Author: admin

ಮೂಡುಬಿದ್ರೆ, ಏ.20 : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದರು. ಅಭ್ಯರ್ಥಿಯಾದ ಚೌಟ ಅವರು ಏ.17ರಂದು ಮೂಲ್ಕಿ- ಮೂಡುಬಿದ್ರೆಯಲ್ಲಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದರು. ಮೂಡುಬಿದ್ರೆ ಕಿನ್ನಿಗೋಳಿಯಲ್ಲಿ ಸ್ಥಳೀಯ ಮುಖಂಡ ಈಶ್ವರ್ ಕಟೀಲ್ ನೇತೃತ್ವದಲ್ಲಿ ಯುವಕರು, ಮಹಿಳೆಯರು, ಸ್ಥಳೀಯ ಕಾರ್ಯಕರ್ತರು ಸಾಥ್ ನೀಡಿದರು.

Read More

ಸುಳ್ಯ ಏ. ಏ.20 : ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಎ. 17ರಂದು ಸುಳ್ಯದ ಕೆವಿಜಿ ಕ್ಯಾಂಪಸ್‌ಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ಶ್ರೀಮತಿ ಶೋಭಾ ಚಿದಾನಂದರವರು ಬ್ರಿಜೇಶ್ ಚೌಟರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ ಮತಯಾಚನೆ ನಡೆಸಿದರು.

Read More

ಬಂಟ್ವಾಳ, ಏ. 19 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಏ. 18 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಂಗಡಿ – ಮಳಿಗೆ, ಮನೆಗಳಿಗೆ ತೆರಳಿ ಮತ ಯಾಚನೆ ನಡೆಸಿದರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಭ್ಯರ್ಥಿ ತಮ್ಮ ಊರಿಗೆ ಬರುತ್ತಿದ್ದಂತೆ ಕಾರ್ಯಕರ್ತರು ಹೂ ಮಾಲೆ ಹಾಕಿ, ಶಾಲು ಹೊದಿಸಿ, ಬರಮಾಡಿಕೊಂಡರು. ಅಭ್ಯರ್ಥಿಗೆ ಪದ್ಮರಾಜ್ ಆರ್. ಪೂಜಾರಿ ಅವರು ಮತ ಯಾಚನೆ ಮಾಡುವಾಗ ಅವರ ಜೊತೆ ತೆರಳಿ, ಅಭ್ಯರ್ಥಿ ಗೆ ಸಾಥ್ ನೀಡಿದರು. ಬಡಗ ಬೆಳ್ಳೂರು, ಅಮ್ಮುಂಜೆ – ಬಡಕಬೈಲು ಜಂಕ್ಷನ್, ಕಳ್ಳಿಗೆ – ಬ್ರಹ್ಮರಕೊಟ್ಲು, ಶೇಡಿಗುರಿ, ಬಾಳ್ತಿಲ, ಸೂರಿಕುಮೇರು, ಮಾಣಿ, ಬುಡೋಳಿ, ಕಲ್ಲಡ್ಕ, ಅಮ್ಟೂರು, ಬೊಳ್ಳಾಯಿ, ಮಿತನಡ್ಕ, ಕನ್ಯಾನ, ಕೊಡುಂಗಾಯಿ, ಸಾಲೆತ್ತೂರು, ಬೋಳಂತೂರು, ಸಜೀಪ ಮುನ್ನೂರು – ನಂದಾವರ ಜಂಕ್ಷನ್  ವಿವಿಧೆಡೆಗಳಿಗೆ ಇನ್ನಿತರ ಕಡೆಗಳಿಗೆ ತೆರಳಿ  ಕಾರ್ಯ ಮತ ಯಾಚನೆ  ಮಾಡಿದರು.

Read More

ಪುತ್ತೂರು, ಏ. 18: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವರ್ಷಾವಧಿ  ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಬ್ರಹ್ಮಶ್ರೀ ವಾಸುದೇವ ತಂತ್ರಿ, ಶ್ರೀಧರ ತಂತ್ರಿ, ಗುರುಪುಸಾದ್ ಅವರ ಉಪಸ್ಥಿತಿಯೊಂದಿಗೆ ಕಾರ್ಯಕ್ರಮಗಳು ನಡೆದವು. ಬ್ರಹ್ಮರಥೋತ್ಸವದಲ್ಲಿ ದೇವಳದ ಆಡಳಿತಾಧಿಕಾರಿ ಹನುಮರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಶಾಸಕ ಅಶೋಕ್ ಕುಮಾರ್ ರೈ ಅವರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು. ರಥೋತ್ಸವದ ಮೊದಲು ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಭಕ್ತಾದಿಗಳು ಬ್ರಹ್ಮರಥೋತ್ಸವ ದಲ್ಲಿ ಪಾಲ್ಗೊಂಡಿದ್ದರು. ಬ್ರಹ್ಮರಥೋತ್ಸವದ ಭಕ್ತಿ ಸಂಭ್ರಮದ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ದೇವಳದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್…

Read More

ಮಂಗಳೂರು,ಏ.17 : ಪ್ರಧಾನಿ ನರೇಂದ್ರ ಮೋದಿಯವರುಮೋದಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗುರುಗಳಿಗೆ ದೊಡ್ಡ ಗೌರವ ಸಲ್ಲಿಸಿದ್ದಾರೆ. ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಒಳ್ಳೆಯ ನಿರ್ಧಾರ ಕೈಗೊಂಡ ಪ್ರಧಾನಿ ಅವರಿಗೆ ಅಭಿನಂದನೆಗಳು ಎಂದು ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ. ಕ. ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಅವರು ಹೇಳಿದರು. ನಾರಾಯಣಗುರುಗಳ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಿದ್ದು ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿಕೆಗೆ ಪ್ರತಿಕ್ರಯಿಸಿದ  ಸತೀಶ್ ಕುಂಪಲ ಅವರು, ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನವೇ ಕಾಂಗ್ರೆಸ್ನವರು ಮುಖ್ಯಮಂತ್ರಿಯವರನ್ನು ಕರೆಸಿ ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿಸಬಹುದಿತ್ತು. ಮಾಲಾರ್ಪಣೆ ಮಾಡಿದ್ದನ್ನು ಪ್ರಶ್ನೆ ಮಾಡಬಾರದು. ಜಗತ್ತಿನ ಶ್ರೇಷ್ಠ ಮಾನವತಾವಾದಿಗೆ ಗೌರವ ಕೊಡುವ ವಿಚಾರದಲ್ಲಿ ಕಾಂಗ್ರೆಸ್‌ನವರು ಪ್ರಶ್ನಿಸಬಾರದು ಎಂದು ಸತೀಶ್ ಕುಂಪಲ  ಹೇಳಿದರು.

Read More

ಬೆಂಗಳೂರು, ಏ.16 :ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ.  ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟ ದ್ವಾರಕೀಶ್  ಅವರು  ಕಳ್ಳ ಕುಳ್ಳ, ಗುರು ಶಿಷ್ಯರು, ಪಚಂಡ ಕುಳ್ಳ, ಕಿಟ್ಟುಪುಟ್ಟು, ಸಿಂಗಾಪೂರಿನಲ್ಲಿ ರಾಜಕುಳ್ಳ, ಅದೃಷ್ಟವಂತ, ನ್ಯಾಯ ಎಲ್ಲಿದೆ, ಪೆದ್ದ ಗೆದ್ದ, ಮಂಕುತಿಮ್ಮ ಪೊಲೀಸ್ ಪಾಪಣ್ಣ, ಆಪ್ತಮಿತ್ರ ಮುದ್ದಿನ ಮಾವ, ವಿಷ್ಣುವರ್ಧನ, ರಾಯರು ಬಂದರು ಮಾವನ ಮನೆಗೆ, ಆಟಗಾರ, ಬಂಗಾರದ ಮನುಷ್ಯ, ಗಲಾಟೆ ಸಂಸಾರ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶೀಲಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

Read More

ಸುರತ್ಕಲ್ , ಏ. 16: ದ.ಕ.ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರು ಸುರತ್ಕಲ್, ಮುಕ್ಕಾ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಮೊದಲಾದ ಪ್ರದೇಶಗಳಲ್ಲಿ ಸೋಮವಾರ ರೋಡ್ ಶೋ ಮೂಲಕ ಮತಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ನಡೆದ ರೋಡ್ ಶೋನಲ್ಲಿ ಅಭ್ಯರ್ಥಿ ತೆರೆದ ವಾಹನದಲ್ಲಿ ಸಾಗಿದರು. ಕೆಲ ಪ್ರದೇಶಗಳಲ್ಲಿ ತೆರೆದ ವಾಹನದಿಂದ ಇಳಿದು, ನೇರವಾಗಿ ಮತದಾರರ ಬಳಿಗೆ ತೆರಳಿ ಮತಯಾಚಿಸಿದರು. ಕೆಪಿಸಿಸಿ ಪ್ರ. ಕಾರ್ಯದರ್ಶಿ ಇನಾಯತ್ ಅಲಿ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿರಾಜ್ ಸುವರ್ಣ, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರದಲ್ಲಿ ಪಣಂಬೂರು ಮೊಗವೀರ ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ ಪಿ.,ಪ್ರತಿಭಾ ಕುಳಾಯಿ, ಪುರುಷೋತ್ತಮ ದೇವಾಡಿಗ, ಪಿ.ಜಿ. ಕುಂದರ್, ಯಾದವ ಶೆಟ್ಟಿ, ದೇವೇಂದ್ರ, ಕೇಶವ…

Read More

ಮಂಗಳೂರು, ಎ.15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾನುವಾರ ರೋಡ್ ಶೋ ನಡೆಸಿದರು. ದ. ಕ. ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ರೋಡ್ ಶೋ ಮೂಲಕ ಮತಯಾಚನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನುಬಿಜೆಪಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಸ್ವಾಗತಿಸಿದರು. ಪ್ರಧಾನಿ ಮೋದಿಯವರು ಕೈಯ್ಯಲ್ಲಿ ಕಮಲದ ಚಿಹ್ನೆಯನ್ನು ಹಿಡಿದು ರಸ್ತೆಯುದ್ದಕ್ಕೂ ಸೇರಿದ್ದ ಜನರತ್ತ ಕೈಬೀಸುತ್ತಾ ಸಾಗಿದರು. ದ.ಕ. ಜಿಲ್ಲೆಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ನರೇಂದ್ರ ಮೋದಿ ಅವರ ಜತೆಯಲ್ಲಿದ್ದರು.

Read More

ಬೆಂಗಳೂರು,  ಏ. 14: ಕನ್ನಡ ಚಿತ್ರದ ನಿರ್ಮಾಪಕ ಸೌಂದರ್ಯ ಜಗದೀಶ್ ಏ.14 ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದ ಹಿನ್ನಲೆ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಉದ್ಯಮಿಯಾಗಿದ್ದ ಜಗದೀಶ್ ಅವರು ಅಪ್ಪು & ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

Read More

ಕುಂದಾಪುರ, ಏ. 12 : ಖಾಸಗಿ ರೆಸಾರ್ಟ್ ನ ಈಜುಕೊಳದಲ್ಲಿ ಆಟವಾಡಲು ಹೋಗಿದ್ದ 10 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎ.11ರಂದು ಶಂಕರನಾರಾಯಣ ದಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಅರೀಝ್ (10) ಎಂದು ಗುರುತಿಸಲಾಗಿದೆ. ಗುರುವಾರ ಮನೆ ಮಂದಿಯೊಂದಿಗೆ ಹೆಂಗವಳ್ಳಿ ಯ ಖಾಸಗಿ ರೆಸಾರ್ಟ್ನ ಈಜುಕೊಳದಲ್ಲಿ ನೀರಿಗೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Read More