Author: admin

ಮಂಗಳೂರು, ಸೆ.6 : ಬಂಟರ ಯಾನೆ ನಾಡವರ ಮಾತೃ ಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಯಾಗವು ಸೆ.7ರಿಂದ 9ರ ವರೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಜರಗಲಿದೆ ಎಂದು ಗುರುವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ| ಆಶಾಜ್ಯೋತಿ ರೈ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟಿ ಡಾ| ಆಶಾಜ್ಯೋತಿ ರೈ ಅವರು, ಸೆ.6ರಂದು ಸಂಜೆ 5ಕ್ಕೆ ಶರವು ದೇವಸ್ಥಾನ ಬಳಿಯ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ಧಿವಿನಾಯಕ ವಿಗ್ರಹವನ್ನು ಓಂಕಾರ ನಗರಕ್ಕೆ ತರಲಾಗುವುದು. ಸೆ.7ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣೆ ಕಾರ್ಯಕ್ರಮ, ಸಂಜೆ 5ರಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಸೆ.8ರಂದು…

Read More

ಕಡಬ, ಸೆ.6: ಕಾಲು ಜಾರಿ ತೋಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ.ಮೃತರನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು 1ಕಿಮೀ ಮುಂದೆ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು,ಸೆ.06 : ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್, “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು.ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ ಅವರು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಾಂತ್ ನೀಲ್ ಚಿತ್ರತಂಡಕ್ಕೆ ಅವರು ಶುಭ ಕೋರಿದರು. ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ. ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ…

Read More

ಮಂಗಳೂರು, ಸೆ.5 :ಸೆ. 6ರಿಂದ 8ರ ತನಕ ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ‘ಶೌರ್ಯ ಅಂತರ್‌ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ -2024 ನಗರದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆಯಲಿದೆ ಎಂದು ಕುಲಶೇಖರ ಚರ್ಚ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷ ಹಾಗೂ ಅಂತರ್‌ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್-2024ರ ಚೀಫ್-ಡಿ- ಮಿಸನ್ ಯು.ಟಿ.ಖಾದರ್ ಹೇಳಿದರು. ಅಂತರ್ ರಾಷ್ಟ್ರೀಯ ಕರಾಟೆ ತಂಡಗಳು ಹಾಗೂ ದೇಶದ ಪ್ರಮುಖ ಕರಾಟೆ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದು 1,500 ಮಂದಿ ಕರಾಟೆ ಪಟುಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ. 2,000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಘಟನಾ ಸಮಿತಿಯ ಅಧ್ಯಕ್ಷ ಮತ್ತು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಮಂಗಳೂರು ವಂ.ಡಾ. ಪೀಟರ್…

Read More

ಮಂಗಳೂರು, ಸೆ.5 : ಅಳಕೆಯ ಮಲ್ಯ ಆರ್ಕೇಡ್‌ನಲ್ಲಿ ಶ್ರೇಯಾಸ್ ಸ್ವೀಟ್ಸ್ ನ ನವೀಕೃತ, ಹವಾನಿಯಂತ್ರಿತ ಮಳಿಗೆ ಬುಧವಾರ ಆರಂಭಗೊಂಡಿತು. ಶ್ರೇಯಾಸ್ ಸ್ವೀಟ್ಸ್ ನ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, 22 ವರ್ಷಗಳಿಂದ ಶ್ರೇಯಾಸ್ ಸ್ವೀಟ್ಸ್ ಉತ್ತಮ ಸೇವೆ ನೀಡುತ್ತಾ ಬಂದಿದೆ. ಜನರಿಗೆ ಆರೋಗ್ಯಕರ ತಿನಿಸುಗಳನ್ನು ಪೂರೈಸಿದೆ. ಗುಣಮಟ್ಟ ಕಾಯ್ದುಕೊಂಡ ಕಾರಣ ಶ್ರೇಯಾಸ್ ಸ್ವೀಟ್ಸ್ ತಿನಿಸುಗಳನ್ನು ಜನ ಖುಷಿ ಪಡುತ್ತಾರೆ ಎಂದರು. ಮಾಲಕ ರಮೇಶ್ ಮಲ್ಯ ಮಾತನಾಡಿ, ಶ್ರೇಯಾಸ್ ಸ್ವೀಟ್ಸ್ ಅನ್ನು 2002ರಲ್ಲಿ ಜಿ.ಎಚ್.ಎಸ್. ರಸ್ತೆಯಲ್ಲಿ ಆರಂಭಿಸಲಾಗಿದ್ದು, 22 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸಿಹಿ ತಿಂಡಿಗಳನ್ನು ಪೂರೈಸಿದ್ದೇವೆ. ಉತ್ತರ ಭಾರತೀಯ, ಬಂಗಾಲಿ ಸಿಹಿ ತಿಂಡಿಗಳು, ಗೋಲ್ಡ್ ಸೀಟ್ಸ್ ಚಾಟ್ಸ್, ಮಿಕ್ಸರ್, ವಿವಿಧ ಕರಿದ ತಿಂಡಿಗಳು, ಬಿಸಿ ಮೈಸೂರು ಪಾಕ್, ಸ್ವೀಟ್ಸ್ ಗಳ  ಗಿಫ್ಟ್ ಪ್ಯಾಕ್, ಡ್ರೈಫ್ರುಟ್ಸ್ ಲಭ್ಯವಿದ್ದು, ಎಲ್ಲದಕ್ಕೂ ಪ್ರತ್ಯೇಕ ಕೌಂಟರ್‌ಗಳಿವೆ. ಗ್ರಾಹಕರಿಗೆ ಪ್ರಿಯವಾದ ಸಿಹಿತಿಂಡಿಗಳು, ಉತ್ತಮ ಬೆಲೆಯಲ್ಲಿ ನಮ್ಮಲ್ಲಿ ದೊರೆಯುತ್ತದೆ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,…

Read More

ಅತ್ತಾವರ,ಸೆ.04: ಅತ್ತಾವರ ಶ್ರೀ ಕ್ಷೇತ್ರ ಚಕ್ರಪಾಣಿ ಗೋಪಿನಾಥ ದೇವಸ್ಥಾನದಲ್ಲಿ ಶ್ರೀಕೃಷ್ಣ ಜಯಂತ್ಯುತ್ಸವ ಪ್ರಯುಕ್ತ ಮುದ್ದುಕೃಷ್ಣ, ಕಿಶೋರ ಕೃಷ್ಣ, ಬಾಲಕೃಷ್ಣ, ಶ್ರೀ ಕೃಷ್ಣ ಹಾಗೂ ರಾಧಕೃಷ್ಣ ವಿಭಾಗದಲ್ಲಿ ಸ್ಪರ್ಧೆ ಅ. 26 ರಂದು ಜರಗಿತು. ಶ್ರೀಕೃಷ್ಣವೇಶ ಸ್ಪರ್ಧೆಯಲ್ಲಿ ಒಟ್ಟು 174 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಯಮಿ ಪ್ರಮೋದ್ ರಾವ್ ಉದ್ಘಾಟಿಸಿದರು. ಚಕ್ರಪಾಣಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಅತ್ತಾವರ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಶಾಸಕ ವೇದವ್ಯಾಸ ಕಾಮತ್ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಎ. ನಾರಾಯಣ, ಪ್ರವೀಣ್ ಕುಮಾರ್, ಪುಟ್ಟುಬೈಲ್, ಮಂಜುನಾಥ್, ಗುರುಪ್ರಸಾದ್ ಬೋಪಣ್ಣ, ಉದ್ಯಮಿ ಕೆ. ವಸಂತದಾಸ್, ಡಾ| ದಿನೇಶ್, ನಿಲೇಶ್ ಡಿ. ಕಾಮತ್, ಚಕ್ರಪಾಣಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣಕೋಟ್ಯಾನ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಕ್ರವಾಣಿ ನೃತ್ಯಕಲಾಕೇಂದ್ರದ ನೃತ್ಯ ಗುರುಗಳಾದ ವಿದ್ವಾನ್ ಸುರೇಶ್ ಅತ್ತಾವರ ಇವರ ಶಿಷ್ಯವೃಂದದವರಿಂದ ನೃತ್ಯಾರಾಧನ ಕಾಯಕ್ರಮ ಜರಗಿತು.ರಾತ್ರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹಾಪೂಜೆ, ಉಯ್ಯಾಲೋತ್ಸವ,…

Read More

ಸುರತ್ಕಲ್, ಸೆ. 3: ಕರ್ನಾಟಕ ಸೇವಾ ವೃಂದ ಸುರತ್ಕಲ್ ಇದರ ವತಿಯಿಂದ 59ನೇ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮ ಅ. 27 ರಂದು ಸುರತ್ಕಲ್ ಲೋಕಯ್ಯ ಶೆಟ್ಟಿ ಸ್ಮಾರಕರಂಗ ಮಂದಿರದಲ್ಲಿ ನಡೆಯಿತು. ಕ್ಯಾ| ಬ್ರಿಜೇಶ್ ಚೌಟ ಅವರು  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ ಸೇವಾ ವೃಂದದ ಅಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅದಾನಿ ಸಂಸ್ಥೆಯ ಇಡಿ ಕಿಶೋರ್ ಆಳ್ವ, ಬಿಎಎಸ್‌ಎಫ್ನ ಹಿರಿಯ ಮ್ಯಾನೇಜರ್ ಸಂತೋಷ್ ಪೈ, ಎಂಆರ್ ಪಿಎಲ್ನ ಅಧಿಕಾರಿ ಕಿರಣ್, ವೇ। ಮೂ. ರಂಗ ಐತಾಳ್  ಕಾರ್ಯಕ್ರಮಕ್ಕೆ  ಶುಭ ಹಾರೈಸಿದರು. ಈ ಸಂದರ್ಭ ದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಮ್ಮಾನ, ಕಂಬಳದಲ್ಲಿ ಸಾಧನೆಗೈದ ಯೋಗೀಶ್ ಕರಿಯ ಪೂಜಾರಿ ಅವರಿಗೆ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ  ಸೇವಾ ವೃಂದವು ಕೈಗೊಂಡ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಡಿ.ಕೆ. ಶೆಟ್ಟಿ ನೋಟರಿ, ನ್ಯಾಯವಾದಿ ಆರತಿ ಸುರತ್ಕಲ್, ಉದ್ಯಮಿ…

Read More

ನಿಂತಿಕಲ್ಲು, ಸೆ.. 2 : ನಿಂತಿಕಲ್ಲುವಿನಲ್ಲಿ ನಮ್ಮ ಶಾಖೆಯ ಉದ್ಘಾಟನೆ ಆಗಿರುವುದು ನನಗೆ ಸಂತಸ ತಂದಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಸಂಸ್ಥೆಯು ಯಶಸ್ಸಿಯಾಗಿ ಬೆಳೆಯಲು ಸಾಧ್ಯ. ಗ್ರಾಹಕರು ಸಹಕಾರಿಯ ಜೀವಾಳ, ಮಾನವೀಯ ಮೌಲ್ಯ ಬಹಳಷ್ಟು ಶ್ರೇಷ್ಟವಾದುದು. ಸೇವೆ, ಸಹಕಾರ ಸಂಸ್ಥೆಯ ಮೂಲ ಉದ್ದೇಶವಾಗಿಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಅವರು ಆ.30ರಂದು ನಿಂತಿಕಲ್ಲಿನ ಸಾಧನಾ ಸಹಾಕಾರ ಸೌಧದಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕರಾದ ಭಾರತಿ ಜಿ. ಭಟ್ ರವರು ಮಾತನಾಡಿ ಗ್ರಾಮೀಣ ಜನರ ಸೇವೆಗಾಗಿ ಒಡಿಯೂರು ವಿವಿಧೋ ದೇಶ ಸಹಕಾರಿ ಸಂಸ್ಥೆಯು ಹುಟ್ಟಿಕೊಂಡಿದೆ. ಮಾನವೀಯ ಮೌಲ್ಯ ತುಂಬಿದ ಸಂಸ್ಥೆ ಇದಾಗಿದೆ ಎಂದು ಅವರು ಹೇಳಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಸಹಕಾರ ರತ್ನ ಎ. ಸುರೇಶ್…

Read More

ಮಂಗಳೂರು,ಸೆ.1 : ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್ – 2  ಇದರ ಕಬಡ್ಡಿ ಪಂದ್ಯಾಟ ಹಾಗೂ ಫುಡ್ ಫೆಸ್ಟಿವಲ್ ಮಂಗಳೂರಿನ  ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ಆಗಸ್ಟ್ 30ರಂದು ಆಹಾರೋತ್ಸವನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಿದರು. ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ. ಶ್ರೀ ವಿಶ್ವಾಸ್ ದಾಸ್. ಚಿಲಿಂಬಿ, ಲಯನ್ ಅನಿಲ್ ದಾಸ್ ಮಂಗಳೂರು, ಡಾಕ್ಟರ್ ಅನಂತ ಪ್ರಭು, ನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶಾನವಾಜ್, ಲಾಂಚು ಉಳ್ಳಾಲ್, ದೀಪಕ್ ಪಿಲಾರ್, ಮುಂತಾದ ಗಣ್ಯರು ಭಾಗವಹಿಸಿದ್ದರು. ವಿ.ಆರ್ ಯುನೈಟೆಡ್ ಅಧ್ಯಕ್ಷರಾದ ರಜಾಕ್ ಮಂಗ್ಳೂರ್, ಸುದೇಶ್ ಭಂಡಾರಿ, ಸುಕೇಶ್ ಭಂಡಾರಿ, ಕರುಣಾಕರ, ಮತ್ತು ಕ್ರೀಡಾ ಸಂಘಟಕರು ಉಪಸ್ಥಿತರಿದ್ದರು.

Read More

ಬೆಂಗಳೂರು, ಆ. 31 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನ  ನ್ಯಾಯಾಂಗ ಅವಧಿ ಆಗಸ್ಟ್ 28ಕ್ಕೆ ಅಂತ್ಯಗೊಂಡಿದೆ. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶರು ಆರಂಭದಲ್ಲಿ ಎಲ್ಲರ ಹಾಜರಾತಿ ಪಡೆದರು. ಆ ಬಳಿಕ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Read More