಮನೋಜ್ ಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅರ್ಹ ಪರಿಶಿಷ್ಟ ಜಾತಿ ಸದಸ್ಯರ ಕೊರತೆಯಿಂದಾಗಿ ಅವರ ಕಡೆಯಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಇದರಿಂದ ಮನೋಜ್ ಕುಮಾರ್ ಅವರು ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ರಮೇಶ್ ಪ್ರಕಟಿಸಿದರು. ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳಾದ ಭಾನುಮತಿ ಪಿ ಎಸ್ ಮತ್ತು ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೀನತ್ ಶಂಶುದ್ದೀನ್ ನಾಮಪತ್ರ ಸಲ್ಲಿಸಿದ್ದಾರೆ.ವನಿತಾ ಪ್ರಸಾದ್ ನಂತರ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು.…

Read More

ಬೆಂಗಳೂರು,ಸೆ.19 : ಎ ಆರ್ ಎಂ 3D ಸಿನಿಮಾವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ಎ ಆರ್ ಎಂ ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ. ಎ ಆರ್ ಎಂ ಸಿನಿಮಾ ಪ್ರಪಂಚದಾದ್ಯಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಆಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ. ಸೆಪ್ಟೆಂಬರ್ 20 ರಂದು ಟಿಕೆಟ್ ದರ ಕೇವಲ ರೂ. 99 ಮಾತ್ರ ಇರುತ್ತದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಆಫರ್ ದೇಶಾದ್ಯಂತ 4,000ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಅನ್ವಯಿಸುತ್ತದೆ. IMAX,…

Read More

ಸುರತ್ಕಲ್, ಸೆ. 18 : ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯ  ಉದ್ಘಾಟನೆಯು ಸುರತ್ಕಲ್ ನಲ್ಲಿರುವ  ಅಂಚೆ ಕಚೇರಿ ಮುಂಭಾಗದ ಶಂಕರ ಸದನ ಕಟ್ಟಡದಲ್ಲಿ ಮಂಗಳವಾರ ಜರಗಿತು. ಶಾಸಕರಾದ ಡಾ| ಭರತ್ ಶೆಟ್ಟಿ ವೈ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ರಂಗದಿಂದ ಸ್ಥಳೀಯ ಕಿರು ಉದ್ಯಮಿಗಳು ಹಾಗೂ ಜನತೆಗೆ ಉತ್ತಮ ಸೇವೆ ದೊರಕುತ್ತಿದೆ. ರಾಷ್ಟೀಕೃತ ಬ್ಯಾಂಕ್ ಗಳಿಗಿಂತ ಸಹಕಾರ ಸಂಘಗಳಲ್ಲಿ ಸುಲಭ ಮತ್ತು ವ್ಯಕ್ತಿ ಆಧಾರಿತ ಬ್ಯಾಂಕಿಂಗ್   ಸೇವೆಗೆ ಸೂಕ್ತ ಅವಕಶವಿದ್ದು,ಸಹಕಾರಿಗಳು ಈ ನಿಟ್ಟಿನಲ್ಲಿ ಗ್ರಾಹಕರಿಗೆ ಉತ್ತಮ ಸೇವೆನ್ನು ನೀಡಲು ಸಾದ್ಯವಿದೆ. ಗ್ರಾಹಕರು ಇದರ ಉಪಯೋಗವನ್ನು ಪಡೆಯಬೇಕು. ಸವಿತಾ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದರು. ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, 12 ವರ್ಷಗಳ ಅತ್ಯಲ್ಪ ಅವಧಿ ಯಲ್ಲಿಯೇ 4ನೇ ಶಾಖೆ ತೆರೆದಿರುವುದು ಸವಿತಾ ಸೌಹಾರ್ದ ಸಹಕಾರಿಯ ಉತ್ತಮ ಬೆಳವಣಿಗೆ. ಈ …

Read More

ಬೆಂಗಳೂರು,ಸೆ.18.ಎ ಆರ್ ಎಂ 3D ಸಿನಿಮಾ ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ ಎ ಆರ್ ಎಂ ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಮಲಯಾಳಿ ಪ್ರೇಕ್ಷಕರು ಬಹುದಿನಗಳಿಂದ ಕಾಯುತ್ತಿದ್ದ ಎ ಆರ್ ಎಂ 3D ಚಿತ್ರವನ್ನು ಈ ಓಣಂ ಸೀಸನ್‌ನಲ್ಲಿ ಪ್ರೇಕ್ಷಕರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ ಎಂದು ಚಿತ್ರತಂಡ ಹೇಳಿದೆ ಟೋವಿನ್ ಥಾಮಸ್ ನಟನೆಯ ಎಆರ್‌ಎಂ ಸಿನಿಮಾ ಮಲಯಾಳಂ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗಿದೆ.ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ. ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಬಾಸಿಲ್…

Read More