Author: admin

ಮಂಗಳೂರು, ಸೆ.12: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ನೀಡುವ ಕಾರ್ಯಕ್ರಮ ಮಂಗಳವಾರ ಸಂಘದ ನಂದಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ. ನೆಲ್ಕುದ್ರಿ ಸದಾನಂದ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗರಿಷ್ಠ ಅಂಕಗಳನ್ನು ಗಳಿಸಿರುವ ಸರಕಾರಿ ನೌಕರರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಷಯ.ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಎಸ್ಸೆಸಿಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ…

Read More

ಬೈಕಂಪಾಡಿ, ಸೆ. 11: ಮೊಗವೀರ ಮಹಾಸಭಾ ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬೈಕಂಪಾಡಿ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ (ಮೀನುಗಾರಿಕ)ಯ ಹೊಸ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ ಮಂಗಳವಾರ ಇಂದಿರಾ ಮಾಧವ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು , ಮೊಗವೀರ ಮಹಾಸಭಾವು ಸಮುದಾಯದವರಿಗಾಗಿ ಕನ್ನಡ ಶಾಲೆ ಕಟ್ಟಿ ಕಾಲಾನಂತರ ಸರಕಾರದ ನೆರವಿನೊಂದಿಗೆ ಶಾಲೆಯನ್ನು ನಡೆಸುತ್ತಾ ಬಂದಿದೆ. ಆರ್ಥಿಕ ಸಂಕಷ್ಟವಿರುವ ಸಮಯದಲ್ಲಿ ದಾನಿಗಳಿಂದ ನೆರವು ಪಡೆದು ಮಕ್ಕಳ ಭವಿಷ್ಯ ಉಜ್ವಲವಾಗಲು ಶ್ರಮ ಪಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಮನವಿ ಪತ್ರ ಬಿಡುಗಡೆ ಮಾಡಿ ನಂತರ ಮಾತನಾಡಿದ ಶಾಸಕ ಡಾ| ಭರತ್ ಶೆಟ್ಟಿ ವೈ. ಅವರು, ಬೈಕಂಪಾಡಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ಮನವಿಯನ್ನು ಈಗಾಗಲೇ ನೀಡಲಾಗಿದೆ. ಶಿಕ್ಷಣ ಸಚಿವರಲ್ಲಿ ಮಾತುಕತೆ ನಡೆಸಿ ಹೊಸ ಕಟ್ಟಡ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಆಂಗ್ಲ ಮಾಧ್ಯಮವನ್ನು ಕೂಡ ಆರಂಭಿಸುವ ಸಲುವಾಗಿ ಬೇಕಾದ…

Read More

ಪಡುಬಿದ್ರಿ,ಸೆ.11 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿಕ ಶಾಖೆಯು ಸೋಮವಾರ ಉದ್ಘಾಟನೆಗೊಂಡಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎಸ್.ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು. ನಂತರ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಸಹಕಾರಿ ಸಂಸ್ಥೆಗಳು ಜನರೊಂದಿಗೆ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಅವರು ಹೇಳಿದರು. ಪಡುಬಿದ್ರಿ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಸೈಟಿಯು ರೈತರ ನೆರವಿಗಾಗಿ ರಸಗೊಬ್ಬರ ಖರೀದಿಗೆ ಶೇ.15 ರಿಯಾಯಿತಿ ನೀಡುವ ಮೂಲಕ ಪ್ರಥಮ ಸ್ಥಾನಿಯಾಗಿದೆ. ಪಡುಬಿದ್ರಿ ಸೊಸೈಟಿಯ ಎಲ್ಲ 5 ಶಾಖೆಗಳು ಹವಾನಿಯಂತ್ರಿಕ ವ್ಯವಸ್ಥೆ ಹೊಂದಿವೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ,…

Read More

ಬೆಂಗಳೂರು, ಸೆ.11  : ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್ ಎಂ ಚಿತ್ರದ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ. ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ. ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ…

Read More

ಮಂಗಳೂರು, ಸೆ.10: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಕಡೆಂಜ ಅಶೋಕ್ ಕುಮಾರ್ ಚೌಟ ಚಾಲನೆ ನೀಡಿದರು. ಶೋಭಾಯಾತ್ರೆ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟ್ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಸಂಚಾಲಕ ಬಿ.ನಾಗರಾಜ್ ಶೆಟ್ಟಿ, ಕಾಸರಗೋಡು ಜಿಲ್ಲಾ ಸಂಚಾಲಕ ಸಂಜೀವ ಶೆಟ್ಟಿ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ್ ಮೋಹನ್ ರೈ, ಸಂಜೀವ ಶೆಟ್ಟಿ ಸಂಪಿಗೆ ಅಡಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ರೈ, ಸಿಎ ಶಾಂತಾರಾಮ ಶೆಟ್ಟಿ, ಕೃಷ್ಣಪ್ರಸಾದ್ ರೈ, ಸುಧಾಕರ ಎಸ್.ಪೂಂಜ, ಬಿ. ಶೇಖರ ಶೆಟ್ಟಿ, ಉಲ್ಲಾಸ್ ಶೆಟ್ಟಿ, ಭಾರತಿ ಶೆಟ್ಟಿ,…

Read More

ಉಡುಪಿ, ಸೆ.10 : ಮುಖ್ಯಮಂತ್ರಿ  ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಭಾರತೀಯ ಜನತಾ ಪಾರ್ಟಿಯ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಹೆದ್ದಾರಿ ತಡೆದು ಭಾರತೀಯ ಜನತಾ ಪಾರ್ಟಿಯ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು. ಈ ವೇಳೆ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು.ಈ ಬಗ್ಗೆ ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್‌ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ…

Read More

ಬೆಂಗಳೂರು, ಸೆ.09 : ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಬಿಡುಗಡೆಗೊಳ್ಳಲಿದ್ದು, ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಚಿತ್ರವು ಒಟ್ಟು ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್,…

Read More

ಮಂಗಳೂರು,ಸೆ.09 : ಭಾರತ ದೇಶವು ವಿವಿಧ ಸಂಸ್ಕೃತಿ, ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ -ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮತ್ತೋರ್ವ ಮುಖ್ಯ ಅತಿಥಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಶೀಘ್ರದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಸಮಗ್ರ ಸಮಾಜಕ್ಕೆ ನೂತನ ಕಟ್ಟಡದ ಪ್ರಯೋಜನ ಸಿಗಲಿದೆ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ,ಮೇಯರ್ ಸುಧೀರ್ ಶೆಟ್ಟಿ, ಉದ್ಯಮಿ ರಘುನಾಥ ಸೋಮಯಾಜಿ, ಕಾರ್ಪೊರೇಟರ್ ಮನೋಹರ್ ಶೆಟ್ಟಿ, ಯೂನಿಯನ್ ಬ್ಯಾಂಕಿನ ಎಜಿಎಂ ವಿನೋದ್ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಖ್ಯಾತ ವೈದ್ಯ…

Read More

ಮಂಗಳೂರು,ಸೆ.08 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಸೆ.7ರಿಂದ 9 ರವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶನಿವಾರ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಣೇಶೋತ್ಸವದ ಸಂದರ್ಭ ತೆನೆ ವಿತರಣೆ ಮಾಡುವ ಕಾರ್ಯ ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. ನಮ್ಮ ಬದುಕು ಪ್ರಕೃತಿಯೊಂದಿಗೆ ಹೇಗೆ ಜೋಡಿಸಿಕೊಂಡಿದೆ ತಿಳಿಯಬೇಕಾದ ವಿಷಯವಾಗಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ನೇತೃತ್ವದಲ್ಲಿ ಆಯೋಜಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮವು ಸಮಾಜಮುಖಿ ಕಾರ್ಯ ಗಳಿಗೆ ಪ್ರೇರಣೆ ನೀಡಲಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಅಶ್ವಿನಿ ಮಣಿ ಮುಲ್ಲೈ ಮುಗಿಲನ್, ಡಾ. ಶೈಲಜಾ ಮೋಹನ ದೇವ ಆಳ್ವ ಹಾಗೂ ಜಯಂತಿ ಮೆನನ್ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ,…

Read More

ಮಂಗಳೂರು, ಸೆ.7 : ನಗರದ ಫಳ್ನೀರ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಆರ್ಟಿಸ್ಟ್ರಿ ಜುವೆಲ್ಲರಿ ಪ್ರದರ್ಶನ ಸೆ.7, ಶನಿವಾರ ಆರಂಭಗೊಂಡಿದ್ದು, ಸೆ.15ರ ತನಕ ನಡೆಯಲಿದೆ. ಪ್ರಸಕ್ತ ಮತ್ತು ಸಾಂಪ್ರದಾಯಿಕ ಶೈಲಿಯ ಜುವೆಲ್ಲರಿಯನ್ನು ನಟಿ ಸಲೋಮೆ ಡಿಸೋಜ, ಮಿಸ್ ಮಂಗಳೂರು- 2024ರ ವಿಜೇತೆ ಅನನ್ಯಾ ಐತಾಳ್, ಇಂಡಿಯಾನ ಆಸ್ಪತ್ರೆಯ ವೈದ್ಯೆ ಡಾ.ಶಮ್ನಾ ಮಿನಾಝ್ ಅನಾವರಣಗೊಳಿಸಿದರು. ಸಲೋಮೆ ಡಿಸೋಜ ಮಾತನಾಡಿ ಮಲಬಾರ್ ಗೋಲ್ಡ್ನಲ್ಲಿ ಎಲ್ಲಾ ವಿನ್ಯಾಸದ ಆಭರಣಗಳಿವೆ. ಮಲಬಾರ್ ಗೋಲ್ಡ್ ಮಳಿಗೆಗೆ ಬರುವುದೆಂದರೆ ನಮಗೆ ಖುಷಿ ಎಂದರು. ಡಾ.ಶಮ್ನಾ ಮಿನಾಝ್ ಮಾತನಾಡಿ ನಮ್ಮ ಕುಟುಂಬದ ಸದಸ್ಯರು ಮಲಬಾರ್ ಗೋಲ್ಡ್ನ ಆರಂಭದ ದಿನಗಳಿಂದಲೇ ಗ್ರಾಹಕರಾಗಿದ್ದಾರೆ. ಇಲ್ಲಿ ನಮ್ಮ ಇಷ್ಟದ ಆಭರಣಗಳು ಲಭ್ಯವಿದೆ ಎಂದರು. ಅನನ್ಯ ಐತಾಳ್ ಮಾತನಾಡಿ ಮಲಬಾರ್ ಗೋಲ್ಡ್‌ನಲ್ಲಿ ಆಭರಣಗಳ ಅಪಾರ ಸಂಗ್ರಹವೇ ಇದೆ. ಗ್ರಾಹಕರಿಗೆ ಉತ್ತಮ ಸೇವೆಯೂ ಇಲ್ಲಿ ಲಭ್ಯವಿದೆ ಎಂದರು. ಈ ಸಂದರ್ಭದಲ್ಲಿ ಸ್ಟೋರ್ ಹೆಡ್ ಶರತ್‌ಚಂದ್ರನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ಮುನವ್ವರ್ ಶಾನ್, , ಸೇಲ್ಸ್ ಮ್ಯಾನೇಜರ್ ಗಿರೀಶ್,…

Read More