Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಮಾ. 15: ಬೋಳೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಮಾ.2,ಗುರುವಾರದಿಂದ ಮಾ.7,ಮಂಗಳಾವಾರತನಕ ಶ್ರೀ ಮಾರಿಯಮ್ಮ ದೇವರ ವಾರ್ಷಿಕ ಮಹೋತ್ಸವವು ವೈಭವದಿಂದ ನಡೆಯಿತು. ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ದೇವರ ವರ್ಷಾವಧಿ ಮಹೋತ್ಸವ ಹಿನ್ನೆಲೆಯಲ್ಲಿ ವಿಶೇಷವಾಗಿ ವೈದಿಕ ಪೂಜೆ ಕಾರ್ಯಗಳು ನಡೆದವು. ಕಲಶ ಪ್ರತಿಷ್ಠೆ, ಪ್ರಧಾನ ಹೋಮ ನಡೆದು ದೇವರಿಗೆ ವಿಶೇಷ ಮಹಾಪೂಜೆ ನಡೆಯಿತು. ವರ್ಷಾವಧಿ ಮಹಾಪೂಜೆಯ ನಿಮಿತ್ತ ದೇವಿಯ ಗರ್ಭಗುಡಿಯ ಮುಂದೆ ಮಣ್ಣಿನ ಮಡಕೆಯಲ್ಲಿ ಹಾಲು ಉಕ್ಕಿಸುವ ವಿಶೇಷ ಸೇವೆ ನಡೆಯಿತು. ವರ್ಷಾವಧಿ ಉತ್ಸವ ದಿನದಂದು ಕಂಚಿಲ್ ಸೇವೆ ಹರಕೆ,ದರ್ಶನ ಬಲಿ, ಶ್ರೀ ದೇವಿಯ ಗರ್ಭ ಗುಡಿ ಪ್ರವೇಶ, ನೈವೇದ್ಯ ಬಲಿ ,ಮಹಾರಾಶಿ ಪೂಜೆ ಹಾಗೂ ವಿಶೇಷ ಸೇವೆಗಳು ನಡೆದವು.
ಮೂಡುಬಿದಿರೆ, ಮಾ. 14 : ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿ ಯನ್ನು ಆಳ್ವಾಸ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ,ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದೆ ಎನ್ನಲಾಗಿದೆ, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ.
ಮಂಗಳೂರು ಮಾ.13: ದಕ್ಷಿಣ ಕನ್ನಡ ಜಿಲ್ಲಾ ಯೂಸ್ಡ್ ವೆಹಿಕಲ್ ಡೀಲರ್ಸ್ ಎಂಡ್ ಏಜೆಂಟ್ ಎಸೋಸಿಯೇಶನ್ ಇದರ 20ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಿತ ಕಂಪೆನಿಗಳ ಸಹಭಾಗಿತ್ವದಲ್ಲಿ ದ್ವಿಚಕ್ರ ಹಾಗೂ ಚತುಷ್ಚಕ್ರ ವಾಹನಗಳ ‘ವಾಹನ ಮೇಳ-2023’ ಇದರ ಸಮಾರೋಪ ಕಾರ್ಯಕ್ರಮವು ಮಂಗಳೂರಿನ ಕರಾವಳಿ ಮೈದಾನದಲ್ಲಿ ಮಾ.12,ಭಾನುವಾರ ಜರಗಿತು.ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮಕ್ಕೆ ಮೇಯರ್ ಜಯಾನಂದ ಅಂಚನ್ ಶನಿವಾರ ಚಾಲನೆ ನೀಡಿದ್ದರು. ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿದ್ದ ಮಾಜಿ ಶಾಸಕರಾದ ಜೆ.ಆರ್ ಲೋಬೋ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು.ನಂತರ ಮತ್ತೊಬ್ಬ ಅತಿಥಿ ಚಿಲಿಂಬಿ ಶ್ರೀ ಶಿರಿಡಿ ಸಾಯಿಬಾಬಾ ಸೇವಾ ಮಂದಿರದ ಆಡಳಿತ ಮೊಕ್ತೇಸರಾದ ವಿಶ್ವಾಸ್ ದಾಸ್ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಎಸೋಸಿಯೇಶನ್ ಇದರ ಗೌರವಧ್ಯಕ್ಷರು ಬಿ.ಅಶೋಕ್ ಕುಮಾರ್ ಶೆಟ್ಟಿ,ಅಧ್ಯಕ್ಷರು ಎಚ್. ಜಯರಾಜ್ ಕೊಟ್ಯಾನ್,ಕಾರ್ಯದರ್ಶಿ ಮುನೀರ್ ಅಹಮ್ಮದ್,ಕೋಶಾಧಿಕಾರಿ ಪ್ರತಾಪ್ ಕೆ.ಎಸ್.,ಉಡುಪಿಯ ಪ್ರೀ ಒಲ್ಡ್ ವೆಹಿಕಲ್ ಡೀಲರ್ಸ್ ಎಸೋಸಿಯೇಶನ್ ನ ಅಧ್ಯಕ್ಷರು ಅಶ್ರಫ್,ಸಂಘಟನ ಕಾರ್ಯದರ್ಶಿ ಅಬ್ದುಲ್ ಸಲಾಂ, ಸಾಮಾಜಿಕ ಕಾರ್ಯಕರ್ತರು ಮಂಜುಳ ನಾಯಕ್,ಹರ್ಷವರ್ಧನ್ ಶೇಟ್,ಮಹಮ್ಮದ್ ರಜಾಕ್ ಮತ್ತು…
ಕಾಸರಗೋಡು, ಮಾ. 13: ಆಟೋ ರಿಕ್ಷಾ ಚಾಲಕ ನೋರ್ವ ಅವರ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳ ತ್ತಡ್ಕ ದಲ್ಲಿ ನಡೆದಿದೆ. ಮೃತರನ್ನು ಕುಡ್ಪ oಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ (27) ಎಂದು ಗುರುತಿಸಲಾಗಿದೆ. ಅಬ್ದುಲ್ ಸಲಾಂ ಅವರು ನಾಪತ್ತೆಯಾ ದುದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸರು ಮಹಜರು ನಡೆಸಿ ದ್ದು ,ಕಾಸರಗೋಡು ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು ಎನ್ನಲಾಗಿದೆ.
ಹಾಪುರ್, ಮಾ. 12 : ಪೊಲೀಸ್ ಪೇದೆಯೊಬ್ಬರು ತಮ್ಮ ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾನ್ಸ್ಟೇಬಲ್ ಅಂಕಿತ್ ಕುಮಾರ್(25) ಆತ್ಮಹತ್ಯೆಗೆ ಶರಣಾದವರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹಾಪುರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.
ಕಾಪು, ಮಾ. 11 : ಖಾಸಗಿ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಎಂದು ಗುರುತಿಸಲಾಗಿದೆ ಶನಿವಾರ ಬೆಳಗ್ಗೆ ಶಾಲೆಗೆ ಹೊಗುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ . ಕಾಪು ಪೊಲೀಸರು ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು, ಮಾ. 10: ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ನಡೆದಿದೆ. ಮೃತರನ್ನು ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಎಂದು ಗುರುತಿಸಲಾಗಿದೆ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು,ಮಾ. 09 : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿದ್ದು,ಕರಾವಳಿ ಭಾಗದಲ್ಲಿ ಮತ್ತೊಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ. ಒಣಹವೆ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಬೀಸುತ್ತಿರುವ ಗಾಳಿಯಿಂದ ರಾಜ್ಯದಲ್ಲಿ ತಾಪಮಾನ ಒಂದೇ ಸಮನೆ ಏರಿಕೆಯಾಗುತ್ತಿದೆ. ವಾತಾವರಣದಲ್ಲಿ ಬಿಸಿ ಹೆಚ್ಚಾಗಿ ತೇವಾಂಶ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಮಾರ್ಚ್ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಗಳೂರು ಮಾ.8: ನಗರದ ಪುರಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಇದರ 24ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಮಾ.7 ಮಂಗಳವಾರದಂದು ಜರಗಿತು.ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಇತರ ಗಣ್ಯರೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತಾಡಿ ಸರಕಾರಿ ಸೌಳಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲು ಜಿಲ್ಲೆಯಲ್ಲಿರುವ ಎಲ್ಲಾ ಟೈಲರ್ಗಳು ತಪ್ಪದೇ ಇ-ಶ್ರಮ್ ಕಾರ್ಡ್ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.ಆಧುನಿಕ ಜಗತ್ತಿನ ಸ್ಪರ್ಧತ್ಮಕ ರೆಡಿಮೆಡ್ ಪ್ಯಾಶನ್ ಯುಗದ ನಡುವೆಯೂ ಟೈಲರ್ಸ್ ಗಳು ತಮ್ಮ ವೃತ್ತಿಯನ್ನು ನಡೆಸುತ್ತಾ ಬಂದಿದೆ.ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮುಖಾಂತರ ಉತ್ತಮ ಸೇವೆಗಳು ಆಗಲಿ ಎಂದು ಶುಭಹಾರೈಸಿದರು. ಬಳಿಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಮಾತಾಡಿ ಟೈಲರ್ ಗಳ ಬೇಡಿಕೆ ಹಾಗೂ ಅವರಿಗೆ ಸರ್ಕಾರದಿಂದ ನೆರವು ಒದಗಿಸುವ ಬಗ್ಗೆ ಮುಂದಿನ ವಿಧಾನ ಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದರು. ಕರ್ನಾಟಕ ಸ್ಟೇಟ್ ಟೈಲರ್ಸ್…
ಸುಳ್ಯ, ಮಾ. 07 : ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನುಕಾರ್ಮಿಕ ಮಂಜುನಾಥ(23) ಎಂದು ಗುರುತಿಸಲಾಗಿದೆ. ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಊಟದ ವಿರಾಮದ ನಂತರ ಗೋಡೆ ಕೆಡವುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕ ಮಂಜುನಾಥ ಎಂಬವರ ಮೇಲೆ ಬಿದ್ದಿದೆ. ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.