Author: admin

ಮಂಗಳೂರು, ಅ. 15: ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರ ಕಿರುಚಿತ್ರ ‘ಸೇವ್ ಅವರ್ ಸೋಲ್’ ಅ. 18ರಂದು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಿರ್ಮಾಪಕ ಯು.ಜಿ. ರಾಘವ್ ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಸ್ಥ ಅಚಲ್ ಅವರು.ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಸಂದೇಶವಿರುವ ಕಿರುಚಿತ್ರ ಎಂದು ಅವರು ಹೇಳಿದರು.ನಿರ್ಮಾಪಕ ಯು.ಜಿ. ರಾಘವ್, ಎ.ಯು. ಕ್ರಿಯೇಶನ್ಸ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ  ಚಿತ್ರ ನಿರ್ಮಾಣಗೊಂಡಿದೆ  ಎಂದು ಅವರು ತಿಳಿಸಿದರು ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು. ಪ್ರಸಾದ್…

Read More

ಮಂಗಳೂರು,ಅ.14: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ರವಿವಾರ ನಡೆಯಿತು. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಭವ್ಯ ಶೋಭಾಯಾತ್ರೆಯು ಜರಗಿತು. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಶೋಭಾಯಾತ್ರೆ ಮಣ್ಣಗುಡ್ಡ ,ಲಾಲ್ ಬಾಗ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ನ್ಯೂ ಚಿತ್ರಾ ಟಾಕೀಸು, ಅಳಕೆ ಮಾರ್ಗ ವಾಗಿ ಕುದ್ರೋಳಿ ಶ್ರೀ ಕ್ಷೇತ್ರ ಕ್ಕೆ ಮರಳಿ. ಸೋಮವಾರ ಮುಂಜಾನೆ, ಪೂಜೆ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದಾ ವಿಸರ್ಜನೆ ನಡೆಯಿತು. 70ಕ್ಕೂ…

Read More

ಉಪ್ಪಿನಂಗಡಿ, ಅ.13: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಶನಿವಾರ ನಡೆದಿದೆ. ಮೃತರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.

Read More

ಉಡುಪಿ,ಅ.12 : ಉಡುಪಿಯ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ’ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಅ.9ರಂದು ಉದ್ಘಾಟನೆಗೊಂಡಿತು. ನೂತನ ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್‌ನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜಂಟಿಯಾಗಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಅನುಗ್ರಹದಿಂದ ನೂತನವಾಗಿ ಆರಂಭಗೊಂಡ ಈ ಹೋಟೆಲ್ ಯಶಸ್ವಿಯಾಗಲಿ ಎಂದು ಹಾರೈಸಿದರು. ಪೇಜಾವರ ಶ್ರೀಪಾದರು ಆಶೀರ್ವಚನ ನೀಡಿ, ಉಡುಪಿಗೆ ಉದ್ಯಮಿ ಜಯರಾಮ್ ಬನಾನ್ ಅವರು ಈ ಹೊಟೇಲ್ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ಕೃಷ್ಣನ ಅನುಗ್ರಹದಿಂದ ಉದ್ಯಮ ಯಶಸ್ವಿಯಾಗುವುದರೊಂದಿಗೆ ಜನತೆಗೂ ಇದರ ಪ್ರಯೋಜನ ದೊರಕಲಿ ಎಂದು ಹಾರೈಸಿದರು. ಸುಬ್ರಹ್ಮಣ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಉಡುಪಿ ಹೊಟೇಲ್ ಉದ್ಯಮಕ್ಕೆ ಪ್ರಸಿದ್ಧವಾಗಿದೆ. ಜಯರಾಮ್ ಬನಾನ್ ಅವರ ಈ ಹೊಟೇಲ್ ಉದ್ಯಮ ತುಂಬಾ ಜನರಿಗೆ ಉದ್ಯೋಗ ನೀಡಿದ್ದು, ಅವರು ಸಮರ್ಥ ಆಡಳಿತದಿಂದ ಯಶಸ್ವಿಯಾಗಿದ್ದಾರೆ ಎಂದು…

Read More

ಮಂಗಳೂರು, ಅ.11;ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ದೇಶಾ ದ್ಯಂತ 1000ಡಾಕ್ ನಿರ್ಯಾತ್ ಕೇಂದ್ರಗಳಿವೆ ಈ ಪೈಕಿ ಮಂಗಳೂರು ಅಂಚೆ ವಿಭಾಗದಲ್ಲಿ ಮೂರು ಕೇಂದ್ರ ಗಳು ಕಾರ್ಯ ನಿರ್ವಹಿ ಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಅವರು ಬುಧವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಇಂದು ಅಂಚೆ ಇಲಾಖೆಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ ನಗರದ ಮಂಗಳೂರು ಅಂಚೆ ವಿಭಾಗದ ಪ್ರಧಾನ ಅಂಚೆ ಕಚೇರಿ ಇರುವ ಪಾಂಡೇಶ್ವರ, ಹಂಪನಕಟ್ಟೆ ಮತ್ತು ಸುರತ್ಕಲ್ ಅಂಚೆ ಕಚೇರಿಗಳು ಡಾಕ್ ನಿರ್ಯಾತ್ ಕೇಂದ್ರಗ ಳಾಗಿ ವಿದೇಶಗಳಿಗೆ ಗ್ರಾಹಕರ ಉತ್ಪನ್ನಗಳನ್ನು ರಫ್ತು ಮಾಡಲು ನೆರವು ನೀಡುತ್ತಿವೆ. ಪ್ರಪಂಚ ದಾದ್ಯಂತದ ವಿವಿಧ ದೇಶಗಳಿಗೆ ಗ್ರಾಹಕರು ಉತ್ಪನ್ನ ಗಳನ್ನು ರಫ್ತು ಮಾಡುವ ಚಟುವಟಿಕೆ ಗಳಿಗೆ ಈ ಕೇಂದ್ರಗಳ ಮೂಲಕ ಸಹಾಯ ಮಾಡಲಾಗುತ್ತದೆ ಎಂದು ಸುಧಾಕರ ಮಲ್ಯ ಹೇಳಿದರು. ಅಂಚೆ ಇಲಾಖೆಯ ಮೂಲಕ…

Read More

ಮಂಗಳೂರು, ಅ.10: ರಾಷ್ಟ್ರಮಟ್ಟದ ಮಾನ್ಯತೆ ಪಡೆದುಕೊಳ್ಳುತ್ತಿರುವ ತುಳುನಾಡಿನ ಹುಲಿವೇಷ ಕುಣಿತದ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅ. 11ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ಕುಡ್ಲದ ಪಿಲಿ ಪರ್ಬ’ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿರುವ ಕುಡ್ಲದ ಪಿಲಿಪರ್ಬ  ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳ ಲಿದೆ ಎಂದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 5 ಲಕ್ಷ ರೂ., ದ್ವಿತೀಯ ಬಹುಮಾನ 3 ಲಕ್ಷ ರೂ., ತೃತೀಯ ಬಹುಮಾನ 2 ಲಕ್ಷ ರೂ. ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಕಪ್ಪು ಪಿಲಿ, ಪರ್ಬದ ಪಿಲಿ, ಮರಿ ಹುಲಿ, ತಾಸೆ, ಮುಡಿ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ…

Read More

ಮಂಗಳೂರು, ಅ. 09  : ಶಕ್ತಿ ಶಿಕ್ಷಣ ಸಂಸ್ಥೆಯ ವತಿಯಿಂದ ನ. 16ರಂದು ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ 8ರಿಂದ 12ನೇ ತರಗತಿಯ ವಿದ್ಯಾರ್ಥಿಗಳ ಕಲೆ, ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸುವ ‘ಶಕ್ತಿ ಫೆಸ್ಟ್ 2024’ ಆಯೋಜಿಸಲಾಗಿದೆ ಎಂದು ಮಂಗಳವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಶಕ್ತಿ ಎಜುಕೇಶನ್ ಟ್ರಸ್ಟ್ನ ಪ್ರಧಾನ ಸಲಹೆಗಾರ ರಮೇಶ್ ಕೆ. ಹೇಳಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 14 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆ, ಉತ್ಪನ್ನ ಬಿಡುಗಡೆ (ಶಾರ್ಕ್ ಟ್ಯಾಂಕ್), ರಂಗೋಲಿ (ವಿಷಯ ನವರಾತ್ರಿ), ಮುಖವರ್ಣಿಕೆ ( ವಿಷಯ ಡ್ರಗ್ ಅಬ್ಯುಸ್) ಪುಷ್ಪಗುಚ್ಛ ತಯಾರಿ, ರೀಲ್ ಮೇಕಿಂಗ್, ಏಕ ವ್ಯಕ್ತಿ ಗಾಯನ – ಭಾವಗೀತೆ ಸ್ಪರ್ಧೆಗಳು ನಡೆಯಲಿದೆ ಎಂದು ಅವರು  ಹೇಳಿದರು. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜನಪದ ಕುಣಿತ, ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಪೋಸ್ಟರ್, ಮೇಕಿಂಗ್, ಪೆನ್ಸಿಲ್ ಸ್ಕೆಚ್, ಪರಿಸರ ಸ್ನೇಹಿ ನವ ಅವಿಷ್ಕಾರ…

Read More

ಮಂಗಳೂರು, ಅ.09 : ನಗರದ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ದಸರಾ ಕ್ರೀಡಾಕೂಟ ಭಾನುವಾರ ನಡೆಯಿತು. ದಸರಾ ಕ್ರೀಡಾಕೂಟವನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಬಿ. ಜನಾರ್ದನ ಪೂಜಾರಿಯವರು, ಪ್ರತಿಯೊಬ್ಬರಿಗೂ ಆರೋಗ್ಯ ಬಹಳ ಅಗತ್ಯ ಈ ನಿಟ್ಟಿನಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಅವರು ಬಹಳಷ್ಟು ಆರೋಗ್ಯವಂತರಾಗಿ ಇರು ತ್ತಾರೆ. ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ನಡೆಯುವ ದಸರಾ ಕ್ರೀಡಾಕೂಟವು ಸಾಕಷ್ಟು ಹೊಸ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ನೀಡಿರುವುದು ಒಳ್ಳೆಯ ಬೆಳವಣಿಗೆ ಎಂದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಕ್ರೀಡಾಕೂಟಗಳು ಹೆಚ್ಚಾಗಿ ನಡೆದರೆ ಕ್ರೀಡಾ ಪಟುಗಳಿಗೆ ಹೆಚ್ಚು ಅವಕಾಶ ದೊರೆಯುತ್ತದೆ. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾ ಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು. ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ, ಸರಕಾರ ಮಟ್ಟದಲ್ಲಿ ದಸರಾ ಕ್ರೀಡಾಕೂಟಗಳು ನಡೆಯುತ್ತಿದೆ. ಆದರೆ…

Read More

ಇಂದ್ರಾಳಿ, ಅ.8: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚೆನ್ನೈ, ಅ.07 : ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ವೇಳೆ ಬಿಸಿಲಿನ ಝಳಕ್ಕೆ ಐವರು ಮೃತಪಟ್ಟಿದ್ದಾರೆ, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್ ಮೃತರು. ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿ,ಉಸಿರಾಡಲಾಗದೇ 230ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Read More